Homeಮುಖಪುಟನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

ನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

- Advertisement -
- Advertisement -

ಅಯೋಧ್ಯೆ ತೀರ್ಪಿನ ನಂತರ ನಾಳೆ ಮತ್ತೊಂದು ಮಹತ್ವದ ತೀರ್ಪು ನೀಡಲಿದೆ ಸುಪ್ರೀಂಕೋರ್ಟ್‌. ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಮರುಪರಿಶೀಲನೆ ಅರ್ಜಿ ತೀರ್ಪು ಹೊರ ಬೀಳಲಿದೆ. ಮಂಡಲ ಮಕರವಿಳಕ್ಕುಂ ಋತುಮಾನ ನ. 16 ರಂದು ಆರಂಭವಾಗಲಿದೆ. ಹೀಗಾಗಿ ತೀರ್ಪು ಹೆಚ್ಚಿನ ಮಹತ್ವ ಪಡೆದಿದೆ. ಅಲ್ಲದೇ ಎಡಪಂಥೀಯ ಸರ್ಕಾರವಿರುವ ರಾಜ್ಯದಲ್ಲಿ ಹಲವು ರಾಜಕೀಯ ಬೆಳವಣಿಗೆಗೂ ಇದು ಕಾರಣವಾಗಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ರೋಹಿಂಟನ್‌ ನಾರಿಮನ್‌, ಡಿ.ವೈ.ಚಂದ್ರಚೂಡ್ ಹಾಗೂ ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ನ್ಯಾಯಪೀಠ ತೀರ್ಪು ಪ್ರಕಟಿಸಲಿದೆ.

ಇನ್ನು ೨೦೧೮ರ ಸೆಪ್ಟಂಬರ್‌ ೨೮ರಂದು ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಕೋರ್ಟ್‌ ತೀರ್ಪು ನೀಡುತ್ತಿದ್ದಂತೆ ಹಲವು ಮಹಿಳೆಯರು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ದೇವಾಲಯಕ್ಕೆ ತೆರಳುವ ಹಾದಿಯಲ್ಲಿ ಮಹಿಳೆಯರನ್ನು ತಡೆದು, ಬೇರೆ ಮಾರ್ಗದ ಮೂಲಕ ಸಂಚರಿಸುವಂತೆ ಒತ್ತಡ ಹೇರಲಾಗಿತ್ತು. ಮಂಡಲದ ಅವಧಿಯುದ್ದಕ್ಕೂ ಘರ್ಷಣೆ, ಉದ್ವಿಗ್ನತೆಗೆ ಶಬರಿಮಲೆ ಸಾಕ್ಷಿಯಾಗಿತ್ತು.

ಸುಪ್ರೀಂಕೋರ್ಟ್‌ ತೀರ್ಪು ವಿರೋಧಿಸಿ, ಹಲವು ಪ್ರತಿಭಟನೆಗಳು ನಡೆದಿದ್ದವು. ಅಲ್ಲದೇ ಇದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ, ಹಿಂದೂಗಳ ಸಂಪ್ರದಾಯ, ಪರಂಪರೆ, ಪದ್ಧತಿಗೆ ಮಾಡಿದ ಅವಮಾನ ಎಂದು ಹಲವು ಹಿಂದೂ ಪರ ಸಂಘಟನೆಗಳು, ಶಬರಿಮಲೆ ದೇಗುಲ ಟ್ರಸ್ಟಿಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಮತ್ತು ರ್ಯಾಲಿ ನಡೆದಿತ್ತು. ಅದಾದ ನಂತರ ಸುಪ್ರೀಂ ತೀರ್ಪು ಮರು ಪರಿಶೀಲನೆ ನಡೆಸುವಂತೆ ಹಲವು ಅರ್ಜಿಗಳು ಸುಪ್ರೀಂ ಮೆಟ್ಟಿಲೇರಿದ್ದವು. ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌ ನಾಳೆ ( ನವೆಂಬರ್‌ ೧೪) ಮಹತ್ವದ ತೀರ್ಪು ನೀಡಲಿದೆ.

ಶಬರಿಮಲೆ ಸುಮಾರು ೮೦೦ ವರ್ಷಗಳಷ್ಟು ಹಳೆಯದ್ದಾಗಿದೆ. ಮಹಿಳೆಯರ ದೇಗುಲ ಪ್ರವೇಶ ತೀರ್ಪು ದಶಕಗಳಷ್ಟು ಹಳೆಯದ್ದು. ಈಗ ಅಯೋಧ್ಯೆ ತೀರ್ಪು ಒಪ್ಪಿಕೊಂಡಿರುವಂತೆ ಎಲ್ಲರೂ ಶಬರಿಮಲೆ ತೀರ್ಪನ್ನೂ ಸಹ ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಮತ್ತು ದೇವಸ್ವಂ ಕಡಕಂಪಲ್ಲಿ ಸುರೇಂದ್ರನ್‌ ಮನವಿ ಮಾಡಿದ್ದಾರೆ. ಎಲ್ಲರೂ ತೀರ್ಪನ್ನು ಶಾಂತವಾಗಿ ಒಪ್ಪಿಕೊಳ್ಳಬೇಕು. ಸುಪ್ರೀಂ ತೀರ್ಪಿನ ಪ್ರಕಾರ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ದೇವಸ್ವಂ ಮಂಡಳಿಯ ಅಧ್ಯಕ್ಷ ಎ. ಪದ್ಮಕುಮಾರ್ ಹೇಳಿದ್ದಾರೆ.

ನಾಳೆ ತೀರ್ಪು ಹೊರ ಬೀಳಲಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪೊಲೀಸ್‌ ಹಾಗೂ ಮಹಿಳಾ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...