Homeಅಂಕಣಗಳುಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

- Advertisement -
- Advertisement -

ರೈತ ಪ್ರತಿಭಟನೆಗಳ ಭಾಗವಾಗಿ ಮಹಿಳೆಯರು ಯಾಕಿದ್ದಾರೆ?

ಸುಪ್ರೀಮ್ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರು ಮೊನ್ನೆ ವಿಚಾರಣೆಯ ಸಂದರ್ಭದಲ್ಲಿ ಕೇಳಿದ ಪ್ರಶ್ನೆಯಿದು. ಮನೆಗೆ ಮರಳುವಂತೆ ಅವರ ಮನ ಒಲಿಸಿರಿ. ಇಲ್ಲವಾದರೆ ಈ ಸಂಬಂಧ ಆದೇಶ ನೀಡಬೇಕಾದೀತು ಎಂದೂ ಅವರು ಹೇಳಿದರು.

ದೇಶದ ಕೃಷಿ ಶ್ರಮಿಕ ಪಡೆಯ ಶೇ.42ರಷ್ಟು ಮಹಿಳೆಯರೇ ಆಗಿದ್ದಾರೆ. ಆದರೆ ಅವರ ಕೃಷಿ ಜಮೀನಿನ ಒಡೆತನದ ಮಾತು ಬಂದರೆ ಆಕೆಯ ಹೆಸರಿಗಿರುವುದು ಕೇವಲ ಶೇ.ಎರಡರಷ್ಟು ಭೂಮಿ ಮಾತ್ರ ಎಂದು ರಾಷ್ಟ್ರೀಯ ಆನ್ವಯಿಕ ಆರ್ಥಶಾಸ್ತ್ರೀಯ ಸಂಶೋಧನಾ ಸಂಸ್ಥೆ 2018ರಲ್ಲಿ ಹೇಳಿದೆ.

2011ರ ಜನಗಣತಿಯ ಪ್ರಕಾರ ಗ್ರಾಮೀಣ ಭಾರತದ ಶೇ.65ರಷ್ಟು ಮಹಿಳೆಯರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಒಕ್ಕಲುತನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ತಮ್ಮನ್ನೂ ರೈತರೆಂದು ವರ್ಗೀಕರಿಸಬೇಕೆಂಬುದು ಮಹಿಳೆಯರ ಬಹುಕಾಲದ ಬೇಡಿಕೆ. ಬಿತ್ತನೆ, ಮಾರಾಟದ ತೀರ್ಮಾನಗಳಲ್ಲೂ ಆಕೆಗೆ ದನಿಯಿಲ್ಲ. ಆದರೆ ಕೃಷಿವ್ಯವಸ್ಥೆಯ ಕೇಂದ್ರಬಿಂದು ಅವರು. ಬಿತ್ತನೆಯಿಂದ ಹಿಡಿದು ಕಟಾವಿನ ತನಕ, ದನ ಮೇಯಿಸುವುದರಿಂದ ಹಿಡಿದು ಹಾಲು ಹಿಂಡುವ ತನಕ ಗಂಡಸಿಗೆ ಸರಿಸಮ ಇಲ್ಲವೇ ಮಿಗಿಲಾದ ಶ್ರಮ ಆಕೆಯದು.

ಎಂಟು ನೂರು ಮಂದಿ ಮಹಿಳೆಯರು ಸುಪ್ರೀಮ್ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರಿಗೆ ಬಹಿರಂಗ ಪ್ರತಿಭಟನಾ ಪತ್ರ ಬರೆದಿದ್ದಾರೆ. ಕೃಷಿಯಲ್ಲಿ ಮಹಿಳೆಯರದು ಪ್ರಧಾನ ಪಾತ್ರ ಎಂಬ ವಾಸ್ತವವನ್ನು ನಿಮ್ಮ ಹೇಳಿಕೆಗಳು ಅವಮಾನಗೊಳಿಸಿವೆ. ಮಹಿಳೆಯು ಹಾಲಿ ರೈತ ಪ್ರತಿಭಟನೆಯ ಆತ್ಮ ಮತ್ತು ಹೃದಯವೆಂಬುದನ್ನು ಕಾಣಿರಿ. ಸರ್ಕಾರಿ ಅಂಕಿ ಅಂಶಗಳಲ್ಲಿ ಮಹಿಳಾ ರೈತರು ಮಟಾ ಮಾಯವಾಗಿರುವ ಜೀವಿಗಳು. ರೈತರ ಆತ್ಮಹತ್ಯೆಗಳ ನಿಜ ಭಾರವನ್ನು ಹೊರಬೇಕಾಗಿರುವ ಕಷ್ಟಜೀವಿ ಆಕೆ. ಸಾವಿಗಿಂತ ಬದುಕೇ ಕ್ರೂರ ಆಕೆಯ ಪಾಲಿಗೆ. ಆಕೆ ಕೇವಲ ರೈತನ ತಾಯಿ ಪತ್ನಿ, ಮಗಳು, ಸೋದರಿ, ಸೊಸೆ ಮಾತ್ರವೇ ಆಗಿರುತ್ತಾಳೆ. ರೈತಳೆಂದು ಆಕೆಯನ್ನು ಕರೆಯುವುದಿಲ್ಲ ಸರ್ಕಾರ. ಇದೀಗ ಸುಪ್ರೀಮ್ ಕೋರ್ಟಿನ ಮನಸ್ಥಿತಿಯೂ ಭಿನ್ನವಾಗಿಲ್ಲ.

ಈ ರೈತ ಪ್ರತಿಭಟನೆಯು ಕೇವಲ ಕೃಷಿ ಕಾನೂನುಗಳಿಗೆ ವಿರೋಧವನ್ನು ಸಿಡಿಸಿರುವುದಲ್ಲದೆ, ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣದ ಆವರಣವಾಗಿ ಹೊಮ್ಮಿರುವುದನ್ನು ಗಮನಿಸಿರಿ. ಆವರ ಪಾತ್ರವನ್ನು ಕಡೆಗಣಿಸುವುದು ಅತೀವ ಅವಹೇಳನಕರ ಎಂದಿದ್ದಾರೆ. ಈ ಕೃಷಿ ಕಾನೂನುಗಳಿಂದಾಗಿ ಒಕ್ಕಲುತನದ ಆದಾಯಗಳು ಮತ್ತಷ್ಟು ಕುಸಿದರೆ ಅದರ ನೇರ ಭಾರ ಹೊರುವವರು ಮನೆವಾರ್ತೆಯನ್ನು ನೋಡಿಕೊಳ್ಳಬೇಕಾಗಿರುವ ಹೆಣ್ಣುಮಕ್ಕಳೇ. ಪ್ರತಿಭಟನೆಯ ಸ್ಥಳಗಳಲ್ಲಿ ಮಾತ್ರವಲ್ಲದೆ ದೇಶದ ಉದ್ದಗಲಕ್ಕೆ ಭಾಷಣಗಳನ್ನು ಸಂಘಟಿಸುವ, ಸಭೆಗಳನ್ನು ಏರ್ಪಡಿಸುವ, ಪತ್ರಿಕಾಗೋಷ್ಠಿ ನಡೆಸುವ, ವೈದ್ಯೋಪಚಾರ ನೀಡುವ, ಅಡುಗೆ ಮಾಡುವ ಕ್ರಿಯೆಗಳಲ್ಲಿ ಮಹಿಳೆಯರು ಪುರುಷರಿಗೆ ಸರಿಸಮನಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದಯಮಾಡಿ ಕೃಷಿಯಲ್ಲಿ ಮಹಿಳಾ ರೈತರ ಪಾತ್ರವನ್ನು ಗುರುತಿಸಿರಿ ಮತ್ತು ನಿಮ್ಮ ಪುರುಷಾಧಿಪತ್ಯದ ಮನಸ್ಥಿತಿಯಿಂದ ಹೊರಬನ್ನಿರಿ ಎಂದು ಮಹಿಳೆಯರು ಸುಪ್ರೀಮ್ ಕೋರ್ಟಿಗೆ ಝಾಡಿಸಿದ್ದಾರೆ.

ಮಹಿಳೆಯ ದುಡಿಮೆಯನ್ನು ಭಾರತೀಯ ಪುರುಷಾಧಿಪತ್ಯದ ರಾಜಕೀಯ ಸಾಮಾಜಿಕ ಆರ್ಥಿಕ ವ್ಯವಸ್ಥೆ ಗುರುತಿಸಿಯೇ ಇಲ್ಲ. ಆದಿಕಾಲದ ಬೇಟೆಗಾರ ಪುರುಷ ಈಟಿ ಮತ್ತು ಬೀಸು ಕೋಲನ್ನಷ್ಟೇ ಹಿಡಿದು ಹಗುರಕ್ಕೆ ನಡೆಯುತ್ತಿದ್ದರೆ, ಆತನ ಹಿಂದೆ ಹೆಜ್ಜೆ ಹಾಕುತ್ತಿದ್ದ ಆಕೆಯ ಮೇಲೆ ಅವರಿಬ್ಬರ ಕೂಸು, ಬಿಡಾರ ಹೂಡಿದರೆ ಛಾವಣಿಯಾಗಬಲ್ಲ ಪರಿಕರ, ಬುತ್ತಿ ಗಂಟುಗಳ ಜೊತೆಗೆ ಅಗೆಯುವ ಬಡಿಗೆಯ ಒಜ್ಜೆ. ಕೂಳು ಬೇಯಿಸಲು ಕಟ್ಟಿಗೆಯನ್ನು ಆಯುವುದು, ನೀರು ಹೊರುವುದು ಅಡಿಗೆ ಮಾಡುವುದು ಆಕೆಯದೇ ಕೆಲಸ. ಹೆಣ್ಣು ಗಂಡುಗಳ ನಡುವೆ ಸಾರ್ವತ್ರಿಕ ಶ್ರಮ ವಿಭಜನೆ ಎಂದರೆ ಆಕೆಯ ಪಾಲಿಗೆ ಮೈ ಮುರಿಯುವ ಗಾಣದೆತ್ತಿನ ಎಡೆಬಿಡದ ದುಡಿತ. ಕ್ರೀಡೆ, ಕನಸು, ಧರ್ಮ, ಕಲಾತ್ಮಕ ಅಭಿವ್ಯಕ್ತಿ, ಆಚರಣೆಗಳು ಆತನದೇ ವಿಶೇಷಾಧಿಕಾರ. ಪಶುಗಳನ್ನು ಪಳಗಿಸಿದ ನಂತರ ಪುರುಷ ಅವುಗಳನ್ನು ನೊಗಕ್ಕೆ ಹಚ್ಚಿ ದುಡಿಸಿದ. ಪಳಗಿಸಿದ ಪಶು ಸತ್ತಾಗ ಪುನಃ ನೊಗಕ್ಕೆ ನೇಗಿಲಿಗೆ ಹೆಗಲು ಕೊಟ್ಟದ್ದು ಆಕೆಯ. ಹಿಂದೆ ನಿಂತು ಆಕೆಯನ್ನು ನಡೆಸಿದ ಅಧಿಕಾರ ಆತನದೇ. ಇಂದಿಗೂ ಬಹಳಷ್ಟು ರೈತಾಪಿ ಕುಟುಂಬಗಳಲ್ಲಿ ಎತ್ತುಗಳನ್ನು ನಡೆಸಿಕೊಂಡಷ್ಟು ಉತ್ತಮವಾಗಿ ಹೆಣ್ಣನ್ನು ನಡೆಸಿಕೊಳ್ಳುವುದಿಲ್ಲ. ಆಕೆ ಕಂತೆ ಒಗೆದರೆ ಮತ್ತೊಬ್ಬ ತೊತ್ತು ಬೇಡಿಕೊಂಡು ಬಂದಾಳು. ಆದರೆ ಎತ್ತುಗಳು ಸತ್ತರೆ ಮತ್ತೆ ತರಲು ಹಣ ಸುರಿಯಬೇಕಲ್ಲ?

ಕೆಲಸ ಒಜ್ಜೆಯದು ಎಂದು ಆಕೆ ಎಂದೂ ಮಾಡದೆ ಬಿಟ್ಟವಳಲ್ಲ. ಬುದ್ಧಿಶಕ್ತಿ ಬೇಕಿರುವ ಮತ್ತು ನಿರ್ವಹಣಾ ಕೌಶಲ ಒಳಗೊಳ್ಳುವ ಕೆಲಸವನ್ನು ಆಕೆಗೆ ನಿರಾಕರಿಸಲಾಗಿತ್ತು. ಕತ್ತೆ ಕಾಯುವ ಕೆಲಸಾನೂ ಕೂಡ ಆಕೆಗೆ ಕೊಡುತ್ತಿರಲಿಲ್ಲ. ದಾರಿಯ ದೂರವನ್ನು ಕತ್ತೆಯ ಮೇಲೆ ಕುಳಿತು ಕ್ರಮಿಸುವ ರೈತಾಪಿ ಪುರುಷ ಮತ್ತು ಜೊತೆ ಜೊತೆಯಲ್ಲೇ ಓಡು ನಡಿಗೆಯಲ್ಲಿ ಧಾವಿಸುವ ಆತನ ಪತ್ನಿಯನ್ನು ಈಗಲೂ ಅಲ್ಲಲ್ಲಿ ಕಾಣುವುದು ಸಾಧ್ಯ. ಸಿರಿವಂತ ಪ್ರಪಂಚದಲ್ಲಿ ಈ ಸಂಬಂಧ ಕುಟುಂಬದ ಕಾರು ಸವಾರಿಯ ಸುಖ ಗಂಡನದಾದರೆ, ನಡೆದು ದೂರ ಕ್ರಮಿಸುವ ಇಲ್ಲವೇ ಬಸ್ಸಿನಲ್ಲಿ ಓಡಾಡುವ ಹೆಂಡತಿಯ ದೃಶ್ಯವಾಗಿ ಬದಲಾದೀತು

Photo Courtesy: The Indian Express

.

ಭಾರದ, ಮೈಮುರಿಯುವ, ನಿತ್ಯ ಮಾಡಿದ್ದನ್ನೇ ಮಾಡುವ ಅರ್ಥವಿಲ್ಲದ ದುಡಿತ ಆಕೆಯದು. ಜಗತ್ತಿನ ತುಂಬೆಲ್ಲ ಇದೇ ಕತೆ. ಕೂಳು ಬೇಯಿಸುವ ವಿರಳ ಉರುವಲನ್ನು ಹುಡುಕಿ ಹೆಕ್ಕಿ ಮುರಿದು ಹೊರೆಯಾಗಿ ಬಿಗಿದು ತಲೆಯ ಮೇಲೋ ಬೆನ್ನ ಮೇಲೆಯೋ ಹೊತ್ತು ತರುವವಳು ಆಕೆಯೇ. ದುರ್ಲಭ ನೀರನ್ನು ದೂರದಿಂದ ನೆತ್ತಿ ನುಗ್ಗಾಗುವಂತೆ ಹೊತ್ತು ತರುವುದು ಈಗಲೂ ಆಕೆಯದೇ ಕೆಲಸ. ಪುರುಷರು ಭಾರದ ನೀರನ್ನು ಹೊರುವುದು ವಿರಳವಾಗಿ ಲಭಿಸುವ ನೋಟ. ಶ್ರಮವನ್ನು ಹಗುರ ಮಾಡುವ ಊರ್ಜೆಯ ಮೂಲ ದೊರೆತ ಮರುಕ್ಷಣವೇ ಅಂತಹ ಕೆಲಸವನ್ನು ಪುರುಷರು ಬಾಚಿಕೊಳ್ಳುವರು.

ಸೊಂಟ ಬಗ್ಗಿಸಿಯೋ ಕುಕ್ಕರಗಾಲಲ್ಲಿ ಕುಳಿತೋ ಕಳೆಗುದ್ದಲಿ ಮತ್ತು ಪಿಕಾಸಿಗಳಲ್ಲೇ ಮಾಡಬೇಕಿದ್ದಷ್ಟು ದಿನ ಉಳುಮೆಯ ಕೆಲಸ ಆಕೆಯದು. ಟ್ರ್ಯಾಕ್ಟರುಗಳು, ಟಿಲ್ಲರುಗಳು ಬಂದೊಡನೆಯೇ ಆತನದಾಗಿಬಿಡುತ್ತದೆ!

ವಿಶ್ವಸಂಸ್ಥೆಯ ಯೋಜನೆಯೊಂದು ಮಹಿಳಾ ವ್ಯಾಪಾರಿಗಳಿಗೆ ಹಂಚಿದ ಬೈಸಿಕಲ್‌ಗಳನ್ನು ಕಿತ್ತುಕೊಂಡು ಸವಾರಿ ಮಾಡಿದವರು ಅವರ ಗಂಡಂದಿರು. ಮಹಿಳೆಯರು ಎಂದಿಂತೆ ತಮ್ಮ ಉತ್ಪನ್ನಗಳ ಮೂಟೆ ಹೊರೆಯನ್ನು ನೆತ್ತಿಯ ಮೇಲೆ ಹೊತ್ತು ಮೈಲಿಗಟ್ಟಲೆ ನಡೆಯುವುದು ತಪ್ಪಲಿಲ್ಲ. ಅನಾದಿಕಾಲದಿಂದ ಮಹಿಳೆಯ ಶ್ರಮ ಶಕ್ತಿಯ ಕುರಿತ ಈ ವ್ಯಾಖ್ಯಾನ ಖ್ಯಾತ ಸ್ತ್ರೀ ಚಿಂತಕಿ ಜರ್ಮೇನ್ ಗ್ರೀರ್ ಅವರದು. The Whole Woman ಎಂಬ ಕೃತಿಯಲ್ಲಿ ಹೆಣ್ಣು ಗಂಡಿನ ನಡುವೆ ಶ್ರಮ ಶಕ್ತಿ ವಿಭಜನೆಯ ಈ ಅನ್ಯಾಯದ ತಾರತಮ್ಯವನ್ನು ಬಿಡಿಸಿಡುತ್ತಾರೆ.

ಹೆರವರ ಹೊಲಗಳಲ್ಲಿ ಕೂಲಿ ಮಾಡುವ ಹೆಣ್ಣಾಳುಗಳಿಗೆ ಅರ್ಧ ಕೂಲಿಯ ಅವಮಾನ ಯುಗಗಳಿಂದ ನಡೆದು ಬಂದದ್ದು. ತೆಲುಗಿನ ಸಣ್ಣ ಕತೆಯೊಂದರಲ್ಲಿ ಗಂಡ ಹೆಂಡತಿ ಇಬ್ಬರೂ ಕೂಲಿಯಾಳುಗಳು. ಪರಸ್ಥಳಕ್ಕೆ ಪಯಣದ ಸಂದರ್ಭ. ಬಸ್ಸೇರಿ ಕುಳಿತವರ ಬಳಿ ಬರುವ ಕಂಡಕ್ಟರ್ ಎರಡು ಟಿಕೆಟ್‌ಗಳ ದರ ತೆರುವಂತೆ ಹೇಳುತ್ತಾನೆ. ಅದ್ಯಾಕೆ ಎರಡು ಟಿಕೆಟುಗಳ ರೊಕ್ಕ ಕೊಡಲಿ… ನನಗೆ ಪೂರ್ತಿ ಕೂಲಿ ಕೊಟ್ರೆ ಆಕೆಗೆ ಕೊಡೋದು ಅರ್ಧ ಕೂಲಿಯೇ. ಕೂಲಿಯಾದರೆ ಅರ್ಧ, ಟಿಕೆಟ್ಟಾದರೆ ಪೂರ್ತಿ! ಈ ಅನ್ಯಾಯ ಯಾಕೆ? ಒಂದೂವರೆ ಟಿಕೆಟ್ ಹರೀರ್ರಿ ಎಂದು ಪ್ರತಿಭಟಿಸುತ್ತಾನೆ ಗಂಡ. ಬಸ್ಸಲ್ಲಿ ಕುಳಿತ ಜನ ಆತನ ವಾದಕ್ಕೆ ಪಕಪಕನೆ ನಗುತ್ತಾರೆ. ಕತೆ ಅಲ್ಲಿಗೆ ಮುಗಿದುಹೋಗುತ್ತದೆ.

ಪಿತೃಪ್ರಧಾನ ವ್ಯವಸ್ಥೆಯ ಪಿರಮಿಡ್ ತುದಿಯಲ್ಲಿ ಶತಮಾನಗಳಿಂದ ಪವಡಿಸಿರುವ ಸ್ತ್ರೀದ್ವೇಷಿಗಳು ಈ ವಿಚಾರವನ್ನು ಒಪ್ಪಲಿಕ್ಕಿಲ್ಲ. ಸುಪ್ರೀಮ್ ಕೋರ್ಟು ಅರಿವಿನ ಆಗರ, ನ್ಯಾಯದಾನದ ತವನಿಧಿ ಎಂಬ ನಂಬಿಕೆಯಿದೆ. ಅದರ ನಡೆನುಡಿಗಳು ಈ ನಂಬಿಕೆಯ ತಳಹದಿಯನ್ನು ಇನ್ನಷ್ಟು ಗಟ್ಟಿಗೊಳಿಸುವಂತೆ ಇರಬೇಕೇ ವಿನಾ ಸಡಿಲುಗೊಳಿಸಕೂಡದು.


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...