Homeಮುಖಪುಟಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಹೊಸ ಪಟ್ಟಿಗೆ ಸಂಬಂಧಿಸಿದ ಅಧಿಸೂಚನೆಗಳಿಗೆ ತಡೆ ನೀಡಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜು.28) ತಡೆ ನೀಡಿದೆ.

ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಸಲ್ಲಿಸಿದ್ದ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಮಧ್ಯಂತರ ಆದೇಶ ಹೊರಡಿಸಿ, ನೋಟಿಸ್ ಜಾರಿ ಮಾಡಿದೆ.

ಒಬಿಸಿ ಪಟ್ಟಿಯನ್ನು ಅನುಮೋದಿಸುವ ಅಧಿಕಾರ ಶಾಸಕಾಂಗಕ್ಕೆ ಮಾತ್ರ ಇದೆ ಎಂದು ಹೈಕೋರ್ಟ್ ಅಳವಡಿಸಿಕೊಂಡ ತರ್ಕದ ಬಗ್ಗೆ ಪೀಠವು ಆಶ್ಚರ್ಯ ವ್ಯಕ್ತಪಡಿಸಿದೆ.

“ಈ ಪ್ರಕರಣ ಸಂಬಂಧ ನಾವು ನೋಟಿಸ್ ಜಾರಿ ಮಾಡುತ್ತೇವೆ, ಇದು ಆಶ್ಚರ್ಯಕರ. ಹೈಕೋರ್ಟ್ ಈ ರೀತಿ ಹೇಳಲು ಹೇಗೆ ಸಾಧ್ಯ? ಮೀಸಲಾತಿ ಕಾರ್ಯಾಂಗದ ಕಾರ್ಯಗಳ ಭಾಗವಾಗಿದೆ. ಇದು ಇಂದಿರಾ ಸಾಹ್ನಿಯವರಿಂದಲೇ ಇತ್ಯರ್ಥವಾದ ಕಾನೂನು. ಕಾರ್ಯಾಂಗ ಮೀಸಲಾತಿ ಸಂಬಂಧ ನಿರ್ಧಾರ ತೆಗೆದುಕೊಳ್ಳಬಹುದು ಎಂಬುದು ನಿಲುವು. ಮೀಸಲಾತಿ ನೀಡಲು ಕಾರ್ಯಕಾರಿ ಸೂಚನೆಗಳು ಸಾಕು, ಕಾನೂನು ಅಗತ್ಯವಿಲ್ಲ. ಹಾಗಾಗಿ, ಹೈಕೋರ್ಟ್ ಅಳವಡಿಸಿಕೊಂಡ ತರ್ಕದ ಬಗ್ಗೆ ನಮಗೆ ಆಶ್ಚರ್ಯವಾಗಿದೆ” ಎಂದು ಸಿಜೆಐ ಗವಾಯಿ ಅರ್ಜಿಯನ್ನು ಕೈಗೆತ್ತಿಕೊಂಡ ತಕ್ಷಣ ಹೇಳಿದ್ದಾರೆ.

“2012ರ ಕಾಯ್ದೆಯ ಪ್ರಕಾರ ವರದಿಗಳು ಮತ್ತು ಮಸೂದೆಗಳನ್ನು ಶಾಸಕಾಂಗದ ಮುಂದೆ ಇಡಬೇಕಾಗಿತ್ತು” ಎಂಬ ಹೈಕೋರ್ಟ್‌ನ ಅಭಿಪ್ರಾಯಕ್ಕೆ ಸಿಜೆಐ ಗವಾಯಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದ ಪಶ್ಚಿಮ ಬಂಗಾಳ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್, ಹೈಕೋರ್ಟ್ ಆದೇಶದಿಂದ ಹಲವಾರು ನೇಮಕಾತಿಗಳು ಮತ್ತು ಬಡ್ತಿಗಳು ಸ್ಥಗಿತಗೊಂಡಿವೆ ಎಂದು ಪೀಠದ ಗಮನಕ್ಕೆ ತಂದಿದ್ದರು. ಅಲ್ಲದೆ, ಈಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಗಳು ಕೂಡ ದಾಖಲಾಗಿವೆ. ಅದಕ್ಕೂ ತಡೆ ನೀಡುವಂತೆ ಕೋರಿದ್ದರು.

ಪೀಠವು ಮಧ್ಯಂತರ ಆದೇಶ ನೀಡುವ ಇಚ್ಛೆ ವ್ಯಕ್ತಪಡಿಸಿದಾಗ, ಪ್ರತಿವಾದಿಗಳ ಪರ ಹಿರಿಯ ವಕೀಲ ರಂಜಿತ್ ಕುಮಾರ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದ ಕಾನೂನಿನ ಪ್ರಕಾರ, ಮೀಸಲಾತಿ ಪಟ್ಟಿಯನ್ನು ಶಾಸಕಾಂಗವು ಅನುಮೋದಿಸಬೇಕು ಎಂದು ಹೇಳಿದರು. ಈ ನಡುವೆ ಇತರ ಪ್ರತಿವಾದಿಗಳ ಪರ ಹಿರಿಯ ವಕೀಲ ಗುರು ಕೃಷ್ಣಕುಮಾರ್ ಕೂಡ ಮಧ್ಯಂತರ ಆದೇಶವನ್ನು ವಿರೋಧಿಸಿದರು. ಯಾವುದೇ ದತ್ತಾಂಶವಿಲ್ಲದೆ ಸಿದ್ಧತೆಯನ್ನು ಮಾಡಲಾಗಿದೆ ಎಂದು ವಾದಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹೊಸ ಸಮೀಕ್ಷೆ ಮತ್ತು ವರದಿಯ ಆಧಾರದ ಮೇಲೆ ಹೊಸ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಕಪಿಲ್ ಸಿಬಲ್ ಪೀಠಕ್ಕೆ ಮಾಹಿತಿ ನೀಡಿದರು. ಆಯೋಗವು ಈ ಕಾರ್ಯವನ್ನು ಮಾಡಿಲ್ಲ ಎಂಬ ಪ್ರಕರಣ ಹೈಕೋರ್ಟ್‌ನಲ್ಲಿಯೂ ಇಲ್ಲ ಎಂದು ಸಿಬಲ್ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿಜೆಐ ಗವಾಯಿ, “ನೀವು ಸಿದ್ಧರಿದ್ದರೆ, ನಿಗದಿತ ಸಮಯದೊಳಗೆ ಈ ವಿಷಯವನ್ನು ಆಲಿಸುವಂತೆ ನಾವು ಹೈಕೋರ್ಟ್‌ಗೆ ನಿರ್ದೇಶಿಸುತ್ತೇವೆ. ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ. ವಿಚಾರಣೆ ನಡೆಸಲು ಮತ್ತೊಂದು ಪೀಠವನ್ನು ರಚಿಸುವಂತೆ ನಾವು ಮುಖ್ಯ ನ್ಯಾಯಮೂರ್ತಿಗಳನ್ನು ಕೇಳುತ್ತೇವೆ” ಎಂದು ಪ್ರತಿವಾದಿಗಳಿಗೆ ಹೇಳಿದರು. ಆದರೆ, ಪ್ರತಿವಾದಿಗಳು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸುವುದಾಗಿ ತಿಳಿಸಿದರು.

ಅಂತಿಮವಾಗಿ, ಪೀಠವು ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಿತು. ಮೇಲ್ನೋಟಕ್ಕೆ ಹೈಕೋರ್ಟ್‌ನಿಂದ ತಪ್ಪಾಗಿದೆ ಎಂದು ಸಿಜೆಐ ಮೌಖಿಕವಾಗಿ ಹೇಳಿದರು. ಆಯೋಗವು ಕೆಲವು ವಿಧಾನಗಳನ್ನು ಅನುಸರಿಸಿದೆ. ಅದು ಸರಿಯಾಗಿರಬಹುದು ಅಥವಾ ಸರಿಯಾಗಿಲ್ಲದಿರಬಹುದು, ಅದನ್ನು ಅಂತಿಮವಾಗಿ ಹೈಕೋರ್ಟ್ ನಿರ್ಧರಿಸುತ್ತದೆ” ಎಂದರು.

ಜೂನ್ 17ರಂದು ಹೈಕೋರ್ಟ್ ಹೊಸ ಒಬಿಸಿ ಪಟ್ಟಿಗೆ ತಡೆ ನೀಡಿ ಹೊರಡಿಸಿದ ಆದೇಶವನ್ನು ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಕಲ್ಕತ್ತಾ ಹೈಕೋರ್ಟ್ ಮೇ 2024ರಲ್ಲಿ 77 ಸಮುದಾಯಗಳನ್ನು ಒಬಿಸಿ ಪಟ್ಟಿಯಲ್ಲಿ ಸೇರಿಸುವುದನ್ನು ರದ್ದುಗೊಳಿಸಿದ ನಂತರ ಪಶ್ಚಿಮ ಬಂಗಾಳ ಸರ್ಕಾರ ಹೊಸ ಪಟ್ಟಿಯನ್ನು ಸಿದ್ಧಪಡಿಸಿತ್ತು. ಈ ನಡುವೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರೂ, ರಾಜ್ಯ ಸರ್ಕಾರವೇ ಹಿಂದುಳಿದ ವರ್ಗಗಳ ಆಯೋಗ ಒಬಿಸಿಗಳನ್ನು ಗುರುತಿಸುವ ಹೊಸ ಪ್ರಕ್ರಿಯೆಯನ್ನು ನಡೆಸಲಿದೆ ಎಂದು ನ್ಯಾಯಾಲಯಕ್ಕೆ ಹೇಳಿತ್ತು.

ಹೊಸ ಪಟ್ಟಿಗೆ ತಡೆ ನೀಡಿದ್ದರೂ, ಸರ್ಕಾರ ಈ ಹಿಂದೆ ರದ್ದುಗೊಂಡ ಅದೇ ಒಬಿಸಿ ಪಟ್ಟಿಯನ್ನು ಮತ್ತೆ ಪರಿಚಯಿಸಲು ಪ್ರಯತ್ನಿಸುತ್ತಿದೆ ಎಂದು ಹೈಕೋರ್ಟ್ ಪ್ರಾಥಮಿಕವಾಗಿ ಹೇಳಿತ್ತು.

ಮಹಾರಾಷ್ಟ| ‘ಲಡ್ಕಿ ಬಹಿನ್ ಯೋಜನೆ’ ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ ಎಂದ ಡಿಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...