Homeಮುಖಪುಟಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಅಪರಾಧಿ ಪರಸ್ಪರ ಮದುವೆಯಾಗಲು ಒಪ್ಪಿಕೊಂಡ ಹಿನ್ನೆಲೆ, ಗುರುವಾರ (ಮೇ.15) ಅಪರಾಧಿಯ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಆತನಿಗೆ ಮಧ್ಯಂತರ ಜಾಮೀನು ನೀಡಿದೆ ಎಂದು livelaw.in ವರದಿ ಮಾಡಿದೆ.

ಮದುವೆಯಾಗುವುದಾಗಿ ಭರವಸೆ ಕೊಟ್ಟು ಯುವತಿ ಮೇಲೆ ದೀರ್ಘ ಕಾಲ ಅತ್ಯಾಚಾರವೆಸಗಿದ್ದಾರೆ ಎನ್ನಲಾದ ಪ್ರಕರಣದ ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376(2)(n)ಮತ್ತು 417 ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದ್ದ ಮಧ್ಯಪ್ರದೇಶದ ವಿಚಾರಣಾ ನ್ಯಾಯಾಲಯ, ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.

ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೈಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಪರಾಧಿ ಮಧ್ಯಪ್ರದೇಶ ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು.

ಹೈಕೋರ್ಟ್‌ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸಲು ವಿಶೇಷ ಅನುಮತಿ ಕೋರಿ ಅಪರಾಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಲಾಗಿದೆ.

ಪ್ರಕರಣದ ಸೂಕ್ಷ್ಮ ಸ್ವರೂಪವನ್ನು ಅರಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎಸ್.ಸಿ. ಶರ್ಮಾ ಅವರು, ತಮ್ಮ ಕೊಠಡಿಯಲ್ಲಿ ಪ್ರಕರಣದ ರಹಸ್ಯ ವಿಚಾರಣೆ ನಡೆಸುವ ತೀರ್ಮಾನ ಮಾಡಿದರು. ಗುರುವಾರ ಮಧ್ಯಾಹ್ನದ ಊಟಕ್ಕೆ ಮುಂಚಿನ ಅವಧಿಯಲ್ಲಿ ಎರಡೂ ಕಡೆಯವರನ್ನು (ಅರ್ಜಿದಾರ ಅಪರಾಧಿ ಮತ್ತು ಪ್ರತಿವಾದಿ ಸಂತ್ರಸ್ತೆ) ಕರೆದು ಕಾನೂನು ಸಲಹೆಗಾರರೊಂದಿಗೆ ಗೌಪ್ಯ ಚರ್ಚೆ ನಡೆಸಿದರು.

ಅರ್ಜಿದಾರ ಮತ್ತು ಸಂತ್ರಸ್ತೆ ಕಡೆಯವರಿಗೂ ಪರಸ್ಪರ ಚರ್ಚೆ ನಡೆಸಲು ನ್ಯಾಯಮೂರ್ತಿಗಳು ಅವಕಾಶ ನೀಡಿದ್ದರು. ಬಳಿಕ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭಗೊಂಡಾಗ ಅರ್ಜಿದಾರ ಮತ್ತು ಸಂತ್ರಸ್ತೆ ಪರಸ್ಪರ ಮದುವೆಯಾಗುವ ಇಚ್ಚೆ ವ್ಯಕ್ತಪಡಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಮದುವೆಯ ಕುರಿತು ಸಾಧ್ಯವಾದಷ್ಟು ಬೇಗ ನಿರ್ಧರಿಸುವಂತೆ ಎರಡೂ ಕಡೆಯವರ ಪೋಷಕರಿಗೆ ಸೂಚಿಸಿತು.

“ಅರ್ಜಿದಾರರು ಮತ್ತು ಪ್ರತಿವಾದಿ ಸಂಖ್ಯೆ 2 ಪರಸ್ಪರ ಮದುವೆಯಾಗಲು ಸಿದ್ಧರಿದ್ದೇವೆ ಎಂದು ನಮ್ಮ ಮುಂದೆ ನಿಸ್ಸಂದಿಗ್ಧವಾಗಿ ಹೇಳಿದ್ದಾರೆ. ಅವರ ವಿವಾಹದ ಬಗ್ಗೆ ಅವರ ಪೋಷಕರು ನಿರ್ಧರಿಸುತ್ತಾರೆ. ಮದುವೆ ಸಾಧ್ಯವಾದಷ್ಟು ಬೇಗ ನಡೆಯಲಿ ಎಂದು ನಾವು ಆಶಿಸುತ್ತೇವೆ. ಹಾಗಾಗಿ, ನಾವು ಅರ್ಜಿದಾರರ ಶಿಕ್ಷೆಯನ್ನು ನಾವು ಅಮಾನತುಗೊಳಿಸುತ್ತಿದ್ದೇವೆ ಮತ್ತು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುತ್ತಿದ್ದೇವೆ” ಎಂದು ನ್ಯಾಯಾಲಯ ಹೇಳಿದ್ದಾಗಿ livelaw.in ವರದಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 25, 2025ಕ್ಕೆ ನಿಗದಿ ಮಾಡಲಾಗಿದೆ. ಗುರುವಾರ ನಡೆದಿರುವುದು ಭಾಗಶಃ ವಿಚಾರಣೆ ಎಂದು ಹೇಳಲಾಗಿದೆ. ಅರ್ಜಿದಾರ ಮತ್ತು ಪ್ರತಿವಾದಿಯ ಮದುವೆಯ ಕುರಿತು ನ್ಯಾಯಾಲಯ ಮೇಲ್ವಿಚಾರಣೆ ಮಾಡಲಿದೆ.

ಮಧ್ಯಪ್ರದೇಶದ ಸಾಗರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಮದುವೆಯಾಗುವುದಾಗಿ ಭರವಸೆ ಕೊಟ್ಟು ತನ್ನ ಮೇಲೆ 2016 ರಿಂದ ಲೈಂಗಿಕ ಸಂಬಂಧ ಬೆಳೆಸಿದ ಯುವಕ, 2018ರಲ್ಲಿ ಮದುವೆಯಾಗಲು ನಿರಾಕರಿಸಿದರು ಎಂದು ಆರೋಪಿಸಿದ ಯುವತಿ ಪ್ರಕರಣ ದಾಖಲಿಸಿದ್ದರು.

ಅರ್ಜಿದಾರರ ಪರ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಾದ ಮಂಡಿಸಿದ ಅವರ ವಕೀಲರು, “ಇಬ್ಬರದ್ದು ಒಪ್ಪಿತ ಸಂಬಂಧವಾಗಿತ್ತು, ಅತ್ಯಾಚಾರವಲ್ಲ. ವಿಚಾರಣೆ ವೇಳೆ ಪ್ರತಿವಾದಿ ಪೋಷಕರ ಒತ್ತಡಕ್ಕೆ ಮಣಿದು ದೂರು ನೀಡಿರುವುದು ಗೊತ್ತಾಗಿದೆ. ಅರ್ಜಿದಾರರು ಎಂಬಿಬಿಎಸ್ ಪೂರ್ಣಗೊಳಿಸಿದ್ದಾರೆ. ಉಜ್ವಲ ಭವಿಷ್ಯದ ನಿರೀಕ್ಷೆಗಳನ್ನು ಹೊಂದಿದ್ದಾರೆ. ದೀರ್ಘಕಾಲದ ಸೆರೆವಾಸವು ಅವರ ವೃತ್ತಿ ಮತ್ತು ಮುಂದಿನ ಜೀವನವನ್ನು ನಾಶಪಡಿಸಲಿದೆ” ಎಂದು ಹೇಳಿದ್ದಾರೆ.

ವಿಷಯದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯವು ಅರ್ಹತೆಗಳ ಆಧಾರದ ಮೇಲೆ ನಿರ್ಧರಿಸುವ ಬದಲು, ಪರಸ್ಪರ ವಯಸ್ಕ ಒಪ್ಪಿಗೆಯನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಂಡಿದೆ ಎಂದು livelaw.in ಹೇಳಿದೆ.

ಸ್ವಾತಂತ್ರ್ಯದ 80 ವರ್ಷಗಳ ಬಳಿಕವೂ ದಲಿತರ ಮೇಲಿನ ತಾರತಮ್ಯ ನೋವಿನ ಸಂಗತಿ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...