Homeಮುಖಪುಟ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ - ಸರಿಪಡಿಸಲು ಸುಪ್ರೀಂ ಆದೇಶ

‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಲು ಸೂಚನೆ.

- Advertisement -
- Advertisement -

ಸೈನ್ಯದಲ್ಲಿ ಶಾಶ್ವತ ಹುದ್ದೆ (ಪರ್ಮನೆಂಟ್ ಕಮಿಷನ್-ಅಂದರೆ ನಿವೃತ್ತಿ ವಯಸ್ಸಿನವರೆಗೂ ಸೈನ್ಯದಲ್ಲಿ ಸೇವೆ ಮಾಡುವ ಅವಕಾಶ) ಪಡೆಯಲು ಮಹಿಳೆಯರಿಗೆ ಅನುಸರಿಸುತ್ತಿರುವ ವೈದ್ಯಕೀಯ ಫಿಟ್‌ನೆಸ್ ಅವಶ್ಯಕತೆ “ಅನಿಯಂತ್ರಿತ”ವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಸೈನ್ಯದಲ್ಲಿ ಶಾಶ್ವತ ಹುದ್ದೆಗಾಗಿ ಸುಮಾರು 80 ಮಹಿಳಾ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಇಂದು ತೀರ್ಪು ಪ್ರಕಟಿಸಿದೆ.
“ನಮ್ಮ ಸಮಾಜದ ರಚನೆಯನ್ನು ಪುರುಷರಿಂದ, ಪುರುಷರಿಗಾಗಿ ರಚಿಸಲಾಗಿದೆ ಎಂದು ನಾವು ಇಲ್ಲಿ ಗುರುತಿಸಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೈನ್ಯದ ಆಯ್ದ ವಾರ್ಷಿಕ ಗೌಪ್ಯ ವರದಿ (ಎಸಿಆರ್) ಮೌಲ್ಯಮಾಪನ ಮತ್ತು ವೈದ್ಯಕೀಯ ಫಿಟ್‌ನೆಸ್ ಮಾನದಂಡವನ್ನು ತಡವಾಗಿ ಅನುಷ್ಠಾನಗೊಳಿಸುವುದರಿಂದ ಮಹಿಳಾ ಅಧಿಕಾರಿಗಳ ವಿರುದ್ಧ ತಾರತಮ್ಯ ಕಂಡು ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

“ಮೌಲ್ಯಮಾಪನದ ಮಾದರಿಯು ಎಸ್‌ಎಸ್‌ಸಿ (ಕಿರು ಸೇವಾ ಅವಧಿ) ಮಹಿಳಾ ಅಧಿಕಾರಿಗಳಿಗೆ ಆರ್ಥಿಕ ಮತ್ತು ಮಾನಸಿಕ ಹಾನಿಯನ್ನುಂಟು ಮಾಡುತ್ತದೆ” ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರಿದ್ದ ಪೀಠ ಹೇಳಿದೆ.
ಈ ತಾರತಮ್ಯವನ್ನು ಹೋಗಲಾಡಿಸಬೇಕು ಎಂದು ತೀರ್ಪು ಆದೇಶಿಸಿದೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ನ್ಯಾಯಾಲಯದ ಹಿಂದಿನ ತೀರ್ಪನ್ನು ಪಾಲಿಸಲಿಲ್ಲ ಎಂದು ಆರೋಪಕ್ಕೆ ಒಳಗಾದವರ ವಿರುದ್ಧ ಕಂಟೆಂಪ್ಟ್ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಅಧಿಕಾರಿಗಳು ಬಯಸಿದ್ದರು.

“ನ್ಯಾಯಾಲಯದ ಎದುರು ಬಂದಿರುವ ಹಲವಾರು ಮಹಿಳಾ ಅಧಿಕಾರಿಗಳು ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಹಲವಾರು ಸಾಗರೋತ್ತರ ಕಾರ್ಯಯೋಜನೆಗಳನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

“ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದವರನ್ನು ನಿರ್ಲಕ್ಷಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮಹಿಳೆಯರ ಸಾಧನೆಗಳ ವಿವರವಾದ ಪಟ್ಟಿಯನ್ನು ತೀರ್ಪಿನಲ್ಲಿ ನೀಡಲಾಗಿದೆ. ಆಯ್ಕೆಗಿಂತ ಮಂಡಳಿಯು ನಿರಾಕರಣೆಗಾಗಿ ಕುಳಿತಿದೆ ಎಂದು ತೋರುತ್ತಿದೆ” ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಸುಪ್ರೀಂ ಕೋರ್ಟ್ 2020 ರ ಫೆಬ್ರವರಿಯ ಮಹತ್ವದ ತೀರ್ಪಿನಲ್ಲಿ, ಸೈನ್ಯದ ಮಹಿಳಾ ಅಧಿಕಾರಿಗಳಿಗೆ ಪುರುಷ ಅಧಿಕಾರಿಗಳಿಗೆ ಸಮನಾಗಿ ಕಮಾಂಡ್ ಹುದ್ದೆಗಳಿಗೆ ಅರ್ಹತೆ ಪಡೆಯಲು ಅವಕಾಶ ನೀಡಿತು. ಇದರ ವಿರುದ್ಧ ಸರ್ಕಾರದ ವಾದಗಳು “ತಾರತಮ್ಯ”, “ಗೊಂದಲ” ಮತ್ತು ಸ್ಟೀರಿಯೊಟೈಪ್ ಗ್ರಹಿಕೆಗಳನ್ನು ಆಧರಿಸಿದೆ ಎಂದು ಸರ್ಕಾರವನ್ನು ಟೀಕಿಸಿತ್ತು. ಅವರ ಸೇವೆಯ ವರ್ಷಗಳನ್ನು ಲೆಕ್ಕಿಸದೆ ಎಲ್ಲಾ ಮಹಿಳೆಯರಿಗೆ ಶಾಶ್ವತ ಹುದ್ದೆ ಲಭ್ಯವಿರುತ್ತದೆ ಎಂದು ನ್ಯಾಯಾಲಯ ಹೇಳಿತ್ತು.

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಬೇಕು ಇಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಈಗಾಗಲೇ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಹುದ್ದೆಯನ್ನು ನೀಡಿವೆ, ಏಕೆಂದರೆ ಎರಡೂ ವಿಭಾಗಗಳು, ಮಹಿಳೆಯರಿಗಾಗಿ ಕೆಲವು ಯುದ್ಧ ಪಾತ್ರಗಳನ್ನು ಮುಕ್ತವಾಗಿರಿಸಿದೆ. ಐಎಎಫ್ ಮಹಿಳೆಯರಿಗೆ ವಾಯು ಮತ್ತು ಭೂ ಸೇನೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ನೀಡುತ್ತದೆ. ಮಹಿಳಾ ಐಎಎಫ್ ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿಗಳು ಹೆಲಿಕಾಪ್ಟರ್, ಸಾರಿಗೆ ವಿಮಾನ ಮತ್ತು ಈಗ ಫೈಟರ್ ಜೆಟ್‌ಗಳನ್ನು ಚಾಲನೆ ಮಾಡುತ್ತಿದ್ದಾರೆ.

ನೌಕಾಪಡೆಯ, ಎಸ್‌ಎಸ್‌ಸಿ ಮೂಲಕ ಸೇರ್ಪಡೆಗೊಂಡ ಮಹಿಳಾ ಅಧಿಕಾರಿಗಳಿಗೆ ಲಾಜಿಸ್ಟಿಕ್ಸ್, ಕಾನೂನು, ವಾಯು ಸಂಚಾರ ನಿಯಂತ್ರಣ, ಕಡಲ ವಿಚಕ್ಷಣ ಪೈಲಟ್‌ಗಳು ಮತ್ತು ನೌಕಾ ಶಸ್ತ್ರಾಸ್ತ್ರ ಇನ್ಸ್ಪೆಕ್ಟರೇಟ್ ಕೇಡರ್‌ನಲ್ಲಿ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...