Homeಮುಖಪುಟಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್‌, ಅದನ್ನು ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ಅನಾಮಧೇಯ ಮೂಲಗಳಿಂದ ನಿಧಿ ಸಂಗ್ರಹಕ್ಕೆ ರಾಜಕೀಯ ಪಕ್ಷಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ತೀರ್ಪು ಪ್ರಕಟಿಸಿದ್ದು, ಎಲ್ಲಾ ನ್ಯಾಯಮೂರ್ತಿಗಳು ಅದಕ್ಕೆ ಸಹಮತ ಸೂಚಿಸಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು ಸ್ವಲ್ಪ ವಿಭಿನ್ನವಾದ ತರ್ಕದೊಂದಿಗೆ ಸಹಮತದ ಅಭಿಪ್ರಾಯವನ್ನು ಬರೆದಿದ್ದಾರೆ.

ಅನಾಮಧೇಯ ಚುನಾವಣಾ ಬಾಂಡ್‌ಗಳು ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ರಾಜಕೀಯ ಪಕ್ಷಗಳಿಗೆ ಆರ್ಥಿಕ ಬೆಂಬಲ ನೀಡುವುದು ಖ್ವಿಡ್‌ ಪ್ರೊ ಪ್ರೊ ಗೆ (ಅಂದರೆ ಒಂದು ಸಹಾಯ ಮಾಡಿದ್ದಕ್ಕಾಗಿ ಇನ್ನೊಂದು ಪ್ರಯೋಜನ ಪಡೆಯುವುದು) ಕಾರಣವಾಗಬಹುದೆಂದೂ ಸುಪ್ರೀಂ ಕೋರ್ಟ್‌ ಹೇಳಿದೆ.

ಕಾಳಧನ ನಿಯಂತ್ರಣಕ್ಕೆ ಚುನಾವಣಾ ಬಾಂಡ್‌ ಯೋಜನೆ ಒಂದೇ ಆಯ್ಕೆಯಲ್ಲ ಎಂದಿರುವ ಸುಪ್ರೀಂ ಕೋರ್ಟ್‌, ಕಾಳಧನ ನಿಯಂತ್ರಣವೆಂದು ಹೇಳಿಕೊಂಡು ಆರ್‌ಟಿಐ ಉಲ್ಲಂಘನೆಯಾಗಬಾರದು. ಕಾಳಧನ ನಿಯಂತ್ರಣಕ್ಕೆ ಇತರ ಪರ್ಯಾಯಗಳಿವೆ ಎಂದಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು, 2023ರ ನವೆಂಬರ್‌ನಲ್ಲಿ ಮೂರು ದಿನಗಳ ಕಾಳ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.

ಏನಿದು ಚುನಾವಣಾ ಬಾಂಡ್ ?

ಜನ ಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮವಾಗಿದೆ ಚುನಾವಣಾ ಬಾಂಡ್. ಜನರು 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ, 1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದು. ಈ ಬಾಂಡ್​ಗಳು ಅನಾಮಧೇಯವಾಗಿರುತ್ತವೆ. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗವಾಗುವುದಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗವಾಗುವುದಿಲ್ಲ.

ಜನವರಿ 2, 2018ರಂದು ಅಂದಿನ ಮೋದಿ ಸರ್ಕಾರವು ಚುನಾವಣಾ ಬಾಂಡ್ ಯೋಜನೆಗೆ ಅಧಿಸೂಚನೆ ಹೊರಡಿಸಿತ್ತು. ಚುನಾವಣಾ ಬಾಂಡ್​ಗಳನ್ನು ಹಣಕಾಸು ಕಾಯ್ದೆ 2017ರ ಮೂಲಕ ಜಾರಿಗೆ ತರಲಾಗಿತ್ತು. ಈ ಬಾಂಡ್​ಗಳನ್ನು ವರ್ಷಕ್ಕೆ ನಾಲ್ಕು ಬಾರಿ, ಅಂದರೆ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್​ನಲ್ಲಿ ನೀಡಲಾಗುತ್ತದೆ. ಜನರು ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಅಥವಾ ವೆಬ್​ಸೈಟ್​ನಲ್ಲಿ ಆನ್​ಲೈನ್​ನಲ್ಲಿ ಇದನ್ನು ಖರೀದಿಸಬಹುದು.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದ ಅಜಿತ್ ಗೋಪ್ಚಾಡೆಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...