Homeಮುಖಪುಟಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

ಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

- Advertisement -
- Advertisement -

ಸುಪ್ರೀಂಕೋರ್ಟ್‌ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ತಮ್ಮ ಪಕ್ಷದ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರಿಂದ ಬಿಜೆಪಿ ಅಂತರ ಕಾಪಾಡಿಕೊಂಡಿದ್ದು, ಅದು ಅವರ ವೈಯಕ್ತಿಕ ಹೇಳಿಕೆ ಎಂದು ಹೇಳಿದೆ. ತಮ್ಮ ಪಕ್ಷವು ನ್ಯಾಯಾಂಗವನ್ನು ಗೌರವಿಸುತ್ತದೆ ಎಂದು ಪಕ್ಷವೂ ಹೇಳಿದ್ದು, ಸುಪ್ರೀಂ ಕೋರ್ಟ್ ವಿರುದ್ಧ ಅವರು ನೀಡಿರುವ ಪ್ರಚೋದನಕಾರಿ ಹೇಳಿಕೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಒತ್ತಿ ಹೇಳಿದೆ.

“ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರು ನ್ಯಾಯಾಂಗ ಮತ್ತು ದೇಶದ ಮುಖ್ಯ ನ್ಯಾಯಾಧೀಶರ ಕುರಿತು ಮಾಡಿದ ಹೇಳಿಕೆಗಳಿಗೂ ಭಾರತೀಯ ಜನತಾ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇವು ಅವರ ವೈಯಕ್ತಿಕ ಹೇಳಿಕೆಗಳು, ಆದರೆ ಬಿಜೆಪಿ ಅಂತಹ ಹೇಳಿಕೆಗಳನ್ನು ಒಪ್ಪುವುದಿಲ್ಲ ಅಥವಾ ಅಂತಹ ಹೇಳಿಕೆಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ. ಬಿಜೆಪಿ ಈ ಹೇಳಿಕೆಗಳನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ಜೆಪಿ ನಡ್ಡಾ ಎಕ್ಸ್‌ನಲ್ಲಿ ತಡರಾತ್ರಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಜಾರ್ಖಂಡ್‌ನ ಗೊಡ್ಡಾದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ದೇಶದಲ್ಲಿ ಧಾರ್ಮಿಕ ಯುದ್ಧಗಳನ್ನು ಪ್ರಚೋದಿಸುತ್ತಿದ್ದು, ಅದು ತನ್ನ ಮಿತಿಗಳನ್ನು ಮೀರುತ್ತಿದೆ ಎಂದು ವಾದಿಸಿದ್ದಾರೆ. “ಪ್ರತಿಯೊಂದಕ್ಕೂ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾಗುತ್ತದೆ. ಹೀಗಾದರೆ, ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಯನ್ನು ಮುಚ್ಚಬೇಕು” ಎಂದು ಅವರು ಹೇಳಿದ್ದಾರೆ.

ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ ಮತ್ತೊಬ್ಬ ಬಿಜೆಪಿ ಸಂಸದ ದಿನೇಶ್ ಶರ್ಮಾ, “ಯಾರಿಗೂ ಲೋಕಸಭೆ ಮತ್ತು ರಾಜ್ಯಸಭೆಯನ್ನು ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಸಂಸದರು ಮತ್ತು ಇತರ ಎಲ್ಲರಿಗೂ ಅಂತಹ ಹೇಳಿಕೆಗಳನ್ನು ನೀಡದಂತೆ ತಿಳಿಸಲಾಗಿದೆ, “ನ್ಯಾಯಾಂಗವು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ” ಎಂದು ಹೇಳಿದ್ದಾರೆ.

“ಭಾರತೀಯ ಜನತಾ ಪಕ್ಷವು ಯಾವಾಗಲೂ ನ್ಯಾಯಾಂಗವನ್ನು ಗೌರವಿಸುತ್ತದೆ ಮತ್ತು ಅದರ ಆದೇಶಗಳು ಮತ್ತು ಸಲಹೆಗಳನ್ನು ಸಂತೋಷದಿಂದ ಸ್ವೀಕರಿಸಿದೆ. ಏಕೆಂದರೆ ಒಂದು ಪಕ್ಷವಾಗಿ ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ಎಲ್ಲಾ ನ್ಯಾಯಾಲಯಗಳು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ ಮತ್ತು ಸಂವಿಧಾನದ ರಕ್ಷಣೆಯ ಬಲವಾದ ಆಧಾರಸ್ತಂಭವಾಗಿದೆ ಎಂದು ನಾವು ನಂಬುತ್ತೇವೆ. ಅಂತಹ ಹೇಳಿಕೆಗಳನ್ನು ನೀಡದಂತೆ ನಾನು ಅವರಿಬ್ಬರಿಗೂ ಮತ್ತು ಇತರರಿಗೂ ಸೂಚನೆ ನೀಡಿದ್ದೇನೆ” ಎಂದು ಕೇಂದ್ರ ಆರೋಗ್ಯ ಸಚಿವರೂ ಆಗಿರುವ ನಡ್ಡಾ ಹೇಳಿದ್ದಾರೆ.

ತಮಿಳುನಾಡಿನ 10 ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿದ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರವನ್ನು ಇತ್ತಿಚೆಗೆ ಟೀಕಿಸಿದ್ದ ಸುಪ್ರಿಂಕೋರ್ಟ್, ಅದನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಎಂದು ತೀರ್ಪು ನೀಡಿತ್ತು. ಇತರ ನಂತರ ಬಿಜೆಪಿ ಸಂಸದರ ತೀಕ್ಷ್ಣವಾದ ಹೇಳಿಕೆಗಳನ್ನು ನೀಡಿದ್ದಾರೆ.

ಶಾಸಕಾಂಗವು ಎರಡನೇ ಬಾರಿಗೆ ಅಂಗೀಕರಿಸಿದ ಮಸೂದೆಗಳಿಗೆ ರಾಷ್ಟ್ರಪತಿ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಸುಪ್ರೀಂ ಕೋರ್ಟ್ ಪೀಠವು ಮೂರು ತಿಂಗಳ ಗಡುವನ್ನು ನಿಗದಿಪಡಿಸಿತ್ತು. ಸಾಂವಿಧಾನಿಕ ಪ್ರಶ್ನೆಗಳನ್ನು ಹೊಂದಿರುವ ಮಸೂದೆಗಳನ್ನು ಸುಪ್ರೀಂಕೋರ್ಟ್‌ಗೆ ಉಲ್ಲೇಖಿಸುವುದು ವಿವೇಕಯುತವಾಗಿದೆ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಒತ್ತಿ ಹೇಳಿತ್ತು.

ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ಮಧ್ಯೆಯೂ ಈ ಹೇಳಿಕೆಗಳನ್ನು ನೀಡಲಾಗಿತ್ತು.

ಏಪ್ರಿಲ್ 17 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಯಾವುದೇ ‘ಬಳಕೆದಾರ ವಕ್ಫ್(ವಕ್ಫ್‌ ಬೈ ಯೂಸರ್)’ ನಿಬಂಧನೆಯನ್ನು ಡಿನೋಟಿಫೈ ಮಾಡುವುದಿಲ್ಲ ಮತ್ತು ಮಂಡಳಿಯಲ್ಲಿ ಯಾವುದೇ ಮುಸ್ಲಿಮೇತರ ಸದಸ್ಯರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಭರವಸೆ ನೀಡಿತ್ತು. ಕಾನೂನಿನ ಆ ಭಾಗಗಳನ್ನು ತಡೆಯುವುದನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದ ಒಂದು ದಿನದ ನಂತರ ಈ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿತ್ತು.

ಬಿಜೆಪಿಯ ದುಬೆ ಅವರ ಹೇಳಿಕೆಗಳನ್ನು ಖಂಡಿಸಿದ ಕಾಂಗ್ರೆಸ್, “ಸುಪ್ರೀಂ ಕೋರ್ಟ್ ಅನ್ನು ಗುರಿಯಾಗಿಸಲಾಗುತ್ತಿದೆ” ಎಂದು ಹೇಳಿದೆ.

“ಸುಪ್ರೀಂ ಕೋರ್ಟ್ ಅನ್ನು ದುರ್ಬಲಗೊಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಿಭಿನ್ನ ಧ್ವನಿಗಳು ಉದ್ದೇಶಪೂರ್ವಕವಾಗಿ ಬರುತ್ತಿದ್ದು, ಸುಪ್ರೀಂಕೋರ್ಟ್ ಅನ್ನು ಗುರಿಯಾಗಿಸಲಾಗುತ್ತಿದೆ. ಚುನಾವಣಾ ಬಾಂಡ್‌ಗಳ ಸಮಸ್ಯೆ ಇದೆ, ವಕ್ಫ್ ಸಮಸ್ಯೆ ಉದ್ಭವಿಸಿದೆ, ಚುನಾವಣಾ ಆಯೋಗದ ಸಮಸ್ಯೆ ಬರಲಿದೆ” ಎಂದು ಕಾಂಗ್ರೆಸ್‌ನ ಸಂವಹನದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಸುಪ್ರೀಂಕೋರ್ಟ್‌ ವಿರುದ್ಧ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....