Homeರಾಷ್ಟ್ರೀಯಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

ಪ್ರತಿಯೊಂದನ್ನೂ ಧರ್ಮದ ಆಯಾಮದಲ್ಲಿ ನೋಡುವ ಪ್ರವೃತ್ತಿ ಮಾಧ್ಯಮಗಳಲ್ಲಿ ಕಂಡುಬರುತ್ತಿದೆ. ಇದರ ಅಂತಿಮ ಫಲವಾಗಿ ದೇಶಕ್ಕೆ ಕೆಟ್ಟಹೆಸರು ಪ್ರಾಪ್ತವಾಗುತ್ತದೆ - CJI ರಮಣ

- Advertisement -
- Advertisement -
ಕೋಮು ಸೌಹಾರ್ದತೆ ಕದಡುವ, ಧರ್ಮಗಳ ಕುರಿತು ದ್ವೇಷ ಭಾವನೆ ಬಿತ್ತುವ ವರದಿಗಳಿಂದಾಗಿ ದೇಶಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ.
ದೆಹಲಿಯಲ್ಲಿ ನಡೆದ ತಬ್ಲೀಗಿ ಜಮಾತ್‌ನಿಂದಾಗಿ ಕೋವಿಡ್‌ ಸೋಂಕು ಹರಡಿತು ಎಂದು ಹಬ್ಬಿಸಿದ ವರದಿಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ, “ಪ್ರತಿಯೊಂದನ್ನೂ ಧರ್ಮದ ಆಯಾಮದಲ್ಲಿ ನೋಡುವ ಪ್ರವೃತ್ತಿ ಮಾಧ್ಯಮಗಳಲ್ಲಿ ಕಂಡುಬರುತ್ತಿದೆ. ಇದರ ಅಂತಿಮ ಫಲವಾಗಿ ದೇಶಕ್ಕೆ ಕೆಟ್ಟಹೆಸರು ಪ್ರಾಪ್ತವಾಗುತ್ತದೆ” ಎಂದು ಎಚ್ಚರಿಸಿದೆ.
ಫೇಸ್‌ಬುಕ್‌, ಟ್ಟಿಟ್ಟರ್‌, ಯೂಟ್ಯೂಬ್‌ಗಳನ್ನು ಉಲ್ಲೇಖಿಸಿರುವ ಸುಪ್ರೀಂಕೋರ್ಟ್, ವೆಬ್‌ ಪೋರ್ಟಲ್‌ಗಳ ಕುರಿತು ಬೇಸರ ವ್ಯಕ್ತಪಡಿಸಿದ್ದು, “ಸಂಸ್ಥೆಗಳ ಕುರಿತು, ನ್ಯಾಯಾಧೀಶರ ಕುರಿತು, ಯಾವುದೇ ವಿಚಾರವಾದರೂ ಮನಬಂದಂತೆ ವೆಬ್‌ ಪೋರ್ಟಲ್‌ಗಳು ಬರೆಯುತ್ತಿವೆ. ವೆಬ್‌ ಪೋರ್ಟಲ್‌ಗಳು ವಿಶ್ವಾಸಾರ್ಹವಲ್ಲ. ಸಾಮಾನ್ಯ ಜನರ ಬಗ್ಗೆ ಯಾವುದೇ ಕಾಳಜಿ ಅವುಗಳಿಗಿಲ್ಲ” ಎಂದು ಅಭಿಪ್ರಾಯಪಟ್ಟಿದೆ. ತಬ್ಲೀಗಿ ಜಮಾತ್‌ ಕುರಿತು ಹಬ್ಬಿಸಿದ ಸುಳ್ಳು ಸುದ್ದಿಗಳನ್ನು ಕೋರ್ಟ್ ಕಟುವಾಗಿ ಟೀಕಿಸಿದೆ.
ಸರ್ಕಾರವನ್ನು ಪ್ರತಿನಿಧಿಸಿ ಮಾತನಾಡಿದ ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ, “ಕೋಮು ಸೌಹಾರ್ದತೆ ಕದಡುವ ಸುದ್ದಿಗಳಷ್ಟೇ ಅಲ್ಲ, ಸುಳ್ಳು ಸುದ್ದಿಗಳನ್ನೂ ಪೋರ್ಟಲ್ ಗಳಲ್ಲಿ ಕಾಣಬಹುದು” ಎಂದಿದ್ದಾರೆ.
“ಯಾರು ಬೇಕಾದರೂ ಯೂಟ್ಯೂಬ್ ಚಾನೆಲ್‌ ತೆರೆಯಬಹುದಾಗಿದ್ದು, ಯೂಟ್ಯೂಬ್‌ಗೆ ಹೋಗಿ ನೋಡಿದರೆ ಎಷ್ಟೊಂದು ಸುಳ್ಳುಗಳನ್ನು ಬಿತ್ತಲಾಗುತ್ತಿದೆ ಎಂಬುದು ತಿಳಿಯುತ್ತಿದೆ. ಸುಳ್ಳು ಸುದ್ದಿಗಳು ಹಾಗೂ ವೆಬ್‌ ಪೋರ್ಟಲ್‌ಗಳಿಗೆ ಕಡಿವಾಣ ಹಾಕುವ ಪ್ರಯತ್ನಗಳು ನಡೆಯುತ್ತಿಲ್ಲ. ಕನಿಷ್ಟ ಪಕ್ಷ ನ್ಯಾಷನಲ್‌ ಬ್ರಾಡ್ ಕಾಸ್ಟಿಂಗ್‌ ಸ್ಟಾಂಡರ್ಡ್‌ ಅಥಾರಿಟಿಯಾದರೂ ಜನರ ಕುರಿತು ಕಾಳಜಿ ತೋರಬೇಕು” ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್‌.ವಿ.ರಮಣ ಸೂಚಿಸಿದ್ದಾರೆ.

ಇದನ್ನೂ ಓದಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್‌ ಹೈಕೋರ್ಟ್ ವಿವಾದಾತ್ಮಕ ನಿಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...