Homeಮುಖಪುಟವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಕೆಲವು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 15) ತಡೆ ನೀಡಿದೆ ಎಂದು ವರದಿಯಾಗಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರನ್ನೊಳಗೊಂಡ ಪೀಠವು ಈ ಕೆಳಗಿನ ನಿಬಂಧನೆಗಳಿಗೆ ತಡೆ ನೀಡಿದೆ ಎಂದು livelaw.in ವರದಿ ಮಾಡಿದೆ.

1. ವಕ್ಫ್ ಮಾಡಲು ಒಬ್ಬರು ವ್ಯಕ್ತಿಯು 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಯಾಯಿಯಾಗಿರಬೇಕು ಎಂಬ ಸೆಕ್ಷನ್ 3(1)(r) ನಲ್ಲಿರುವ ನಿಬಂಧನೆಯನ್ನು ರಾಜ್ಯ ಸರ್ಕಾರಗಳು ಈ ಷರತ್ತಿನ ನಿರ್ಣಯಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುವವರೆಗೆ ತಡೆಹಿಡಿಯಲಾಗಿದೆ.

2. ವಕ್ಫ್ ಆಸ್ತಿಯು ಸರ್ಕಾರಿ ಆಸ್ತಿಯನ್ನು ಅತಿಕ್ರಮಣ ಮಾಡಿದೆಯೇ ಎಂಬ ವಿವಾದವನ್ನು ನಿರ್ಧರಿಸಲು ಸರ್ಕಾರದ ನಿಯೋಜಿತ ಅಧಿಕಾರಿಗೆ ಅವಕಾಶ ನೀಡುವ ನಿಬಂಧನೆಯನ್ನು ತಡೆಹಿಡಿಯಲಾಗಿದೆ.

ಕಾರ್ಯನಿರ್ವಾಹಕ ಅಧಿಕಾರಿಯು ವೈಯಕ್ತಿಕ ನಾಗರಿಕರ ಹಕ್ಕುಗಳನ್ನು ನಿರ್ಣಯಿಸಲು ಅನುಮತಿಸಲಾಗುವುದಿಲ್ಲ. ಇದು ಅಧಿಕಾರಗಳ ಪ್ರತ್ಯೇಕತೆಯನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಆದಾಗ್ಯೂ, ಟ್ರಿಬ್ಯೂನಲ್ (ನ್ಯಾಯಾಧಿಕರಣ) ಒಂದು ವಿಷಯದ ಬಗ್ಗೆ ಅಂತಿಮ ತೀರ್ಪು ಅಥವಾ ನಿರ್ಧಾರವನ್ನು ನೀಡುವವರೆಗೆ, ಆ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಮೂರನೇ ವ್ಯಕ್ತಿ (ಅಂದರೆ, ವಿಷಯದಲ್ಲಿ ನೇರವಾಗಿ ಭಾಗಿಯಾಗಿರದ ಇತರ ವ್ಯಕ್ತಿಗಳು) ಯಾವುದೇ ಹಕ್ಕುಗಳನ್ನು ಸ್ಥಾಪಿಸಲು ಅಥವಾ ದಾವೆ ಹೂಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

3. ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರ ಸದಸ್ಯರ ನಾಮನಿರ್ದೇಶನಕ್ಕೆ ಅವಕಾಶ ನೀಡುವ ನಿಬಂಧನೆಗೆ ತಡೆ ನೀಡಲಾಗಿಲ್ಲ. ಆದಾಗ್ಯೂ, ಸಾಧ್ಯವಾದಷ್ಟು ಮಟ್ಟಿಗೆ, ಮಂಡಳಿಯ ಪದನಿಮಿತ್ತ ಸದಸ್ಯರು ಮುಸ್ಲಿಂ ವ್ಯಕ್ತಿಯಾಗಿರಬೇಕು ಎಂದು ನ್ಯಾಯಾಲಯ ಹೇಳಿದೆ.

ಕೇಂದ್ರ ವಕ್ಫ್ ಮಂಡಳಿಯಲ್ಲಿ 4ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರು ಇರಬಾರದು, ರಾಜ್ಯ ವಕ್ಫ್ ಮಂಡಳಿ 3ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರನ್ನು ಒಳಗೊಂಡಿರಬಾರದು ಎಂದು ನ್ಯಾಯಾಲಯ ತಿಳಿಸಿದೆ.

ನೋಂದಣಿಯನ್ನು ಕಡ್ಡಾಯಗೊಳಿಸುವ ನಿಬಂಧನೆಯಲ್ಲಿ ನ್ಯಾಯಾಲಯವು ಹಸ್ತಕ್ಷೇಪ ಮಾಡಿಲ್ಲ. ಇದು ಹೊಸ ಅವಶ್ಯಕತೆಯಲ್ಲ ಎಂದು ಹೇಳಿದೆ. ಏಕೆಂದರೆ, ಈ ಷರತ್ತು 1995 ಮತ್ತು 2013ರ ಹಿಂದಿನ ಕಾಯ್ದೆಗಳಲ್ಲಿಯೂ ಇತ್ತು. ಆದಾಗ್ಯೂ, ನ್ಯಾಯಾಲಯವು ನೋಂದಣಿಗೆ ಸಮಯ ಮಿತಿಯನ್ನು ವಿಸ್ತರಿಸಿದೆ.

ಮೂರು ದಿನಗಳ ಕಾಲ ಕಕ್ಷಿದಾರರ ವಾದ ಆಲಿಸಿದ ನಂತರ ನ್ಯಾಯಾಲಯವು 2025 ಮೇ 22ರಂದು ಆದೇಶವನ್ನು ಕಾಯ್ದಿರಿಸಿತ್ತು. 2025ರಲ್ಲಿ ಸಂಸತ್ತು ಅಂಗೀಕರಿಸಿದ ತಿದ್ದುಪಡಿಗಳ ಮೂಲಕ ವಕ್ಫ್ ಕಾನೂನಿಗೆ ಮಾಡಿದ ವ್ಯಾಪಕ ಬದಲಾವಣೆಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಏಪ್ರಿಲ್‌ನಲ್ಲಿ, ಮಾಜಿ ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠವು ಕೆಲವು ನಿಬಂಧನೆಗಳ ಬಗ್ಗೆ ಪ್ರಾಥಮಿಕವಾಗಿ ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ ನಂತರ, ಈ ವಿಷಯವು ಬಾಕಿ ಇರುವಾಗ ರಾಜ್ಯ ವಕ್ಫ್ ಮಂಡಳಿಗಳು ಮತ್ತು ಕೇಂದ್ರ ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ನೇಮಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿತ್ತು.

ಅಲ್ಲದೆ, ಅಧಿಸೂಚನೆಯ ಮೂಲಕ ಅಥವಾ ನೋಂದಣಿ ಮೂಲಕ ಘೋಷಿಸಲ್ಪಟ್ಟ ಬಳಕೆದಾರರಿಂದ ವಕ್ಫ್‌ ಸೇರಿದಂತೆ ಯಾವುದೇ ವಕ್ಫ್ ಆಸ್ತಿಯನ್ನು ಅಧಿಸೂಚನೆಯಿಂದ ಕೈಬಿಡುವುದಿಲ್ಲ ಅಥವಾ ಸ್ಥಾನಮಾನವನ್ನು ಬದಲಾಯಿಸುವುದಿಲ್ಲ ಎಂದು ಕೇಂದ್ರವು ತಿಳಿಸಿತ್ತು.

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಜಮಿಯತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತ್ ಉಲೇಮಾ, ಅಂಜುಮ್ ಕದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಡಿಎಂಕೆ ಮುಂತಾದವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಬಿಜೆಪಿ ನೇತೃತ್ವದ ಸರ್ಕಾರ ಇರುವ ಐದು ರಾಜ್ಯಗಳಾದ ಅಸ್ಸಾಂ, ರಾಜಸ್ಥಾನ, ಛತ್ತೀಸ್‌ಗಢ, ಉತ್ತರಾಖಂಡ, ಹರಿಯಾಣ ಮತ್ತು ಮಹಾರಾಷ್ಟ್ರ ಕಾಯ್ದೆಯನ್ನು ಬೆಂಬಲಿಸಿ ಪ್ರಕರಣದಲ್ಲಿ ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿತ್ತು. ಇತ್ತೀಚೆಗೆ, ಕೇರಳ ರಾಜ್ಯ ಸರ್ಕಾರ ಕೂಡ 2025ರ ತಿದ್ದುಪಡಿಯನ್ನು ಬೆಂಬಲಿಸಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದೆ ಎಂದು livelaw.in ವರದಿ ಹೇಳಿದೆ.

ಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...