Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್...

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಶಿಕ್ಷಕಿಯ ಆಜ್ಞೆಯ ಮೇರೆಗೆ 2023ರಲ್ಲಿ ಸಹಪಾಠಿಗಳಿಂದ ಕಪಾಳಮೋಕ್ಷಕ್ಕೊಳಗಾದ ಮುಝಫ್ಫರ್‌ನಗರದ ಮುಸ್ಲಿಂ ಬಾಲಕನ ಶಾಲಾ ಶಿಕ್ಷಣದ ವೆಚ್ಚವನ್ನು ಭರಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಉತ್ತರ ಪ್ರದೇಶ (ಯುಪಿ) ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠವು, “ಸರ್ಕಾರ ಬಾಲಕನ ಶಾಲಾ ವೆಚ್ಚಗಳನ್ನು ಭರಿಸುವಂತೆ ಶಾಲೆಯ ಆಡಳಿತ ಮಂಡಳಿಯ ಮನವೊಲಿಸಬಹುದು. ಆದರೆ, ವೆಚ್ಚ ಭರಿಸುವ ಪ್ರಾಥಮಿಕ ಜವಾಬ್ದಾರಿ ಸರ್ಕಾರದ ಮೇಲಿರುತ್ತದೆ ಎಂಬುವುದಾಗಿ ಹೇಳಿದೆ ಎಂದು barandbench.com ವರದಿ ಮಾಡಿದೆ.

“ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೆ ಆತನ ಬೋಧನಾ ಶುಲ್ಕ, ಸಮವಸ್ತ್ರ, ಪುಸ್ತಕ ಮತ್ತು ಸಾರಿಗೆ ವೆಚ್ಚವನ್ನು ಭರಿಸುವುದು ರಾಜ್ಯ ಸರ್ಕಾರದ ಬಾಧ್ಯತೆಯಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಆಗಸ್ಟ್ 2023ರಲ್ಲಿ, ಶಾಲಾ ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರು ಏಳು ವರ್ಷದ ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ಇತರ ವಿದ್ಯಾರ್ಥಿಗಳಿಗೆ ಸೂಚಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೋರಿ ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದೆ.

ಶಿಕ್ಷಕಿ ತ್ರಿಪ್ತಾ ತ್ಯಾಗಿ ಮುಸ್ಲಿಂ ವಿದ್ಯಾರ್ಥಿಯ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಲ್ಲದೆ, ಆತನಿಗೆ ಹೊಡೆಯುವಂತೆ ಸಹಪಾಠಿಗಳನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಲಕನಿಗೆ ಕಪಾಳಮೋಕ್ಷದ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ, ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ನಂತರ ವಿದ್ಯಾರ್ಥಿಯನ್ನು ಬೇರೆ ಶಾಲೆಗೆ ವರ್ಗಾಯಿಸಲಾಯಿತು.

ಈ ವಿಷಯದ ಬಗ್ಗೆ ಕಾಲಮಿತಿಯ ಮತ್ತು ಸ್ವತಂತ್ರ ತನಿಖೆ ಮಾಡಬೇಕು. ಧಾರ್ಮಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರವನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ತುಷಾರ್ ಗಾಂಧಿಯವರು ತನ್ನ ಅರ್ಜಿಯಲ್ಲಿ ಕೋರಿದ್ದರು.

ಶಾಲಾ ಶಿಕ್ಷಕಿಯ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 295A (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅಕ್ಟೋಬರ್ 2023ರಲ್ಲಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ನಂತರ ಆರೋಪಿ ಶಿಕ್ಷಕಿ ನ್ಯಾಯಾಲಯದ ಮುಂದೆ ಶರಣಾಗಿದ್ದರು, ಮತ್ತು ಜಾಮೀನು ಪಡೆದರು.

ಪ್ರಕರಣದ ಸಂಬಂಧ ಕಳೆದ ವರ್ಷ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯ ಶಾಲಾ ವೆಚ್ಚವನ್ನು ಭರಿಸಲು ರಾಜ್ಯವು ಪ್ರಾಯೋಜಕರನ್ನು ಹುಡುಕಬೇಕೆಂದು ಸೂಚಿಸಿತ್ತು.

ಬುಧವಾರ ತುಷಾರ್ ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಶದನ್ ಫರಾಸತ್, “ರಾಜ್ಯ ಸರ್ಕಾರ ಮಗುವಿನ ಶಾಲಾ ಸಮವಸ್ತ್ರದ ಶುಲ್ಕ ಮತ್ತು ಬೋಧನಾ ಶುಲ್ಕವನ್ನು ಭರಿಸುವಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಸೈಯದ್ ಮುರ್ತಾಜಾ ಸ್ಮಾರಕ ಟ್ರಸ್ಟ್ ವಿದ್ಯಾರ್ಥಿಯ ವೆಚ್ಚ ಭರಿಸಲು ಮುಂದಾಗಿದೆ ಎಂದು ಹೇಳಿದೆ.

“ನಾವು ದಾಖಲೆಗಾಗಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಬಹುದು. ಆದರೆ, ಬಾಲಕನ ವೆಚ್ಚವನ್ನು ಟ್ರಸ್ಟ್ ನೇರವಾಗಿ ಶಾಲೆಗೆ ಪಾವತಿಸುತ್ತದೆ” ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಆದಾಗ್ಯೂ, ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೆ ಆತನ ಶೈಕ್ಷಣಿಕ ವೆಚ್ಚ ಭರಿಸುವುದು ಪ್ರಾಥಮಿಕವಾಗಿ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“ಟ್ರಸ್ಟ್ ಒಂದು ವರ್ಷವರೆಗೆ ಬಾಲಕನ ವೆಚ್ಚ ಭರಿಸುವುದಾಗಿ ತಿಳಿಸಲಾಗಿದೆ. ಇನ್ನು ಹೆಚ್ಚಿನ ಅವಧಿಗೆ ವೆಚ್ಚ ಭರಿಸಲು ಟ್ರಸ್ಟ್‌ನ ಮನವೊಲಿಸಲು ಸರ್ಕಾಕ್ಕೆ ಅವಕಾವಶವಿದೆ. ಆದರೆ, ಪ್ರಾಥಮಿಕವಾಗಿ ವೆಚ್ಚ ಭರಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಅಕ್ಟೋಬರ್ 17 ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಿದೆ.

ಸಾರ್ವತ್ರಿಕ ಸಬಲೀಕರಣಕ್ಕೆ ಜಾತಿ ಜನಗಣತಿ ನನ್ನ ಬಹುಕಾಲದ ಬೇಡಿಕೆಯಾಗಿದೆ: ರಾಮದಾಸ್ ಅಠಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...