Homeಅಂಕಣಗಳುಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

- Advertisement -
- Advertisement -

ರೈತ ಪ್ರತಿಭಟನೆಗಳ ಭಾಗವಾಗಿ ಮಹಿಳೆಯರು ಯಾಕಿದ್ದಾರೆ?

ಸುಪ್ರೀಮ್ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರು ಮೊನ್ನೆ ವಿಚಾರಣೆಯ ಸಂದರ್ಭದಲ್ಲಿ ಕೇಳಿದ ಪ್ರಶ್ನೆಯಿದು. ಮನೆಗೆ ಮರಳುವಂತೆ ಅವರ ಮನ ಒಲಿಸಿರಿ. ಇಲ್ಲವಾದರೆ ಈ ಸಂಬಂಧ ಆದೇಶ ನೀಡಬೇಕಾದೀತು ಎಂದೂ ಅವರು ಹೇಳಿದರು.

ದೇಶದ ಕೃಷಿ ಶ್ರಮಿಕ ಪಡೆಯ ಶೇ.42ರಷ್ಟು ಮಹಿಳೆಯರೇ ಆಗಿದ್ದಾರೆ. ಆದರೆ ಅವರ ಕೃಷಿ ಜಮೀನಿನ ಒಡೆತನದ ಮಾತು ಬಂದರೆ ಆಕೆಯ ಹೆಸರಿಗಿರುವುದು ಕೇವಲ ಶೇ.ಎರಡರಷ್ಟು ಭೂಮಿ ಮಾತ್ರ ಎಂದು ರಾಷ್ಟ್ರೀಯ ಆನ್ವಯಿಕ ಆರ್ಥಶಾಸ್ತ್ರೀಯ ಸಂಶೋಧನಾ ಸಂಸ್ಥೆ 2018ರಲ್ಲಿ ಹೇಳಿದೆ.

2011ರ ಜನಗಣತಿಯ ಪ್ರಕಾರ ಗ್ರಾಮೀಣ ಭಾರತದ ಶೇ.65ರಷ್ಟು ಮಹಿಳೆಯರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಒಕ್ಕಲುತನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ತಮ್ಮನ್ನೂ ರೈತರೆಂದು ವರ್ಗೀಕರಿಸಬೇಕೆಂಬುದು ಮಹಿಳೆಯರ ಬಹುಕಾಲದ ಬೇಡಿಕೆ. ಬಿತ್ತನೆ, ಮಾರಾಟದ ತೀರ್ಮಾನಗಳಲ್ಲೂ ಆಕೆಗೆ ದನಿಯಿಲ್ಲ. ಆದರೆ ಕೃಷಿವ್ಯವಸ್ಥೆಯ ಕೇಂದ್ರಬಿಂದು ಅವರು. ಬಿತ್ತನೆಯಿಂದ ಹಿಡಿದು ಕಟಾವಿನ ತನಕ, ದನ ಮೇಯಿಸುವುದರಿಂದ ಹಿಡಿದು ಹಾಲು ಹಿಂಡುವ ತನಕ ಗಂಡಸಿಗೆ ಸರಿಸಮ ಇಲ್ಲವೇ ಮಿಗಿಲಾದ ಶ್ರಮ ಆಕೆಯದು.

ಎಂಟು ನೂರು ಮಂದಿ ಮಹಿಳೆಯರು ಸುಪ್ರೀಮ್ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರಿಗೆ ಬಹಿರಂಗ ಪ್ರತಿಭಟನಾ ಪತ್ರ ಬರೆದಿದ್ದಾರೆ. ಕೃಷಿಯಲ್ಲಿ ಮಹಿಳೆಯರದು ಪ್ರಧಾನ ಪಾತ್ರ ಎಂಬ ವಾಸ್ತವವನ್ನು ನಿಮ್ಮ ಹೇಳಿಕೆಗಳು ಅವಮಾನಗೊಳಿಸಿವೆ. ಮಹಿಳೆಯು ಹಾಲಿ ರೈತ ಪ್ರತಿಭಟನೆಯ ಆತ್ಮ ಮತ್ತು ಹೃದಯವೆಂಬುದನ್ನು ಕಾಣಿರಿ. ಸರ್ಕಾರಿ ಅಂಕಿ ಅಂಶಗಳಲ್ಲಿ ಮಹಿಳಾ ರೈತರು ಮಟಾ ಮಾಯವಾಗಿರುವ ಜೀವಿಗಳು. ರೈತರ ಆತ್ಮಹತ್ಯೆಗಳ ನಿಜ ಭಾರವನ್ನು ಹೊರಬೇಕಾಗಿರುವ ಕಷ್ಟಜೀವಿ ಆಕೆ. ಸಾವಿಗಿಂತ ಬದುಕೇ ಕ್ರೂರ ಆಕೆಯ ಪಾಲಿಗೆ. ಆಕೆ ಕೇವಲ ರೈತನ ತಾಯಿ ಪತ್ನಿ, ಮಗಳು, ಸೋದರಿ, ಸೊಸೆ ಮಾತ್ರವೇ ಆಗಿರುತ್ತಾಳೆ. ರೈತಳೆಂದು ಆಕೆಯನ್ನು ಕರೆಯುವುದಿಲ್ಲ ಸರ್ಕಾರ. ಇದೀಗ ಸುಪ್ರೀಮ್ ಕೋರ್ಟಿನ ಮನಸ್ಥಿತಿಯೂ ಭಿನ್ನವಾಗಿಲ್ಲ.

ಈ ರೈತ ಪ್ರತಿಭಟನೆಯು ಕೇವಲ ಕೃಷಿ ಕಾನೂನುಗಳಿಗೆ ವಿರೋಧವನ್ನು ಸಿಡಿಸಿರುವುದಲ್ಲದೆ, ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣದ ಆವರಣವಾಗಿ ಹೊಮ್ಮಿರುವುದನ್ನು ಗಮನಿಸಿರಿ. ಆವರ ಪಾತ್ರವನ್ನು ಕಡೆಗಣಿಸುವುದು ಅತೀವ ಅವಹೇಳನಕರ ಎಂದಿದ್ದಾರೆ. ಈ ಕೃಷಿ ಕಾನೂನುಗಳಿಂದಾಗಿ ಒಕ್ಕಲುತನದ ಆದಾಯಗಳು ಮತ್ತಷ್ಟು ಕುಸಿದರೆ ಅದರ ನೇರ ಭಾರ ಹೊರುವವರು ಮನೆವಾರ್ತೆಯನ್ನು ನೋಡಿಕೊಳ್ಳಬೇಕಾಗಿರುವ ಹೆಣ್ಣುಮಕ್ಕಳೇ. ಪ್ರತಿಭಟನೆಯ ಸ್ಥಳಗಳಲ್ಲಿ ಮಾತ್ರವಲ್ಲದೆ ದೇಶದ ಉದ್ದಗಲಕ್ಕೆ ಭಾಷಣಗಳನ್ನು ಸಂಘಟಿಸುವ, ಸಭೆಗಳನ್ನು ಏರ್ಪಡಿಸುವ, ಪತ್ರಿಕಾಗೋಷ್ಠಿ ನಡೆಸುವ, ವೈದ್ಯೋಪಚಾರ ನೀಡುವ, ಅಡುಗೆ ಮಾಡುವ ಕ್ರಿಯೆಗಳಲ್ಲಿ ಮಹಿಳೆಯರು ಪುರುಷರಿಗೆ ಸರಿಸಮನಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದಯಮಾಡಿ ಕೃಷಿಯಲ್ಲಿ ಮಹಿಳಾ ರೈತರ ಪಾತ್ರವನ್ನು ಗುರುತಿಸಿರಿ ಮತ್ತು ನಿಮ್ಮ ಪುರುಷಾಧಿಪತ್ಯದ ಮನಸ್ಥಿತಿಯಿಂದ ಹೊರಬನ್ನಿರಿ ಎಂದು ಮಹಿಳೆಯರು ಸುಪ್ರೀಮ್ ಕೋರ್ಟಿಗೆ ಝಾಡಿಸಿದ್ದಾರೆ.

ಮಹಿಳೆಯ ದುಡಿಮೆಯನ್ನು ಭಾರತೀಯ ಪುರುಷಾಧಿಪತ್ಯದ ರಾಜಕೀಯ ಸಾಮಾಜಿಕ ಆರ್ಥಿಕ ವ್ಯವಸ್ಥೆ ಗುರುತಿಸಿಯೇ ಇಲ್ಲ. ಆದಿಕಾಲದ ಬೇಟೆಗಾರ ಪುರುಷ ಈಟಿ ಮತ್ತು ಬೀಸು ಕೋಲನ್ನಷ್ಟೇ ಹಿಡಿದು ಹಗುರಕ್ಕೆ ನಡೆಯುತ್ತಿದ್ದರೆ, ಆತನ ಹಿಂದೆ ಹೆಜ್ಜೆ ಹಾಕುತ್ತಿದ್ದ ಆಕೆಯ ಮೇಲೆ ಅವರಿಬ್ಬರ ಕೂಸು, ಬಿಡಾರ ಹೂಡಿದರೆ ಛಾವಣಿಯಾಗಬಲ್ಲ ಪರಿಕರ, ಬುತ್ತಿ ಗಂಟುಗಳ ಜೊತೆಗೆ ಅಗೆಯುವ ಬಡಿಗೆಯ ಒಜ್ಜೆ. ಕೂಳು ಬೇಯಿಸಲು ಕಟ್ಟಿಗೆಯನ್ನು ಆಯುವುದು, ನೀರು ಹೊರುವುದು ಅಡಿಗೆ ಮಾಡುವುದು ಆಕೆಯದೇ ಕೆಲಸ. ಹೆಣ್ಣು ಗಂಡುಗಳ ನಡುವೆ ಸಾರ್ವತ್ರಿಕ ಶ್ರಮ ವಿಭಜನೆ ಎಂದರೆ ಆಕೆಯ ಪಾಲಿಗೆ ಮೈ ಮುರಿಯುವ ಗಾಣದೆತ್ತಿನ ಎಡೆಬಿಡದ ದುಡಿತ. ಕ್ರೀಡೆ, ಕನಸು, ಧರ್ಮ, ಕಲಾತ್ಮಕ ಅಭಿವ್ಯಕ್ತಿ, ಆಚರಣೆಗಳು ಆತನದೇ ವಿಶೇಷಾಧಿಕಾರ. ಪಶುಗಳನ್ನು ಪಳಗಿಸಿದ ನಂತರ ಪುರುಷ ಅವುಗಳನ್ನು ನೊಗಕ್ಕೆ ಹಚ್ಚಿ ದುಡಿಸಿದ. ಪಳಗಿಸಿದ ಪಶು ಸತ್ತಾಗ ಪುನಃ ನೊಗಕ್ಕೆ ನೇಗಿಲಿಗೆ ಹೆಗಲು ಕೊಟ್ಟದ್ದು ಆಕೆಯ. ಹಿಂದೆ ನಿಂತು ಆಕೆಯನ್ನು ನಡೆಸಿದ ಅಧಿಕಾರ ಆತನದೇ. ಇಂದಿಗೂ ಬಹಳಷ್ಟು ರೈತಾಪಿ ಕುಟುಂಬಗಳಲ್ಲಿ ಎತ್ತುಗಳನ್ನು ನಡೆಸಿಕೊಂಡಷ್ಟು ಉತ್ತಮವಾಗಿ ಹೆಣ್ಣನ್ನು ನಡೆಸಿಕೊಳ್ಳುವುದಿಲ್ಲ. ಆಕೆ ಕಂತೆ ಒಗೆದರೆ ಮತ್ತೊಬ್ಬ ತೊತ್ತು ಬೇಡಿಕೊಂಡು ಬಂದಾಳು. ಆದರೆ ಎತ್ತುಗಳು ಸತ್ತರೆ ಮತ್ತೆ ತರಲು ಹಣ ಸುರಿಯಬೇಕಲ್ಲ?

ಕೆಲಸ ಒಜ್ಜೆಯದು ಎಂದು ಆಕೆ ಎಂದೂ ಮಾಡದೆ ಬಿಟ್ಟವಳಲ್ಲ. ಬುದ್ಧಿಶಕ್ತಿ ಬೇಕಿರುವ ಮತ್ತು ನಿರ್ವಹಣಾ ಕೌಶಲ ಒಳಗೊಳ್ಳುವ ಕೆಲಸವನ್ನು ಆಕೆಗೆ ನಿರಾಕರಿಸಲಾಗಿತ್ತು. ಕತ್ತೆ ಕಾಯುವ ಕೆಲಸಾನೂ ಕೂಡ ಆಕೆಗೆ ಕೊಡುತ್ತಿರಲಿಲ್ಲ. ದಾರಿಯ ದೂರವನ್ನು ಕತ್ತೆಯ ಮೇಲೆ ಕುಳಿತು ಕ್ರಮಿಸುವ ರೈತಾಪಿ ಪುರುಷ ಮತ್ತು ಜೊತೆ ಜೊತೆಯಲ್ಲೇ ಓಡು ನಡಿಗೆಯಲ್ಲಿ ಧಾವಿಸುವ ಆತನ ಪತ್ನಿಯನ್ನು ಈಗಲೂ ಅಲ್ಲಲ್ಲಿ ಕಾಣುವುದು ಸಾಧ್ಯ. ಸಿರಿವಂತ ಪ್ರಪಂಚದಲ್ಲಿ ಈ ಸಂಬಂಧ ಕುಟುಂಬದ ಕಾರು ಸವಾರಿಯ ಸುಖ ಗಂಡನದಾದರೆ, ನಡೆದು ದೂರ ಕ್ರಮಿಸುವ ಇಲ್ಲವೇ ಬಸ್ಸಿನಲ್ಲಿ ಓಡಾಡುವ ಹೆಂಡತಿಯ ದೃಶ್ಯವಾಗಿ ಬದಲಾದೀತು

Photo Courtesy: The Indian Express

.

ಭಾರದ, ಮೈಮುರಿಯುವ, ನಿತ್ಯ ಮಾಡಿದ್ದನ್ನೇ ಮಾಡುವ ಅರ್ಥವಿಲ್ಲದ ದುಡಿತ ಆಕೆಯದು. ಜಗತ್ತಿನ ತುಂಬೆಲ್ಲ ಇದೇ ಕತೆ. ಕೂಳು ಬೇಯಿಸುವ ವಿರಳ ಉರುವಲನ್ನು ಹುಡುಕಿ ಹೆಕ್ಕಿ ಮುರಿದು ಹೊರೆಯಾಗಿ ಬಿಗಿದು ತಲೆಯ ಮೇಲೋ ಬೆನ್ನ ಮೇಲೆಯೋ ಹೊತ್ತು ತರುವವಳು ಆಕೆಯೇ. ದುರ್ಲಭ ನೀರನ್ನು ದೂರದಿಂದ ನೆತ್ತಿ ನುಗ್ಗಾಗುವಂತೆ ಹೊತ್ತು ತರುವುದು ಈಗಲೂ ಆಕೆಯದೇ ಕೆಲಸ. ಪುರುಷರು ಭಾರದ ನೀರನ್ನು ಹೊರುವುದು ವಿರಳವಾಗಿ ಲಭಿಸುವ ನೋಟ. ಶ್ರಮವನ್ನು ಹಗುರ ಮಾಡುವ ಊರ್ಜೆಯ ಮೂಲ ದೊರೆತ ಮರುಕ್ಷಣವೇ ಅಂತಹ ಕೆಲಸವನ್ನು ಪುರುಷರು ಬಾಚಿಕೊಳ್ಳುವರು.

ಸೊಂಟ ಬಗ್ಗಿಸಿಯೋ ಕುಕ್ಕರಗಾಲಲ್ಲಿ ಕುಳಿತೋ ಕಳೆಗುದ್ದಲಿ ಮತ್ತು ಪಿಕಾಸಿಗಳಲ್ಲೇ ಮಾಡಬೇಕಿದ್ದಷ್ಟು ದಿನ ಉಳುಮೆಯ ಕೆಲಸ ಆಕೆಯದು. ಟ್ರ್ಯಾಕ್ಟರುಗಳು, ಟಿಲ್ಲರುಗಳು ಬಂದೊಡನೆಯೇ ಆತನದಾಗಿಬಿಡುತ್ತದೆ!

ವಿಶ್ವಸಂಸ್ಥೆಯ ಯೋಜನೆಯೊಂದು ಮಹಿಳಾ ವ್ಯಾಪಾರಿಗಳಿಗೆ ಹಂಚಿದ ಬೈಸಿಕಲ್‌ಗಳನ್ನು ಕಿತ್ತುಕೊಂಡು ಸವಾರಿ ಮಾಡಿದವರು ಅವರ ಗಂಡಂದಿರು. ಮಹಿಳೆಯರು ಎಂದಿಂತೆ ತಮ್ಮ ಉತ್ಪನ್ನಗಳ ಮೂಟೆ ಹೊರೆಯನ್ನು ನೆತ್ತಿಯ ಮೇಲೆ ಹೊತ್ತು ಮೈಲಿಗಟ್ಟಲೆ ನಡೆಯುವುದು ತಪ್ಪಲಿಲ್ಲ. ಅನಾದಿಕಾಲದಿಂದ ಮಹಿಳೆಯ ಶ್ರಮ ಶಕ್ತಿಯ ಕುರಿತ ಈ ವ್ಯಾಖ್ಯಾನ ಖ್ಯಾತ ಸ್ತ್ರೀ ಚಿಂತಕಿ ಜರ್ಮೇನ್ ಗ್ರೀರ್ ಅವರದು. The Whole Woman ಎಂಬ ಕೃತಿಯಲ್ಲಿ ಹೆಣ್ಣು ಗಂಡಿನ ನಡುವೆ ಶ್ರಮ ಶಕ್ತಿ ವಿಭಜನೆಯ ಈ ಅನ್ಯಾಯದ ತಾರತಮ್ಯವನ್ನು ಬಿಡಿಸಿಡುತ್ತಾರೆ.

ಹೆರವರ ಹೊಲಗಳಲ್ಲಿ ಕೂಲಿ ಮಾಡುವ ಹೆಣ್ಣಾಳುಗಳಿಗೆ ಅರ್ಧ ಕೂಲಿಯ ಅವಮಾನ ಯುಗಗಳಿಂದ ನಡೆದು ಬಂದದ್ದು. ತೆಲುಗಿನ ಸಣ್ಣ ಕತೆಯೊಂದರಲ್ಲಿ ಗಂಡ ಹೆಂಡತಿ ಇಬ್ಬರೂ ಕೂಲಿಯಾಳುಗಳು. ಪರಸ್ಥಳಕ್ಕೆ ಪಯಣದ ಸಂದರ್ಭ. ಬಸ್ಸೇರಿ ಕುಳಿತವರ ಬಳಿ ಬರುವ ಕಂಡಕ್ಟರ್ ಎರಡು ಟಿಕೆಟ್‌ಗಳ ದರ ತೆರುವಂತೆ ಹೇಳುತ್ತಾನೆ. ಅದ್ಯಾಕೆ ಎರಡು ಟಿಕೆಟುಗಳ ರೊಕ್ಕ ಕೊಡಲಿ… ನನಗೆ ಪೂರ್ತಿ ಕೂಲಿ ಕೊಟ್ರೆ ಆಕೆಗೆ ಕೊಡೋದು ಅರ್ಧ ಕೂಲಿಯೇ. ಕೂಲಿಯಾದರೆ ಅರ್ಧ, ಟಿಕೆಟ್ಟಾದರೆ ಪೂರ್ತಿ! ಈ ಅನ್ಯಾಯ ಯಾಕೆ? ಒಂದೂವರೆ ಟಿಕೆಟ್ ಹರೀರ್ರಿ ಎಂದು ಪ್ರತಿಭಟಿಸುತ್ತಾನೆ ಗಂಡ. ಬಸ್ಸಲ್ಲಿ ಕುಳಿತ ಜನ ಆತನ ವಾದಕ್ಕೆ ಪಕಪಕನೆ ನಗುತ್ತಾರೆ. ಕತೆ ಅಲ್ಲಿಗೆ ಮುಗಿದುಹೋಗುತ್ತದೆ.

ಪಿತೃಪ್ರಧಾನ ವ್ಯವಸ್ಥೆಯ ಪಿರಮಿಡ್ ತುದಿಯಲ್ಲಿ ಶತಮಾನಗಳಿಂದ ಪವಡಿಸಿರುವ ಸ್ತ್ರೀದ್ವೇಷಿಗಳು ಈ ವಿಚಾರವನ್ನು ಒಪ್ಪಲಿಕ್ಕಿಲ್ಲ. ಸುಪ್ರೀಮ್ ಕೋರ್ಟು ಅರಿವಿನ ಆಗರ, ನ್ಯಾಯದಾನದ ತವನಿಧಿ ಎಂಬ ನಂಬಿಕೆಯಿದೆ. ಅದರ ನಡೆನುಡಿಗಳು ಈ ನಂಬಿಕೆಯ ತಳಹದಿಯನ್ನು ಇನ್ನಷ್ಟು ಗಟ್ಟಿಗೊಳಿಸುವಂತೆ ಇರಬೇಕೇ ವಿನಾ ಸಡಿಲುಗೊಳಿಸಕೂಡದು.


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...