Homeಮುಖಪುಟ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ - ಸರಿಪಡಿಸಲು ಸುಪ್ರೀಂ ಆದೇಶ

‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಲು ಸೂಚನೆ.

- Advertisement -
- Advertisement -

ಸೈನ್ಯದಲ್ಲಿ ಶಾಶ್ವತ ಹುದ್ದೆ (ಪರ್ಮನೆಂಟ್ ಕಮಿಷನ್-ಅಂದರೆ ನಿವೃತ್ತಿ ವಯಸ್ಸಿನವರೆಗೂ ಸೈನ್ಯದಲ್ಲಿ ಸೇವೆ ಮಾಡುವ ಅವಕಾಶ) ಪಡೆಯಲು ಮಹಿಳೆಯರಿಗೆ ಅನುಸರಿಸುತ್ತಿರುವ ವೈದ್ಯಕೀಯ ಫಿಟ್‌ನೆಸ್ ಅವಶ್ಯಕತೆ “ಅನಿಯಂತ್ರಿತ”ವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಸೈನ್ಯದಲ್ಲಿ ಶಾಶ್ವತ ಹುದ್ದೆಗಾಗಿ ಸುಮಾರು 80 ಮಹಿಳಾ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಇಂದು ತೀರ್ಪು ಪ್ರಕಟಿಸಿದೆ.
“ನಮ್ಮ ಸಮಾಜದ ರಚನೆಯನ್ನು ಪುರುಷರಿಂದ, ಪುರುಷರಿಗಾಗಿ ರಚಿಸಲಾಗಿದೆ ಎಂದು ನಾವು ಇಲ್ಲಿ ಗುರುತಿಸಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೈನ್ಯದ ಆಯ್ದ ವಾರ್ಷಿಕ ಗೌಪ್ಯ ವರದಿ (ಎಸಿಆರ್) ಮೌಲ್ಯಮಾಪನ ಮತ್ತು ವೈದ್ಯಕೀಯ ಫಿಟ್‌ನೆಸ್ ಮಾನದಂಡವನ್ನು ತಡವಾಗಿ ಅನುಷ್ಠಾನಗೊಳಿಸುವುದರಿಂದ ಮಹಿಳಾ ಅಧಿಕಾರಿಗಳ ವಿರುದ್ಧ ತಾರತಮ್ಯ ಕಂಡು ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

“ಮೌಲ್ಯಮಾಪನದ ಮಾದರಿಯು ಎಸ್‌ಎಸ್‌ಸಿ (ಕಿರು ಸೇವಾ ಅವಧಿ) ಮಹಿಳಾ ಅಧಿಕಾರಿಗಳಿಗೆ ಆರ್ಥಿಕ ಮತ್ತು ಮಾನಸಿಕ ಹಾನಿಯನ್ನುಂಟು ಮಾಡುತ್ತದೆ” ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರಿದ್ದ ಪೀಠ ಹೇಳಿದೆ.
ಈ ತಾರತಮ್ಯವನ್ನು ಹೋಗಲಾಡಿಸಬೇಕು ಎಂದು ತೀರ್ಪು ಆದೇಶಿಸಿದೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ನ್ಯಾಯಾಲಯದ ಹಿಂದಿನ ತೀರ್ಪನ್ನು ಪಾಲಿಸಲಿಲ್ಲ ಎಂದು ಆರೋಪಕ್ಕೆ ಒಳಗಾದವರ ವಿರುದ್ಧ ಕಂಟೆಂಪ್ಟ್ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಅಧಿಕಾರಿಗಳು ಬಯಸಿದ್ದರು.

“ನ್ಯಾಯಾಲಯದ ಎದುರು ಬಂದಿರುವ ಹಲವಾರು ಮಹಿಳಾ ಅಧಿಕಾರಿಗಳು ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಹಲವಾರು ಸಾಗರೋತ್ತರ ಕಾರ್ಯಯೋಜನೆಗಳನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

“ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದವರನ್ನು ನಿರ್ಲಕ್ಷಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮಹಿಳೆಯರ ಸಾಧನೆಗಳ ವಿವರವಾದ ಪಟ್ಟಿಯನ್ನು ತೀರ್ಪಿನಲ್ಲಿ ನೀಡಲಾಗಿದೆ. ಆಯ್ಕೆಗಿಂತ ಮಂಡಳಿಯು ನಿರಾಕರಣೆಗಾಗಿ ಕುಳಿತಿದೆ ಎಂದು ತೋರುತ್ತಿದೆ” ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಸುಪ್ರೀಂ ಕೋರ್ಟ್ 2020 ರ ಫೆಬ್ರವರಿಯ ಮಹತ್ವದ ತೀರ್ಪಿನಲ್ಲಿ, ಸೈನ್ಯದ ಮಹಿಳಾ ಅಧಿಕಾರಿಗಳಿಗೆ ಪುರುಷ ಅಧಿಕಾರಿಗಳಿಗೆ ಸಮನಾಗಿ ಕಮಾಂಡ್ ಹುದ್ದೆಗಳಿಗೆ ಅರ್ಹತೆ ಪಡೆಯಲು ಅವಕಾಶ ನೀಡಿತು. ಇದರ ವಿರುದ್ಧ ಸರ್ಕಾರದ ವಾದಗಳು “ತಾರತಮ್ಯ”, “ಗೊಂದಲ” ಮತ್ತು ಸ್ಟೀರಿಯೊಟೈಪ್ ಗ್ರಹಿಕೆಗಳನ್ನು ಆಧರಿಸಿದೆ ಎಂದು ಸರ್ಕಾರವನ್ನು ಟೀಕಿಸಿತ್ತು. ಅವರ ಸೇವೆಯ ವರ್ಷಗಳನ್ನು ಲೆಕ್ಕಿಸದೆ ಎಲ್ಲಾ ಮಹಿಳೆಯರಿಗೆ ಶಾಶ್ವತ ಹುದ್ದೆ ಲಭ್ಯವಿರುತ್ತದೆ ಎಂದು ನ್ಯಾಯಾಲಯ ಹೇಳಿತ್ತು.

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಬೇಕು ಇಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಈಗಾಗಲೇ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಹುದ್ದೆಯನ್ನು ನೀಡಿವೆ, ಏಕೆಂದರೆ ಎರಡೂ ವಿಭಾಗಗಳು, ಮಹಿಳೆಯರಿಗಾಗಿ ಕೆಲವು ಯುದ್ಧ ಪಾತ್ರಗಳನ್ನು ಮುಕ್ತವಾಗಿರಿಸಿದೆ. ಐಎಎಫ್ ಮಹಿಳೆಯರಿಗೆ ವಾಯು ಮತ್ತು ಭೂ ಸೇನೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ನೀಡುತ್ತದೆ. ಮಹಿಳಾ ಐಎಎಫ್ ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿಗಳು ಹೆಲಿಕಾಪ್ಟರ್, ಸಾರಿಗೆ ವಿಮಾನ ಮತ್ತು ಈಗ ಫೈಟರ್ ಜೆಟ್‌ಗಳನ್ನು ಚಾಲನೆ ಮಾಡುತ್ತಿದ್ದಾರೆ.

ನೌಕಾಪಡೆಯ, ಎಸ್‌ಎಸ್‌ಸಿ ಮೂಲಕ ಸೇರ್ಪಡೆಗೊಂಡ ಮಹಿಳಾ ಅಧಿಕಾರಿಗಳಿಗೆ ಲಾಜಿಸ್ಟಿಕ್ಸ್, ಕಾನೂನು, ವಾಯು ಸಂಚಾರ ನಿಯಂತ್ರಣ, ಕಡಲ ವಿಚಕ್ಷಣ ಪೈಲಟ್‌ಗಳು ಮತ್ತು ನೌಕಾ ಶಸ್ತ್ರಾಸ್ತ್ರ ಇನ್ಸ್ಪೆಕ್ಟರೇಟ್ ಕೇಡರ್‌ನಲ್ಲಿ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...