Homeಮುಖಪುಟವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಕೆಲವು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 15) ತಡೆ ನೀಡಿದೆ ಎಂದು ವರದಿಯಾಗಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರನ್ನೊಳಗೊಂಡ ಪೀಠವು ಈ ಕೆಳಗಿನ ನಿಬಂಧನೆಗಳಿಗೆ ತಡೆ ನೀಡಿದೆ ಎಂದು livelaw.in ವರದಿ ಮಾಡಿದೆ.

1. ವಕ್ಫ್ ಮಾಡಲು ಒಬ್ಬರು ವ್ಯಕ್ತಿಯು 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಯಾಯಿಯಾಗಿರಬೇಕು ಎಂಬ ಸೆಕ್ಷನ್ 3(1)(r) ನಲ್ಲಿರುವ ನಿಬಂಧನೆಯನ್ನು ರಾಜ್ಯ ಸರ್ಕಾರಗಳು ಈ ಷರತ್ತಿನ ನಿರ್ಣಯಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುವವರೆಗೆ ತಡೆಹಿಡಿಯಲಾಗಿದೆ.

2. ವಕ್ಫ್ ಆಸ್ತಿಯು ಸರ್ಕಾರಿ ಆಸ್ತಿಯನ್ನು ಅತಿಕ್ರಮಣ ಮಾಡಿದೆಯೇ ಎಂಬ ವಿವಾದವನ್ನು ನಿರ್ಧರಿಸಲು ಸರ್ಕಾರದ ನಿಯೋಜಿತ ಅಧಿಕಾರಿಗೆ ಅವಕಾಶ ನೀಡುವ ನಿಬಂಧನೆಯನ್ನು ತಡೆಹಿಡಿಯಲಾಗಿದೆ.

ಕಾರ್ಯನಿರ್ವಾಹಕ ಅಧಿಕಾರಿಯು ವೈಯಕ್ತಿಕ ನಾಗರಿಕರ ಹಕ್ಕುಗಳನ್ನು ನಿರ್ಣಯಿಸಲು ಅನುಮತಿಸಲಾಗುವುದಿಲ್ಲ. ಇದು ಅಧಿಕಾರಗಳ ಪ್ರತ್ಯೇಕತೆಯನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಆದಾಗ್ಯೂ, ಟ್ರಿಬ್ಯೂನಲ್ (ನ್ಯಾಯಾಧಿಕರಣ) ಒಂದು ವಿಷಯದ ಬಗ್ಗೆ ಅಂತಿಮ ತೀರ್ಪು ಅಥವಾ ನಿರ್ಧಾರವನ್ನು ನೀಡುವವರೆಗೆ, ಆ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಮೂರನೇ ವ್ಯಕ್ತಿ (ಅಂದರೆ, ವಿಷಯದಲ್ಲಿ ನೇರವಾಗಿ ಭಾಗಿಯಾಗಿರದ ಇತರ ವ್ಯಕ್ತಿಗಳು) ಯಾವುದೇ ಹಕ್ಕುಗಳನ್ನು ಸ್ಥಾಪಿಸಲು ಅಥವಾ ದಾವೆ ಹೂಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

3. ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರ ಸದಸ್ಯರ ನಾಮನಿರ್ದೇಶನಕ್ಕೆ ಅವಕಾಶ ನೀಡುವ ನಿಬಂಧನೆಗೆ ತಡೆ ನೀಡಲಾಗಿಲ್ಲ. ಆದಾಗ್ಯೂ, ಸಾಧ್ಯವಾದಷ್ಟು ಮಟ್ಟಿಗೆ, ಮಂಡಳಿಯ ಪದನಿಮಿತ್ತ ಸದಸ್ಯರು ಮುಸ್ಲಿಂ ವ್ಯಕ್ತಿಯಾಗಿರಬೇಕು ಎಂದು ನ್ಯಾಯಾಲಯ ಹೇಳಿದೆ.

ಕೇಂದ್ರ ವಕ್ಫ್ ಮಂಡಳಿಯಲ್ಲಿ 4ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರು ಇರಬಾರದು, ರಾಜ್ಯ ವಕ್ಫ್ ಮಂಡಳಿ 3ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರನ್ನು ಒಳಗೊಂಡಿರಬಾರದು ಎಂದು ನ್ಯಾಯಾಲಯ ತಿಳಿಸಿದೆ.

ನೋಂದಣಿಯನ್ನು ಕಡ್ಡಾಯಗೊಳಿಸುವ ನಿಬಂಧನೆಯಲ್ಲಿ ನ್ಯಾಯಾಲಯವು ಹಸ್ತಕ್ಷೇಪ ಮಾಡಿಲ್ಲ. ಇದು ಹೊಸ ಅವಶ್ಯಕತೆಯಲ್ಲ ಎಂದು ಹೇಳಿದೆ. ಏಕೆಂದರೆ, ಈ ಷರತ್ತು 1995 ಮತ್ತು 2013ರ ಹಿಂದಿನ ಕಾಯ್ದೆಗಳಲ್ಲಿಯೂ ಇತ್ತು. ಆದಾಗ್ಯೂ, ನ್ಯಾಯಾಲಯವು ನೋಂದಣಿಗೆ ಸಮಯ ಮಿತಿಯನ್ನು ವಿಸ್ತರಿಸಿದೆ.

ಮೂರು ದಿನಗಳ ಕಾಲ ಕಕ್ಷಿದಾರರ ವಾದ ಆಲಿಸಿದ ನಂತರ ನ್ಯಾಯಾಲಯವು 2025 ಮೇ 22ರಂದು ಆದೇಶವನ್ನು ಕಾಯ್ದಿರಿಸಿತ್ತು. 2025ರಲ್ಲಿ ಸಂಸತ್ತು ಅಂಗೀಕರಿಸಿದ ತಿದ್ದುಪಡಿಗಳ ಮೂಲಕ ವಕ್ಫ್ ಕಾನೂನಿಗೆ ಮಾಡಿದ ವ್ಯಾಪಕ ಬದಲಾವಣೆಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಏಪ್ರಿಲ್‌ನಲ್ಲಿ, ಮಾಜಿ ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠವು ಕೆಲವು ನಿಬಂಧನೆಗಳ ಬಗ್ಗೆ ಪ್ರಾಥಮಿಕವಾಗಿ ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ ನಂತರ, ಈ ವಿಷಯವು ಬಾಕಿ ಇರುವಾಗ ರಾಜ್ಯ ವಕ್ಫ್ ಮಂಡಳಿಗಳು ಮತ್ತು ಕೇಂದ್ರ ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ನೇಮಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿತ್ತು.

ಅಲ್ಲದೆ, ಅಧಿಸೂಚನೆಯ ಮೂಲಕ ಅಥವಾ ನೋಂದಣಿ ಮೂಲಕ ಘೋಷಿಸಲ್ಪಟ್ಟ ಬಳಕೆದಾರರಿಂದ ವಕ್ಫ್‌ ಸೇರಿದಂತೆ ಯಾವುದೇ ವಕ್ಫ್ ಆಸ್ತಿಯನ್ನು ಅಧಿಸೂಚನೆಯಿಂದ ಕೈಬಿಡುವುದಿಲ್ಲ ಅಥವಾ ಸ್ಥಾನಮಾನವನ್ನು ಬದಲಾಯಿಸುವುದಿಲ್ಲ ಎಂದು ಕೇಂದ್ರವು ತಿಳಿಸಿತ್ತು.

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಜಮಿಯತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತ್ ಉಲೇಮಾ, ಅಂಜುಮ್ ಕದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಡಿಎಂಕೆ ಮುಂತಾದವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಬಿಜೆಪಿ ನೇತೃತ್ವದ ಸರ್ಕಾರ ಇರುವ ಐದು ರಾಜ್ಯಗಳಾದ ಅಸ್ಸಾಂ, ರಾಜಸ್ಥಾನ, ಛತ್ತೀಸ್‌ಗಢ, ಉತ್ತರಾಖಂಡ, ಹರಿಯಾಣ ಮತ್ತು ಮಹಾರಾಷ್ಟ್ರ ಕಾಯ್ದೆಯನ್ನು ಬೆಂಬಲಿಸಿ ಪ್ರಕರಣದಲ್ಲಿ ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿತ್ತು. ಇತ್ತೀಚೆಗೆ, ಕೇರಳ ರಾಜ್ಯ ಸರ್ಕಾರ ಕೂಡ 2025ರ ತಿದ್ದುಪಡಿಯನ್ನು ಬೆಂಬಲಿಸಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದೆ ಎಂದು livelaw.in ವರದಿ ಹೇಳಿದೆ.

ಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...