Homeಮುಖಪುಟನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

ನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

- Advertisement -
- Advertisement -

ಅಯೋಧ್ಯೆ ತೀರ್ಪಿನ ನಂತರ ನಾಳೆ ಮತ್ತೊಂದು ಮಹತ್ವದ ತೀರ್ಪು ನೀಡಲಿದೆ ಸುಪ್ರೀಂಕೋರ್ಟ್‌. ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಮರುಪರಿಶೀಲನೆ ಅರ್ಜಿ ತೀರ್ಪು ಹೊರ ಬೀಳಲಿದೆ. ಮಂಡಲ ಮಕರವಿಳಕ್ಕುಂ ಋತುಮಾನ ನ. 16 ರಂದು ಆರಂಭವಾಗಲಿದೆ. ಹೀಗಾಗಿ ತೀರ್ಪು ಹೆಚ್ಚಿನ ಮಹತ್ವ ಪಡೆದಿದೆ. ಅಲ್ಲದೇ ಎಡಪಂಥೀಯ ಸರ್ಕಾರವಿರುವ ರಾಜ್ಯದಲ್ಲಿ ಹಲವು ರಾಜಕೀಯ ಬೆಳವಣಿಗೆಗೂ ಇದು ಕಾರಣವಾಗಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ರೋಹಿಂಟನ್‌ ನಾರಿಮನ್‌, ಡಿ.ವೈ.ಚಂದ್ರಚೂಡ್ ಹಾಗೂ ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ನ್ಯಾಯಪೀಠ ತೀರ್ಪು ಪ್ರಕಟಿಸಲಿದೆ.

ಇನ್ನು ೨೦೧೮ರ ಸೆಪ್ಟಂಬರ್‌ ೨೮ರಂದು ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಕೋರ್ಟ್‌ ತೀರ್ಪು ನೀಡುತ್ತಿದ್ದಂತೆ ಹಲವು ಮಹಿಳೆಯರು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ದೇವಾಲಯಕ್ಕೆ ತೆರಳುವ ಹಾದಿಯಲ್ಲಿ ಮಹಿಳೆಯರನ್ನು ತಡೆದು, ಬೇರೆ ಮಾರ್ಗದ ಮೂಲಕ ಸಂಚರಿಸುವಂತೆ ಒತ್ತಡ ಹೇರಲಾಗಿತ್ತು. ಮಂಡಲದ ಅವಧಿಯುದ್ದಕ್ಕೂ ಘರ್ಷಣೆ, ಉದ್ವಿಗ್ನತೆಗೆ ಶಬರಿಮಲೆ ಸಾಕ್ಷಿಯಾಗಿತ್ತು.

ಸುಪ್ರೀಂಕೋರ್ಟ್‌ ತೀರ್ಪು ವಿರೋಧಿಸಿ, ಹಲವು ಪ್ರತಿಭಟನೆಗಳು ನಡೆದಿದ್ದವು. ಅಲ್ಲದೇ ಇದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ, ಹಿಂದೂಗಳ ಸಂಪ್ರದಾಯ, ಪರಂಪರೆ, ಪದ್ಧತಿಗೆ ಮಾಡಿದ ಅವಮಾನ ಎಂದು ಹಲವು ಹಿಂದೂ ಪರ ಸಂಘಟನೆಗಳು, ಶಬರಿಮಲೆ ದೇಗುಲ ಟ್ರಸ್ಟಿಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಮತ್ತು ರ್ಯಾಲಿ ನಡೆದಿತ್ತು. ಅದಾದ ನಂತರ ಸುಪ್ರೀಂ ತೀರ್ಪು ಮರು ಪರಿಶೀಲನೆ ನಡೆಸುವಂತೆ ಹಲವು ಅರ್ಜಿಗಳು ಸುಪ್ರೀಂ ಮೆಟ್ಟಿಲೇರಿದ್ದವು. ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌ ನಾಳೆ ( ನವೆಂಬರ್‌ ೧೪) ಮಹತ್ವದ ತೀರ್ಪು ನೀಡಲಿದೆ.

ಶಬರಿಮಲೆ ಸುಮಾರು ೮೦೦ ವರ್ಷಗಳಷ್ಟು ಹಳೆಯದ್ದಾಗಿದೆ. ಮಹಿಳೆಯರ ದೇಗುಲ ಪ್ರವೇಶ ತೀರ್ಪು ದಶಕಗಳಷ್ಟು ಹಳೆಯದ್ದು. ಈಗ ಅಯೋಧ್ಯೆ ತೀರ್ಪು ಒಪ್ಪಿಕೊಂಡಿರುವಂತೆ ಎಲ್ಲರೂ ಶಬರಿಮಲೆ ತೀರ್ಪನ್ನೂ ಸಹ ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಮತ್ತು ದೇವಸ್ವಂ ಕಡಕಂಪಲ್ಲಿ ಸುರೇಂದ್ರನ್‌ ಮನವಿ ಮಾಡಿದ್ದಾರೆ. ಎಲ್ಲರೂ ತೀರ್ಪನ್ನು ಶಾಂತವಾಗಿ ಒಪ್ಪಿಕೊಳ್ಳಬೇಕು. ಸುಪ್ರೀಂ ತೀರ್ಪಿನ ಪ್ರಕಾರ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ದೇವಸ್ವಂ ಮಂಡಳಿಯ ಅಧ್ಯಕ್ಷ ಎ. ಪದ್ಮಕುಮಾರ್ ಹೇಳಿದ್ದಾರೆ.

ನಾಳೆ ತೀರ್ಪು ಹೊರ ಬೀಳಲಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪೊಲೀಸ್‌ ಹಾಗೂ ಮಹಿಳಾ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...