Homeಮುಖಪುಟವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ (ವಿಹೆಚ್‌ಪಿ) ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಮಾಡಿರುವ ಭಾಷಣದ ಕುರಿತು ಸುಪ್ರೀಂ ಕೋರ್ಟ್ ಮಾಹಿತಿ ಕೇಳಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಯಾದವ್ ವಿವಾದಾತ್ಮಕ ಭಾಷಣ ಮಾಡಿರುವ ಕುರಿತು ಪ್ರಕಟಗೊಂಡಿರುವ ಸುದ್ದಿಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್, ಯಾದವ್ ಮಾಡಿರುವ ಭಾಷಣದ ಪೂರ್ಣಪಾಠ ಪಡೆದು ಮಾಹಿತಿ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ.

ನ್ಯಾ.ಯಾದವ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಹಲವು ದೂರುಗಳನ್ನು ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್ ಮಾಹಿತಿ ಕೋರಿದೆ.

ನ್ಯಾ. ಯಾದವ್ ಅವರ ಭಾಷಣದ ಕುರಿತು ಕಳವಳ ವ್ಯಕ್ತಪಡಿಸಿ ಸೋಮವಾರ (ಡಿ.9) ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಮತ್ತು ಕ್ಯಾಂಪೇನ್ ಫಾರ್ ಜುಡೀಶಿಯಲ್ ಅಕೌಂಟೆಬಿಲಿಟಿ ಅಂಡ್ ರಿಫಾರ್ಮ್ಸ್ (ಸಿಜೆಎಆರ್) ಸಿಜೆಐ ಸಂಜೀವ್ ಖನ್ನಾ ಅವರಿಗೆ ಪತ್ರ ಬರೆದಿದ್ದರು.

ನ್ಯಾ. ಶೇಖರ್ ಕುಮಾರ್ ಯಾದವ್ ವಿರುದ್ಧ ಆಂತರಿಕ ತನಿಖೆ ನಡೆಸುವಂತೆ ಮತ್ತು ವಿಚಾರಣೆಗೆ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಅವರಿಂದ ವಾಪಸ್ ಪಡೆಯುವಂತೆ ಸಿಜೆಎಆರ್ ತನ್ನ ಪತ್ರದಲ್ಲಿ ಒತ್ತಾಯಿಸಿತ್ತು. ಯಾದವ್ ಅವರ ಹೇಳಿಕೆಗಳು ಅವರ ನ್ಯಾಯಾಂಗ ಕಾರ್ಯಗಳ ನಿರ್ವಹಣೆಯಲ್ಲಿ ನಿಷ್ಪಕ್ಷಪಾತ, ನ್ಯಾಯಸಮ್ಮತತೆ ಮತ್ತು ತಟಸ್ಥತೆಯ ಕೊರತೆಯನ್ನು ಸೂಚಿಸುತ್ತದೆ ಎಂದಿತ್ತು.

ನ್ಯಾ. ಯಾದವ್ ಅವರ ಹೇಳಿಕೆ ಇಡೀ ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತರುತ್ತವೆ. ಇಂತಹ ಪಕ್ಷಪಾತ ಪ್ರದರ್ಶಿಸುವ ವ್ಯಕ್ತಿಗಳಿಗೆ ನ್ಯಾಯಾಂಗದಲ್ಲಿ ಸ್ಥಾನವಿಲ್ಲ ಎಂದು ರಾಜ್ಯಸಭೆಯ ಮಾಜಿ ಸಂಸದೆಯೂ ಆಗಿರುವ ಬೃಂದಾ ಕಾರಟ್ ಸಿಜೆಐಗೆ ಬರೆದ ಪತ್ರದಲ್ಲಿ ಹೇಳಿದ್ದರು.

ನ್ಯಾಯಾಧೀಶರು ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಪೂರ್ವಾಗ್ರಹ ಪೀಡಿತ ಅಭಿಪ್ರಾಯಗಳನ್ನು ಹೊಂದಿರುವ ಕಾರಣ ಅವರಿಂದ ಯಾವುದೇ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ನ್ಯಾಯಮೂರ್ತಿ ಯಾದವ್ ಅವರ ಭಾಷಣವು ಸಂವಿಧಾನದ ಮೇಲಿನ ದಾಳಿಯಾಗಿದೆ ಭಾರತ ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ಅವಮಾನವಾಗಿದೆ ಎಂದು ಸಿಪಿಐ(ಎಂ) ಪಾಲಿಟ್‌ಬ್ಯುರೊ ಸದಸ್ಯ ಬೃಂದಾ ಕಾರಟ್ ಅಸಮಧಾನ ವ್ಯಕ್ತಪಡಿಸಿದ್ದರು.

ನ್ಯಾ. ಯಾದವ್ ಅವರ ವಿವಾದಾತ್ಮಕ ಭಾಷಣ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ಸಂಸದ ಅಸಾದುದ್ದೀನ್ ಓವೈಸಿ ಅವರು ಯಾದವ್ ಅವರನ್ನು ಪದಚ್ಯುತಿಗೊಳಿಸುವ ನೋಟಿಸ್‌ಗೆ ಸಹಿ ಹಾಕಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಓವೈಸಿ, “ನ್ಯಾಯಾಧೀಶರ ನಡವಳಿಕೆಯು ಸುಪ್ರೀಂ ಕೋರ್ಟ್‌ನ ‘ನ್ಯಾಯಾಂಗ ಜೀವನದ ಮೌಲ್ಯಗಳ ಮರುಸ್ಥಾಪನೆ’ ನಿಯಮ ಸೇರಿದಂತೆ ಸಾಂವಿಧಾನಿಕ ಮೌಲ್ಯಗಳನ್ನು ಉಲ್ಲಂಘಿಸಿದೆ” ಎಂದಿದ್ದಾರೆ.

“ನನ್ನ ನೋಟಿಸ್ ಅನ್ನು ಲೋಕಸಭಾ ಸ್ಪೀಕರ್ ಪರಿಗಣಿಸಬೇಕಾದರೆ 100 ಲೋಕಸಭಾ ಸದಸ್ಯರ ಸಹಿ ಬೇಕಾಗಿದೆ” ಎಂದು ಓವೈಸಿ ತಿಳಿಸಿದ್ದಾರೆ.

ನ್ಯಾ. ಶೇಖರ್ ಕುಮಾರ್ ಯಾದವ್ ಭಾಷಣಕ್ಕೆ ಅಖಿಲ ಭಾರತ ವಕೀಲರ ಒಕ್ಕೂಟ ಕೂಡ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಷ್ಟ್ರಪತಿ ಮತ್ತು ಸಿಜೆಐಗೆ ಪತ್ರ ಬರೆದಿರುವ ಒಕ್ಕೂಟ, “ಯಾದವ್ ಅವರ ಭಾಷಣ ಮುಸ್ಲಿಂ ಅಲ್ಪಸಂಖ್ಯಾತರರ ವಿರುದ್ದದ ದ್ವೇಷ ಭಾಷಣವಾಗಿದೆ”ಎಂದಿದೆ. ಯಾದವ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಇದನ್ನೂ ಓದಿ : ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...