Homeಮುಖಪುಟಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಮಧ್ಯಂತರ (ಜ.29) ತಡೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಹೊಸ ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಸಂಬಂಧ ಕೇಂದ್ರ ಸರ್ಕಾರ ಮತ್ತು ಯುಜಿಸಿಗೆ ಮಾರ್ಚ್ 19ರಂದು ಹಿಂದಿರುಗಿಸಬಹುದಾದ ನೋಟಿಸ್ ಜಾರಿ ಮಾಡಿದೆ.

ಜಾತಿ ತಾರತಮ್ಯದ ದೂರುಗಳನ್ನು ಪರಿಶೀಲಿಸಲು ಮತ್ತು ಸಮಾನತೆಯನ್ನು ಉತ್ತೇಜಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಸಮಾನತೆಯ ಸಮಿತಿ (Equity Committees)ರಚಿಸುವುದನ್ನು ಕಡ್ಡಾಯಗೊಳಿಸುವ ಹೊಸ ನಿಯಮಗಳನ್ನು 2026ರ ಜನವರಿ 13ರಂದು ಜಾರಿಗೆ ಬಂದಿವೆ. ಇದು 2012ರ ನಿಯಮಗಳನ್ನು ಬದಲಾಯಿಸುತ್ತವೆ, ಅದು ಹೆಚ್ಚಾಗಿ ಸಲಹಾ ಸ್ವರೂಪದ್ದಾಗಿತ್ತು.

ಸಮಾನತೆಯ ಸಮಿತಿಗಳಲ್ಲಿ ಇತರ ಹಿಂದುಳಿದ ವರ್ಗಗಳು (ಒಬಿಸಿ), ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ), ಅಂಗವಿಕಲ ವ್ಯಕ್ತಿಗಳು ಮತ್ತು ಮಹಿಳೆಯರು ಇರಬೇಕು ಎಂದು ಹೊಸ ನಿಯಮಗಳು ಹೇಳುತ್ತದೆ.

ಅವುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಮೃತ್ಯುಂಜಯ್ ತಿವಾರಿ, ವಕೀಲ ವಿನೀತ್ ಜಿಂದಾಲ್ ಮತ್ತು ರಾಹುಲ್ ದಿವಾನ್ ಎಂಬವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

“ಯುಜಿಸಿಯ ಹೊಸ ನಿಯಮಗಳು ತಾರತಮ್ಯ ಒಂದು ಕಡೆಯಿಂದ ಮಾತ್ರ ನಡೆಯುತ್ತದೆ ಎಂಬ ಅಸಾಧ್ಯವಾದ ಊಹೆ ಮೇಲೆ ನಿಂತಿವೆ. ಅಂದರೆ, ತಾರತಮ್ಯ ಎಂದರೆ ಕೇವಲ ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳ ವಿರುದ್ಧ ಸಾಮಾನ್ಯ ವರ್ಗದವರು ಮಾಡುವುದು ಎಂದು ಭಾವಿಸಲಾಗಿದೆ. ಹೊಸ ನಿಯಮಗಳ ರಚನೆ ಮತ್ತು ಅನುಷ್ಠಾನದದಲ್ಲಿ ಕಾನೂನಾತ್ಮಕ ಸಂತ್ರಸ್ತ ಸ್ಥಾನವನ್ನು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದವರಿಗೆ ಮಾತ್ರ ನೀಡಲಾಗಿದೆ. ಇದರಿಂದ ಸಾಮಾನ್ಯ ಅಥವಾ ಪ್ರಬಲ ಜಾತಿಯ ವಿದ್ಯಾರ್ಥಿಗಳು ಜಾತಿಯ ಕಾರಣದಿಂದ ಎದುರಿಸುವ ಯಾವುದೇ ತಾರತಮ್ಯಕ್ಕೆ ರಕ್ಷಣೆ ಇಲ್ಲದಂತಾಗಿದೆ. ‘ಸುಳ್ಳು ದೂರುಗಳ’ ವಿರುದ್ದದ ಕ್ರಮಗಳ ಕುರಿತು ಸ್ಪಷ್ಟವಾಗಿ ತಿಳಿಸದೆ ಪಕ್ಷಪಾತ ಮಾಡುವ ಮೂಲಕ ‘ಸಾಮಾನ್ಯ ವರ್ಗದ’ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೂಡ ಹೊಸ ನಿಯಮಗಳ ಕುರಿತು ಅತೃಪ್ತಿ ವ್ಯಕ್ತಪಡಿಸಿದೆ. ಅದು ಪ್ರಾಥಮಿಕವಾಗಿ ‘ಅಸ್ಪಷ್ಟ’ ಮತ್ತು ‘ದುರುಪಯೋಗವಾಗಬಹುದು ಎಂದು ಅಭಿಪ್ರಾಯಪಟ್ಟಿದೆ. ಖ್ಯಾತ ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಸಮಿತಿಯು ನಿಯಮಗಳನ್ನು ಪುನರ್ ಪರಿಶೀಲಿಸಬೇಕು ಎಂದು ಹೇಳಿದೆ ಎಂಬುವುದಾಗಿ ಲೈವ್ ಲಾ ವರದಿ ಮಾಡಿದೆ.

ವಿಚಾರಣೆಯ ಸಮಯದಲ್ಲಿ, ಪೀಠವು ನಿಯಮಗಳಿಗೆ ಸಂಬಂಧಿಸಿದಂತೆ ಈ ಕೆಳಗಿನ ಸಮಸ್ಯೆಗಳನ್ನು ಮೌಖಿಕವಾಗಿ ಎತ್ತಿ ತೋರಿಸಿದೆ.

  1. ಈ ನಿಬಂಧನೆಗಳು ಅಸ್ಪಷ್ಟವಾಗಿದ್ದು, ದುರುಪಯೋಗವಾಗುವ ಸಾಧ್ಯತೆ ಇದೆ.
  2. ತಾರತಮ್ಯದ ವ್ಯಾಖ್ಯಾನದಲ್ಲಿ ಎಲ್ಲಾ ರೀತಿಯ ತಾರತಮ್ಯಗಳು ಒಳಗೊಂಡಿರುವಾಗ ‘ಜಾತಿ ಆಧಾರಿತ ತಾರತಮ್ಯ’ವನ್ನು ಪ್ರತ್ಯೇಕವಾಗಿ ಏಕೆ ವ್ಯಾಖ್ಯಾನಿಸಲಾಗಿದೆ?
  3. ರ‍್ಯಾಗಿಂಗ್ ಅನ್ನು ಏಕೆ ನಿಯಮಗಳಿಂದ ಹೊರಗಿಡಲಾಗಿದೆ?

ನಿಯಮಾವಳಿಯನ್ನು ಪುನರ್ ಪರಿಶೀಲಿಸುವಂತೆ ಸೂಚಿಸುತ್ತಾ ಸಿಜೆಐ ಸೂರ್ಯಕಾಂತ್ ಅವರು, “ಸಾಲಿಸಿಟರ್ ಜನರಲ್ (ಎಸ್‌ಜಿ) ಅವರೇ ನಿಮ್ಮ ಪ್ರತಿಕ್ರಿಯೆಯನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಇಂದು ನಾವು ಯಾವುದೇ ಅಧಿಕೃತ ಆದೇಶವನ್ನು ಹೊರಡಿಸಲು ಬಯಸುವುದಿಲ್ಲ… ಬದಲಾಗಿ, ಪ್ರಖ್ಯಾತ ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಒಂದು ಸಮಿತಿ ರಚನೆಯಾಗಬೇಕು. ಇದರಲ್ಲಿ 2-3 ತಜ್ಞರಿರಲಿ. ಅವರು ಸಾಮಾಜಿಕ ಮೌಲ್ಯಗಳು ಮತ್ತು ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವಂತಿರಬೇಕು. ನಾವು ಈ ನಿಯಮಗಳನ್ನು ರೂಪಿಸಿದರೆ ಇಡೀ ಸಮಾಜವು ಹೇಗೆ ಬೆಳೆಯಬೇಕು ಮತ್ತು ಕ್ಯಾಂಪಸ್‌ನಿಂದ ಹೊರಗೆ ಜನರು ಹೇಗೆ ವರ್ತಿಸಬೇಕು ಎಂಬುದರ ಬಗ್ಗೆ ಅವರು ಆಳವಾಗಿ ಯೋಚಿಸಬೇಕು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...