Homeಮುಖಪುಟಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

"ತಿಲಕ ಧರಿಸಬೇಡಿ ಎಂದು ನೀವು ಹೇಳುತ್ತೀರಾ..?" ಎಂದು ಕಾಲೇಜಿನ ವಿರುದ್ಧ ಕಿಡಿಕಾರಿದ ಸುಪ್ರೀಂಕೋರ್ಟ್

- Advertisement -
- Advertisement -

ಕ್ಯಾಂಪಸ್‌ನೊಳಗೆ ಹಿಜಾಬ್, ನಕಾಬ್, ಬುರ್ಖಾ, ಶಾಲು, ಟೋಪಿ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧಿಸಿದ್ದ ಮುಂಬೈ ಕಾಲೇಜಿನ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಮುಂಬೈನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಕಾಲೇಜಿನ ನಿಯಮಗಳನ್ನು ಎತ್ತಿ ಹಿಡಿದಿದ್ದ ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಸಂಜಯ್ ಕುಮಾರ್ ಅವರ ಪೀಠವು ಕಾಲೇಜು ವಿಧಿಸಿರುವ ಷರತ್ತುಗಳ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದೆ.

ವಿದ್ಯಾರ್ಥಿಗಳ ಧರ್ಮವನ್ನು ಬಹಿರಂಗಪಡಿಸಬಾರದು ಎಂಬ ಉದ್ದೇಶದಿಂದ ನಿಯಮ ವಿಧಿಸಲಾಗಿದೆ ಎಂಬ ಕಾಲೇಜಿನ ವಾದಕ್ಕೆ ಕಿಡಿಕಾರಿದ ನ್ಯಾಯಮೂರ್ತಿ ಖನ್ನಾ..”ಏನಿದು ನಿಯಮ? ಧರ್ಮ ಬಹಿರಂಗಪಡಿಸಬಾರದಾ? ಇಂತಹ ನಿಯಮಗಳನ್ನು ಹೇರಬೇಡಿ. ಅವರ (ವಿದ್ಯಾರ್ಥಿಗಳ) ಹೆಸರನ್ನೂ ನೀವು ಬಹಿರಂಗಪಡಿಸುವುದಿಲ್ವಾ? ಹಾಗಾದರೆ, ಅವರನ್ನು ಸಂಖ್ಯೆಗಳಿಂದ ಗುರುತಿಸುತ್ತೀರಾ?” ಎಂದು ಕೇಳಿದ್ದಾರೆ. “ಅವರು (ವಿದ್ಯಾರ್ಥಿಗಳು) ಒಟ್ಟಾಗಿ ಅಧ್ಯಯನ ಮಾಡಲಿ” ಎಂದಿದ್ದಾರೆ.

ಕಾಲೇಜು ಪರ ವಾದ ಮಂಡಿಸಿದ ಹಿರಿಯ ವಕೀಲೆ ಮಾಧವಿ ದಿವಾನ್ ” ಅದು ಖಾಸಗಿ ಸಂಸ್ಥೆ ಎಂದಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ “ಯಾವಾಗಿನಿಂದ ಆ ಕಾಲೇಜು ಕಾರ್ಯ ನಿರ್ವಹಿಸುತ್ತಿದೆ? ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ವಕೀಲೆ ” 2008ರಿಂದ ಕಾಲೇಜು ನಡೆಯುತ್ತಿದೆ” ಎಂದು ಉತ್ತರಿಸಿದ್ದಾರೆ. ಈ ವೇಳೆ ಮರುಪ್ರಶ್ನೆ ಕೇಳಿದ ನ್ಯಾಯಮೂರ್ತಿಗಳು “ಇಷ್ಟು ವರ್ಷಗಳಲ್ಲಿ ಯಾವುದೇ ನಿಯಮಗಳು ಇರಲಿಲ್ಲ. ಈಗ ಹಠಾತ್ ಆಗಿ ನಿಮಗೆ ಧರ್ಮ ನೆನಪಾಯಿತಾ? ಎಂದು ಕೇಳಿದ್ದು, ಬಹಳ ವರ್ಷಗಳ ನಂತರ ನೀವು ಅಂತಹ ಸೂಚನೆಗಳನ್ನು ನೀಡುತ್ತಿರುವುದು ದುರದೃಷ್ಟಕರ” ಎಂದಿದ್ದಾರೆ.

“ತಿಲಕ ಧರಿಸಬೇಡಿ” ಎಂದು ನೀವು ಹೇಳುತ್ತೀರಾ? ಎಂದು ನ್ಯಾಯಮೂರ್ತಿ ಖನ್ನಾ ಪ್ರಶ್ನಿಸಿದ್ದಾರೆ.

441 ಮುಸ್ಲಿಂ ವಿದ್ಯಾರ್ಥಿಗಳು ‘ಸಂತೋಷದಿಂದ ಕಾಲೇಜಿಗೆ ಹಾಜರಾಗುತ್ತಿದ್ದಾರೆ’ ಎಂದು ವಕೀಲೆ ದಿವಾನ್ ನ್ಯಾಯಾಲಯಕ್ಕೆ ತಿಳಿಸಿದ್ದು, ಕೆಲವು ಮುಸ್ಲಿಂ ವಿದ್ಯಾರ್ಥಿಗಳಿಂದ ಮಾತ್ರ ಆಕ್ಷೇಪಣೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳು ಯಾವಾಗಲೂ ಹಿಜಾಬ್ ಧರಿಸುವುದಿಲ್ಲ” ಎಂದು ಹೇಳಿದ್ದಾರೆ.

” ಕಾಲೇಜಿನ ನಿಯಮ ಹುಡುಗಿ ಏನು ಧರಿಸಬೇಕೆಂದು ಸೂಚಿಸಿದಂತೆ ಆಗುವುದಿಲ್ಲವೇ? ಎಂದು ನ್ಯಾಯಮೂರ್ತಿ ಖನ್ನಾ ಕೇಳಿದ್ದು, ಮಹಿಳೆಯರಿಗೆ ಏನು ಧರಿಸಬೇಕೆಂದು ಹೇಳುವ ಮೂಲಕ ನೀವು ಹೇಗೆ ಸಬಲೀಕರಣ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

“ವಿದ್ಯಾರ್ಥಿಗಳ ಹಿನ್ನೆಲೆಯನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಕುಟುಂಬದ ಸದಸ್ಯರು ಹುಡುಗಿ ಏನನ್ನು ಧರಿಸಬೇಕು ಎಂದು ಹೇಳಬಹುದು ಮತ್ತು ಅವರು ಧರಿಸಬಹುದು” ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

“ವಿದ್ಯಾರ್ಥಿನಿಯರಿಗೆ ಕಾಲೇಜು ಬಿಟ್ಟು ಹೋಗುವಂತೆ ಹೇಳಬೇಡಿ. ನಿಮ್ಮ ನಿಯಮಗಳ ಆದೇಶವನ್ನು ತಡೆ ಹಿಡಿಯಿರಿ ಎಂದು ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಮತ್ತು ಹೈಕೋರ್ಟ್ ನೀಡಿದ್ದ ಆದೇಶದ ವಿವರಣೆ ಕೆಳಗಿದೆ 

ಲಿಂಕ್ ಒತ್ತಿ- ಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...