Homeಮುಖಪುಟನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

ನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

- Advertisement -
- Advertisement -

ಅಯೋಧ್ಯೆ ತೀರ್ಪಿನ ನಂತರ ನಾಳೆ ಮತ್ತೊಂದು ಮಹತ್ವದ ತೀರ್ಪು ನೀಡಲಿದೆ ಸುಪ್ರೀಂಕೋರ್ಟ್‌. ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಮರುಪರಿಶೀಲನೆ ಅರ್ಜಿ ತೀರ್ಪು ಹೊರ ಬೀಳಲಿದೆ. ಮಂಡಲ ಮಕರವಿಳಕ್ಕುಂ ಋತುಮಾನ ನ. 16 ರಂದು ಆರಂಭವಾಗಲಿದೆ. ಹೀಗಾಗಿ ತೀರ್ಪು ಹೆಚ್ಚಿನ ಮಹತ್ವ ಪಡೆದಿದೆ. ಅಲ್ಲದೇ ಎಡಪಂಥೀಯ ಸರ್ಕಾರವಿರುವ ರಾಜ್ಯದಲ್ಲಿ ಹಲವು ರಾಜಕೀಯ ಬೆಳವಣಿಗೆಗೂ ಇದು ಕಾರಣವಾಗಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ರೋಹಿಂಟನ್‌ ನಾರಿಮನ್‌, ಡಿ.ವೈ.ಚಂದ್ರಚೂಡ್ ಹಾಗೂ ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ನ್ಯಾಯಪೀಠ ತೀರ್ಪು ಪ್ರಕಟಿಸಲಿದೆ.

ಇನ್ನು ೨೦೧೮ರ ಸೆಪ್ಟಂಬರ್‌ ೨೮ರಂದು ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಕೋರ್ಟ್‌ ತೀರ್ಪು ನೀಡುತ್ತಿದ್ದಂತೆ ಹಲವು ಮಹಿಳೆಯರು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ದೇವಾಲಯಕ್ಕೆ ತೆರಳುವ ಹಾದಿಯಲ್ಲಿ ಮಹಿಳೆಯರನ್ನು ತಡೆದು, ಬೇರೆ ಮಾರ್ಗದ ಮೂಲಕ ಸಂಚರಿಸುವಂತೆ ಒತ್ತಡ ಹೇರಲಾಗಿತ್ತು. ಮಂಡಲದ ಅವಧಿಯುದ್ದಕ್ಕೂ ಘರ್ಷಣೆ, ಉದ್ವಿಗ್ನತೆಗೆ ಶಬರಿಮಲೆ ಸಾಕ್ಷಿಯಾಗಿತ್ತು.

ಸುಪ್ರೀಂಕೋರ್ಟ್‌ ತೀರ್ಪು ವಿರೋಧಿಸಿ, ಹಲವು ಪ್ರತಿಭಟನೆಗಳು ನಡೆದಿದ್ದವು. ಅಲ್ಲದೇ ಇದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ, ಹಿಂದೂಗಳ ಸಂಪ್ರದಾಯ, ಪರಂಪರೆ, ಪದ್ಧತಿಗೆ ಮಾಡಿದ ಅವಮಾನ ಎಂದು ಹಲವು ಹಿಂದೂ ಪರ ಸಂಘಟನೆಗಳು, ಶಬರಿಮಲೆ ದೇಗುಲ ಟ್ರಸ್ಟಿಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಮತ್ತು ರ್ಯಾಲಿ ನಡೆದಿತ್ತು. ಅದಾದ ನಂತರ ಸುಪ್ರೀಂ ತೀರ್ಪು ಮರು ಪರಿಶೀಲನೆ ನಡೆಸುವಂತೆ ಹಲವು ಅರ್ಜಿಗಳು ಸುಪ್ರೀಂ ಮೆಟ್ಟಿಲೇರಿದ್ದವು. ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌ ನಾಳೆ ( ನವೆಂಬರ್‌ ೧೪) ಮಹತ್ವದ ತೀರ್ಪು ನೀಡಲಿದೆ.

ಶಬರಿಮಲೆ ಸುಮಾರು ೮೦೦ ವರ್ಷಗಳಷ್ಟು ಹಳೆಯದ್ದಾಗಿದೆ. ಮಹಿಳೆಯರ ದೇಗುಲ ಪ್ರವೇಶ ತೀರ್ಪು ದಶಕಗಳಷ್ಟು ಹಳೆಯದ್ದು. ಈಗ ಅಯೋಧ್ಯೆ ತೀರ್ಪು ಒಪ್ಪಿಕೊಂಡಿರುವಂತೆ ಎಲ್ಲರೂ ಶಬರಿಮಲೆ ತೀರ್ಪನ್ನೂ ಸಹ ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಮತ್ತು ದೇವಸ್ವಂ ಕಡಕಂಪಲ್ಲಿ ಸುರೇಂದ್ರನ್‌ ಮನವಿ ಮಾಡಿದ್ದಾರೆ. ಎಲ್ಲರೂ ತೀರ್ಪನ್ನು ಶಾಂತವಾಗಿ ಒಪ್ಪಿಕೊಳ್ಳಬೇಕು. ಸುಪ್ರೀಂ ತೀರ್ಪಿನ ಪ್ರಕಾರ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ದೇವಸ್ವಂ ಮಂಡಳಿಯ ಅಧ್ಯಕ್ಷ ಎ. ಪದ್ಮಕುಮಾರ್ ಹೇಳಿದ್ದಾರೆ.

ನಾಳೆ ತೀರ್ಪು ಹೊರ ಬೀಳಲಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪೊಲೀಸ್‌ ಹಾಗೂ ಮಹಿಳಾ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...