Homeಮುಖಪುಟನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

ನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

- Advertisement -
- Advertisement -

ಅಯೋಧ್ಯೆ ತೀರ್ಪಿನ ನಂತರ ನಾಳೆ ಮತ್ತೊಂದು ಮಹತ್ವದ ತೀರ್ಪು ನೀಡಲಿದೆ ಸುಪ್ರೀಂಕೋರ್ಟ್‌. ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಮರುಪರಿಶೀಲನೆ ಅರ್ಜಿ ತೀರ್ಪು ಹೊರ ಬೀಳಲಿದೆ. ಮಂಡಲ ಮಕರವಿಳಕ್ಕುಂ ಋತುಮಾನ ನ. 16 ರಂದು ಆರಂಭವಾಗಲಿದೆ. ಹೀಗಾಗಿ ತೀರ್ಪು ಹೆಚ್ಚಿನ ಮಹತ್ವ ಪಡೆದಿದೆ. ಅಲ್ಲದೇ ಎಡಪಂಥೀಯ ಸರ್ಕಾರವಿರುವ ರಾಜ್ಯದಲ್ಲಿ ಹಲವು ರಾಜಕೀಯ ಬೆಳವಣಿಗೆಗೂ ಇದು ಕಾರಣವಾಗಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ರೋಹಿಂಟನ್‌ ನಾರಿಮನ್‌, ಡಿ.ವೈ.ಚಂದ್ರಚೂಡ್ ಹಾಗೂ ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ನ್ಯಾಯಪೀಠ ತೀರ್ಪು ಪ್ರಕಟಿಸಲಿದೆ.

ಇನ್ನು ೨೦೧೮ರ ಸೆಪ್ಟಂಬರ್‌ ೨೮ರಂದು ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಕೋರ್ಟ್‌ ತೀರ್ಪು ನೀಡುತ್ತಿದ್ದಂತೆ ಹಲವು ಮಹಿಳೆಯರು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ದೇವಾಲಯಕ್ಕೆ ತೆರಳುವ ಹಾದಿಯಲ್ಲಿ ಮಹಿಳೆಯರನ್ನು ತಡೆದು, ಬೇರೆ ಮಾರ್ಗದ ಮೂಲಕ ಸಂಚರಿಸುವಂತೆ ಒತ್ತಡ ಹೇರಲಾಗಿತ್ತು. ಮಂಡಲದ ಅವಧಿಯುದ್ದಕ್ಕೂ ಘರ್ಷಣೆ, ಉದ್ವಿಗ್ನತೆಗೆ ಶಬರಿಮಲೆ ಸಾಕ್ಷಿಯಾಗಿತ್ತು.

ಸುಪ್ರೀಂಕೋರ್ಟ್‌ ತೀರ್ಪು ವಿರೋಧಿಸಿ, ಹಲವು ಪ್ರತಿಭಟನೆಗಳು ನಡೆದಿದ್ದವು. ಅಲ್ಲದೇ ಇದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ, ಹಿಂದೂಗಳ ಸಂಪ್ರದಾಯ, ಪರಂಪರೆ, ಪದ್ಧತಿಗೆ ಮಾಡಿದ ಅವಮಾನ ಎಂದು ಹಲವು ಹಿಂದೂ ಪರ ಸಂಘಟನೆಗಳು, ಶಬರಿಮಲೆ ದೇಗುಲ ಟ್ರಸ್ಟಿಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಮತ್ತು ರ್ಯಾಲಿ ನಡೆದಿತ್ತು. ಅದಾದ ನಂತರ ಸುಪ್ರೀಂ ತೀರ್ಪು ಮರು ಪರಿಶೀಲನೆ ನಡೆಸುವಂತೆ ಹಲವು ಅರ್ಜಿಗಳು ಸುಪ್ರೀಂ ಮೆಟ್ಟಿಲೇರಿದ್ದವು. ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌ ನಾಳೆ ( ನವೆಂಬರ್‌ ೧೪) ಮಹತ್ವದ ತೀರ್ಪು ನೀಡಲಿದೆ.

ಶಬರಿಮಲೆ ಸುಮಾರು ೮೦೦ ವರ್ಷಗಳಷ್ಟು ಹಳೆಯದ್ದಾಗಿದೆ. ಮಹಿಳೆಯರ ದೇಗುಲ ಪ್ರವೇಶ ತೀರ್ಪು ದಶಕಗಳಷ್ಟು ಹಳೆಯದ್ದು. ಈಗ ಅಯೋಧ್ಯೆ ತೀರ್ಪು ಒಪ್ಪಿಕೊಂಡಿರುವಂತೆ ಎಲ್ಲರೂ ಶಬರಿಮಲೆ ತೀರ್ಪನ್ನೂ ಸಹ ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಮತ್ತು ದೇವಸ್ವಂ ಕಡಕಂಪಲ್ಲಿ ಸುರೇಂದ್ರನ್‌ ಮನವಿ ಮಾಡಿದ್ದಾರೆ. ಎಲ್ಲರೂ ತೀರ್ಪನ್ನು ಶಾಂತವಾಗಿ ಒಪ್ಪಿಕೊಳ್ಳಬೇಕು. ಸುಪ್ರೀಂ ತೀರ್ಪಿನ ಪ್ರಕಾರ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ದೇವಸ್ವಂ ಮಂಡಳಿಯ ಅಧ್ಯಕ್ಷ ಎ. ಪದ್ಮಕುಮಾರ್ ಹೇಳಿದ್ದಾರೆ.

ನಾಳೆ ತೀರ್ಪು ಹೊರ ಬೀಳಲಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪೊಲೀಸ್‌ ಹಾಗೂ ಮಹಿಳಾ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...