Homeಮುಖಪುಟವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಕೆಲವು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 15) ತಡೆ ನೀಡಿದೆ ಎಂದು ವರದಿಯಾಗಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರನ್ನೊಳಗೊಂಡ ಪೀಠವು ಈ ಕೆಳಗಿನ ನಿಬಂಧನೆಗಳಿಗೆ ತಡೆ ನೀಡಿದೆ ಎಂದು livelaw.in ವರದಿ ಮಾಡಿದೆ.

1. ವಕ್ಫ್ ಮಾಡಲು ಒಬ್ಬರು ವ್ಯಕ್ತಿಯು 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಯಾಯಿಯಾಗಿರಬೇಕು ಎಂಬ ಸೆಕ್ಷನ್ 3(1)(r) ನಲ್ಲಿರುವ ನಿಬಂಧನೆಯನ್ನು ರಾಜ್ಯ ಸರ್ಕಾರಗಳು ಈ ಷರತ್ತಿನ ನಿರ್ಣಯಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುವವರೆಗೆ ತಡೆಹಿಡಿಯಲಾಗಿದೆ.

2. ವಕ್ಫ್ ಆಸ್ತಿಯು ಸರ್ಕಾರಿ ಆಸ್ತಿಯನ್ನು ಅತಿಕ್ರಮಣ ಮಾಡಿದೆಯೇ ಎಂಬ ವಿವಾದವನ್ನು ನಿರ್ಧರಿಸಲು ಸರ್ಕಾರದ ನಿಯೋಜಿತ ಅಧಿಕಾರಿಗೆ ಅವಕಾಶ ನೀಡುವ ನಿಬಂಧನೆಯನ್ನು ತಡೆಹಿಡಿಯಲಾಗಿದೆ.

ಕಾರ್ಯನಿರ್ವಾಹಕ ಅಧಿಕಾರಿಯು ವೈಯಕ್ತಿಕ ನಾಗರಿಕರ ಹಕ್ಕುಗಳನ್ನು ನಿರ್ಣಯಿಸಲು ಅನುಮತಿಸಲಾಗುವುದಿಲ್ಲ. ಇದು ಅಧಿಕಾರಗಳ ಪ್ರತ್ಯೇಕತೆಯನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಆದಾಗ್ಯೂ, ಟ್ರಿಬ್ಯೂನಲ್ (ನ್ಯಾಯಾಧಿಕರಣ) ಒಂದು ವಿಷಯದ ಬಗ್ಗೆ ಅಂತಿಮ ತೀರ್ಪು ಅಥವಾ ನಿರ್ಧಾರವನ್ನು ನೀಡುವವರೆಗೆ, ಆ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಮೂರನೇ ವ್ಯಕ್ತಿ (ಅಂದರೆ, ವಿಷಯದಲ್ಲಿ ನೇರವಾಗಿ ಭಾಗಿಯಾಗಿರದ ಇತರ ವ್ಯಕ್ತಿಗಳು) ಯಾವುದೇ ಹಕ್ಕುಗಳನ್ನು ಸ್ಥಾಪಿಸಲು ಅಥವಾ ದಾವೆ ಹೂಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

3. ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರ ಸದಸ್ಯರ ನಾಮನಿರ್ದೇಶನಕ್ಕೆ ಅವಕಾಶ ನೀಡುವ ನಿಬಂಧನೆಗೆ ತಡೆ ನೀಡಲಾಗಿಲ್ಲ. ಆದಾಗ್ಯೂ, ಸಾಧ್ಯವಾದಷ್ಟು ಮಟ್ಟಿಗೆ, ಮಂಡಳಿಯ ಪದನಿಮಿತ್ತ ಸದಸ್ಯರು ಮುಸ್ಲಿಂ ವ್ಯಕ್ತಿಯಾಗಿರಬೇಕು ಎಂದು ನ್ಯಾಯಾಲಯ ಹೇಳಿದೆ.

ಕೇಂದ್ರ ವಕ್ಫ್ ಮಂಡಳಿಯಲ್ಲಿ 4ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರು ಇರಬಾರದು, ರಾಜ್ಯ ವಕ್ಫ್ ಮಂಡಳಿ 3ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರನ್ನು ಒಳಗೊಂಡಿರಬಾರದು ಎಂದು ನ್ಯಾಯಾಲಯ ತಿಳಿಸಿದೆ.

ನೋಂದಣಿಯನ್ನು ಕಡ್ಡಾಯಗೊಳಿಸುವ ನಿಬಂಧನೆಯಲ್ಲಿ ನ್ಯಾಯಾಲಯವು ಹಸ್ತಕ್ಷೇಪ ಮಾಡಿಲ್ಲ. ಇದು ಹೊಸ ಅವಶ್ಯಕತೆಯಲ್ಲ ಎಂದು ಹೇಳಿದೆ. ಏಕೆಂದರೆ, ಈ ಷರತ್ತು 1995 ಮತ್ತು 2013ರ ಹಿಂದಿನ ಕಾಯ್ದೆಗಳಲ್ಲಿಯೂ ಇತ್ತು. ಆದಾಗ್ಯೂ, ನ್ಯಾಯಾಲಯವು ನೋಂದಣಿಗೆ ಸಮಯ ಮಿತಿಯನ್ನು ವಿಸ್ತರಿಸಿದೆ.

ಮೂರು ದಿನಗಳ ಕಾಲ ಕಕ್ಷಿದಾರರ ವಾದ ಆಲಿಸಿದ ನಂತರ ನ್ಯಾಯಾಲಯವು 2025 ಮೇ 22ರಂದು ಆದೇಶವನ್ನು ಕಾಯ್ದಿರಿಸಿತ್ತು. 2025ರಲ್ಲಿ ಸಂಸತ್ತು ಅಂಗೀಕರಿಸಿದ ತಿದ್ದುಪಡಿಗಳ ಮೂಲಕ ವಕ್ಫ್ ಕಾನೂನಿಗೆ ಮಾಡಿದ ವ್ಯಾಪಕ ಬದಲಾವಣೆಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಏಪ್ರಿಲ್‌ನಲ್ಲಿ, ಮಾಜಿ ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠವು ಕೆಲವು ನಿಬಂಧನೆಗಳ ಬಗ್ಗೆ ಪ್ರಾಥಮಿಕವಾಗಿ ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ ನಂತರ, ಈ ವಿಷಯವು ಬಾಕಿ ಇರುವಾಗ ರಾಜ್ಯ ವಕ್ಫ್ ಮಂಡಳಿಗಳು ಮತ್ತು ಕೇಂದ್ರ ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ನೇಮಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿತ್ತು.

ಅಲ್ಲದೆ, ಅಧಿಸೂಚನೆಯ ಮೂಲಕ ಅಥವಾ ನೋಂದಣಿ ಮೂಲಕ ಘೋಷಿಸಲ್ಪಟ್ಟ ಬಳಕೆದಾರರಿಂದ ವಕ್ಫ್‌ ಸೇರಿದಂತೆ ಯಾವುದೇ ವಕ್ಫ್ ಆಸ್ತಿಯನ್ನು ಅಧಿಸೂಚನೆಯಿಂದ ಕೈಬಿಡುವುದಿಲ್ಲ ಅಥವಾ ಸ್ಥಾನಮಾನವನ್ನು ಬದಲಾಯಿಸುವುದಿಲ್ಲ ಎಂದು ಕೇಂದ್ರವು ತಿಳಿಸಿತ್ತು.

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಜಮಿಯತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತ್ ಉಲೇಮಾ, ಅಂಜುಮ್ ಕದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಡಿಎಂಕೆ ಮುಂತಾದವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಬಿಜೆಪಿ ನೇತೃತ್ವದ ಸರ್ಕಾರ ಇರುವ ಐದು ರಾಜ್ಯಗಳಾದ ಅಸ್ಸಾಂ, ರಾಜಸ್ಥಾನ, ಛತ್ತೀಸ್‌ಗಢ, ಉತ್ತರಾಖಂಡ, ಹರಿಯಾಣ ಮತ್ತು ಮಹಾರಾಷ್ಟ್ರ ಕಾಯ್ದೆಯನ್ನು ಬೆಂಬಲಿಸಿ ಪ್ರಕರಣದಲ್ಲಿ ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿತ್ತು. ಇತ್ತೀಚೆಗೆ, ಕೇರಳ ರಾಜ್ಯ ಸರ್ಕಾರ ಕೂಡ 2025ರ ತಿದ್ದುಪಡಿಯನ್ನು ಬೆಂಬಲಿಸಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದೆ ಎಂದು livelaw.in ವರದಿ ಹೇಳಿದೆ.

ಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...