Homeಮುಖಪುಟಇದ್ಯಾವ ಸೀಮೆ ಅರ್ಜಿ? 370ನೇ ವಿಧಿ ರದ್ದು ವಿರೋಧಿಸಿ RSS ವಕೀಲ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ...

ಇದ್ಯಾವ ಸೀಮೆ ಅರ್ಜಿ? 370ನೇ ವಿಧಿ ರದ್ದು ವಿರೋಧಿಸಿ RSS ವಕೀಲ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ತಪರಾಕಿ

- Advertisement -
- Advertisement -

370 ನೇ ವಿಧಿ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಆರ್.ಎಸ್.ಎಸ್ ನಿಕಟವರ್ತಿ ವಕೀಲ ಮನೋಹರಲಾಲ್ ಶರ್ಮಾಗೆ “ಯಾವ ರೀತಿಯ ಅರ್ಜಿ ಇದು” ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ತರಾಟೆಗೆ ತೆಗೆದುಕೊಂಡಿದ್ದಾರೆ.

370 ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ಧುಗೊಳಿಸಿರುವ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗಿತ್ತಿಕೊಂಡಿದೆ. ಮೊದಲೇ ಸಲ್ಲಿಸಿದ್ದ ಶರ್ಮಾ ಅರ್ಜಿಯನ್ನು ನೋಡಿದ ಮುಖ್ಯ ನ್ಯಾಯಮೂರ್ತಿಗಳು ‘ಈ ಅರ್ಜಿಗೆ ಯಾವುದೇ ಅರ್ಥವಿಲ್ಲ; ಎಂದು ಹೇಳಿದ್ದಾರೆ.

ವಕೀಲ ಮನೋಹರಲಾಲ್ ಶರ್ಮಾ ಉಳಿದ ಅರ್ಜಿಗಳನ್ನು ಸಹ ಗಂಭೀರವಾಗಿ ಪರಿಗಣಿಸದಂತೆ ಮಾಡಲು ಬೇಕಂತಲೇ ಈ ಅರ್ಜಿ ಸಲ್ಲಿಸಿದ್ದಾರೆ ಎಂದು ಹಲವರು ಆರೋಪ ಮಾಡಿದ್ದರು. ಏಕೆಂದರೆ ಈತ ಸರ್ಕಾರದ ನಿರ್ಧಾರದ ಪರವಾಗಿದ್ದರೂ ಸಹ ವಿಷಯಾಂತರ ಮಾಡಲು ಸುಮ್ಮನೆ ತಾನೇ ಮೊದಲಾಗಿ ಅದನ್ನು ವಿರೋಧಿಸುವ ರೀತಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಲೈವ್ ಲಾ ದಲ್ಲಿ ಕೆಲವರು ದೂರಿದ್ದರು.

ಇದನ್ನು ಓದಿ: 370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ ಹೊಸ ನಾಟಕ

“ಇದು ಯಾವ ರೀತಿಯ ಅರ್ಜಿಯಾಗಿದೆ? ನೀವು ಏನು ಸವಾಲು ಮಾಡುತ್ತಿದ್ದೀರಿ, ನಿಮ್ಮ ಮನವಿಗಳು ಯಾವುವು” ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಶರ್ಮಾ ಅವರನ್ನು ಕೇಳಿದ್ದಾರೆ. ಅಲ್ಲದೇ “ನಾನು ನಿಮ್ಮ ಅರ್ಜಿಯನ್ನು ಅರ್ಧ ಘಂಟೆ ಓದಿದ್ದೇನೆ. ನನಗೆ ಅದು ಅರ್ಥವಾಗಲಿಲ್ಲ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಆರ್ಟಿಕಲ್ 370 ರದ್ದತಿಯ ಕುರಿತು ಇತರ ಏಳು ಅರ್ಜಿಗಳಿವೆ. “ಈ ರೀತಿಯ ವಿಷಯದಲ್ಲಿ ನೀವು ದೋಷಯುಕ್ತ ಅರ್ಜಿಯನ್ನು ಏಕೆ ಸಲ್ಲಿಸಿದ್ದೀರಿ? ಆರು ಅರ್ಜಿಗಳಿವೆ ಎಂದು ರಿಜಿಸ್ಟ್ರಾರ್ ಹೇಳುತ್ತಾರೆ. ನಿಮ್ಮಿಂದಾಗಿ ಜನರು ಈ ರೀತಿಯ ದೋಷಯುಕ್ತ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ.” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಮತ್ತು ಅರ್ಜಿದಾರ ಮನೋಹರಲಾಲ್ ಶರ್ಮಾರವರು ಮತ್ತೆ ತಿದ್ದುಪಡಿ ಮಾಡಿದ ಅರ್ಜಿಯನ್ನು ಸಲ್ಲಿಸುವುದಾಗಿ ಹೇಳಿದ್ದಾರೆ. ಮನೋಹರ್ ಲಾಲ್ ಶರ್ಮಾ ದೆಹಲಿ ಅತ್ಯಾಚಾರ ಪ್ರಕರಣದಲ್ಲಿಯೂ ಸಹ ಅತ್ಯಾಚಾರಿ ಆರೋಪಿಗಳ ಪರವಾಗಿ ವಾದಿಸಿದ್ದರು ಎಂಬುದನ್ನು ಇಲ್ಲಿ ಗಮನಿಸಬೇಕಾಗಿದೆ.

ಇದೇ ಸಂದರ್ಭದಲ್ಲಿ ಮಾಧ್ಯಮಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವಂತೆ ಕೋರಿ ಕಾಶ್ಮೀರ ಟೈಮ್ಸ್ ಸಂಪಾದಕರಾದ ಭಾಸಿಯಾ  ರವರು ಸಲ್ಲಿಸಿರುವ ಮತ್ತೊಂದು ಅರ್ಜಿಯನ್ನು ವಿಚಾರಣೆ ನಡೆಸಬೇಕಿದೆ. ವಿಚಾರಣೆಯನ್ನು ಮುಂದೂಡಿದ ಮುಖ್ಯ ನ್ಯಾಯಮೂರ್ತಿ, ಮಾಧ್ಯಮ ನಿರ್ಬಂಧಗಳ ಕುರಿತು ಅರ್ಜಿಯನ್ನು ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ ಮತ್ತು “ಈ ವಿಷಯಕ್ಕೆ ಸ್ವಲ್ಪ ಹೆಚ್ಚು ಸಮಯವನ್ನು ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ “ಕಾಶ್ಮೀರ ಟೈಮ್ಸ್ ಪತ್ರಿಕೆಯನ್ನು ಜಮ್ಮುವಿನಿಂದ ಮಾತ್ರ ಪ್ರಕಟಿಸಲಾಗಿದೆ. ನಾವು ಶ್ರೀನಗರದಿಂದ ಪ್ರಕಟಿಸಲಾಗುತ್ತಿಲ್ಲ. ದಿನದಿಂದ ದಿನಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಮತ್ತು ನಿರ್ಬಂಧಗಳನ್ನು ಕ್ರಮೇಣ ತೆಗೆದುಹಾಕಲಾಗುತ್ತಿದೆ.” ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ನಿರ್ಬಂಧಗಳನ್ನು ತೆಗೆದುಹಾಕಬೇಕೆಂದು ವಾದಿಸುತ್ತಿರುವ ವಕೀಲ ವೃಂದಾ ಗ್ರೋವರ್ “ಏನಾಗುತ್ತಿದೆ ಎಂಬುದರ ಬಗ್ಗೆ ಮಾಧ್ಯಮಗಳ ಮೂಲಕ ಜನರಿಗೆ ತಿಳಿಸಬೇಕಿದೆ. ಆಗ ಮಾತ್ರ ಪತ್ರಿಕೆ ಜನರಿಗೆ ಸಹಾಯ ಮಾಡಿದಂತಾಗುತ್ತದೆ. ಫೋನ್ ಮತ್ತು ಇಂಟರ್ ನೆಟ್ ಯಾವಾಗಿನಿಂದ ಕಾರ್ಯನಿರ್ವಹಿಸುತ್ತವೆ” ಎಂದು ಕೇಳಿದ್ದಾರೆ.

“ಇಂದು ಸಂಜೆ ಫೋನ್ ಸಂಪರ್ಕಗಳನ್ನು ಪುನಃಸ್ಥಾಪಿಸಲಾಗುವುದು ಎಂದು ಮಾಧ್ಯಮಗಳು ಹೇಳುತ್ತಿವೆ ಕಾಯಿರಿ.” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...