Homeಮುಖಪುಟಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಹೊಸ ಪಟ್ಟಿಗೆ ಸಂಬಂಧಿಸಿದ ಅಧಿಸೂಚನೆಗಳಿಗೆ ತಡೆ ನೀಡಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜು.28) ತಡೆ ನೀಡಿದೆ.

ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಸಲ್ಲಿಸಿದ್ದ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಮಧ್ಯಂತರ ಆದೇಶ ಹೊರಡಿಸಿ, ನೋಟಿಸ್ ಜಾರಿ ಮಾಡಿದೆ.

ಒಬಿಸಿ ಪಟ್ಟಿಯನ್ನು ಅನುಮೋದಿಸುವ ಅಧಿಕಾರ ಶಾಸಕಾಂಗಕ್ಕೆ ಮಾತ್ರ ಇದೆ ಎಂದು ಹೈಕೋರ್ಟ್ ಅಳವಡಿಸಿಕೊಂಡ ತರ್ಕದ ಬಗ್ಗೆ ಪೀಠವು ಆಶ್ಚರ್ಯ ವ್ಯಕ್ತಪಡಿಸಿದೆ.

“ಈ ಪ್ರಕರಣ ಸಂಬಂಧ ನಾವು ನೋಟಿಸ್ ಜಾರಿ ಮಾಡುತ್ತೇವೆ, ಇದು ಆಶ್ಚರ್ಯಕರ. ಹೈಕೋರ್ಟ್ ಈ ರೀತಿ ಹೇಳಲು ಹೇಗೆ ಸಾಧ್ಯ? ಮೀಸಲಾತಿ ಕಾರ್ಯಾಂಗದ ಕಾರ್ಯಗಳ ಭಾಗವಾಗಿದೆ. ಇದು ಇಂದಿರಾ ಸಾಹ್ನಿಯವರಿಂದಲೇ ಇತ್ಯರ್ಥವಾದ ಕಾನೂನು. ಕಾರ್ಯಾಂಗ ಮೀಸಲಾತಿ ಸಂಬಂಧ ನಿರ್ಧಾರ ತೆಗೆದುಕೊಳ್ಳಬಹುದು ಎಂಬುದು ನಿಲುವು. ಮೀಸಲಾತಿ ನೀಡಲು ಕಾರ್ಯಕಾರಿ ಸೂಚನೆಗಳು ಸಾಕು, ಕಾನೂನು ಅಗತ್ಯವಿಲ್ಲ. ಹಾಗಾಗಿ, ಹೈಕೋರ್ಟ್ ಅಳವಡಿಸಿಕೊಂಡ ತರ್ಕದ ಬಗ್ಗೆ ನಮಗೆ ಆಶ್ಚರ್ಯವಾಗಿದೆ” ಎಂದು ಸಿಜೆಐ ಗವಾಯಿ ಅರ್ಜಿಯನ್ನು ಕೈಗೆತ್ತಿಕೊಂಡ ತಕ್ಷಣ ಹೇಳಿದ್ದಾರೆ.

“2012ರ ಕಾಯ್ದೆಯ ಪ್ರಕಾರ ವರದಿಗಳು ಮತ್ತು ಮಸೂದೆಗಳನ್ನು ಶಾಸಕಾಂಗದ ಮುಂದೆ ಇಡಬೇಕಾಗಿತ್ತು” ಎಂಬ ಹೈಕೋರ್ಟ್‌ನ ಅಭಿಪ್ರಾಯಕ್ಕೆ ಸಿಜೆಐ ಗವಾಯಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದ ಪಶ್ಚಿಮ ಬಂಗಾಳ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್, ಹೈಕೋರ್ಟ್ ಆದೇಶದಿಂದ ಹಲವಾರು ನೇಮಕಾತಿಗಳು ಮತ್ತು ಬಡ್ತಿಗಳು ಸ್ಥಗಿತಗೊಂಡಿವೆ ಎಂದು ಪೀಠದ ಗಮನಕ್ಕೆ ತಂದಿದ್ದರು. ಅಲ್ಲದೆ, ಈಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಗಳು ಕೂಡ ದಾಖಲಾಗಿವೆ. ಅದಕ್ಕೂ ತಡೆ ನೀಡುವಂತೆ ಕೋರಿದ್ದರು.

ಪೀಠವು ಮಧ್ಯಂತರ ಆದೇಶ ನೀಡುವ ಇಚ್ಛೆ ವ್ಯಕ್ತಪಡಿಸಿದಾಗ, ಪ್ರತಿವಾದಿಗಳ ಪರ ಹಿರಿಯ ವಕೀಲ ರಂಜಿತ್ ಕುಮಾರ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದ ಕಾನೂನಿನ ಪ್ರಕಾರ, ಮೀಸಲಾತಿ ಪಟ್ಟಿಯನ್ನು ಶಾಸಕಾಂಗವು ಅನುಮೋದಿಸಬೇಕು ಎಂದು ಹೇಳಿದರು. ಈ ನಡುವೆ ಇತರ ಪ್ರತಿವಾದಿಗಳ ಪರ ಹಿರಿಯ ವಕೀಲ ಗುರು ಕೃಷ್ಣಕುಮಾರ್ ಕೂಡ ಮಧ್ಯಂತರ ಆದೇಶವನ್ನು ವಿರೋಧಿಸಿದರು. ಯಾವುದೇ ದತ್ತಾಂಶವಿಲ್ಲದೆ ಸಿದ್ಧತೆಯನ್ನು ಮಾಡಲಾಗಿದೆ ಎಂದು ವಾದಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹೊಸ ಸಮೀಕ್ಷೆ ಮತ್ತು ವರದಿಯ ಆಧಾರದ ಮೇಲೆ ಹೊಸ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಕಪಿಲ್ ಸಿಬಲ್ ಪೀಠಕ್ಕೆ ಮಾಹಿತಿ ನೀಡಿದರು. ಆಯೋಗವು ಈ ಕಾರ್ಯವನ್ನು ಮಾಡಿಲ್ಲ ಎಂಬ ಪ್ರಕರಣ ಹೈಕೋರ್ಟ್‌ನಲ್ಲಿಯೂ ಇಲ್ಲ ಎಂದು ಸಿಬಲ್ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿಜೆಐ ಗವಾಯಿ, “ನೀವು ಸಿದ್ಧರಿದ್ದರೆ, ನಿಗದಿತ ಸಮಯದೊಳಗೆ ಈ ವಿಷಯವನ್ನು ಆಲಿಸುವಂತೆ ನಾವು ಹೈಕೋರ್ಟ್‌ಗೆ ನಿರ್ದೇಶಿಸುತ್ತೇವೆ. ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ. ವಿಚಾರಣೆ ನಡೆಸಲು ಮತ್ತೊಂದು ಪೀಠವನ್ನು ರಚಿಸುವಂತೆ ನಾವು ಮುಖ್ಯ ನ್ಯಾಯಮೂರ್ತಿಗಳನ್ನು ಕೇಳುತ್ತೇವೆ” ಎಂದು ಪ್ರತಿವಾದಿಗಳಿಗೆ ಹೇಳಿದರು. ಆದರೆ, ಪ್ರತಿವಾದಿಗಳು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸುವುದಾಗಿ ತಿಳಿಸಿದರು.

ಅಂತಿಮವಾಗಿ, ಪೀಠವು ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಿತು. ಮೇಲ್ನೋಟಕ್ಕೆ ಹೈಕೋರ್ಟ್‌ನಿಂದ ತಪ್ಪಾಗಿದೆ ಎಂದು ಸಿಜೆಐ ಮೌಖಿಕವಾಗಿ ಹೇಳಿದರು. ಆಯೋಗವು ಕೆಲವು ವಿಧಾನಗಳನ್ನು ಅನುಸರಿಸಿದೆ. ಅದು ಸರಿಯಾಗಿರಬಹುದು ಅಥವಾ ಸರಿಯಾಗಿಲ್ಲದಿರಬಹುದು, ಅದನ್ನು ಅಂತಿಮವಾಗಿ ಹೈಕೋರ್ಟ್ ನಿರ್ಧರಿಸುತ್ತದೆ” ಎಂದರು.

ಜೂನ್ 17ರಂದು ಹೈಕೋರ್ಟ್ ಹೊಸ ಒಬಿಸಿ ಪಟ್ಟಿಗೆ ತಡೆ ನೀಡಿ ಹೊರಡಿಸಿದ ಆದೇಶವನ್ನು ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಕಲ್ಕತ್ತಾ ಹೈಕೋರ್ಟ್ ಮೇ 2024ರಲ್ಲಿ 77 ಸಮುದಾಯಗಳನ್ನು ಒಬಿಸಿ ಪಟ್ಟಿಯಲ್ಲಿ ಸೇರಿಸುವುದನ್ನು ರದ್ದುಗೊಳಿಸಿದ ನಂತರ ಪಶ್ಚಿಮ ಬಂಗಾಳ ಸರ್ಕಾರ ಹೊಸ ಪಟ್ಟಿಯನ್ನು ಸಿದ್ಧಪಡಿಸಿತ್ತು. ಈ ನಡುವೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರೂ, ರಾಜ್ಯ ಸರ್ಕಾರವೇ ಹಿಂದುಳಿದ ವರ್ಗಗಳ ಆಯೋಗ ಒಬಿಸಿಗಳನ್ನು ಗುರುತಿಸುವ ಹೊಸ ಪ್ರಕ್ರಿಯೆಯನ್ನು ನಡೆಸಲಿದೆ ಎಂದು ನ್ಯಾಯಾಲಯಕ್ಕೆ ಹೇಳಿತ್ತು.

ಹೊಸ ಪಟ್ಟಿಗೆ ತಡೆ ನೀಡಿದ್ದರೂ, ಸರ್ಕಾರ ಈ ಹಿಂದೆ ರದ್ದುಗೊಂಡ ಅದೇ ಒಬಿಸಿ ಪಟ್ಟಿಯನ್ನು ಮತ್ತೆ ಪರಿಚಯಿಸಲು ಪ್ರಯತ್ನಿಸುತ್ತಿದೆ ಎಂದು ಹೈಕೋರ್ಟ್ ಪ್ರಾಥಮಿಕವಾಗಿ ಹೇಳಿತ್ತು.

ಮಹಾರಾಷ್ಟ| ‘ಲಡ್ಕಿ ಬಹಿನ್ ಯೋಜನೆ’ ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ ಎಂದ ಡಿಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...