Homeಅಂಕಣಗಳುಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

- Advertisement -
- Advertisement -

ರೈತ ಪ್ರತಿಭಟನೆಗಳ ಭಾಗವಾಗಿ ಮಹಿಳೆಯರು ಯಾಕಿದ್ದಾರೆ?

ಸುಪ್ರೀಮ್ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರು ಮೊನ್ನೆ ವಿಚಾರಣೆಯ ಸಂದರ್ಭದಲ್ಲಿ ಕೇಳಿದ ಪ್ರಶ್ನೆಯಿದು. ಮನೆಗೆ ಮರಳುವಂತೆ ಅವರ ಮನ ಒಲಿಸಿರಿ. ಇಲ್ಲವಾದರೆ ಈ ಸಂಬಂಧ ಆದೇಶ ನೀಡಬೇಕಾದೀತು ಎಂದೂ ಅವರು ಹೇಳಿದರು.

ದೇಶದ ಕೃಷಿ ಶ್ರಮಿಕ ಪಡೆಯ ಶೇ.42ರಷ್ಟು ಮಹಿಳೆಯರೇ ಆಗಿದ್ದಾರೆ. ಆದರೆ ಅವರ ಕೃಷಿ ಜಮೀನಿನ ಒಡೆತನದ ಮಾತು ಬಂದರೆ ಆಕೆಯ ಹೆಸರಿಗಿರುವುದು ಕೇವಲ ಶೇ.ಎರಡರಷ್ಟು ಭೂಮಿ ಮಾತ್ರ ಎಂದು ರಾಷ್ಟ್ರೀಯ ಆನ್ವಯಿಕ ಆರ್ಥಶಾಸ್ತ್ರೀಯ ಸಂಶೋಧನಾ ಸಂಸ್ಥೆ 2018ರಲ್ಲಿ ಹೇಳಿದೆ.

2011ರ ಜನಗಣತಿಯ ಪ್ರಕಾರ ಗ್ರಾಮೀಣ ಭಾರತದ ಶೇ.65ರಷ್ಟು ಮಹಿಳೆಯರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಒಕ್ಕಲುತನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ತಮ್ಮನ್ನೂ ರೈತರೆಂದು ವರ್ಗೀಕರಿಸಬೇಕೆಂಬುದು ಮಹಿಳೆಯರ ಬಹುಕಾಲದ ಬೇಡಿಕೆ. ಬಿತ್ತನೆ, ಮಾರಾಟದ ತೀರ್ಮಾನಗಳಲ್ಲೂ ಆಕೆಗೆ ದನಿಯಿಲ್ಲ. ಆದರೆ ಕೃಷಿವ್ಯವಸ್ಥೆಯ ಕೇಂದ್ರಬಿಂದು ಅವರು. ಬಿತ್ತನೆಯಿಂದ ಹಿಡಿದು ಕಟಾವಿನ ತನಕ, ದನ ಮೇಯಿಸುವುದರಿಂದ ಹಿಡಿದು ಹಾಲು ಹಿಂಡುವ ತನಕ ಗಂಡಸಿಗೆ ಸರಿಸಮ ಇಲ್ಲವೇ ಮಿಗಿಲಾದ ಶ್ರಮ ಆಕೆಯದು.

ಎಂಟು ನೂರು ಮಂದಿ ಮಹಿಳೆಯರು ಸುಪ್ರೀಮ್ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರಿಗೆ ಬಹಿರಂಗ ಪ್ರತಿಭಟನಾ ಪತ್ರ ಬರೆದಿದ್ದಾರೆ. ಕೃಷಿಯಲ್ಲಿ ಮಹಿಳೆಯರದು ಪ್ರಧಾನ ಪಾತ್ರ ಎಂಬ ವಾಸ್ತವವನ್ನು ನಿಮ್ಮ ಹೇಳಿಕೆಗಳು ಅವಮಾನಗೊಳಿಸಿವೆ. ಮಹಿಳೆಯು ಹಾಲಿ ರೈತ ಪ್ರತಿಭಟನೆಯ ಆತ್ಮ ಮತ್ತು ಹೃದಯವೆಂಬುದನ್ನು ಕಾಣಿರಿ. ಸರ್ಕಾರಿ ಅಂಕಿ ಅಂಶಗಳಲ್ಲಿ ಮಹಿಳಾ ರೈತರು ಮಟಾ ಮಾಯವಾಗಿರುವ ಜೀವಿಗಳು. ರೈತರ ಆತ್ಮಹತ್ಯೆಗಳ ನಿಜ ಭಾರವನ್ನು ಹೊರಬೇಕಾಗಿರುವ ಕಷ್ಟಜೀವಿ ಆಕೆ. ಸಾವಿಗಿಂತ ಬದುಕೇ ಕ್ರೂರ ಆಕೆಯ ಪಾಲಿಗೆ. ಆಕೆ ಕೇವಲ ರೈತನ ತಾಯಿ ಪತ್ನಿ, ಮಗಳು, ಸೋದರಿ, ಸೊಸೆ ಮಾತ್ರವೇ ಆಗಿರುತ್ತಾಳೆ. ರೈತಳೆಂದು ಆಕೆಯನ್ನು ಕರೆಯುವುದಿಲ್ಲ ಸರ್ಕಾರ. ಇದೀಗ ಸುಪ್ರೀಮ್ ಕೋರ್ಟಿನ ಮನಸ್ಥಿತಿಯೂ ಭಿನ್ನವಾಗಿಲ್ಲ.

ಈ ರೈತ ಪ್ರತಿಭಟನೆಯು ಕೇವಲ ಕೃಷಿ ಕಾನೂನುಗಳಿಗೆ ವಿರೋಧವನ್ನು ಸಿಡಿಸಿರುವುದಲ್ಲದೆ, ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣದ ಆವರಣವಾಗಿ ಹೊಮ್ಮಿರುವುದನ್ನು ಗಮನಿಸಿರಿ. ಆವರ ಪಾತ್ರವನ್ನು ಕಡೆಗಣಿಸುವುದು ಅತೀವ ಅವಹೇಳನಕರ ಎಂದಿದ್ದಾರೆ. ಈ ಕೃಷಿ ಕಾನೂನುಗಳಿಂದಾಗಿ ಒಕ್ಕಲುತನದ ಆದಾಯಗಳು ಮತ್ತಷ್ಟು ಕುಸಿದರೆ ಅದರ ನೇರ ಭಾರ ಹೊರುವವರು ಮನೆವಾರ್ತೆಯನ್ನು ನೋಡಿಕೊಳ್ಳಬೇಕಾಗಿರುವ ಹೆಣ್ಣುಮಕ್ಕಳೇ. ಪ್ರತಿಭಟನೆಯ ಸ್ಥಳಗಳಲ್ಲಿ ಮಾತ್ರವಲ್ಲದೆ ದೇಶದ ಉದ್ದಗಲಕ್ಕೆ ಭಾಷಣಗಳನ್ನು ಸಂಘಟಿಸುವ, ಸಭೆಗಳನ್ನು ಏರ್ಪಡಿಸುವ, ಪತ್ರಿಕಾಗೋಷ್ಠಿ ನಡೆಸುವ, ವೈದ್ಯೋಪಚಾರ ನೀಡುವ, ಅಡುಗೆ ಮಾಡುವ ಕ್ರಿಯೆಗಳಲ್ಲಿ ಮಹಿಳೆಯರು ಪುರುಷರಿಗೆ ಸರಿಸಮನಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದಯಮಾಡಿ ಕೃಷಿಯಲ್ಲಿ ಮಹಿಳಾ ರೈತರ ಪಾತ್ರವನ್ನು ಗುರುತಿಸಿರಿ ಮತ್ತು ನಿಮ್ಮ ಪುರುಷಾಧಿಪತ್ಯದ ಮನಸ್ಥಿತಿಯಿಂದ ಹೊರಬನ್ನಿರಿ ಎಂದು ಮಹಿಳೆಯರು ಸುಪ್ರೀಮ್ ಕೋರ್ಟಿಗೆ ಝಾಡಿಸಿದ್ದಾರೆ.

ಮಹಿಳೆಯ ದುಡಿಮೆಯನ್ನು ಭಾರತೀಯ ಪುರುಷಾಧಿಪತ್ಯದ ರಾಜಕೀಯ ಸಾಮಾಜಿಕ ಆರ್ಥಿಕ ವ್ಯವಸ್ಥೆ ಗುರುತಿಸಿಯೇ ಇಲ್ಲ. ಆದಿಕಾಲದ ಬೇಟೆಗಾರ ಪುರುಷ ಈಟಿ ಮತ್ತು ಬೀಸು ಕೋಲನ್ನಷ್ಟೇ ಹಿಡಿದು ಹಗುರಕ್ಕೆ ನಡೆಯುತ್ತಿದ್ದರೆ, ಆತನ ಹಿಂದೆ ಹೆಜ್ಜೆ ಹಾಕುತ್ತಿದ್ದ ಆಕೆಯ ಮೇಲೆ ಅವರಿಬ್ಬರ ಕೂಸು, ಬಿಡಾರ ಹೂಡಿದರೆ ಛಾವಣಿಯಾಗಬಲ್ಲ ಪರಿಕರ, ಬುತ್ತಿ ಗಂಟುಗಳ ಜೊತೆಗೆ ಅಗೆಯುವ ಬಡಿಗೆಯ ಒಜ್ಜೆ. ಕೂಳು ಬೇಯಿಸಲು ಕಟ್ಟಿಗೆಯನ್ನು ಆಯುವುದು, ನೀರು ಹೊರುವುದು ಅಡಿಗೆ ಮಾಡುವುದು ಆಕೆಯದೇ ಕೆಲಸ. ಹೆಣ್ಣು ಗಂಡುಗಳ ನಡುವೆ ಸಾರ್ವತ್ರಿಕ ಶ್ರಮ ವಿಭಜನೆ ಎಂದರೆ ಆಕೆಯ ಪಾಲಿಗೆ ಮೈ ಮುರಿಯುವ ಗಾಣದೆತ್ತಿನ ಎಡೆಬಿಡದ ದುಡಿತ. ಕ್ರೀಡೆ, ಕನಸು, ಧರ್ಮ, ಕಲಾತ್ಮಕ ಅಭಿವ್ಯಕ್ತಿ, ಆಚರಣೆಗಳು ಆತನದೇ ವಿಶೇಷಾಧಿಕಾರ. ಪಶುಗಳನ್ನು ಪಳಗಿಸಿದ ನಂತರ ಪುರುಷ ಅವುಗಳನ್ನು ನೊಗಕ್ಕೆ ಹಚ್ಚಿ ದುಡಿಸಿದ. ಪಳಗಿಸಿದ ಪಶು ಸತ್ತಾಗ ಪುನಃ ನೊಗಕ್ಕೆ ನೇಗಿಲಿಗೆ ಹೆಗಲು ಕೊಟ್ಟದ್ದು ಆಕೆಯ. ಹಿಂದೆ ನಿಂತು ಆಕೆಯನ್ನು ನಡೆಸಿದ ಅಧಿಕಾರ ಆತನದೇ. ಇಂದಿಗೂ ಬಹಳಷ್ಟು ರೈತಾಪಿ ಕುಟುಂಬಗಳಲ್ಲಿ ಎತ್ತುಗಳನ್ನು ನಡೆಸಿಕೊಂಡಷ್ಟು ಉತ್ತಮವಾಗಿ ಹೆಣ್ಣನ್ನು ನಡೆಸಿಕೊಳ್ಳುವುದಿಲ್ಲ. ಆಕೆ ಕಂತೆ ಒಗೆದರೆ ಮತ್ತೊಬ್ಬ ತೊತ್ತು ಬೇಡಿಕೊಂಡು ಬಂದಾಳು. ಆದರೆ ಎತ್ತುಗಳು ಸತ್ತರೆ ಮತ್ತೆ ತರಲು ಹಣ ಸುರಿಯಬೇಕಲ್ಲ?

ಕೆಲಸ ಒಜ್ಜೆಯದು ಎಂದು ಆಕೆ ಎಂದೂ ಮಾಡದೆ ಬಿಟ್ಟವಳಲ್ಲ. ಬುದ್ಧಿಶಕ್ತಿ ಬೇಕಿರುವ ಮತ್ತು ನಿರ್ವಹಣಾ ಕೌಶಲ ಒಳಗೊಳ್ಳುವ ಕೆಲಸವನ್ನು ಆಕೆಗೆ ನಿರಾಕರಿಸಲಾಗಿತ್ತು. ಕತ್ತೆ ಕಾಯುವ ಕೆಲಸಾನೂ ಕೂಡ ಆಕೆಗೆ ಕೊಡುತ್ತಿರಲಿಲ್ಲ. ದಾರಿಯ ದೂರವನ್ನು ಕತ್ತೆಯ ಮೇಲೆ ಕುಳಿತು ಕ್ರಮಿಸುವ ರೈತಾಪಿ ಪುರುಷ ಮತ್ತು ಜೊತೆ ಜೊತೆಯಲ್ಲೇ ಓಡು ನಡಿಗೆಯಲ್ಲಿ ಧಾವಿಸುವ ಆತನ ಪತ್ನಿಯನ್ನು ಈಗಲೂ ಅಲ್ಲಲ್ಲಿ ಕಾಣುವುದು ಸಾಧ್ಯ. ಸಿರಿವಂತ ಪ್ರಪಂಚದಲ್ಲಿ ಈ ಸಂಬಂಧ ಕುಟುಂಬದ ಕಾರು ಸವಾರಿಯ ಸುಖ ಗಂಡನದಾದರೆ, ನಡೆದು ದೂರ ಕ್ರಮಿಸುವ ಇಲ್ಲವೇ ಬಸ್ಸಿನಲ್ಲಿ ಓಡಾಡುವ ಹೆಂಡತಿಯ ದೃಶ್ಯವಾಗಿ ಬದಲಾದೀತು

Photo Courtesy: The Indian Express

.

ಭಾರದ, ಮೈಮುರಿಯುವ, ನಿತ್ಯ ಮಾಡಿದ್ದನ್ನೇ ಮಾಡುವ ಅರ್ಥವಿಲ್ಲದ ದುಡಿತ ಆಕೆಯದು. ಜಗತ್ತಿನ ತುಂಬೆಲ್ಲ ಇದೇ ಕತೆ. ಕೂಳು ಬೇಯಿಸುವ ವಿರಳ ಉರುವಲನ್ನು ಹುಡುಕಿ ಹೆಕ್ಕಿ ಮುರಿದು ಹೊರೆಯಾಗಿ ಬಿಗಿದು ತಲೆಯ ಮೇಲೋ ಬೆನ್ನ ಮೇಲೆಯೋ ಹೊತ್ತು ತರುವವಳು ಆಕೆಯೇ. ದುರ್ಲಭ ನೀರನ್ನು ದೂರದಿಂದ ನೆತ್ತಿ ನುಗ್ಗಾಗುವಂತೆ ಹೊತ್ತು ತರುವುದು ಈಗಲೂ ಆಕೆಯದೇ ಕೆಲಸ. ಪುರುಷರು ಭಾರದ ನೀರನ್ನು ಹೊರುವುದು ವಿರಳವಾಗಿ ಲಭಿಸುವ ನೋಟ. ಶ್ರಮವನ್ನು ಹಗುರ ಮಾಡುವ ಊರ್ಜೆಯ ಮೂಲ ದೊರೆತ ಮರುಕ್ಷಣವೇ ಅಂತಹ ಕೆಲಸವನ್ನು ಪುರುಷರು ಬಾಚಿಕೊಳ್ಳುವರು.

ಸೊಂಟ ಬಗ್ಗಿಸಿಯೋ ಕುಕ್ಕರಗಾಲಲ್ಲಿ ಕುಳಿತೋ ಕಳೆಗುದ್ದಲಿ ಮತ್ತು ಪಿಕಾಸಿಗಳಲ್ಲೇ ಮಾಡಬೇಕಿದ್ದಷ್ಟು ದಿನ ಉಳುಮೆಯ ಕೆಲಸ ಆಕೆಯದು. ಟ್ರ್ಯಾಕ್ಟರುಗಳು, ಟಿಲ್ಲರುಗಳು ಬಂದೊಡನೆಯೇ ಆತನದಾಗಿಬಿಡುತ್ತದೆ!

ವಿಶ್ವಸಂಸ್ಥೆಯ ಯೋಜನೆಯೊಂದು ಮಹಿಳಾ ವ್ಯಾಪಾರಿಗಳಿಗೆ ಹಂಚಿದ ಬೈಸಿಕಲ್‌ಗಳನ್ನು ಕಿತ್ತುಕೊಂಡು ಸವಾರಿ ಮಾಡಿದವರು ಅವರ ಗಂಡಂದಿರು. ಮಹಿಳೆಯರು ಎಂದಿಂತೆ ತಮ್ಮ ಉತ್ಪನ್ನಗಳ ಮೂಟೆ ಹೊರೆಯನ್ನು ನೆತ್ತಿಯ ಮೇಲೆ ಹೊತ್ತು ಮೈಲಿಗಟ್ಟಲೆ ನಡೆಯುವುದು ತಪ್ಪಲಿಲ್ಲ. ಅನಾದಿಕಾಲದಿಂದ ಮಹಿಳೆಯ ಶ್ರಮ ಶಕ್ತಿಯ ಕುರಿತ ಈ ವ್ಯಾಖ್ಯಾನ ಖ್ಯಾತ ಸ್ತ್ರೀ ಚಿಂತಕಿ ಜರ್ಮೇನ್ ಗ್ರೀರ್ ಅವರದು. The Whole Woman ಎಂಬ ಕೃತಿಯಲ್ಲಿ ಹೆಣ್ಣು ಗಂಡಿನ ನಡುವೆ ಶ್ರಮ ಶಕ್ತಿ ವಿಭಜನೆಯ ಈ ಅನ್ಯಾಯದ ತಾರತಮ್ಯವನ್ನು ಬಿಡಿಸಿಡುತ್ತಾರೆ.

ಹೆರವರ ಹೊಲಗಳಲ್ಲಿ ಕೂಲಿ ಮಾಡುವ ಹೆಣ್ಣಾಳುಗಳಿಗೆ ಅರ್ಧ ಕೂಲಿಯ ಅವಮಾನ ಯುಗಗಳಿಂದ ನಡೆದು ಬಂದದ್ದು. ತೆಲುಗಿನ ಸಣ್ಣ ಕತೆಯೊಂದರಲ್ಲಿ ಗಂಡ ಹೆಂಡತಿ ಇಬ್ಬರೂ ಕೂಲಿಯಾಳುಗಳು. ಪರಸ್ಥಳಕ್ಕೆ ಪಯಣದ ಸಂದರ್ಭ. ಬಸ್ಸೇರಿ ಕುಳಿತವರ ಬಳಿ ಬರುವ ಕಂಡಕ್ಟರ್ ಎರಡು ಟಿಕೆಟ್‌ಗಳ ದರ ತೆರುವಂತೆ ಹೇಳುತ್ತಾನೆ. ಅದ್ಯಾಕೆ ಎರಡು ಟಿಕೆಟುಗಳ ರೊಕ್ಕ ಕೊಡಲಿ… ನನಗೆ ಪೂರ್ತಿ ಕೂಲಿ ಕೊಟ್ರೆ ಆಕೆಗೆ ಕೊಡೋದು ಅರ್ಧ ಕೂಲಿಯೇ. ಕೂಲಿಯಾದರೆ ಅರ್ಧ, ಟಿಕೆಟ್ಟಾದರೆ ಪೂರ್ತಿ! ಈ ಅನ್ಯಾಯ ಯಾಕೆ? ಒಂದೂವರೆ ಟಿಕೆಟ್ ಹರೀರ್ರಿ ಎಂದು ಪ್ರತಿಭಟಿಸುತ್ತಾನೆ ಗಂಡ. ಬಸ್ಸಲ್ಲಿ ಕುಳಿತ ಜನ ಆತನ ವಾದಕ್ಕೆ ಪಕಪಕನೆ ನಗುತ್ತಾರೆ. ಕತೆ ಅಲ್ಲಿಗೆ ಮುಗಿದುಹೋಗುತ್ತದೆ.

ಪಿತೃಪ್ರಧಾನ ವ್ಯವಸ್ಥೆಯ ಪಿರಮಿಡ್ ತುದಿಯಲ್ಲಿ ಶತಮಾನಗಳಿಂದ ಪವಡಿಸಿರುವ ಸ್ತ್ರೀದ್ವೇಷಿಗಳು ಈ ವಿಚಾರವನ್ನು ಒಪ್ಪಲಿಕ್ಕಿಲ್ಲ. ಸುಪ್ರೀಮ್ ಕೋರ್ಟು ಅರಿವಿನ ಆಗರ, ನ್ಯಾಯದಾನದ ತವನಿಧಿ ಎಂಬ ನಂಬಿಕೆಯಿದೆ. ಅದರ ನಡೆನುಡಿಗಳು ಈ ನಂಬಿಕೆಯ ತಳಹದಿಯನ್ನು ಇನ್ನಷ್ಟು ಗಟ್ಟಿಗೊಳಿಸುವಂತೆ ಇರಬೇಕೇ ವಿನಾ ಸಡಿಲುಗೊಳಿಸಕೂಡದು.


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...