Homeರಾಷ್ಟ್ರೀಯಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

ಪ್ರತಿಯೊಂದನ್ನೂ ಧರ್ಮದ ಆಯಾಮದಲ್ಲಿ ನೋಡುವ ಪ್ರವೃತ್ತಿ ಮಾಧ್ಯಮಗಳಲ್ಲಿ ಕಂಡುಬರುತ್ತಿದೆ. ಇದರ ಅಂತಿಮ ಫಲವಾಗಿ ದೇಶಕ್ಕೆ ಕೆಟ್ಟಹೆಸರು ಪ್ರಾಪ್ತವಾಗುತ್ತದೆ - CJI ರಮಣ

- Advertisement -
- Advertisement -
ಕೋಮು ಸೌಹಾರ್ದತೆ ಕದಡುವ, ಧರ್ಮಗಳ ಕುರಿತು ದ್ವೇಷ ಭಾವನೆ ಬಿತ್ತುವ ವರದಿಗಳಿಂದಾಗಿ ದೇಶಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ.
ದೆಹಲಿಯಲ್ಲಿ ನಡೆದ ತಬ್ಲೀಗಿ ಜಮಾತ್‌ನಿಂದಾಗಿ ಕೋವಿಡ್‌ ಸೋಂಕು ಹರಡಿತು ಎಂದು ಹಬ್ಬಿಸಿದ ವರದಿಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ, “ಪ್ರತಿಯೊಂದನ್ನೂ ಧರ್ಮದ ಆಯಾಮದಲ್ಲಿ ನೋಡುವ ಪ್ರವೃತ್ತಿ ಮಾಧ್ಯಮಗಳಲ್ಲಿ ಕಂಡುಬರುತ್ತಿದೆ. ಇದರ ಅಂತಿಮ ಫಲವಾಗಿ ದೇಶಕ್ಕೆ ಕೆಟ್ಟಹೆಸರು ಪ್ರಾಪ್ತವಾಗುತ್ತದೆ” ಎಂದು ಎಚ್ಚರಿಸಿದೆ.
ಫೇಸ್‌ಬುಕ್‌, ಟ್ಟಿಟ್ಟರ್‌, ಯೂಟ್ಯೂಬ್‌ಗಳನ್ನು ಉಲ್ಲೇಖಿಸಿರುವ ಸುಪ್ರೀಂಕೋರ್ಟ್, ವೆಬ್‌ ಪೋರ್ಟಲ್‌ಗಳ ಕುರಿತು ಬೇಸರ ವ್ಯಕ್ತಪಡಿಸಿದ್ದು, “ಸಂಸ್ಥೆಗಳ ಕುರಿತು, ನ್ಯಾಯಾಧೀಶರ ಕುರಿತು, ಯಾವುದೇ ವಿಚಾರವಾದರೂ ಮನಬಂದಂತೆ ವೆಬ್‌ ಪೋರ್ಟಲ್‌ಗಳು ಬರೆಯುತ್ತಿವೆ. ವೆಬ್‌ ಪೋರ್ಟಲ್‌ಗಳು ವಿಶ್ವಾಸಾರ್ಹವಲ್ಲ. ಸಾಮಾನ್ಯ ಜನರ ಬಗ್ಗೆ ಯಾವುದೇ ಕಾಳಜಿ ಅವುಗಳಿಗಿಲ್ಲ” ಎಂದು ಅಭಿಪ್ರಾಯಪಟ್ಟಿದೆ. ತಬ್ಲೀಗಿ ಜಮಾತ್‌ ಕುರಿತು ಹಬ್ಬಿಸಿದ ಸುಳ್ಳು ಸುದ್ದಿಗಳನ್ನು ಕೋರ್ಟ್ ಕಟುವಾಗಿ ಟೀಕಿಸಿದೆ.
ಸರ್ಕಾರವನ್ನು ಪ್ರತಿನಿಧಿಸಿ ಮಾತನಾಡಿದ ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ, “ಕೋಮು ಸೌಹಾರ್ದತೆ ಕದಡುವ ಸುದ್ದಿಗಳಷ್ಟೇ ಅಲ್ಲ, ಸುಳ್ಳು ಸುದ್ದಿಗಳನ್ನೂ ಪೋರ್ಟಲ್ ಗಳಲ್ಲಿ ಕಾಣಬಹುದು” ಎಂದಿದ್ದಾರೆ.
“ಯಾರು ಬೇಕಾದರೂ ಯೂಟ್ಯೂಬ್ ಚಾನೆಲ್‌ ತೆರೆಯಬಹುದಾಗಿದ್ದು, ಯೂಟ್ಯೂಬ್‌ಗೆ ಹೋಗಿ ನೋಡಿದರೆ ಎಷ್ಟೊಂದು ಸುಳ್ಳುಗಳನ್ನು ಬಿತ್ತಲಾಗುತ್ತಿದೆ ಎಂಬುದು ತಿಳಿಯುತ್ತಿದೆ. ಸುಳ್ಳು ಸುದ್ದಿಗಳು ಹಾಗೂ ವೆಬ್‌ ಪೋರ್ಟಲ್‌ಗಳಿಗೆ ಕಡಿವಾಣ ಹಾಕುವ ಪ್ರಯತ್ನಗಳು ನಡೆಯುತ್ತಿಲ್ಲ. ಕನಿಷ್ಟ ಪಕ್ಷ ನ್ಯಾಷನಲ್‌ ಬ್ರಾಡ್ ಕಾಸ್ಟಿಂಗ್‌ ಸ್ಟಾಂಡರ್ಡ್‌ ಅಥಾರಿಟಿಯಾದರೂ ಜನರ ಕುರಿತು ಕಾಳಜಿ ತೋರಬೇಕು” ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್‌.ವಿ.ರಮಣ ಸೂಚಿಸಿದ್ದಾರೆ.

ಇದನ್ನೂ ಓದಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್‌ ಹೈಕೋರ್ಟ್ ವಿವಾದಾತ್ಮಕ ನಿಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...