Homeಮುಖಪುಟಇದ್ಯಾವ ಸೀಮೆ ಅರ್ಜಿ? 370ನೇ ವಿಧಿ ರದ್ದು ವಿರೋಧಿಸಿ RSS ವಕೀಲ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ...

ಇದ್ಯಾವ ಸೀಮೆ ಅರ್ಜಿ? 370ನೇ ವಿಧಿ ರದ್ದು ವಿರೋಧಿಸಿ RSS ವಕೀಲ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ತಪರಾಕಿ

- Advertisement -
- Advertisement -

370 ನೇ ವಿಧಿ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಆರ್.ಎಸ್.ಎಸ್ ನಿಕಟವರ್ತಿ ವಕೀಲ ಮನೋಹರಲಾಲ್ ಶರ್ಮಾಗೆ “ಯಾವ ರೀತಿಯ ಅರ್ಜಿ ಇದು” ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ತರಾಟೆಗೆ ತೆಗೆದುಕೊಂಡಿದ್ದಾರೆ.

370 ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ಧುಗೊಳಿಸಿರುವ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗಿತ್ತಿಕೊಂಡಿದೆ. ಮೊದಲೇ ಸಲ್ಲಿಸಿದ್ದ ಶರ್ಮಾ ಅರ್ಜಿಯನ್ನು ನೋಡಿದ ಮುಖ್ಯ ನ್ಯಾಯಮೂರ್ತಿಗಳು ‘ಈ ಅರ್ಜಿಗೆ ಯಾವುದೇ ಅರ್ಥವಿಲ್ಲ; ಎಂದು ಹೇಳಿದ್ದಾರೆ.

ವಕೀಲ ಮನೋಹರಲಾಲ್ ಶರ್ಮಾ ಉಳಿದ ಅರ್ಜಿಗಳನ್ನು ಸಹ ಗಂಭೀರವಾಗಿ ಪರಿಗಣಿಸದಂತೆ ಮಾಡಲು ಬೇಕಂತಲೇ ಈ ಅರ್ಜಿ ಸಲ್ಲಿಸಿದ್ದಾರೆ ಎಂದು ಹಲವರು ಆರೋಪ ಮಾಡಿದ್ದರು. ಏಕೆಂದರೆ ಈತ ಸರ್ಕಾರದ ನಿರ್ಧಾರದ ಪರವಾಗಿದ್ದರೂ ಸಹ ವಿಷಯಾಂತರ ಮಾಡಲು ಸುಮ್ಮನೆ ತಾನೇ ಮೊದಲಾಗಿ ಅದನ್ನು ವಿರೋಧಿಸುವ ರೀತಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಲೈವ್ ಲಾ ದಲ್ಲಿ ಕೆಲವರು ದೂರಿದ್ದರು.

ಇದನ್ನು ಓದಿ: 370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ ಹೊಸ ನಾಟಕ

“ಇದು ಯಾವ ರೀತಿಯ ಅರ್ಜಿಯಾಗಿದೆ? ನೀವು ಏನು ಸವಾಲು ಮಾಡುತ್ತಿದ್ದೀರಿ, ನಿಮ್ಮ ಮನವಿಗಳು ಯಾವುವು” ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಶರ್ಮಾ ಅವರನ್ನು ಕೇಳಿದ್ದಾರೆ. ಅಲ್ಲದೇ “ನಾನು ನಿಮ್ಮ ಅರ್ಜಿಯನ್ನು ಅರ್ಧ ಘಂಟೆ ಓದಿದ್ದೇನೆ. ನನಗೆ ಅದು ಅರ್ಥವಾಗಲಿಲ್ಲ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಆರ್ಟಿಕಲ್ 370 ರದ್ದತಿಯ ಕುರಿತು ಇತರ ಏಳು ಅರ್ಜಿಗಳಿವೆ. “ಈ ರೀತಿಯ ವಿಷಯದಲ್ಲಿ ನೀವು ದೋಷಯುಕ್ತ ಅರ್ಜಿಯನ್ನು ಏಕೆ ಸಲ್ಲಿಸಿದ್ದೀರಿ? ಆರು ಅರ್ಜಿಗಳಿವೆ ಎಂದು ರಿಜಿಸ್ಟ್ರಾರ್ ಹೇಳುತ್ತಾರೆ. ನಿಮ್ಮಿಂದಾಗಿ ಜನರು ಈ ರೀತಿಯ ದೋಷಯುಕ್ತ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ.” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಮತ್ತು ಅರ್ಜಿದಾರ ಮನೋಹರಲಾಲ್ ಶರ್ಮಾರವರು ಮತ್ತೆ ತಿದ್ದುಪಡಿ ಮಾಡಿದ ಅರ್ಜಿಯನ್ನು ಸಲ್ಲಿಸುವುದಾಗಿ ಹೇಳಿದ್ದಾರೆ. ಮನೋಹರ್ ಲಾಲ್ ಶರ್ಮಾ ದೆಹಲಿ ಅತ್ಯಾಚಾರ ಪ್ರಕರಣದಲ್ಲಿಯೂ ಸಹ ಅತ್ಯಾಚಾರಿ ಆರೋಪಿಗಳ ಪರವಾಗಿ ವಾದಿಸಿದ್ದರು ಎಂಬುದನ್ನು ಇಲ್ಲಿ ಗಮನಿಸಬೇಕಾಗಿದೆ.

ಇದೇ ಸಂದರ್ಭದಲ್ಲಿ ಮಾಧ್ಯಮಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವಂತೆ ಕೋರಿ ಕಾಶ್ಮೀರ ಟೈಮ್ಸ್ ಸಂಪಾದಕರಾದ ಭಾಸಿಯಾ  ರವರು ಸಲ್ಲಿಸಿರುವ ಮತ್ತೊಂದು ಅರ್ಜಿಯನ್ನು ವಿಚಾರಣೆ ನಡೆಸಬೇಕಿದೆ. ವಿಚಾರಣೆಯನ್ನು ಮುಂದೂಡಿದ ಮುಖ್ಯ ನ್ಯಾಯಮೂರ್ತಿ, ಮಾಧ್ಯಮ ನಿರ್ಬಂಧಗಳ ಕುರಿತು ಅರ್ಜಿಯನ್ನು ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ ಮತ್ತು “ಈ ವಿಷಯಕ್ಕೆ ಸ್ವಲ್ಪ ಹೆಚ್ಚು ಸಮಯವನ್ನು ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ “ಕಾಶ್ಮೀರ ಟೈಮ್ಸ್ ಪತ್ರಿಕೆಯನ್ನು ಜಮ್ಮುವಿನಿಂದ ಮಾತ್ರ ಪ್ರಕಟಿಸಲಾಗಿದೆ. ನಾವು ಶ್ರೀನಗರದಿಂದ ಪ್ರಕಟಿಸಲಾಗುತ್ತಿಲ್ಲ. ದಿನದಿಂದ ದಿನಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಮತ್ತು ನಿರ್ಬಂಧಗಳನ್ನು ಕ್ರಮೇಣ ತೆಗೆದುಹಾಕಲಾಗುತ್ತಿದೆ.” ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ನಿರ್ಬಂಧಗಳನ್ನು ತೆಗೆದುಹಾಕಬೇಕೆಂದು ವಾದಿಸುತ್ತಿರುವ ವಕೀಲ ವೃಂದಾ ಗ್ರೋವರ್ “ಏನಾಗುತ್ತಿದೆ ಎಂಬುದರ ಬಗ್ಗೆ ಮಾಧ್ಯಮಗಳ ಮೂಲಕ ಜನರಿಗೆ ತಿಳಿಸಬೇಕಿದೆ. ಆಗ ಮಾತ್ರ ಪತ್ರಿಕೆ ಜನರಿಗೆ ಸಹಾಯ ಮಾಡಿದಂತಾಗುತ್ತದೆ. ಫೋನ್ ಮತ್ತು ಇಂಟರ್ ನೆಟ್ ಯಾವಾಗಿನಿಂದ ಕಾರ್ಯನಿರ್ವಹಿಸುತ್ತವೆ” ಎಂದು ಕೇಳಿದ್ದಾರೆ.

“ಇಂದು ಸಂಜೆ ಫೋನ್ ಸಂಪರ್ಕಗಳನ್ನು ಪುನಃಸ್ಥಾಪಿಸಲಾಗುವುದು ಎಂದು ಮಾಧ್ಯಮಗಳು ಹೇಳುತ್ತಿವೆ ಕಾಯಿರಿ.” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...