Homeಮುಖಪುಟಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

"ತಿಲಕ ಧರಿಸಬೇಡಿ ಎಂದು ನೀವು ಹೇಳುತ್ತೀರಾ..?" ಎಂದು ಕಾಲೇಜಿನ ವಿರುದ್ಧ ಕಿಡಿಕಾರಿದ ಸುಪ್ರೀಂಕೋರ್ಟ್

- Advertisement -
- Advertisement -

ಕ್ಯಾಂಪಸ್‌ನೊಳಗೆ ಹಿಜಾಬ್, ನಕಾಬ್, ಬುರ್ಖಾ, ಶಾಲು, ಟೋಪಿ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧಿಸಿದ್ದ ಮುಂಬೈ ಕಾಲೇಜಿನ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಮುಂಬೈನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಕಾಲೇಜಿನ ನಿಯಮಗಳನ್ನು ಎತ್ತಿ ಹಿಡಿದಿದ್ದ ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಸಂಜಯ್ ಕುಮಾರ್ ಅವರ ಪೀಠವು ಕಾಲೇಜು ವಿಧಿಸಿರುವ ಷರತ್ತುಗಳ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದೆ.

ವಿದ್ಯಾರ್ಥಿಗಳ ಧರ್ಮವನ್ನು ಬಹಿರಂಗಪಡಿಸಬಾರದು ಎಂಬ ಉದ್ದೇಶದಿಂದ ನಿಯಮ ವಿಧಿಸಲಾಗಿದೆ ಎಂಬ ಕಾಲೇಜಿನ ವಾದಕ್ಕೆ ಕಿಡಿಕಾರಿದ ನ್ಯಾಯಮೂರ್ತಿ ಖನ್ನಾ..”ಏನಿದು ನಿಯಮ? ಧರ್ಮ ಬಹಿರಂಗಪಡಿಸಬಾರದಾ? ಇಂತಹ ನಿಯಮಗಳನ್ನು ಹೇರಬೇಡಿ. ಅವರ (ವಿದ್ಯಾರ್ಥಿಗಳ) ಹೆಸರನ್ನೂ ನೀವು ಬಹಿರಂಗಪಡಿಸುವುದಿಲ್ವಾ? ಹಾಗಾದರೆ, ಅವರನ್ನು ಸಂಖ್ಯೆಗಳಿಂದ ಗುರುತಿಸುತ್ತೀರಾ?” ಎಂದು ಕೇಳಿದ್ದಾರೆ. “ಅವರು (ವಿದ್ಯಾರ್ಥಿಗಳು) ಒಟ್ಟಾಗಿ ಅಧ್ಯಯನ ಮಾಡಲಿ” ಎಂದಿದ್ದಾರೆ.

ಕಾಲೇಜು ಪರ ವಾದ ಮಂಡಿಸಿದ ಹಿರಿಯ ವಕೀಲೆ ಮಾಧವಿ ದಿವಾನ್ ” ಅದು ಖಾಸಗಿ ಸಂಸ್ಥೆ ಎಂದಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ “ಯಾವಾಗಿನಿಂದ ಆ ಕಾಲೇಜು ಕಾರ್ಯ ನಿರ್ವಹಿಸುತ್ತಿದೆ? ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ವಕೀಲೆ ” 2008ರಿಂದ ಕಾಲೇಜು ನಡೆಯುತ್ತಿದೆ” ಎಂದು ಉತ್ತರಿಸಿದ್ದಾರೆ. ಈ ವೇಳೆ ಮರುಪ್ರಶ್ನೆ ಕೇಳಿದ ನ್ಯಾಯಮೂರ್ತಿಗಳು “ಇಷ್ಟು ವರ್ಷಗಳಲ್ಲಿ ಯಾವುದೇ ನಿಯಮಗಳು ಇರಲಿಲ್ಲ. ಈಗ ಹಠಾತ್ ಆಗಿ ನಿಮಗೆ ಧರ್ಮ ನೆನಪಾಯಿತಾ? ಎಂದು ಕೇಳಿದ್ದು, ಬಹಳ ವರ್ಷಗಳ ನಂತರ ನೀವು ಅಂತಹ ಸೂಚನೆಗಳನ್ನು ನೀಡುತ್ತಿರುವುದು ದುರದೃಷ್ಟಕರ” ಎಂದಿದ್ದಾರೆ.

“ತಿಲಕ ಧರಿಸಬೇಡಿ” ಎಂದು ನೀವು ಹೇಳುತ್ತೀರಾ? ಎಂದು ನ್ಯಾಯಮೂರ್ತಿ ಖನ್ನಾ ಪ್ರಶ್ನಿಸಿದ್ದಾರೆ.

441 ಮುಸ್ಲಿಂ ವಿದ್ಯಾರ್ಥಿಗಳು ‘ಸಂತೋಷದಿಂದ ಕಾಲೇಜಿಗೆ ಹಾಜರಾಗುತ್ತಿದ್ದಾರೆ’ ಎಂದು ವಕೀಲೆ ದಿವಾನ್ ನ್ಯಾಯಾಲಯಕ್ಕೆ ತಿಳಿಸಿದ್ದು, ಕೆಲವು ಮುಸ್ಲಿಂ ವಿದ್ಯಾರ್ಥಿಗಳಿಂದ ಮಾತ್ರ ಆಕ್ಷೇಪಣೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳು ಯಾವಾಗಲೂ ಹಿಜಾಬ್ ಧರಿಸುವುದಿಲ್ಲ” ಎಂದು ಹೇಳಿದ್ದಾರೆ.

” ಕಾಲೇಜಿನ ನಿಯಮ ಹುಡುಗಿ ಏನು ಧರಿಸಬೇಕೆಂದು ಸೂಚಿಸಿದಂತೆ ಆಗುವುದಿಲ್ಲವೇ? ಎಂದು ನ್ಯಾಯಮೂರ್ತಿ ಖನ್ನಾ ಕೇಳಿದ್ದು, ಮಹಿಳೆಯರಿಗೆ ಏನು ಧರಿಸಬೇಕೆಂದು ಹೇಳುವ ಮೂಲಕ ನೀವು ಹೇಗೆ ಸಬಲೀಕರಣ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

“ವಿದ್ಯಾರ್ಥಿಗಳ ಹಿನ್ನೆಲೆಯನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಕುಟುಂಬದ ಸದಸ್ಯರು ಹುಡುಗಿ ಏನನ್ನು ಧರಿಸಬೇಕು ಎಂದು ಹೇಳಬಹುದು ಮತ್ತು ಅವರು ಧರಿಸಬಹುದು” ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

“ವಿದ್ಯಾರ್ಥಿನಿಯರಿಗೆ ಕಾಲೇಜು ಬಿಟ್ಟು ಹೋಗುವಂತೆ ಹೇಳಬೇಡಿ. ನಿಮ್ಮ ನಿಯಮಗಳ ಆದೇಶವನ್ನು ತಡೆ ಹಿಡಿಯಿರಿ ಎಂದು ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಮತ್ತು ಹೈಕೋರ್ಟ್ ನೀಡಿದ್ದ ಆದೇಶದ ವಿವರಣೆ ಕೆಳಗಿದೆ 

ಲಿಂಕ್ ಒತ್ತಿ- ಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...