Homeಮುಖಪುಟವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ (ವಿಹೆಚ್‌ಪಿ) ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಮಾಡಿರುವ ಭಾಷಣದ ಕುರಿತು ಸುಪ್ರೀಂ ಕೋರ್ಟ್ ಮಾಹಿತಿ ಕೇಳಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಯಾದವ್ ವಿವಾದಾತ್ಮಕ ಭಾಷಣ ಮಾಡಿರುವ ಕುರಿತು ಪ್ರಕಟಗೊಂಡಿರುವ ಸುದ್ದಿಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್, ಯಾದವ್ ಮಾಡಿರುವ ಭಾಷಣದ ಪೂರ್ಣಪಾಠ ಪಡೆದು ಮಾಹಿತಿ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ.

ನ್ಯಾ.ಯಾದವ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಹಲವು ದೂರುಗಳನ್ನು ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್ ಮಾಹಿತಿ ಕೋರಿದೆ.

ನ್ಯಾ. ಯಾದವ್ ಅವರ ಭಾಷಣದ ಕುರಿತು ಕಳವಳ ವ್ಯಕ್ತಪಡಿಸಿ ಸೋಮವಾರ (ಡಿ.9) ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಮತ್ತು ಕ್ಯಾಂಪೇನ್ ಫಾರ್ ಜುಡೀಶಿಯಲ್ ಅಕೌಂಟೆಬಿಲಿಟಿ ಅಂಡ್ ರಿಫಾರ್ಮ್ಸ್ (ಸಿಜೆಎಆರ್) ಸಿಜೆಐ ಸಂಜೀವ್ ಖನ್ನಾ ಅವರಿಗೆ ಪತ್ರ ಬರೆದಿದ್ದರು.

ನ್ಯಾ. ಶೇಖರ್ ಕುಮಾರ್ ಯಾದವ್ ವಿರುದ್ಧ ಆಂತರಿಕ ತನಿಖೆ ನಡೆಸುವಂತೆ ಮತ್ತು ವಿಚಾರಣೆಗೆ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಅವರಿಂದ ವಾಪಸ್ ಪಡೆಯುವಂತೆ ಸಿಜೆಎಆರ್ ತನ್ನ ಪತ್ರದಲ್ಲಿ ಒತ್ತಾಯಿಸಿತ್ತು. ಯಾದವ್ ಅವರ ಹೇಳಿಕೆಗಳು ಅವರ ನ್ಯಾಯಾಂಗ ಕಾರ್ಯಗಳ ನಿರ್ವಹಣೆಯಲ್ಲಿ ನಿಷ್ಪಕ್ಷಪಾತ, ನ್ಯಾಯಸಮ್ಮತತೆ ಮತ್ತು ತಟಸ್ಥತೆಯ ಕೊರತೆಯನ್ನು ಸೂಚಿಸುತ್ತದೆ ಎಂದಿತ್ತು.

ನ್ಯಾ. ಯಾದವ್ ಅವರ ಹೇಳಿಕೆ ಇಡೀ ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತರುತ್ತವೆ. ಇಂತಹ ಪಕ್ಷಪಾತ ಪ್ರದರ್ಶಿಸುವ ವ್ಯಕ್ತಿಗಳಿಗೆ ನ್ಯಾಯಾಂಗದಲ್ಲಿ ಸ್ಥಾನವಿಲ್ಲ ಎಂದು ರಾಜ್ಯಸಭೆಯ ಮಾಜಿ ಸಂಸದೆಯೂ ಆಗಿರುವ ಬೃಂದಾ ಕಾರಟ್ ಸಿಜೆಐಗೆ ಬರೆದ ಪತ್ರದಲ್ಲಿ ಹೇಳಿದ್ದರು.

ನ್ಯಾಯಾಧೀಶರು ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಪೂರ್ವಾಗ್ರಹ ಪೀಡಿತ ಅಭಿಪ್ರಾಯಗಳನ್ನು ಹೊಂದಿರುವ ಕಾರಣ ಅವರಿಂದ ಯಾವುದೇ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ನ್ಯಾಯಮೂರ್ತಿ ಯಾದವ್ ಅವರ ಭಾಷಣವು ಸಂವಿಧಾನದ ಮೇಲಿನ ದಾಳಿಯಾಗಿದೆ ಭಾರತ ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ಅವಮಾನವಾಗಿದೆ ಎಂದು ಸಿಪಿಐ(ಎಂ) ಪಾಲಿಟ್‌ಬ್ಯುರೊ ಸದಸ್ಯ ಬೃಂದಾ ಕಾರಟ್ ಅಸಮಧಾನ ವ್ಯಕ್ತಪಡಿಸಿದ್ದರು.

ನ್ಯಾ. ಯಾದವ್ ಅವರ ವಿವಾದಾತ್ಮಕ ಭಾಷಣ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ಸಂಸದ ಅಸಾದುದ್ದೀನ್ ಓವೈಸಿ ಅವರು ಯಾದವ್ ಅವರನ್ನು ಪದಚ್ಯುತಿಗೊಳಿಸುವ ನೋಟಿಸ್‌ಗೆ ಸಹಿ ಹಾಕಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಓವೈಸಿ, “ನ್ಯಾಯಾಧೀಶರ ನಡವಳಿಕೆಯು ಸುಪ್ರೀಂ ಕೋರ್ಟ್‌ನ ‘ನ್ಯಾಯಾಂಗ ಜೀವನದ ಮೌಲ್ಯಗಳ ಮರುಸ್ಥಾಪನೆ’ ನಿಯಮ ಸೇರಿದಂತೆ ಸಾಂವಿಧಾನಿಕ ಮೌಲ್ಯಗಳನ್ನು ಉಲ್ಲಂಘಿಸಿದೆ” ಎಂದಿದ್ದಾರೆ.

“ನನ್ನ ನೋಟಿಸ್ ಅನ್ನು ಲೋಕಸಭಾ ಸ್ಪೀಕರ್ ಪರಿಗಣಿಸಬೇಕಾದರೆ 100 ಲೋಕಸಭಾ ಸದಸ್ಯರ ಸಹಿ ಬೇಕಾಗಿದೆ” ಎಂದು ಓವೈಸಿ ತಿಳಿಸಿದ್ದಾರೆ.

ನ್ಯಾ. ಶೇಖರ್ ಕುಮಾರ್ ಯಾದವ್ ಭಾಷಣಕ್ಕೆ ಅಖಿಲ ಭಾರತ ವಕೀಲರ ಒಕ್ಕೂಟ ಕೂಡ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಷ್ಟ್ರಪತಿ ಮತ್ತು ಸಿಜೆಐಗೆ ಪತ್ರ ಬರೆದಿರುವ ಒಕ್ಕೂಟ, “ಯಾದವ್ ಅವರ ಭಾಷಣ ಮುಸ್ಲಿಂ ಅಲ್ಪಸಂಖ್ಯಾತರರ ವಿರುದ್ದದ ದ್ವೇಷ ಭಾಷಣವಾಗಿದೆ”ಎಂದಿದೆ. ಯಾದವ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಇದನ್ನೂ ಓದಿ : ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...