Homeಮುಖಪುಟನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತು ಅದರ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

“ದುಬೆ ಅವರ ಹೇಳಿಕೆಗಳು ಸಾರ್ವಜನಿಕರ ದೃಷ್ಟಿಯಲ್ಲಿ ನ್ಯಾಯಾಲಯಗಳ ಮೇಲಿನ ವಿಶ್ವಾಸಾರ್ಹತೆಯನ್ನು ಅಲುಗಾಡಿಸುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ನ್ಯಾಯಾಂಗದ ಅಧಿಕಾರವನ್ನು ದುರ್ಬಲಗೊಳಿಸುವ ಮತ್ತು ಕಾನೂನು ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಕುಗ್ಗಿಸುವ ಪ್ರಯತ್ನಗಳ ಬಗೆಗಿನ ದೊಡ್ಡ ಕಳವಳವನ್ನು ಇದು ಸೂಚಿಸುತ್ತದೆ” ಎಂದು ಮೇ 5ರಂದು ಹೊರಡಿಸಲಾದ ಆದೇಶದಲ್ಲಿ ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ ಸಂಜಯ್ ಕುಮಾರ್ ಅವರ ಪೀಠ ಹೇಳಿದೆ ಎಂದು barandbench.com ವರದಿ ಮಾಡಿದೆ.

“ಭಾರತದಲ್ಲಿ ನಡೆಯುತ್ತಿರುವ ಎಲ್ಲಾ ಅಂತರ್ಯುದ್ಧಗಳಿಗೆ ಮುಖ್ಯ ನ್ಯಾಯಮೂರ್ತಿ ಜವಾಬ್ದಾರರು ಎಂದು ಹೇಳುವ ಮೂಲಕ, ಸುಪ್ರೀಂ ಕೋರ್ಟ್‌ ಧಾರ್ಮಿಕ ಯುದ್ಧಗಳನ್ನು ಪ್ರಚೋದಿಸುತ್ತಿದೆ ಎಂಬರ್ಥದಲ್ಲಿ ದುಬೆ ಮಾತನಾಡಿದ್ದಾರೆ. ಇದು ಅವರ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ” ಎಂದು ನ್ಯಾಯಪೀಠ ಹೇಳಿದೆ.

ಆದಾಗ್ಯೂ, ಅರ್ಜಿದಾರರಾದ ವಿಶಾಲ್ ತಿವಾರಿ ಕೋರಿದಂತೆ ದುಬೆ ವಿರುದ್ಧ ಯಾವುದೇ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲು ನ್ಯಾಯಾಲಯ ನಿರಾಕರಿಸಿದೆ.

ನ್ಯಾಯಪೀಠವು ನ್ಯಾಯಾಂಗ ನಿಂದನೆ ಎಂದು ಪರಿಗಣಿಸದಿದ್ದರೂ, ದುಬೆ ಹೇಳಿಕೆಗಳು 1971ರ ನ್ಯಾಯಾಂಗದ ನಿಂದನೆ ಕಾಯ್ದೆಯ ಅಡಿಯಲ್ಲಿ ಒದಗಿಸಲಾದ ವಿನಾಯಿತಿಗಳ ಅಡಿಯಲ್ಲಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ ಎಂದು ವರದಿ ಹೇಳಿದೆ.

“ದುಬೆ ಅವರ ಹೇಳಿಕೆಗಳು ಸಾಂವಿಧಾನಿಕ ನ್ಯಾಯಾಲಯಗಳ ಪಾತ್ರ ಮತ್ತು ಸಂವಿಧಾನದ ಅಡಿಯಲ್ಲಿ ಅವುಗಳಿಗೆ ನೀಡಲಾದ ಕರ್ತವ್ಯಗಳು ಮತ್ತು ಬಾಧ್ಯತೆಗಳ ಬಗ್ಗೆ ಅಜ್ಞಾನವನ್ನು ತೋರಿಸುತ್ತವೆ” ಎಂದು ನ್ಯಾಯಾಲಯ ತಿಳಿಸಿದೆ.

“ನಿರ್ದಿಷ್ಟವಾಗಿ ಹೇಳುವುದಾದರೆ, ಯಾವುದೇ ದ್ವೇಷ ಭಾಷಣ ಮತ್ತು ಕೋಮು ದ್ವೇಷವನ್ನು ಹರಡುವ ಪ್ರಯತ್ನಗಳನ್ನು ಕಠಿಣವಾಗಿ ಎದುರಿಸಬೇಕು” ಎಂದಿದೆ.

“ಒಂದು ನಿರ್ದಿಷ್ಟ ಗುಂಪನ್ನು ದೂರವಿಡುವ ಅಥವಾ ಅವಮಾನಿಸುವ ಯಾವುದೇ ಪ್ರಯತ್ನವು ಕ್ರಿಮಿನಲ್ ಅಪರಾಧವಾಗಿದ್ದು, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಿ ಹೇಳಿದೆ.

ದೇಶದಲ್ಲಿ “ಅಂತರ್ಯುದ್ಧ ಉಂಟಾದರೆ” ಅದಕ್ಕೆ ಸಿಜೆಐ ಖನ್ನಾ ಅವರೇ ನೇರ ಕಾರಣ. ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳನ್ನು ಮುಚ್ಚಿ” ಎಂದು ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ಎಎನ್‌ಐ) ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ದುಬೆ ಹೇಳಿದ್ದರು. ವಕ್ಫ್ (ತಿದ್ದುಪಡಿ) ಕಾಯ್ದೆಗೆ ಸಿಜೆಐ ನೇತೃತ್ವದ ಪೀಠ ತಡೆಯಾಜ್ಞೆ ನೀಡಿದ ನಂತರ ಈ ಹೇಳಿಕೆಗಳನ್ನು ನೀಡಿದ್ದರು.

ವಕೀಲ ವಿಶಾಲ್ ತಿವಾರಿ ಅವರು ದುಬೆ ಹೇಳಿಕೆ ವಿರುದ್ದ ನ್ಯಾಯಾಲಯದ ಮೆಟ್ಟಿಲೇರಿದರು, ದುಬೆ ಅವರ ಸಂದರ್ಶನವು ನ್ಯಾಯಾಂಗ ಮತ್ತು ಸುಪ್ರೀಂ ಕೋರ್ಟ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಂದ ಕೂಡಿದೆ ಎಂದು ಆರೋಪಿಸಿದ್ದರು. ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕೆಂದು ತಿವಾರಿ ಕೋರಿದ್ದರು.

ಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...