Homeಮುಖಪುಟ'ಫ್ಯಾಕ್ಟ್‌ ಚೆಕ್ ಘಟಕ' ಸ್ಥಾಪಿಸುವ ಕೇಂದ್ರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ತಡೆ

‘ಫ್ಯಾಕ್ಟ್‌ ಚೆಕ್ ಘಟಕ’ ಸ್ಥಾಪಿಸುವ ಕೇಂದ್ರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ 2023ರಲ್ಲಿ ತಂದಿರುವ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಬಾಂಬೆ ಹೈಕೋರ್ಟ್ ಅಂತಿಮ ನಿರ್ಧಾರ ಕೈಗೊಳ್ಳುವವರೆಗೆ ಫ್ಯಾಕ್ಟ್ ಚೆಕ್ ಘಟಕ ಸ್ಥಾಪಿಸಿ ಕೇಂದ್ರ ಸರ್ಕಾರದ ಮಾರ್ಚ್ 20ರಂದು ಹೊರಡಿಸಿರುವ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಅಡಿಯಲ್ಲಿ ಫ್ಯಾಕ್ಟ್‌ ಚೆಕ್ ಘಟಕ ಸ್ಥಾಪಿಸಿ ಬುಧವಾರ ಅಧಿಸೂಚನೆ ಹೊರಡಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಕೇಂದ್ರ ಸರ್ಕಾರ ಮತ್ತು ಅದರ ಏಜೆನ್ಸಿಗಳಿಗೆ ಸಂಬಂಧಿಸಿದ ಸುಳ್ಳು ಮಾಹಿತಿಗಳನ್ನು ಪತ್ತೆ ಹಚ್ಚುವ ಅಧಿಕಾರವನ್ನು ಹೊಂದಿರುವ ಶಾಸನಬದ್ಧ ಸಂಸ್ಥೆಯಾಗಿದೆ ಇದು.

ಏಪ್ರಿಲ್ 2023ರಲ್ಲಿ ಜಾರಿಗೆ ಬಂದ ತಿದ್ದುಪಡಿ ಮಾಡಲಾದ ಐಟಿ ನಿಯಮಗಳು, ಸಾಮಾಜಿಕ ಮಾಧ್ಯಮಗಳಲ್ಲಿನ ವಿಷಯಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಕೇಂದ್ರದ ವ್ಯವಹಾರಕ್ಕೆ ಸಂಬಂಧಿಸಿದ ತಪ್ಪು ಮಾಹಿತಿಗಳನ್ನು ಪತ್ತೆ ಹಚ್ಚಲು ಸತ್ಯ ಪರಿಶೀಲನೆ ಘಟಕ ಸ್ಥಾಪಿಸುವ ಅಧಿಕಾರ ನೀಡುತ್ತದೆ.

ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಬಾಂಬೆ ಹೈಕೋರ್ಟ್‌ನ ಇಬ್ಬರು ನ್ಯಾಯಾಧೀಶರು ಈ ಹಿಂದೆ ಭಿನ್ನ ತೀರ್ಪು ನೀಡಿದ್ದರು. ಒಬ್ಬರು ನ್ಯಾಯಾಧೀಶರು ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದರೆ, ಮತ್ತೊಬ್ಬರು ತಡೆಯಾಜ್ಞೆ ನೀಡಿದ್ದಾರೆ. ಈ ಹಿನ್ನೆಲೆ ವಿಭಜಿತ ತೀರ್ಪಿನ ಕುರಿತು ಅಭಿಪ್ರಾಯ ನೀಡಲು ನಿಯೋಜಿತವಾಗಿರುವ ಮೂರನೇ ನ್ಯಾಯಾಧೀಶರಾದ ನ್ಯಾಯಮೂರ್ತಿ ಎ ಎಸ್ ಚಂದೂರ್ಕರ್ ಅವರು ತಮ್ಮ ಅಂತಿಮ ನಿರ್ಧಾರವನ್ನು ಇನ್ನೂ ನೀಡಿಲ್ಲ.

ಮಾರ್ಚ್ 11 ರಂದು ಎಫ್‌ಸಿಯು ಸ್ಥಾಪನೆಯನ್ನು ತಡೆಯಲು ನಿರಾಕರಿಸಿದ ನಂತರ, ವಿಭಾಗೀಯ ಪೀಠವು ಮಾರ್ಚ್ 13 ರಂದು ಔಪಚಾರಿಕವಾಗಿ 2:1 ಬಹುಮತದೊಂದಿಗೆ ಫ್ಯಾಕ್ಟ್ ಚೆಕ್ ಘಟಕದ ಅಧಿಸೂಚನೆಯನ್ನು ತಡೆಹಿಡಿಯುವುದಿಲ್ಲ ಎಂದು ಘೋಷಿಸಿತ್ತು.

ಇದನ್ನೂ ಓದಿ : ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ, ನಮ್ಮಿಂದ ಪ್ರಚಾರ ಮಾಡಲು ಸಾಧ್ಯವಾಗುತ್ತಿಲ್ಲ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...