Homeಮುಖಪುಟಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಅಪರಾಧಿ ಪರಸ್ಪರ ಮದುವೆಯಾಗಲು ಒಪ್ಪಿಕೊಂಡ ಹಿನ್ನೆಲೆ, ಗುರುವಾರ (ಮೇ.15) ಅಪರಾಧಿಯ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಆತನಿಗೆ ಮಧ್ಯಂತರ ಜಾಮೀನು ನೀಡಿದೆ ಎಂದು livelaw.in ವರದಿ ಮಾಡಿದೆ.

ಮದುವೆಯಾಗುವುದಾಗಿ ಭರವಸೆ ಕೊಟ್ಟು ಯುವತಿ ಮೇಲೆ ದೀರ್ಘ ಕಾಲ ಅತ್ಯಾಚಾರವೆಸಗಿದ್ದಾರೆ ಎನ್ನಲಾದ ಪ್ರಕರಣದ ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376(2)(n)ಮತ್ತು 417 ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದ್ದ ಮಧ್ಯಪ್ರದೇಶದ ವಿಚಾರಣಾ ನ್ಯಾಯಾಲಯ, ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.

ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೈಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಪರಾಧಿ ಮಧ್ಯಪ್ರದೇಶ ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು.

ಹೈಕೋರ್ಟ್‌ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸಲು ವಿಶೇಷ ಅನುಮತಿ ಕೋರಿ ಅಪರಾಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಲಾಗಿದೆ.

ಪ್ರಕರಣದ ಸೂಕ್ಷ್ಮ ಸ್ವರೂಪವನ್ನು ಅರಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎಸ್.ಸಿ. ಶರ್ಮಾ ಅವರು, ತಮ್ಮ ಕೊಠಡಿಯಲ್ಲಿ ಪ್ರಕರಣದ ರಹಸ್ಯ ವಿಚಾರಣೆ ನಡೆಸುವ ತೀರ್ಮಾನ ಮಾಡಿದರು. ಗುರುವಾರ ಮಧ್ಯಾಹ್ನದ ಊಟಕ್ಕೆ ಮುಂಚಿನ ಅವಧಿಯಲ್ಲಿ ಎರಡೂ ಕಡೆಯವರನ್ನು (ಅರ್ಜಿದಾರ ಅಪರಾಧಿ ಮತ್ತು ಪ್ರತಿವಾದಿ ಸಂತ್ರಸ್ತೆ) ಕರೆದು ಕಾನೂನು ಸಲಹೆಗಾರರೊಂದಿಗೆ ಗೌಪ್ಯ ಚರ್ಚೆ ನಡೆಸಿದರು.

ಅರ್ಜಿದಾರ ಮತ್ತು ಸಂತ್ರಸ್ತೆ ಕಡೆಯವರಿಗೂ ಪರಸ್ಪರ ಚರ್ಚೆ ನಡೆಸಲು ನ್ಯಾಯಮೂರ್ತಿಗಳು ಅವಕಾಶ ನೀಡಿದ್ದರು. ಬಳಿಕ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭಗೊಂಡಾಗ ಅರ್ಜಿದಾರ ಮತ್ತು ಸಂತ್ರಸ್ತೆ ಪರಸ್ಪರ ಮದುವೆಯಾಗುವ ಇಚ್ಚೆ ವ್ಯಕ್ತಪಡಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಮದುವೆಯ ಕುರಿತು ಸಾಧ್ಯವಾದಷ್ಟು ಬೇಗ ನಿರ್ಧರಿಸುವಂತೆ ಎರಡೂ ಕಡೆಯವರ ಪೋಷಕರಿಗೆ ಸೂಚಿಸಿತು.

“ಅರ್ಜಿದಾರರು ಮತ್ತು ಪ್ರತಿವಾದಿ ಸಂಖ್ಯೆ 2 ಪರಸ್ಪರ ಮದುವೆಯಾಗಲು ಸಿದ್ಧರಿದ್ದೇವೆ ಎಂದು ನಮ್ಮ ಮುಂದೆ ನಿಸ್ಸಂದಿಗ್ಧವಾಗಿ ಹೇಳಿದ್ದಾರೆ. ಅವರ ವಿವಾಹದ ಬಗ್ಗೆ ಅವರ ಪೋಷಕರು ನಿರ್ಧರಿಸುತ್ತಾರೆ. ಮದುವೆ ಸಾಧ್ಯವಾದಷ್ಟು ಬೇಗ ನಡೆಯಲಿ ಎಂದು ನಾವು ಆಶಿಸುತ್ತೇವೆ. ಹಾಗಾಗಿ, ನಾವು ಅರ್ಜಿದಾರರ ಶಿಕ್ಷೆಯನ್ನು ನಾವು ಅಮಾನತುಗೊಳಿಸುತ್ತಿದ್ದೇವೆ ಮತ್ತು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುತ್ತಿದ್ದೇವೆ” ಎಂದು ನ್ಯಾಯಾಲಯ ಹೇಳಿದ್ದಾಗಿ livelaw.in ವರದಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 25, 2025ಕ್ಕೆ ನಿಗದಿ ಮಾಡಲಾಗಿದೆ. ಗುರುವಾರ ನಡೆದಿರುವುದು ಭಾಗಶಃ ವಿಚಾರಣೆ ಎಂದು ಹೇಳಲಾಗಿದೆ. ಅರ್ಜಿದಾರ ಮತ್ತು ಪ್ರತಿವಾದಿಯ ಮದುವೆಯ ಕುರಿತು ನ್ಯಾಯಾಲಯ ಮೇಲ್ವಿಚಾರಣೆ ಮಾಡಲಿದೆ.

ಮಧ್ಯಪ್ರದೇಶದ ಸಾಗರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಮದುವೆಯಾಗುವುದಾಗಿ ಭರವಸೆ ಕೊಟ್ಟು ತನ್ನ ಮೇಲೆ 2016 ರಿಂದ ಲೈಂಗಿಕ ಸಂಬಂಧ ಬೆಳೆಸಿದ ಯುವಕ, 2018ರಲ್ಲಿ ಮದುವೆಯಾಗಲು ನಿರಾಕರಿಸಿದರು ಎಂದು ಆರೋಪಿಸಿದ ಯುವತಿ ಪ್ರಕರಣ ದಾಖಲಿಸಿದ್ದರು.

ಅರ್ಜಿದಾರರ ಪರ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಾದ ಮಂಡಿಸಿದ ಅವರ ವಕೀಲರು, “ಇಬ್ಬರದ್ದು ಒಪ್ಪಿತ ಸಂಬಂಧವಾಗಿತ್ತು, ಅತ್ಯಾಚಾರವಲ್ಲ. ವಿಚಾರಣೆ ವೇಳೆ ಪ್ರತಿವಾದಿ ಪೋಷಕರ ಒತ್ತಡಕ್ಕೆ ಮಣಿದು ದೂರು ನೀಡಿರುವುದು ಗೊತ್ತಾಗಿದೆ. ಅರ್ಜಿದಾರರು ಎಂಬಿಬಿಎಸ್ ಪೂರ್ಣಗೊಳಿಸಿದ್ದಾರೆ. ಉಜ್ವಲ ಭವಿಷ್ಯದ ನಿರೀಕ್ಷೆಗಳನ್ನು ಹೊಂದಿದ್ದಾರೆ. ದೀರ್ಘಕಾಲದ ಸೆರೆವಾಸವು ಅವರ ವೃತ್ತಿ ಮತ್ತು ಮುಂದಿನ ಜೀವನವನ್ನು ನಾಶಪಡಿಸಲಿದೆ” ಎಂದು ಹೇಳಿದ್ದಾರೆ.

ವಿಷಯದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯವು ಅರ್ಹತೆಗಳ ಆಧಾರದ ಮೇಲೆ ನಿರ್ಧರಿಸುವ ಬದಲು, ಪರಸ್ಪರ ವಯಸ್ಕ ಒಪ್ಪಿಗೆಯನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಂಡಿದೆ ಎಂದು livelaw.in ಹೇಳಿದೆ.

ಸ್ವಾತಂತ್ರ್ಯದ 80 ವರ್ಷಗಳ ಬಳಿಕವೂ ದಲಿತರ ಮೇಲಿನ ತಾರತಮ್ಯ ನೋವಿನ ಸಂಗತಿ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...