Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್...

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಶಿಕ್ಷಕಿಯ ಆಜ್ಞೆಯ ಮೇರೆಗೆ 2023ರಲ್ಲಿ ಸಹಪಾಠಿಗಳಿಂದ ಕಪಾಳಮೋಕ್ಷಕ್ಕೊಳಗಾದ ಮುಝಫ್ಫರ್‌ನಗರದ ಮುಸ್ಲಿಂ ಬಾಲಕನ ಶಾಲಾ ಶಿಕ್ಷಣದ ವೆಚ್ಚವನ್ನು ಭರಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಉತ್ತರ ಪ್ರದೇಶ (ಯುಪಿ) ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠವು, “ಸರ್ಕಾರ ಬಾಲಕನ ಶಾಲಾ ವೆಚ್ಚಗಳನ್ನು ಭರಿಸುವಂತೆ ಶಾಲೆಯ ಆಡಳಿತ ಮಂಡಳಿಯ ಮನವೊಲಿಸಬಹುದು. ಆದರೆ, ವೆಚ್ಚ ಭರಿಸುವ ಪ್ರಾಥಮಿಕ ಜವಾಬ್ದಾರಿ ಸರ್ಕಾರದ ಮೇಲಿರುತ್ತದೆ ಎಂಬುವುದಾಗಿ ಹೇಳಿದೆ ಎಂದು barandbench.com ವರದಿ ಮಾಡಿದೆ.

“ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೆ ಆತನ ಬೋಧನಾ ಶುಲ್ಕ, ಸಮವಸ್ತ್ರ, ಪುಸ್ತಕ ಮತ್ತು ಸಾರಿಗೆ ವೆಚ್ಚವನ್ನು ಭರಿಸುವುದು ರಾಜ್ಯ ಸರ್ಕಾರದ ಬಾಧ್ಯತೆಯಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಆಗಸ್ಟ್ 2023ರಲ್ಲಿ, ಶಾಲಾ ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರು ಏಳು ವರ್ಷದ ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ಇತರ ವಿದ್ಯಾರ್ಥಿಗಳಿಗೆ ಸೂಚಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೋರಿ ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದೆ.

ಶಿಕ್ಷಕಿ ತ್ರಿಪ್ತಾ ತ್ಯಾಗಿ ಮುಸ್ಲಿಂ ವಿದ್ಯಾರ್ಥಿಯ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಲ್ಲದೆ, ಆತನಿಗೆ ಹೊಡೆಯುವಂತೆ ಸಹಪಾಠಿಗಳನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಲಕನಿಗೆ ಕಪಾಳಮೋಕ್ಷದ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ, ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ನಂತರ ವಿದ್ಯಾರ್ಥಿಯನ್ನು ಬೇರೆ ಶಾಲೆಗೆ ವರ್ಗಾಯಿಸಲಾಯಿತು.

ಈ ವಿಷಯದ ಬಗ್ಗೆ ಕಾಲಮಿತಿಯ ಮತ್ತು ಸ್ವತಂತ್ರ ತನಿಖೆ ಮಾಡಬೇಕು. ಧಾರ್ಮಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರವನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ತುಷಾರ್ ಗಾಂಧಿಯವರು ತನ್ನ ಅರ್ಜಿಯಲ್ಲಿ ಕೋರಿದ್ದರು.

ಶಾಲಾ ಶಿಕ್ಷಕಿಯ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 295A (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅಕ್ಟೋಬರ್ 2023ರಲ್ಲಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ನಂತರ ಆರೋಪಿ ಶಿಕ್ಷಕಿ ನ್ಯಾಯಾಲಯದ ಮುಂದೆ ಶರಣಾಗಿದ್ದರು, ಮತ್ತು ಜಾಮೀನು ಪಡೆದರು.

ಪ್ರಕರಣದ ಸಂಬಂಧ ಕಳೆದ ವರ್ಷ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯ ಶಾಲಾ ವೆಚ್ಚವನ್ನು ಭರಿಸಲು ರಾಜ್ಯವು ಪ್ರಾಯೋಜಕರನ್ನು ಹುಡುಕಬೇಕೆಂದು ಸೂಚಿಸಿತ್ತು.

ಬುಧವಾರ ತುಷಾರ್ ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಶದನ್ ಫರಾಸತ್, “ರಾಜ್ಯ ಸರ್ಕಾರ ಮಗುವಿನ ಶಾಲಾ ಸಮವಸ್ತ್ರದ ಶುಲ್ಕ ಮತ್ತು ಬೋಧನಾ ಶುಲ್ಕವನ್ನು ಭರಿಸುವಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಸೈಯದ್ ಮುರ್ತಾಜಾ ಸ್ಮಾರಕ ಟ್ರಸ್ಟ್ ವಿದ್ಯಾರ್ಥಿಯ ವೆಚ್ಚ ಭರಿಸಲು ಮುಂದಾಗಿದೆ ಎಂದು ಹೇಳಿದೆ.

“ನಾವು ದಾಖಲೆಗಾಗಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಬಹುದು. ಆದರೆ, ಬಾಲಕನ ವೆಚ್ಚವನ್ನು ಟ್ರಸ್ಟ್ ನೇರವಾಗಿ ಶಾಲೆಗೆ ಪಾವತಿಸುತ್ತದೆ” ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಆದಾಗ್ಯೂ, ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೆ ಆತನ ಶೈಕ್ಷಣಿಕ ವೆಚ್ಚ ಭರಿಸುವುದು ಪ್ರಾಥಮಿಕವಾಗಿ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“ಟ್ರಸ್ಟ್ ಒಂದು ವರ್ಷವರೆಗೆ ಬಾಲಕನ ವೆಚ್ಚ ಭರಿಸುವುದಾಗಿ ತಿಳಿಸಲಾಗಿದೆ. ಇನ್ನು ಹೆಚ್ಚಿನ ಅವಧಿಗೆ ವೆಚ್ಚ ಭರಿಸಲು ಟ್ರಸ್ಟ್‌ನ ಮನವೊಲಿಸಲು ಸರ್ಕಾಕ್ಕೆ ಅವಕಾವಶವಿದೆ. ಆದರೆ, ಪ್ರಾಥಮಿಕವಾಗಿ ವೆಚ್ಚ ಭರಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಅಕ್ಟೋಬರ್ 17 ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಿದೆ.

ಸಾರ್ವತ್ರಿಕ ಸಬಲೀಕರಣಕ್ಕೆ ಜಾತಿ ಜನಗಣತಿ ನನ್ನ ಬಹುಕಾಲದ ಬೇಡಿಕೆಯಾಗಿದೆ: ರಾಮದಾಸ್ ಅಠಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...