Homeಮುಖಪುಟ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ - ಸರಿಪಡಿಸಲು ಸುಪ್ರೀಂ ಆದೇಶ

‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಲು ಸೂಚನೆ.

- Advertisement -
- Advertisement -

ಸೈನ್ಯದಲ್ಲಿ ಶಾಶ್ವತ ಹುದ್ದೆ (ಪರ್ಮನೆಂಟ್ ಕಮಿಷನ್-ಅಂದರೆ ನಿವೃತ್ತಿ ವಯಸ್ಸಿನವರೆಗೂ ಸೈನ್ಯದಲ್ಲಿ ಸೇವೆ ಮಾಡುವ ಅವಕಾಶ) ಪಡೆಯಲು ಮಹಿಳೆಯರಿಗೆ ಅನುಸರಿಸುತ್ತಿರುವ ವೈದ್ಯಕೀಯ ಫಿಟ್‌ನೆಸ್ ಅವಶ್ಯಕತೆ “ಅನಿಯಂತ್ರಿತ”ವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಸೈನ್ಯದಲ್ಲಿ ಶಾಶ್ವತ ಹುದ್ದೆಗಾಗಿ ಸುಮಾರು 80 ಮಹಿಳಾ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಇಂದು ತೀರ್ಪು ಪ್ರಕಟಿಸಿದೆ.
“ನಮ್ಮ ಸಮಾಜದ ರಚನೆಯನ್ನು ಪುರುಷರಿಂದ, ಪುರುಷರಿಗಾಗಿ ರಚಿಸಲಾಗಿದೆ ಎಂದು ನಾವು ಇಲ್ಲಿ ಗುರುತಿಸಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೈನ್ಯದ ಆಯ್ದ ವಾರ್ಷಿಕ ಗೌಪ್ಯ ವರದಿ (ಎಸಿಆರ್) ಮೌಲ್ಯಮಾಪನ ಮತ್ತು ವೈದ್ಯಕೀಯ ಫಿಟ್‌ನೆಸ್ ಮಾನದಂಡವನ್ನು ತಡವಾಗಿ ಅನುಷ್ಠಾನಗೊಳಿಸುವುದರಿಂದ ಮಹಿಳಾ ಅಧಿಕಾರಿಗಳ ವಿರುದ್ಧ ತಾರತಮ್ಯ ಕಂಡು ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

“ಮೌಲ್ಯಮಾಪನದ ಮಾದರಿಯು ಎಸ್‌ಎಸ್‌ಸಿ (ಕಿರು ಸೇವಾ ಅವಧಿ) ಮಹಿಳಾ ಅಧಿಕಾರಿಗಳಿಗೆ ಆರ್ಥಿಕ ಮತ್ತು ಮಾನಸಿಕ ಹಾನಿಯನ್ನುಂಟು ಮಾಡುತ್ತದೆ” ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರಿದ್ದ ಪೀಠ ಹೇಳಿದೆ.
ಈ ತಾರತಮ್ಯವನ್ನು ಹೋಗಲಾಡಿಸಬೇಕು ಎಂದು ತೀರ್ಪು ಆದೇಶಿಸಿದೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ನ್ಯಾಯಾಲಯದ ಹಿಂದಿನ ತೀರ್ಪನ್ನು ಪಾಲಿಸಲಿಲ್ಲ ಎಂದು ಆರೋಪಕ್ಕೆ ಒಳಗಾದವರ ವಿರುದ್ಧ ಕಂಟೆಂಪ್ಟ್ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಅಧಿಕಾರಿಗಳು ಬಯಸಿದ್ದರು.

“ನ್ಯಾಯಾಲಯದ ಎದುರು ಬಂದಿರುವ ಹಲವಾರು ಮಹಿಳಾ ಅಧಿಕಾರಿಗಳು ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಹಲವಾರು ಸಾಗರೋತ್ತರ ಕಾರ್ಯಯೋಜನೆಗಳನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

“ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದವರನ್ನು ನಿರ್ಲಕ್ಷಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮಹಿಳೆಯರ ಸಾಧನೆಗಳ ವಿವರವಾದ ಪಟ್ಟಿಯನ್ನು ತೀರ್ಪಿನಲ್ಲಿ ನೀಡಲಾಗಿದೆ. ಆಯ್ಕೆಗಿಂತ ಮಂಡಳಿಯು ನಿರಾಕರಣೆಗಾಗಿ ಕುಳಿತಿದೆ ಎಂದು ತೋರುತ್ತಿದೆ” ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಸುಪ್ರೀಂ ಕೋರ್ಟ್ 2020 ರ ಫೆಬ್ರವರಿಯ ಮಹತ್ವದ ತೀರ್ಪಿನಲ್ಲಿ, ಸೈನ್ಯದ ಮಹಿಳಾ ಅಧಿಕಾರಿಗಳಿಗೆ ಪುರುಷ ಅಧಿಕಾರಿಗಳಿಗೆ ಸಮನಾಗಿ ಕಮಾಂಡ್ ಹುದ್ದೆಗಳಿಗೆ ಅರ್ಹತೆ ಪಡೆಯಲು ಅವಕಾಶ ನೀಡಿತು. ಇದರ ವಿರುದ್ಧ ಸರ್ಕಾರದ ವಾದಗಳು “ತಾರತಮ್ಯ”, “ಗೊಂದಲ” ಮತ್ತು ಸ್ಟೀರಿಯೊಟೈಪ್ ಗ್ರಹಿಕೆಗಳನ್ನು ಆಧರಿಸಿದೆ ಎಂದು ಸರ್ಕಾರವನ್ನು ಟೀಕಿಸಿತ್ತು. ಅವರ ಸೇವೆಯ ವರ್ಷಗಳನ್ನು ಲೆಕ್ಕಿಸದೆ ಎಲ್ಲಾ ಮಹಿಳೆಯರಿಗೆ ಶಾಶ್ವತ ಹುದ್ದೆ ಲಭ್ಯವಿರುತ್ತದೆ ಎಂದು ನ್ಯಾಯಾಲಯ ಹೇಳಿತ್ತು.

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಬೇಕು ಇಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಈಗಾಗಲೇ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಹುದ್ದೆಯನ್ನು ನೀಡಿವೆ, ಏಕೆಂದರೆ ಎರಡೂ ವಿಭಾಗಗಳು, ಮಹಿಳೆಯರಿಗಾಗಿ ಕೆಲವು ಯುದ್ಧ ಪಾತ್ರಗಳನ್ನು ಮುಕ್ತವಾಗಿರಿಸಿದೆ. ಐಎಎಫ್ ಮಹಿಳೆಯರಿಗೆ ವಾಯು ಮತ್ತು ಭೂ ಸೇನೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ನೀಡುತ್ತದೆ. ಮಹಿಳಾ ಐಎಎಫ್ ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿಗಳು ಹೆಲಿಕಾಪ್ಟರ್, ಸಾರಿಗೆ ವಿಮಾನ ಮತ್ತು ಈಗ ಫೈಟರ್ ಜೆಟ್‌ಗಳನ್ನು ಚಾಲನೆ ಮಾಡುತ್ತಿದ್ದಾರೆ.

ನೌಕಾಪಡೆಯ, ಎಸ್‌ಎಸ್‌ಸಿ ಮೂಲಕ ಸೇರ್ಪಡೆಗೊಂಡ ಮಹಿಳಾ ಅಧಿಕಾರಿಗಳಿಗೆ ಲಾಜಿಸ್ಟಿಕ್ಸ್, ಕಾನೂನು, ವಾಯು ಸಂಚಾರ ನಿಯಂತ್ರಣ, ಕಡಲ ವಿಚಕ್ಷಣ ಪೈಲಟ್‌ಗಳು ಮತ್ತು ನೌಕಾ ಶಸ್ತ್ರಾಸ್ತ್ರ ಇನ್ಸ್ಪೆಕ್ಟರೇಟ್ ಕೇಡರ್‌ನಲ್ಲಿ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...