Homeಮುಖಪುಟಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಅಪರಾಧಿ ಪರಸ್ಪರ ಮದುವೆಯಾಗಲು ಒಪ್ಪಿಕೊಂಡ ಹಿನ್ನೆಲೆ, ಗುರುವಾರ (ಮೇ.15) ಅಪರಾಧಿಯ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಆತನಿಗೆ ಮಧ್ಯಂತರ ಜಾಮೀನು ನೀಡಿದೆ ಎಂದು livelaw.in ವರದಿ ಮಾಡಿದೆ.

ಮದುವೆಯಾಗುವುದಾಗಿ ಭರವಸೆ ಕೊಟ್ಟು ಯುವತಿ ಮೇಲೆ ದೀರ್ಘ ಕಾಲ ಅತ್ಯಾಚಾರವೆಸಗಿದ್ದಾರೆ ಎನ್ನಲಾದ ಪ್ರಕರಣದ ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376(2)(n)ಮತ್ತು 417 ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದ್ದ ಮಧ್ಯಪ್ರದೇಶದ ವಿಚಾರಣಾ ನ್ಯಾಯಾಲಯ, ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.

ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೈಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಪರಾಧಿ ಮಧ್ಯಪ್ರದೇಶ ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು.

ಹೈಕೋರ್ಟ್‌ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸಲು ವಿಶೇಷ ಅನುಮತಿ ಕೋರಿ ಅಪರಾಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಲಾಗಿದೆ.

ಪ್ರಕರಣದ ಸೂಕ್ಷ್ಮ ಸ್ವರೂಪವನ್ನು ಅರಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎಸ್.ಸಿ. ಶರ್ಮಾ ಅವರು, ತಮ್ಮ ಕೊಠಡಿಯಲ್ಲಿ ಪ್ರಕರಣದ ರಹಸ್ಯ ವಿಚಾರಣೆ ನಡೆಸುವ ತೀರ್ಮಾನ ಮಾಡಿದರು. ಗುರುವಾರ ಮಧ್ಯಾಹ್ನದ ಊಟಕ್ಕೆ ಮುಂಚಿನ ಅವಧಿಯಲ್ಲಿ ಎರಡೂ ಕಡೆಯವರನ್ನು (ಅರ್ಜಿದಾರ ಅಪರಾಧಿ ಮತ್ತು ಪ್ರತಿವಾದಿ ಸಂತ್ರಸ್ತೆ) ಕರೆದು ಕಾನೂನು ಸಲಹೆಗಾರರೊಂದಿಗೆ ಗೌಪ್ಯ ಚರ್ಚೆ ನಡೆಸಿದರು.

ಅರ್ಜಿದಾರ ಮತ್ತು ಸಂತ್ರಸ್ತೆ ಕಡೆಯವರಿಗೂ ಪರಸ್ಪರ ಚರ್ಚೆ ನಡೆಸಲು ನ್ಯಾಯಮೂರ್ತಿಗಳು ಅವಕಾಶ ನೀಡಿದ್ದರು. ಬಳಿಕ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭಗೊಂಡಾಗ ಅರ್ಜಿದಾರ ಮತ್ತು ಸಂತ್ರಸ್ತೆ ಪರಸ್ಪರ ಮದುವೆಯಾಗುವ ಇಚ್ಚೆ ವ್ಯಕ್ತಪಡಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಮದುವೆಯ ಕುರಿತು ಸಾಧ್ಯವಾದಷ್ಟು ಬೇಗ ನಿರ್ಧರಿಸುವಂತೆ ಎರಡೂ ಕಡೆಯವರ ಪೋಷಕರಿಗೆ ಸೂಚಿಸಿತು.

“ಅರ್ಜಿದಾರರು ಮತ್ತು ಪ್ರತಿವಾದಿ ಸಂಖ್ಯೆ 2 ಪರಸ್ಪರ ಮದುವೆಯಾಗಲು ಸಿದ್ಧರಿದ್ದೇವೆ ಎಂದು ನಮ್ಮ ಮುಂದೆ ನಿಸ್ಸಂದಿಗ್ಧವಾಗಿ ಹೇಳಿದ್ದಾರೆ. ಅವರ ವಿವಾಹದ ಬಗ್ಗೆ ಅವರ ಪೋಷಕರು ನಿರ್ಧರಿಸುತ್ತಾರೆ. ಮದುವೆ ಸಾಧ್ಯವಾದಷ್ಟು ಬೇಗ ನಡೆಯಲಿ ಎಂದು ನಾವು ಆಶಿಸುತ್ತೇವೆ. ಹಾಗಾಗಿ, ನಾವು ಅರ್ಜಿದಾರರ ಶಿಕ್ಷೆಯನ್ನು ನಾವು ಅಮಾನತುಗೊಳಿಸುತ್ತಿದ್ದೇವೆ ಮತ್ತು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುತ್ತಿದ್ದೇವೆ” ಎಂದು ನ್ಯಾಯಾಲಯ ಹೇಳಿದ್ದಾಗಿ livelaw.in ವರದಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 25, 2025ಕ್ಕೆ ನಿಗದಿ ಮಾಡಲಾಗಿದೆ. ಗುರುವಾರ ನಡೆದಿರುವುದು ಭಾಗಶಃ ವಿಚಾರಣೆ ಎಂದು ಹೇಳಲಾಗಿದೆ. ಅರ್ಜಿದಾರ ಮತ್ತು ಪ್ರತಿವಾದಿಯ ಮದುವೆಯ ಕುರಿತು ನ್ಯಾಯಾಲಯ ಮೇಲ್ವಿಚಾರಣೆ ಮಾಡಲಿದೆ.

ಮಧ್ಯಪ್ರದೇಶದ ಸಾಗರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಮದುವೆಯಾಗುವುದಾಗಿ ಭರವಸೆ ಕೊಟ್ಟು ತನ್ನ ಮೇಲೆ 2016 ರಿಂದ ಲೈಂಗಿಕ ಸಂಬಂಧ ಬೆಳೆಸಿದ ಯುವಕ, 2018ರಲ್ಲಿ ಮದುವೆಯಾಗಲು ನಿರಾಕರಿಸಿದರು ಎಂದು ಆರೋಪಿಸಿದ ಯುವತಿ ಪ್ರಕರಣ ದಾಖಲಿಸಿದ್ದರು.

ಅರ್ಜಿದಾರರ ಪರ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಾದ ಮಂಡಿಸಿದ ಅವರ ವಕೀಲರು, “ಇಬ್ಬರದ್ದು ಒಪ್ಪಿತ ಸಂಬಂಧವಾಗಿತ್ತು, ಅತ್ಯಾಚಾರವಲ್ಲ. ವಿಚಾರಣೆ ವೇಳೆ ಪ್ರತಿವಾದಿ ಪೋಷಕರ ಒತ್ತಡಕ್ಕೆ ಮಣಿದು ದೂರು ನೀಡಿರುವುದು ಗೊತ್ತಾಗಿದೆ. ಅರ್ಜಿದಾರರು ಎಂಬಿಬಿಎಸ್ ಪೂರ್ಣಗೊಳಿಸಿದ್ದಾರೆ. ಉಜ್ವಲ ಭವಿಷ್ಯದ ನಿರೀಕ್ಷೆಗಳನ್ನು ಹೊಂದಿದ್ದಾರೆ. ದೀರ್ಘಕಾಲದ ಸೆರೆವಾಸವು ಅವರ ವೃತ್ತಿ ಮತ್ತು ಮುಂದಿನ ಜೀವನವನ್ನು ನಾಶಪಡಿಸಲಿದೆ” ಎಂದು ಹೇಳಿದ್ದಾರೆ.

ವಿಷಯದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯವು ಅರ್ಹತೆಗಳ ಆಧಾರದ ಮೇಲೆ ನಿರ್ಧರಿಸುವ ಬದಲು, ಪರಸ್ಪರ ವಯಸ್ಕ ಒಪ್ಪಿಗೆಯನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಂಡಿದೆ ಎಂದು livelaw.in ಹೇಳಿದೆ.

ಸ್ವಾತಂತ್ರ್ಯದ 80 ವರ್ಷಗಳ ಬಳಿಕವೂ ದಲಿತರ ಮೇಲಿನ ತಾರತಮ್ಯ ನೋವಿನ ಸಂಗತಿ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...