Homeಮುಖಪುಟ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ - ಸರಿಪಡಿಸಲು ಸುಪ್ರೀಂ ಆದೇಶ

‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಲು ಸೂಚನೆ.

- Advertisement -
- Advertisement -

ಸೈನ್ಯದಲ್ಲಿ ಶಾಶ್ವತ ಹುದ್ದೆ (ಪರ್ಮನೆಂಟ್ ಕಮಿಷನ್-ಅಂದರೆ ನಿವೃತ್ತಿ ವಯಸ್ಸಿನವರೆಗೂ ಸೈನ್ಯದಲ್ಲಿ ಸೇವೆ ಮಾಡುವ ಅವಕಾಶ) ಪಡೆಯಲು ಮಹಿಳೆಯರಿಗೆ ಅನುಸರಿಸುತ್ತಿರುವ ವೈದ್ಯಕೀಯ ಫಿಟ್‌ನೆಸ್ ಅವಶ್ಯಕತೆ “ಅನಿಯಂತ್ರಿತ”ವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಸೈನ್ಯದಲ್ಲಿ ಶಾಶ್ವತ ಹುದ್ದೆಗಾಗಿ ಸುಮಾರು 80 ಮಹಿಳಾ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಇಂದು ತೀರ್ಪು ಪ್ರಕಟಿಸಿದೆ.
“ನಮ್ಮ ಸಮಾಜದ ರಚನೆಯನ್ನು ಪುರುಷರಿಂದ, ಪುರುಷರಿಗಾಗಿ ರಚಿಸಲಾಗಿದೆ ಎಂದು ನಾವು ಇಲ್ಲಿ ಗುರುತಿಸಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೈನ್ಯದ ಆಯ್ದ ವಾರ್ಷಿಕ ಗೌಪ್ಯ ವರದಿ (ಎಸಿಆರ್) ಮೌಲ್ಯಮಾಪನ ಮತ್ತು ವೈದ್ಯಕೀಯ ಫಿಟ್‌ನೆಸ್ ಮಾನದಂಡವನ್ನು ತಡವಾಗಿ ಅನುಷ್ಠಾನಗೊಳಿಸುವುದರಿಂದ ಮಹಿಳಾ ಅಧಿಕಾರಿಗಳ ವಿರುದ್ಧ ತಾರತಮ್ಯ ಕಂಡು ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

“ಮೌಲ್ಯಮಾಪನದ ಮಾದರಿಯು ಎಸ್‌ಎಸ್‌ಸಿ (ಕಿರು ಸೇವಾ ಅವಧಿ) ಮಹಿಳಾ ಅಧಿಕಾರಿಗಳಿಗೆ ಆರ್ಥಿಕ ಮತ್ತು ಮಾನಸಿಕ ಹಾನಿಯನ್ನುಂಟು ಮಾಡುತ್ತದೆ” ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರಿದ್ದ ಪೀಠ ಹೇಳಿದೆ.
ಈ ತಾರತಮ್ಯವನ್ನು ಹೋಗಲಾಡಿಸಬೇಕು ಎಂದು ತೀರ್ಪು ಆದೇಶಿಸಿದೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ನ್ಯಾಯಾಲಯದ ಹಿಂದಿನ ತೀರ್ಪನ್ನು ಪಾಲಿಸಲಿಲ್ಲ ಎಂದು ಆರೋಪಕ್ಕೆ ಒಳಗಾದವರ ವಿರುದ್ಧ ಕಂಟೆಂಪ್ಟ್ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಅಧಿಕಾರಿಗಳು ಬಯಸಿದ್ದರು.

“ನ್ಯಾಯಾಲಯದ ಎದುರು ಬಂದಿರುವ ಹಲವಾರು ಮಹಿಳಾ ಅಧಿಕಾರಿಗಳು ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಹಲವಾರು ಸಾಗರೋತ್ತರ ಕಾರ್ಯಯೋಜನೆಗಳನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

“ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದವರನ್ನು ನಿರ್ಲಕ್ಷಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮಹಿಳೆಯರ ಸಾಧನೆಗಳ ವಿವರವಾದ ಪಟ್ಟಿಯನ್ನು ತೀರ್ಪಿನಲ್ಲಿ ನೀಡಲಾಗಿದೆ. ಆಯ್ಕೆಗಿಂತ ಮಂಡಳಿಯು ನಿರಾಕರಣೆಗಾಗಿ ಕುಳಿತಿದೆ ಎಂದು ತೋರುತ್ತಿದೆ” ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಸುಪ್ರೀಂ ಕೋರ್ಟ್ 2020 ರ ಫೆಬ್ರವರಿಯ ಮಹತ್ವದ ತೀರ್ಪಿನಲ್ಲಿ, ಸೈನ್ಯದ ಮಹಿಳಾ ಅಧಿಕಾರಿಗಳಿಗೆ ಪುರುಷ ಅಧಿಕಾರಿಗಳಿಗೆ ಸಮನಾಗಿ ಕಮಾಂಡ್ ಹುದ್ದೆಗಳಿಗೆ ಅರ್ಹತೆ ಪಡೆಯಲು ಅವಕಾಶ ನೀಡಿತು. ಇದರ ವಿರುದ್ಧ ಸರ್ಕಾರದ ವಾದಗಳು “ತಾರತಮ್ಯ”, “ಗೊಂದಲ” ಮತ್ತು ಸ್ಟೀರಿಯೊಟೈಪ್ ಗ್ರಹಿಕೆಗಳನ್ನು ಆಧರಿಸಿದೆ ಎಂದು ಸರ್ಕಾರವನ್ನು ಟೀಕಿಸಿತ್ತು. ಅವರ ಸೇವೆಯ ವರ್ಷಗಳನ್ನು ಲೆಕ್ಕಿಸದೆ ಎಲ್ಲಾ ಮಹಿಳೆಯರಿಗೆ ಶಾಶ್ವತ ಹುದ್ದೆ ಲಭ್ಯವಿರುತ್ತದೆ ಎಂದು ನ್ಯಾಯಾಲಯ ಹೇಳಿತ್ತು.

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಬೇಕು ಇಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಈಗಾಗಲೇ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಹುದ್ದೆಯನ್ನು ನೀಡಿವೆ, ಏಕೆಂದರೆ ಎರಡೂ ವಿಭಾಗಗಳು, ಮಹಿಳೆಯರಿಗಾಗಿ ಕೆಲವು ಯುದ್ಧ ಪಾತ್ರಗಳನ್ನು ಮುಕ್ತವಾಗಿರಿಸಿದೆ. ಐಎಎಫ್ ಮಹಿಳೆಯರಿಗೆ ವಾಯು ಮತ್ತು ಭೂ ಸೇನೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ನೀಡುತ್ತದೆ. ಮಹಿಳಾ ಐಎಎಫ್ ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿಗಳು ಹೆಲಿಕಾಪ್ಟರ್, ಸಾರಿಗೆ ವಿಮಾನ ಮತ್ತು ಈಗ ಫೈಟರ್ ಜೆಟ್‌ಗಳನ್ನು ಚಾಲನೆ ಮಾಡುತ್ತಿದ್ದಾರೆ.

ನೌಕಾಪಡೆಯ, ಎಸ್‌ಎಸ್‌ಸಿ ಮೂಲಕ ಸೇರ್ಪಡೆಗೊಂಡ ಮಹಿಳಾ ಅಧಿಕಾರಿಗಳಿಗೆ ಲಾಜಿಸ್ಟಿಕ್ಸ್, ಕಾನೂನು, ವಾಯು ಸಂಚಾರ ನಿಯಂತ್ರಣ, ಕಡಲ ವಿಚಕ್ಷಣ ಪೈಲಟ್‌ಗಳು ಮತ್ತು ನೌಕಾ ಶಸ್ತ್ರಾಸ್ತ್ರ ಇನ್ಸ್ಪೆಕ್ಟರೇಟ್ ಕೇಡರ್‌ನಲ್ಲಿ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...