Homeಮುಖಪುಟಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu Case) ಪ್ರಕರಣ ಕೈಗೆತ್ತಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೆ.ಕೆ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಎ.ಜಿ ಮಸೀಹ್ ಅವರನ್ನೊಳಗೊಂಡ ರಜಾ ಕಾಲದ ಪೀಠವು ಡಿಸೆಂಬರ್ 29ರ ಸೋಮವಾರ ಈ ವಿಷಯವನ್ನು ವಿಚಾರಣೆ ನಡೆಸಲಿದೆ.

ನೈಸರ್ಗಿಕ ಪರಿಸರದ ವಿಚಾರದಲ್ಲಿ ಅತ್ಯಂತ ಮಹತ್ವ ಹೊಂದಿರುವ, ಭೂಮಿ ಬರಡಾಗುವುದನ್ನು ತಡೆಗಟ್ಟುವ, ಹವಾಮಾನ ವೈಪರೀತ್ಯಗಳನ್ನು ಸರಿದೂಗಿಸುವ ಮತ್ತು ಅಂತರ್ಜಲ ಮಟ್ಟವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುವ ಅರಾವಳಿ ಬೆಟ್ಟಗಳ ಪರಿಷ್ಕೃತ ವ್ಯಾಖ್ಯಾನದ ವಿರುದ್ದ ದೇಶದಾದ್ಯಂತ ಸಾರ್ವಜನಿಕ ವಲಯದಲ್ಲಿ ತೀವ್ರ ಪ್ರತಿಭಟನೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆ, ನ್ಯಾಯಾಲಯ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿದೆ.

ಅರಾವಳಿ ಬೆಟ್ಟಗಳ ವ್ಯಾಖ್ಯಾನವನ್ನು ದುರ್ಬಲಗೊಳಿಸುವ ಹೊಸ ಕ್ರಮವು ಸಂರಕ್ಷಿತ ಪ್ರದೇಶಗಳಲ್ಲಿ ಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳನ್ನು ಕಾನೂನುಬದ್ಧಗೊಳಿಸಬಹುದು ಎಂಬ ಭಯವನ್ನು ಪರಿಸರ ಗುಂಪುಗಳು ಮತ್ತು ನಾಗರಿಕ ಸಮಾಜ ಸಂಸ್ಥೆಗಳು ವ್ಯಕ್ತಪಡಿಸಿವೆ.

ಅರಾವಳಿ ಎಂಬುವುದು ಉತ್ತರ ಭಾರತದಲ್ಲಿ ಹರಡಿರುವ ಹಳೆಯ ಬೆಟ್ಟಗಳ ಶ್ರೇಣಿಯಾಗಿದೆ. ಇದು ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ರಾಜ್ಯಗಳ ಮೂಲಕ ಹಾದುಹೋಗುತ್ತದೆ.

ಈ ಬೆಟ್ಟಗಳು ಮತ್ತು ಶ್ರೇಣಿಗಳನ್ನು ಪ್ರತಿ ರಾಜ್ಯದಲ್ಲಿ ವಿಭಿನ್ನ ರೀತಿಯಲ್ಲಿ ವ್ಯಾಖ್ಯಾನಿಸಲಾಗಿದೆ. ಅಂದರೆ, ಒಂದು ರಾಜ್ಯದಲ್ಲಿ ‘ಅರಾವಳಿ’ ಎಂದರೆ ಏನು ಎಂದು ಪರಿಗಣಿಸಲಾಗುತ್ತದೆಯೋ ಅದು ಮತ್ತೊಂದು ರಾಜ್ಯದಲ್ಲಿ ಬೇರೆಯಾಗಿರಬಹುದು. ಈ ವಿರೋಧಾಭಾಸದ ವ್ಯಾಖ್ಯಾನಗಳು ಕಾನೂನು ಮತ್ತು ನಿಯಂತ್ರಣದಲ್ಲಿ ಸಮಸ್ಯೆಗಳನ್ನು ಉಂಟುಮಾಡಿವೆ.

ಈ ವ್ಯತ್ಯಾಸಗಳಿಂದಾಗಿ ನಿಯಂತ್ರಣದಲ್ಲಿ ಅಂತರಗಳು ಉಂಟಾಗಿವೆ. ಅಂದರೆ, ಕೆಲವು ಪ್ರದೇಶಗಳಲ್ಲಿ ಕಾನೂನುಗಳು ಸರಿಯಾಗಿ ಅನ್ವಯಿಸಲು ಸಾಧ್ಯವಾಗದೆ, ಅಕ್ರಮ ಗಣಿಗಾರಿಕೆ ಹೆಚ್ಚಾಗಿದೆ. ಇದರಿಂದ ಪರಿಸರ ಹಾನಿ, ನೀರಿನ ಕೊರತೆ ಮತ್ತು ಇತರ ಸಮಸ್ಯೆಗಳು ಉದ್ಭವಿಸಿವೆ.

ಒಂದು ರಾಜ್ಯದಲ್ಲಿ ಗಣಿಗಾರಿಕೆ ನಿಷೇಧಿಸಲಾಗಿದ್ದರೂ, ಮತ್ತೊಂದು ರಾಜ್ಯದ ವ್ಯಾಖ್ಯಾನದಿಂದಾಗಿ ಗಡಿ ಪ್ರದೇಶಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಇದು ಒಟ್ಟಾರೆಯಾಗಿ ಸರ್ಕಾರದ ನಿಯಂತ್ರಣ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ ಮತ್ತು ಪರಿಸರ ಸಂರಕ್ಷಣೆಗೆ ತೊಂದರೆಯಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಏಕರೂಪದ ವ್ಯಾಖ್ಯಾನ ಮತ್ತು ಕಾನೂನುಗಳ ಅಗತ್ಯವಿದೆ.

ಇದನ್ನು ಪರಿಹರಿಸಲು, ಸುಪ್ರೀಂ ಕೋರ್ಟ್ ಈ ಹಿಂದೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು.

ಈ ವರ್ಷದ ನವೆಂಬರ್‌ನಲ್ಲಿ ನೀಡಿದ ತೀರ್ಪಿನಲ್ಲಿ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ನೇತೃತ್ವದ ಪೀಠವು, ಗಣಿಗಾರಿಕೆಯ ವಿಷಯದಲ್ಲಿ ಅರಾವಳಿ ಬೆಟ್ಟಗಳು ಮತ್ತು ಶ್ರೇಣಿಗಳಿಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸಮಿತಿಯು ಶಿಫಾರಸು ಮಾಡಿದ ಕಾರ್ಯಾಚರಣೆಯ ವ್ಯಾಖ್ಯಾನವನ್ನು ಒಪ್ಪಿಕೊಂಡಿತ್ತು.

ಹೊಸ ಶಿಫಾರಸು ಅಥವಾ ವ್ಯಾಖ್ಯಾನದ ಪ್ರಕಾರ, ‘ಅರಾವಳಿ ಬೆಟ್ಟ’ ಎಂದರೆ ಸ್ಥಳೀಯ ಎತ್ತರದಿಂದ (ಅಂದರೆ ಆ ಭೂರೂಪವನ್ನು ಸಂಪೂರ್ಣವಾಗಿ ಆವರಿಸುವ ಕನಿಷ್ಠ ಕಾಂಟೂರ್ ಲೈನ್‌ನಿಂದ) 100 ಮೀಟರ್ ಅಥವಾ ಅದಕ್ಕಿಂತ ಹೆಚ್ಚು ಎತ್ತರವಿರುವ ಯಾವುದೇ ಭೂರೂಪ. ಇದರಲ್ಲಿ ಬೆಟ್ಟದ ಇಳಿಜಾರುಗಳು, ಸಣ್ಣ ಬೆಟ್ಟಗಳು ಮತ್ತು ಸಂಬಂಧಿತ ಪ್ರದೇಶಗಳು ಸೇರಿವೆ.

ಇನ್ನು ‘ಅರಾವಳಿ ಶ್ರೇಣಿ’ ಎಂದರೆ ಎರಡು ಅಥವಾ ಹೆಚ್ಚಿನ ಅರಾವಳಿ ಬೆಟ್ಟಗಳು ಪರಸ್ಪರ 500 ಮೀಟರ್ ಒಳಗೆ ಇದ್ದರೆ, ಅವುಗಳ ನಡುವಿನ ಎಲ್ಲ ಭೂರೂಪಗಳು (ಎತ್ತರ ಕಡಿಮೆ ಇದ್ದರೂ ಸಹ) ಶ್ರೇಣಿಯ ಭಾಗವಾಗಿವೆ ಮತ್ತು ರಕ್ಷಣೆಗೆ ಒಳಪಡುತ್ತವೆ.

ಈ ವ್ಯಾಖ್ಯಾನವು ಹಿಂದಿನ ವಿಭಿನ್ನ ನಿಯಮಗಳಿಂದ ಉಂಟಾದ ಅಂತರಗಳನ್ನು ನಿವಾರಿಸಿ, ಅಕ್ರಮ ಗಣಿಗಾರಿಕೆ ತಡೆಯುವ ಗುರಿಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಆದರೆ, 100 ಮೀಟರ್‌ಗಿಂತ ಕಡಿಮೆ ಎತ್ತರದ ಬೆಟ್ಟಗಳು ಮತ್ತು ಪ್ರದೇಶಗಳು ಈ ವ್ಯಾಖ್ಯಾನದಿಂದ ಹೊರಗುಳಿದು, ಗಣಿಗಾರಿಕೆ ಅಥವಾ ಅಭಿವೃದ್ಧಿಗೆ ತೆರೆಯಬಹುದು ಎಂಬ ಆತಂಕವಿದೆ. ಪರಿಸರವಾದಿಗಳು ಇದನ್ನು ಅರಾವಳಿಯ ನಿರಂತರತೆ ಮತ್ತು ಜೈವಿಕ ವೈವಿಧ್ಯತೆಗೆ ಹಿನ್ನಡೆ ಎಂದು ಟೀಕಿಸಿದ್ದಾರೆ.

ಕೋರ್ಟ್ ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ನಿಷೇಧಿಸಿದ್ದು, ಸುಸ್ಥಿರ ಗಣಿಗಾರಿಕೆ ಯೋಜನೆ (MPSM) ತಯಾರಾಗುವವರೆಗೆ ಯಾವುದೇ ಹೊಸ ಚಟುವಟಿಕೆಗಳು ನಿರ್ಬಂಧಿತ ಎಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ನರೇಗಾ ಹೆಸರು ಬದಲಾವಣೆಯು ರಾಜ್ಯಗಳ ಸ್ವಾಯತ್ತತೆ, ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರ ದಾಳಿ: ರಾಹುಲ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಬದಲಾವಣೆಯು ರಾಜ್ಯಗಳ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ. ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ...

‘2025ರಲ್ಲಿ ಗಾಜಾ ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಸ್ಥಳವಾಯಿತು’: ಪ್ಯಾಲೆಸ್ಟೀನಿಯನ್ ಪತ್ರಕರ್ತರ ಒಕ್ಕೂಟ

ಪ್ಯಾಲೆಸ್ಟೀನಿಯನ್ ಪತ್ರಕರ್ತರ ವಿರುದ್ಧ ಇಸ್ರೇಲ್‌ನ ವ್ಯವಸ್ಥಿತ ಹಿಂಸಾಚಾರ ಅಭಿಯಾನವು ಅಕ್ಟೋಬರ್ 2023 ರಿಂದ ನಡೆಯುತ್ತಿದೆ, ಇದು 2025 ರಲ್ಲಿ ಅತ್ಯಂತ ಮಾರಕ ಸ್ಥಿತಿಗೆ ತಲುಪಿತು. ಡಜನ್‌ಗಟ್ಟಲೆ ಮಾಧ್ಯಮ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ...

ಗಡಿ ಘರ್ಷಣೆ ಕೊನೆಗೊಳಿಸಿದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ: ತಕ್ಷಣದ ಕದನ ವಿರಾಮಕ್ಕೆ ಎರಡು ದೇಶಗಳ ಒಪ್ಪಿಗೆ

ಥೈಲ್ಯಾಂಡ್ ಮತ್ತು ಕಾಂಬೋಡಿಯಾಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ, ಇದು ಇತ್ತೀಚಿನ ಗಡಿ ಘರ್ಷಣೆಗಳ ನಂತರದ ಉದ್ವಿಗ್ನತೆಯನ್ನು ಕಡಿಮೆ ಮಾಡುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ.  ಶನಿವಾರ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಮಾಡಿದ...

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

"ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...