Homeಮುಖಪುಟಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

ಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

- Advertisement -
- Advertisement -

ಸುಪ್ರೀಂಕೋರ್ಟ್‌ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ತಮ್ಮ ಪಕ್ಷದ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರಿಂದ ಬಿಜೆಪಿ ಅಂತರ ಕಾಪಾಡಿಕೊಂಡಿದ್ದು, ಅದು ಅವರ ವೈಯಕ್ತಿಕ ಹೇಳಿಕೆ ಎಂದು ಹೇಳಿದೆ. ತಮ್ಮ ಪಕ್ಷವು ನ್ಯಾಯಾಂಗವನ್ನು ಗೌರವಿಸುತ್ತದೆ ಎಂದು ಪಕ್ಷವೂ ಹೇಳಿದ್ದು, ಸುಪ್ರೀಂ ಕೋರ್ಟ್ ವಿರುದ್ಧ ಅವರು ನೀಡಿರುವ ಪ್ರಚೋದನಕಾರಿ ಹೇಳಿಕೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಒತ್ತಿ ಹೇಳಿದೆ.

“ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರು ನ್ಯಾಯಾಂಗ ಮತ್ತು ದೇಶದ ಮುಖ್ಯ ನ್ಯಾಯಾಧೀಶರ ಕುರಿತು ಮಾಡಿದ ಹೇಳಿಕೆಗಳಿಗೂ ಭಾರತೀಯ ಜನತಾ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇವು ಅವರ ವೈಯಕ್ತಿಕ ಹೇಳಿಕೆಗಳು, ಆದರೆ ಬಿಜೆಪಿ ಅಂತಹ ಹೇಳಿಕೆಗಳನ್ನು ಒಪ್ಪುವುದಿಲ್ಲ ಅಥವಾ ಅಂತಹ ಹೇಳಿಕೆಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ. ಬಿಜೆಪಿ ಈ ಹೇಳಿಕೆಗಳನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ಜೆಪಿ ನಡ್ಡಾ ಎಕ್ಸ್‌ನಲ್ಲಿ ತಡರಾತ್ರಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಜಾರ್ಖಂಡ್‌ನ ಗೊಡ್ಡಾದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ದೇಶದಲ್ಲಿ ಧಾರ್ಮಿಕ ಯುದ್ಧಗಳನ್ನು ಪ್ರಚೋದಿಸುತ್ತಿದ್ದು, ಅದು ತನ್ನ ಮಿತಿಗಳನ್ನು ಮೀರುತ್ತಿದೆ ಎಂದು ವಾದಿಸಿದ್ದಾರೆ. “ಪ್ರತಿಯೊಂದಕ್ಕೂ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾಗುತ್ತದೆ. ಹೀಗಾದರೆ, ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಯನ್ನು ಮುಚ್ಚಬೇಕು” ಎಂದು ಅವರು ಹೇಳಿದ್ದಾರೆ.

ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ ಮತ್ತೊಬ್ಬ ಬಿಜೆಪಿ ಸಂಸದ ದಿನೇಶ್ ಶರ್ಮಾ, “ಯಾರಿಗೂ ಲೋಕಸಭೆ ಮತ್ತು ರಾಜ್ಯಸಭೆಯನ್ನು ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಸಂಸದರು ಮತ್ತು ಇತರ ಎಲ್ಲರಿಗೂ ಅಂತಹ ಹೇಳಿಕೆಗಳನ್ನು ನೀಡದಂತೆ ತಿಳಿಸಲಾಗಿದೆ, “ನ್ಯಾಯಾಂಗವು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ” ಎಂದು ಹೇಳಿದ್ದಾರೆ.

“ಭಾರತೀಯ ಜನತಾ ಪಕ್ಷವು ಯಾವಾಗಲೂ ನ್ಯಾಯಾಂಗವನ್ನು ಗೌರವಿಸುತ್ತದೆ ಮತ್ತು ಅದರ ಆದೇಶಗಳು ಮತ್ತು ಸಲಹೆಗಳನ್ನು ಸಂತೋಷದಿಂದ ಸ್ವೀಕರಿಸಿದೆ. ಏಕೆಂದರೆ ಒಂದು ಪಕ್ಷವಾಗಿ ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ಎಲ್ಲಾ ನ್ಯಾಯಾಲಯಗಳು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ ಮತ್ತು ಸಂವಿಧಾನದ ರಕ್ಷಣೆಯ ಬಲವಾದ ಆಧಾರಸ್ತಂಭವಾಗಿದೆ ಎಂದು ನಾವು ನಂಬುತ್ತೇವೆ. ಅಂತಹ ಹೇಳಿಕೆಗಳನ್ನು ನೀಡದಂತೆ ನಾನು ಅವರಿಬ್ಬರಿಗೂ ಮತ್ತು ಇತರರಿಗೂ ಸೂಚನೆ ನೀಡಿದ್ದೇನೆ” ಎಂದು ಕೇಂದ್ರ ಆರೋಗ್ಯ ಸಚಿವರೂ ಆಗಿರುವ ನಡ್ಡಾ ಹೇಳಿದ್ದಾರೆ.

ತಮಿಳುನಾಡಿನ 10 ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿದ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರವನ್ನು ಇತ್ತಿಚೆಗೆ ಟೀಕಿಸಿದ್ದ ಸುಪ್ರಿಂಕೋರ್ಟ್, ಅದನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಎಂದು ತೀರ್ಪು ನೀಡಿತ್ತು. ಇತರ ನಂತರ ಬಿಜೆಪಿ ಸಂಸದರ ತೀಕ್ಷ್ಣವಾದ ಹೇಳಿಕೆಗಳನ್ನು ನೀಡಿದ್ದಾರೆ.

ಶಾಸಕಾಂಗವು ಎರಡನೇ ಬಾರಿಗೆ ಅಂಗೀಕರಿಸಿದ ಮಸೂದೆಗಳಿಗೆ ರಾಷ್ಟ್ರಪತಿ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಸುಪ್ರೀಂ ಕೋರ್ಟ್ ಪೀಠವು ಮೂರು ತಿಂಗಳ ಗಡುವನ್ನು ನಿಗದಿಪಡಿಸಿತ್ತು. ಸಾಂವಿಧಾನಿಕ ಪ್ರಶ್ನೆಗಳನ್ನು ಹೊಂದಿರುವ ಮಸೂದೆಗಳನ್ನು ಸುಪ್ರೀಂಕೋರ್ಟ್‌ಗೆ ಉಲ್ಲೇಖಿಸುವುದು ವಿವೇಕಯುತವಾಗಿದೆ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಒತ್ತಿ ಹೇಳಿತ್ತು.

ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ಮಧ್ಯೆಯೂ ಈ ಹೇಳಿಕೆಗಳನ್ನು ನೀಡಲಾಗಿತ್ತು.

ಏಪ್ರಿಲ್ 17 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಯಾವುದೇ ‘ಬಳಕೆದಾರ ವಕ್ಫ್(ವಕ್ಫ್‌ ಬೈ ಯೂಸರ್)’ ನಿಬಂಧನೆಯನ್ನು ಡಿನೋಟಿಫೈ ಮಾಡುವುದಿಲ್ಲ ಮತ್ತು ಮಂಡಳಿಯಲ್ಲಿ ಯಾವುದೇ ಮುಸ್ಲಿಮೇತರ ಸದಸ್ಯರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಭರವಸೆ ನೀಡಿತ್ತು. ಕಾನೂನಿನ ಆ ಭಾಗಗಳನ್ನು ತಡೆಯುವುದನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದ ಒಂದು ದಿನದ ನಂತರ ಈ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿತ್ತು.

ಬಿಜೆಪಿಯ ದುಬೆ ಅವರ ಹೇಳಿಕೆಗಳನ್ನು ಖಂಡಿಸಿದ ಕಾಂಗ್ರೆಸ್, “ಸುಪ್ರೀಂ ಕೋರ್ಟ್ ಅನ್ನು ಗುರಿಯಾಗಿಸಲಾಗುತ್ತಿದೆ” ಎಂದು ಹೇಳಿದೆ.

“ಸುಪ್ರೀಂ ಕೋರ್ಟ್ ಅನ್ನು ದುರ್ಬಲಗೊಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಿಭಿನ್ನ ಧ್ವನಿಗಳು ಉದ್ದೇಶಪೂರ್ವಕವಾಗಿ ಬರುತ್ತಿದ್ದು, ಸುಪ್ರೀಂಕೋರ್ಟ್ ಅನ್ನು ಗುರಿಯಾಗಿಸಲಾಗುತ್ತಿದೆ. ಚುನಾವಣಾ ಬಾಂಡ್‌ಗಳ ಸಮಸ್ಯೆ ಇದೆ, ವಕ್ಫ್ ಸಮಸ್ಯೆ ಉದ್ಭವಿಸಿದೆ, ಚುನಾವಣಾ ಆಯೋಗದ ಸಮಸ್ಯೆ ಬರಲಿದೆ” ಎಂದು ಕಾಂಗ್ರೆಸ್‌ನ ಸಂವಹನದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಸುಪ್ರೀಂಕೋರ್ಟ್‌ ವಿರುದ್ಧ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...