Homeಮುಖಪುಟಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

ಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

- Advertisement -
- Advertisement -

ಸುಪ್ರೀಂಕೋರ್ಟ್‌ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ತಮ್ಮ ಪಕ್ಷದ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರಿಂದ ಬಿಜೆಪಿ ಅಂತರ ಕಾಪಾಡಿಕೊಂಡಿದ್ದು, ಅದು ಅವರ ವೈಯಕ್ತಿಕ ಹೇಳಿಕೆ ಎಂದು ಹೇಳಿದೆ. ತಮ್ಮ ಪಕ್ಷವು ನ್ಯಾಯಾಂಗವನ್ನು ಗೌರವಿಸುತ್ತದೆ ಎಂದು ಪಕ್ಷವೂ ಹೇಳಿದ್ದು, ಸುಪ್ರೀಂ ಕೋರ್ಟ್ ವಿರುದ್ಧ ಅವರು ನೀಡಿರುವ ಪ್ರಚೋದನಕಾರಿ ಹೇಳಿಕೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಒತ್ತಿ ಹೇಳಿದೆ.

“ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರು ನ್ಯಾಯಾಂಗ ಮತ್ತು ದೇಶದ ಮುಖ್ಯ ನ್ಯಾಯಾಧೀಶರ ಕುರಿತು ಮಾಡಿದ ಹೇಳಿಕೆಗಳಿಗೂ ಭಾರತೀಯ ಜನತಾ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇವು ಅವರ ವೈಯಕ್ತಿಕ ಹೇಳಿಕೆಗಳು, ಆದರೆ ಬಿಜೆಪಿ ಅಂತಹ ಹೇಳಿಕೆಗಳನ್ನು ಒಪ್ಪುವುದಿಲ್ಲ ಅಥವಾ ಅಂತಹ ಹೇಳಿಕೆಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ. ಬಿಜೆಪಿ ಈ ಹೇಳಿಕೆಗಳನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ಜೆಪಿ ನಡ್ಡಾ ಎಕ್ಸ್‌ನಲ್ಲಿ ತಡರಾತ್ರಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಜಾರ್ಖಂಡ್‌ನ ಗೊಡ್ಡಾದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ದೇಶದಲ್ಲಿ ಧಾರ್ಮಿಕ ಯುದ್ಧಗಳನ್ನು ಪ್ರಚೋದಿಸುತ್ತಿದ್ದು, ಅದು ತನ್ನ ಮಿತಿಗಳನ್ನು ಮೀರುತ್ತಿದೆ ಎಂದು ವಾದಿಸಿದ್ದಾರೆ. “ಪ್ರತಿಯೊಂದಕ್ಕೂ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾಗುತ್ತದೆ. ಹೀಗಾದರೆ, ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಯನ್ನು ಮುಚ್ಚಬೇಕು” ಎಂದು ಅವರು ಹೇಳಿದ್ದಾರೆ.

ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ ಮತ್ತೊಬ್ಬ ಬಿಜೆಪಿ ಸಂಸದ ದಿನೇಶ್ ಶರ್ಮಾ, “ಯಾರಿಗೂ ಲೋಕಸಭೆ ಮತ್ತು ರಾಜ್ಯಸಭೆಯನ್ನು ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಸಂಸದರು ಮತ್ತು ಇತರ ಎಲ್ಲರಿಗೂ ಅಂತಹ ಹೇಳಿಕೆಗಳನ್ನು ನೀಡದಂತೆ ತಿಳಿಸಲಾಗಿದೆ, “ನ್ಯಾಯಾಂಗವು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ” ಎಂದು ಹೇಳಿದ್ದಾರೆ.

“ಭಾರತೀಯ ಜನತಾ ಪಕ್ಷವು ಯಾವಾಗಲೂ ನ್ಯಾಯಾಂಗವನ್ನು ಗೌರವಿಸುತ್ತದೆ ಮತ್ತು ಅದರ ಆದೇಶಗಳು ಮತ್ತು ಸಲಹೆಗಳನ್ನು ಸಂತೋಷದಿಂದ ಸ್ವೀಕರಿಸಿದೆ. ಏಕೆಂದರೆ ಒಂದು ಪಕ್ಷವಾಗಿ ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ಎಲ್ಲಾ ನ್ಯಾಯಾಲಯಗಳು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ ಮತ್ತು ಸಂವಿಧಾನದ ರಕ್ಷಣೆಯ ಬಲವಾದ ಆಧಾರಸ್ತಂಭವಾಗಿದೆ ಎಂದು ನಾವು ನಂಬುತ್ತೇವೆ. ಅಂತಹ ಹೇಳಿಕೆಗಳನ್ನು ನೀಡದಂತೆ ನಾನು ಅವರಿಬ್ಬರಿಗೂ ಮತ್ತು ಇತರರಿಗೂ ಸೂಚನೆ ನೀಡಿದ್ದೇನೆ” ಎಂದು ಕೇಂದ್ರ ಆರೋಗ್ಯ ಸಚಿವರೂ ಆಗಿರುವ ನಡ್ಡಾ ಹೇಳಿದ್ದಾರೆ.

ತಮಿಳುನಾಡಿನ 10 ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿದ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರವನ್ನು ಇತ್ತಿಚೆಗೆ ಟೀಕಿಸಿದ್ದ ಸುಪ್ರಿಂಕೋರ್ಟ್, ಅದನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಎಂದು ತೀರ್ಪು ನೀಡಿತ್ತು. ಇತರ ನಂತರ ಬಿಜೆಪಿ ಸಂಸದರ ತೀಕ್ಷ್ಣವಾದ ಹೇಳಿಕೆಗಳನ್ನು ನೀಡಿದ್ದಾರೆ.

ಶಾಸಕಾಂಗವು ಎರಡನೇ ಬಾರಿಗೆ ಅಂಗೀಕರಿಸಿದ ಮಸೂದೆಗಳಿಗೆ ರಾಷ್ಟ್ರಪತಿ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಸುಪ್ರೀಂ ಕೋರ್ಟ್ ಪೀಠವು ಮೂರು ತಿಂಗಳ ಗಡುವನ್ನು ನಿಗದಿಪಡಿಸಿತ್ತು. ಸಾಂವಿಧಾನಿಕ ಪ್ರಶ್ನೆಗಳನ್ನು ಹೊಂದಿರುವ ಮಸೂದೆಗಳನ್ನು ಸುಪ್ರೀಂಕೋರ್ಟ್‌ಗೆ ಉಲ್ಲೇಖಿಸುವುದು ವಿವೇಕಯುತವಾಗಿದೆ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಒತ್ತಿ ಹೇಳಿತ್ತು.

ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ಮಧ್ಯೆಯೂ ಈ ಹೇಳಿಕೆಗಳನ್ನು ನೀಡಲಾಗಿತ್ತು.

ಏಪ್ರಿಲ್ 17 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಯಾವುದೇ ‘ಬಳಕೆದಾರ ವಕ್ಫ್(ವಕ್ಫ್‌ ಬೈ ಯೂಸರ್)’ ನಿಬಂಧನೆಯನ್ನು ಡಿನೋಟಿಫೈ ಮಾಡುವುದಿಲ್ಲ ಮತ್ತು ಮಂಡಳಿಯಲ್ಲಿ ಯಾವುದೇ ಮುಸ್ಲಿಮೇತರ ಸದಸ್ಯರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಭರವಸೆ ನೀಡಿತ್ತು. ಕಾನೂನಿನ ಆ ಭಾಗಗಳನ್ನು ತಡೆಯುವುದನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದ ಒಂದು ದಿನದ ನಂತರ ಈ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿತ್ತು.

ಬಿಜೆಪಿಯ ದುಬೆ ಅವರ ಹೇಳಿಕೆಗಳನ್ನು ಖಂಡಿಸಿದ ಕಾಂಗ್ರೆಸ್, “ಸುಪ್ರೀಂ ಕೋರ್ಟ್ ಅನ್ನು ಗುರಿಯಾಗಿಸಲಾಗುತ್ತಿದೆ” ಎಂದು ಹೇಳಿದೆ.

“ಸುಪ್ರೀಂ ಕೋರ್ಟ್ ಅನ್ನು ದುರ್ಬಲಗೊಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಿಭಿನ್ನ ಧ್ವನಿಗಳು ಉದ್ದೇಶಪೂರ್ವಕವಾಗಿ ಬರುತ್ತಿದ್ದು, ಸುಪ್ರೀಂಕೋರ್ಟ್ ಅನ್ನು ಗುರಿಯಾಗಿಸಲಾಗುತ್ತಿದೆ. ಚುನಾವಣಾ ಬಾಂಡ್‌ಗಳ ಸಮಸ್ಯೆ ಇದೆ, ವಕ್ಫ್ ಸಮಸ್ಯೆ ಉದ್ಭವಿಸಿದೆ, ಚುನಾವಣಾ ಆಯೋಗದ ಸಮಸ್ಯೆ ಬರಲಿದೆ” ಎಂದು ಕಾಂಗ್ರೆಸ್‌ನ ಸಂವಹನದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಸುಪ್ರೀಂಕೋರ್ಟ್‌ ವಿರುದ್ಧ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...