Homeಮುಖಪುಟಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಅಪರಾಧಿ ಪರಸ್ಪರ ಮದುವೆಯಾಗಲು ಒಪ್ಪಿಕೊಂಡ ಹಿನ್ನೆಲೆ, ಗುರುವಾರ (ಮೇ.15) ಅಪರಾಧಿಯ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಆತನಿಗೆ ಮಧ್ಯಂತರ ಜಾಮೀನು ನೀಡಿದೆ ಎಂದು livelaw.in ವರದಿ ಮಾಡಿದೆ.

ಮದುವೆಯಾಗುವುದಾಗಿ ಭರವಸೆ ಕೊಟ್ಟು ಯುವತಿ ಮೇಲೆ ದೀರ್ಘ ಕಾಲ ಅತ್ಯಾಚಾರವೆಸಗಿದ್ದಾರೆ ಎನ್ನಲಾದ ಪ್ರಕರಣದ ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376(2)(n)ಮತ್ತು 417 ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದ್ದ ಮಧ್ಯಪ್ರದೇಶದ ವಿಚಾರಣಾ ನ್ಯಾಯಾಲಯ, ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.

ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೈಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಪರಾಧಿ ಮಧ್ಯಪ್ರದೇಶ ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು.

ಹೈಕೋರ್ಟ್‌ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸಲು ವಿಶೇಷ ಅನುಮತಿ ಕೋರಿ ಅಪರಾಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಲಾಗಿದೆ.

ಪ್ರಕರಣದ ಸೂಕ್ಷ್ಮ ಸ್ವರೂಪವನ್ನು ಅರಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎಸ್.ಸಿ. ಶರ್ಮಾ ಅವರು, ತಮ್ಮ ಕೊಠಡಿಯಲ್ಲಿ ಪ್ರಕರಣದ ರಹಸ್ಯ ವಿಚಾರಣೆ ನಡೆಸುವ ತೀರ್ಮಾನ ಮಾಡಿದರು. ಗುರುವಾರ ಮಧ್ಯಾಹ್ನದ ಊಟಕ್ಕೆ ಮುಂಚಿನ ಅವಧಿಯಲ್ಲಿ ಎರಡೂ ಕಡೆಯವರನ್ನು (ಅರ್ಜಿದಾರ ಅಪರಾಧಿ ಮತ್ತು ಪ್ರತಿವಾದಿ ಸಂತ್ರಸ್ತೆ) ಕರೆದು ಕಾನೂನು ಸಲಹೆಗಾರರೊಂದಿಗೆ ಗೌಪ್ಯ ಚರ್ಚೆ ನಡೆಸಿದರು.

ಅರ್ಜಿದಾರ ಮತ್ತು ಸಂತ್ರಸ್ತೆ ಕಡೆಯವರಿಗೂ ಪರಸ್ಪರ ಚರ್ಚೆ ನಡೆಸಲು ನ್ಯಾಯಮೂರ್ತಿಗಳು ಅವಕಾಶ ನೀಡಿದ್ದರು. ಬಳಿಕ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭಗೊಂಡಾಗ ಅರ್ಜಿದಾರ ಮತ್ತು ಸಂತ್ರಸ್ತೆ ಪರಸ್ಪರ ಮದುವೆಯಾಗುವ ಇಚ್ಚೆ ವ್ಯಕ್ತಪಡಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಮದುವೆಯ ಕುರಿತು ಸಾಧ್ಯವಾದಷ್ಟು ಬೇಗ ನಿರ್ಧರಿಸುವಂತೆ ಎರಡೂ ಕಡೆಯವರ ಪೋಷಕರಿಗೆ ಸೂಚಿಸಿತು.

“ಅರ್ಜಿದಾರರು ಮತ್ತು ಪ್ರತಿವಾದಿ ಸಂಖ್ಯೆ 2 ಪರಸ್ಪರ ಮದುವೆಯಾಗಲು ಸಿದ್ಧರಿದ್ದೇವೆ ಎಂದು ನಮ್ಮ ಮುಂದೆ ನಿಸ್ಸಂದಿಗ್ಧವಾಗಿ ಹೇಳಿದ್ದಾರೆ. ಅವರ ವಿವಾಹದ ಬಗ್ಗೆ ಅವರ ಪೋಷಕರು ನಿರ್ಧರಿಸುತ್ತಾರೆ. ಮದುವೆ ಸಾಧ್ಯವಾದಷ್ಟು ಬೇಗ ನಡೆಯಲಿ ಎಂದು ನಾವು ಆಶಿಸುತ್ತೇವೆ. ಹಾಗಾಗಿ, ನಾವು ಅರ್ಜಿದಾರರ ಶಿಕ್ಷೆಯನ್ನು ನಾವು ಅಮಾನತುಗೊಳಿಸುತ್ತಿದ್ದೇವೆ ಮತ್ತು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುತ್ತಿದ್ದೇವೆ” ಎಂದು ನ್ಯಾಯಾಲಯ ಹೇಳಿದ್ದಾಗಿ livelaw.in ವರದಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 25, 2025ಕ್ಕೆ ನಿಗದಿ ಮಾಡಲಾಗಿದೆ. ಗುರುವಾರ ನಡೆದಿರುವುದು ಭಾಗಶಃ ವಿಚಾರಣೆ ಎಂದು ಹೇಳಲಾಗಿದೆ. ಅರ್ಜಿದಾರ ಮತ್ತು ಪ್ರತಿವಾದಿಯ ಮದುವೆಯ ಕುರಿತು ನ್ಯಾಯಾಲಯ ಮೇಲ್ವಿಚಾರಣೆ ಮಾಡಲಿದೆ.

ಮಧ್ಯಪ್ರದೇಶದ ಸಾಗರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಮದುವೆಯಾಗುವುದಾಗಿ ಭರವಸೆ ಕೊಟ್ಟು ತನ್ನ ಮೇಲೆ 2016 ರಿಂದ ಲೈಂಗಿಕ ಸಂಬಂಧ ಬೆಳೆಸಿದ ಯುವಕ, 2018ರಲ್ಲಿ ಮದುವೆಯಾಗಲು ನಿರಾಕರಿಸಿದರು ಎಂದು ಆರೋಪಿಸಿದ ಯುವತಿ ಪ್ರಕರಣ ದಾಖಲಿಸಿದ್ದರು.

ಅರ್ಜಿದಾರರ ಪರ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಾದ ಮಂಡಿಸಿದ ಅವರ ವಕೀಲರು, “ಇಬ್ಬರದ್ದು ಒಪ್ಪಿತ ಸಂಬಂಧವಾಗಿತ್ತು, ಅತ್ಯಾಚಾರವಲ್ಲ. ವಿಚಾರಣೆ ವೇಳೆ ಪ್ರತಿವಾದಿ ಪೋಷಕರ ಒತ್ತಡಕ್ಕೆ ಮಣಿದು ದೂರು ನೀಡಿರುವುದು ಗೊತ್ತಾಗಿದೆ. ಅರ್ಜಿದಾರರು ಎಂಬಿಬಿಎಸ್ ಪೂರ್ಣಗೊಳಿಸಿದ್ದಾರೆ. ಉಜ್ವಲ ಭವಿಷ್ಯದ ನಿರೀಕ್ಷೆಗಳನ್ನು ಹೊಂದಿದ್ದಾರೆ. ದೀರ್ಘಕಾಲದ ಸೆರೆವಾಸವು ಅವರ ವೃತ್ತಿ ಮತ್ತು ಮುಂದಿನ ಜೀವನವನ್ನು ನಾಶಪಡಿಸಲಿದೆ” ಎಂದು ಹೇಳಿದ್ದಾರೆ.

ವಿಷಯದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯವು ಅರ್ಹತೆಗಳ ಆಧಾರದ ಮೇಲೆ ನಿರ್ಧರಿಸುವ ಬದಲು, ಪರಸ್ಪರ ವಯಸ್ಕ ಒಪ್ಪಿಗೆಯನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಂಡಿದೆ ಎಂದು livelaw.in ಹೇಳಿದೆ.

ಸ್ವಾತಂತ್ರ್ಯದ 80 ವರ್ಷಗಳ ಬಳಿಕವೂ ದಲಿತರ ಮೇಲಿನ ತಾರತಮ್ಯ ನೋವಿನ ಸಂಗತಿ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....