Homeಮುಖಪುಟ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ - ಸರಿಪಡಿಸಲು ಸುಪ್ರೀಂ ಆದೇಶ

‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಲು ಸೂಚನೆ.

- Advertisement -
- Advertisement -

ಸೈನ್ಯದಲ್ಲಿ ಶಾಶ್ವತ ಹುದ್ದೆ (ಪರ್ಮನೆಂಟ್ ಕಮಿಷನ್-ಅಂದರೆ ನಿವೃತ್ತಿ ವಯಸ್ಸಿನವರೆಗೂ ಸೈನ್ಯದಲ್ಲಿ ಸೇವೆ ಮಾಡುವ ಅವಕಾಶ) ಪಡೆಯಲು ಮಹಿಳೆಯರಿಗೆ ಅನುಸರಿಸುತ್ತಿರುವ ವೈದ್ಯಕೀಯ ಫಿಟ್‌ನೆಸ್ ಅವಶ್ಯಕತೆ “ಅನಿಯಂತ್ರಿತ”ವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಸೈನ್ಯದಲ್ಲಿ ಶಾಶ್ವತ ಹುದ್ದೆಗಾಗಿ ಸುಮಾರು 80 ಮಹಿಳಾ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಇಂದು ತೀರ್ಪು ಪ್ರಕಟಿಸಿದೆ.
“ನಮ್ಮ ಸಮಾಜದ ರಚನೆಯನ್ನು ಪುರುಷರಿಂದ, ಪುರುಷರಿಗಾಗಿ ರಚಿಸಲಾಗಿದೆ ಎಂದು ನಾವು ಇಲ್ಲಿ ಗುರುತಿಸಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೈನ್ಯದ ಆಯ್ದ ವಾರ್ಷಿಕ ಗೌಪ್ಯ ವರದಿ (ಎಸಿಆರ್) ಮೌಲ್ಯಮಾಪನ ಮತ್ತು ವೈದ್ಯಕೀಯ ಫಿಟ್‌ನೆಸ್ ಮಾನದಂಡವನ್ನು ತಡವಾಗಿ ಅನುಷ್ಠಾನಗೊಳಿಸುವುದರಿಂದ ಮಹಿಳಾ ಅಧಿಕಾರಿಗಳ ವಿರುದ್ಧ ತಾರತಮ್ಯ ಕಂಡು ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

“ಮೌಲ್ಯಮಾಪನದ ಮಾದರಿಯು ಎಸ್‌ಎಸ್‌ಸಿ (ಕಿರು ಸೇವಾ ಅವಧಿ) ಮಹಿಳಾ ಅಧಿಕಾರಿಗಳಿಗೆ ಆರ್ಥಿಕ ಮತ್ತು ಮಾನಸಿಕ ಹಾನಿಯನ್ನುಂಟು ಮಾಡುತ್ತದೆ” ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರಿದ್ದ ಪೀಠ ಹೇಳಿದೆ.
ಈ ತಾರತಮ್ಯವನ್ನು ಹೋಗಲಾಡಿಸಬೇಕು ಎಂದು ತೀರ್ಪು ಆದೇಶಿಸಿದೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ನ್ಯಾಯಾಲಯದ ಹಿಂದಿನ ತೀರ್ಪನ್ನು ಪಾಲಿಸಲಿಲ್ಲ ಎಂದು ಆರೋಪಕ್ಕೆ ಒಳಗಾದವರ ವಿರುದ್ಧ ಕಂಟೆಂಪ್ಟ್ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಅಧಿಕಾರಿಗಳು ಬಯಸಿದ್ದರು.

“ನ್ಯಾಯಾಲಯದ ಎದುರು ಬಂದಿರುವ ಹಲವಾರು ಮಹಿಳಾ ಅಧಿಕಾರಿಗಳು ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಹಲವಾರು ಸಾಗರೋತ್ತರ ಕಾರ್ಯಯೋಜನೆಗಳನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

“ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದವರನ್ನು ನಿರ್ಲಕ್ಷಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮಹಿಳೆಯರ ಸಾಧನೆಗಳ ವಿವರವಾದ ಪಟ್ಟಿಯನ್ನು ತೀರ್ಪಿನಲ್ಲಿ ನೀಡಲಾಗಿದೆ. ಆಯ್ಕೆಗಿಂತ ಮಂಡಳಿಯು ನಿರಾಕರಣೆಗಾಗಿ ಕುಳಿತಿದೆ ಎಂದು ತೋರುತ್ತಿದೆ” ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಸುಪ್ರೀಂ ಕೋರ್ಟ್ 2020 ರ ಫೆಬ್ರವರಿಯ ಮಹತ್ವದ ತೀರ್ಪಿನಲ್ಲಿ, ಸೈನ್ಯದ ಮಹಿಳಾ ಅಧಿಕಾರಿಗಳಿಗೆ ಪುರುಷ ಅಧಿಕಾರಿಗಳಿಗೆ ಸಮನಾಗಿ ಕಮಾಂಡ್ ಹುದ್ದೆಗಳಿಗೆ ಅರ್ಹತೆ ಪಡೆಯಲು ಅವಕಾಶ ನೀಡಿತು. ಇದರ ವಿರುದ್ಧ ಸರ್ಕಾರದ ವಾದಗಳು “ತಾರತಮ್ಯ”, “ಗೊಂದಲ” ಮತ್ತು ಸ್ಟೀರಿಯೊಟೈಪ್ ಗ್ರಹಿಕೆಗಳನ್ನು ಆಧರಿಸಿದೆ ಎಂದು ಸರ್ಕಾರವನ್ನು ಟೀಕಿಸಿತ್ತು. ಅವರ ಸೇವೆಯ ವರ್ಷಗಳನ್ನು ಲೆಕ್ಕಿಸದೆ ಎಲ್ಲಾ ಮಹಿಳೆಯರಿಗೆ ಶಾಶ್ವತ ಹುದ್ದೆ ಲಭ್ಯವಿರುತ್ತದೆ ಎಂದು ನ್ಯಾಯಾಲಯ ಹೇಳಿತ್ತು.

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಬೇಕು ಇಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಈಗಾಗಲೇ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಹುದ್ದೆಯನ್ನು ನೀಡಿವೆ, ಏಕೆಂದರೆ ಎರಡೂ ವಿಭಾಗಗಳು, ಮಹಿಳೆಯರಿಗಾಗಿ ಕೆಲವು ಯುದ್ಧ ಪಾತ್ರಗಳನ್ನು ಮುಕ್ತವಾಗಿರಿಸಿದೆ. ಐಎಎಫ್ ಮಹಿಳೆಯರಿಗೆ ವಾಯು ಮತ್ತು ಭೂ ಸೇನೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ನೀಡುತ್ತದೆ. ಮಹಿಳಾ ಐಎಎಫ್ ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿಗಳು ಹೆಲಿಕಾಪ್ಟರ್, ಸಾರಿಗೆ ವಿಮಾನ ಮತ್ತು ಈಗ ಫೈಟರ್ ಜೆಟ್‌ಗಳನ್ನು ಚಾಲನೆ ಮಾಡುತ್ತಿದ್ದಾರೆ.

ನೌಕಾಪಡೆಯ, ಎಸ್‌ಎಸ್‌ಸಿ ಮೂಲಕ ಸೇರ್ಪಡೆಗೊಂಡ ಮಹಿಳಾ ಅಧಿಕಾರಿಗಳಿಗೆ ಲಾಜಿಸ್ಟಿಕ್ಸ್, ಕಾನೂನು, ವಾಯು ಸಂಚಾರ ನಿಯಂತ್ರಣ, ಕಡಲ ವಿಚಕ್ಷಣ ಪೈಲಟ್‌ಗಳು ಮತ್ತು ನೌಕಾ ಶಸ್ತ್ರಾಸ್ತ್ರ ಇನ್ಸ್ಪೆಕ್ಟರೇಟ್ ಕೇಡರ್‌ನಲ್ಲಿ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...