Homeಮುಖಪುಟ'ಕಣ್ಣು ತೆರೆದ ನ್ಯಾಯ..': ಲೇಡಿ ಜಸ್ಟಿಸ್ ನೂತನ ಪ್ರತಿಮೆ ಅನಾವರಣಗೊಳಿಸಿದ ಸುಪ್ರೀಂ ಕೋರ್ಟ್, ಕತ್ತಿ ಬದಲಿಗೆ...

‘ಕಣ್ಣು ತೆರೆದ ನ್ಯಾಯ..’: ಲೇಡಿ ಜಸ್ಟಿಸ್ ನೂತನ ಪ್ರತಿಮೆ ಅನಾವರಣಗೊಳಿಸಿದ ಸುಪ್ರೀಂ ಕೋರ್ಟ್, ಕತ್ತಿ ಬದಲಿಗೆ ಸಂವಿಧಾನ 

- Advertisement -
- Advertisement -

ನ್ಯಾಯದ ಸಂಕೇತವಾಗಿ ಕೋರ್ಟ್‌ಗಳಲ್ಲಿರುವ ಕಣ್ಣಿಗೆ ಪಟ್ಟಿ ಕಟ್ಟಿದ ‘ಲೇಡಿ ಜಸ್ಟಿಸ್’ ಪ್ರತಿಮೆ ಬಗ್ಗೆ ಬಹುತೇಕ ಗೊತ್ತಿದೆ. ಸಾಮಾನ್ಯವಾಗಿ ನ್ಯಾಯಾಲಯಗಳು, ಚಲನಚಿತ್ರಗಳು ಮತ್ತು ಕಾನೂನು ಕೋಣೆಗಳಲ್ಲಿ ಆ ಪ್ರತಿಮೆಯನ್ನು ಕಣ್ಣುಮುಚ್ಚಿರುವುದನ್ನು ನೋಡಲಾಗುತ್ತದೆ. ಹೊಸ ಭಾರತದಲ್ಲಿ ಈಗ ಅದು ರೂಪಾಂತರಕ್ಕೆ ಒಳಗಾಗಿದೆ. ಸಾಂಕೇತಿಕ ಬದಲಾವಣೆಯಲ್ಲಿ, ಕಣ್ಣಿಗೆ ಬಟ್ಟೆಯನ್ನು ತೆಗೆದುಹಾಕಿ, ಲೇಡಿ ಜಸ್ಟೀಸ್ ಕೈಯಲ್ಲಿದ್ದ ಕತ್ತಿಯನ್ನು ಸಂವಿಧಾನದೊಂದಿಗೆ ಬದಲಾಯಿಸಲಾಗಿದೆ.

ಈ ಬದಲಾವಣೆಯು ದೇಶದಲ್ಲಿ ಇತ್ತೀಚೆಗೆ ನಡೆದ ಬ್ರಿಟಿಷ್ ಕಾಲದ ಕಾನೂನುಗಳ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಎನ್ನಲಾಗುತ್ತಿದೆ. ಏಕೆಂದರೆ, ಭಾರತೀಯ ನ್ಯಾಯಾಂಗವು ಹೊಸ ಗುರುತನ್ನು ಸ್ವೀಕರಿಸುತ್ತಿದೆ.

ಸುಪ್ರೀಂ ಕೋರ್ಟ್‌ನ ಲಾಂಛನವನ್ನು ನವೀಕರಿಸಿರುವುದು ಮಾತ್ರವಲ್ಲದೆ, ‘ಲೇಡಿ ಜಸ್ಟೀಸ್’ ಎಂಬ ಐಕಾನಿಕ್‌ನ ಕಣ್ಣು ಪಟ್ಟಿಯನ್ನೂ ತೆಗೆಯಲಾಗಿದೆ. ‘ಕಾನೂನು ಇನ್ನು ಮುಂದೆ ಕುರುಡಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ಸುಪ್ರೀಂ ಕೋರ್ಟ್ ರವಾನಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ಕ್ರಮವನ್ನು ಮುನ್ನಡೆಸಿದ್ದಾರೆ. ಭಾರತೀಯ ನ್ಯಾಯದ ವಿಕಾಸದ ಸ್ವರೂಪವನ್ನು ಒತ್ತಿಹೇಳಿದ್ದು, ಹೊಸ ಪ್ರತಿಮೆಯನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ಸ್ಥಾಪಿಸಲಾಗಿದೆ.

ಖಡ್ಗದ ಬದಲಿಗೆ ಸಂವಿಧಾನ

ಹಿಂದಿನ ಪ್ರತಿಮೆಯಲ್ಲಿ, ‘ಲೇಡಿ ಜಸ್ಟೀಸ್’ ಒಂದು ಕೈಯಲ್ಲಿ ಶಿಕ್ಷೆಯ ಸಂಕೇತವಾಗಿ ಕತ್ತಿಯನ್ನು ಹಿಡಿದಿದ್ದರೆ, ಇನ್ನೊಂದು ಕೈಯಲ್ಲಿ ನ್ಯಾಯವನ್ನು ಪ್ರತಿನಿಧಿಸುವ ತಕ್ಕಡಿಗಳನ್ನು ಹಿಡಿದಿದ್ದರು. ಹೊಸ ಪ್ರತಿಮೆಯಲ್ಲಿ, ಕತ್ತಿಯನ್ನು ಸಂವಿಧಾನದಿಂದ ಬದಲಾಯಿಸಲಾಗಿದೆ. ಆದರೆ, ತಕ್ಕಡಿ ಬದಲಾಗದೆ ಉಳಿದಿದೆ. ಎಲ್ಲರಿಗೂ ಸಮಾನತೆಯನ್ನು ಖಾತ್ರಿಪಡಿಸುವ ಸಂವಿಧಾನದ ಪ್ರಕಾರ ಭಾರತದಲ್ಲಿ ನ್ಯಾಯವನ್ನು ವಿತರಿಸಲಾಗಿದೆ ಎಂಬುದನ್ನು ಈ ಬದಲಾವಣೆಯು ಸಂಕೇತಿಸುತ್ತದೆ.

ಇದನ್ನೂ ಓದಿ; ಪಂಜಾಬ್‌ | ನಡೆಯುತ್ತಿರುವ ಪಂಚಾಯತ್ ಚುನಾವಣೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...