Homeಮುಖಪುಟಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ...

ಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016 ರಲ್ಲಿ ನೇಮಕ ಮಾಡಿದ್ದ ಸುಮಾರು 25,000 ( 25,753) ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ ಅಮಾನ್ಯಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು (ಏಪ್ರಿಲ್ 3) ಎತ್ತಿಹಿಡಿದಿದೆ.

“ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ವಂಚನೆಯಿಂದ ಕೂಡಿದ್ದು, ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ” ಎಂಬ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

ಶಾಲೆಗಳಲ್ಲಿನ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ.

“ಇಡೀ ನೇಮಕಾತಿ ಪ್ರಕ್ರಿಯೆ ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ. ನೇಮಕಾತಿಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದೆ. ಅದನ್ನು ಮುಚ್ಚಿ ಹಾಕಲು ಇಡೀ ಆಯ್ಕೆ ಪ್ರಕ್ರಿಯೆಯನ್ನು ಹಾಳುಗೆಡವಲಾಗಿದೆ. ಆಯ್ಕೆ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ನಗ್ನಗೊಳಿಸಿದೆ” ಎಂದು ತೀರ್ಪು ಪ್ರಕಟಿಸುತ್ತಾ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ.

“ತಪ್ಪಿತಸ್ಥ ಅಭ್ಯರ್ಥಿಗಳ ನೇಮಕಾತಿ ರದ್ದುಮಾಡಿ, ಅವರನ್ನು ಪಡೆದಿರುವ ಸಂಬಳವನ್ನು ವಾಪಸ್ ಪಡೆದುಕೊಳ್ಳಬೇಕು ಎಂಬ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಸೂಕ್ತ ಕಾರಣ ಕಾಣುತ್ತಿಲ್ಲ. ನೇಮಕಾತಿ ವಂಚನೆಯಿಂದ ಕೂಡಿರುವುದರಿಂದ ಅದನ್ನು ಸಮರ್ಥಿಸುವ ಅಗತ್ಯತೆ ಇಲ್ಲ” ಎಂದಿದ್ದಾರೆ.

“ಸಂವಿಧಾನದ 14 ಮತ್ತು 16 ನೇ ವಿಧಿಯನ್ನು ಉಲ್ಲಂಘಿಸಿದ ಮತ್ತು ಅಕ್ರಮಗಳ ಕಾರಣ ನಿರ್ದಿಷ್ಟವಾಗಿ ಕಳಂಕಿತ ಅಭ್ಯರ್ಥಿಗಳ ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ಅನೂರ್ಜಿತವೆಂದು ಘೋಷಿಸಲಾಗಿದೆ. ಹೀಗಾಗಿ, ಈ ಅಭ್ಯರ್ಥಿಗಳ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಅದಾಗ್ಯೂ, ಈಗಾಗಲೇ ನೇಮಕಗೊಂಡ ಅಭ್ಯರ್ಥಿಗಳಿಗೆ ಇದುವರೆಗೆ ಪಾವತಿಸಿದ ಸಂಬಳವನ್ನು ವಾಪಸ್ ಪಡೆಯುವ ಅಗತ್ಯವಿಲ್ಲ. ಆದರೆ, ಅಭ್ಯರ್ಥಿಗಳ ವಜಾ ಬಳಿಕ, ಆ ಹುದ್ದೆಯನ್ನು ಖಾಲಿ ಹುದ್ದೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

ಹೊಸ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿ ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ಮತ್ತು ಹೊಸ ಪ್ರಕ್ರಿಯೆಯಲ್ಲಿ ಕಳಂಕರಹಿತ ಅಭ್ಯರ್ಥಿಗಳಿಗೆ ಸಡಿಲಿಕೆ ನೀಡಬಹುದು ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ನಿರ್ದೇಶಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿರುವ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 4 ರಂದು ನಡೆಸಲು ನ್ಯಾಯಪೀಠ ನಿರ್ಧರಿಸಿದೆ.

ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂಬ ಷರತ್ತಿನೊಂದಿಗೆ ಹೈಕೋರ್ಟ್ ಆದೇಶಿಸಿದ ಸಿಬಿಐ ತನಿಖೆಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಅನುಮತಿ ನೀಡಿತ್ತು.

ಏಪ್ರಿಲ್ 22, 2024ರಂದು, ಕಲ್ಕತ್ತಾ ಹೈಕೋರ್ಟ್ ಎಸ್‌ಎಸ್‌ಸಿಯಿಂದ 25,753 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿ, ಅವರು ಪಡೆದಿರುವ ಸಂಬಳವನ್ನು ಬಡ್ಡಿಯೊಂದಿಗೆ ಹಿಂದಿರುಗಿಸುವಂತೆ ಆದೇಶಿಸಿತ್ತು. 15 ದಿನಗಳಲ್ಲಿ ಹುದ್ದೆಗಳಿಗೆ ಹೊಸ ನೇಮಕಾತಿಗೆ ಆದೇಶಿಸಿತ್ತು.

ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ನೇತೃತ್ವದ ಪೀಠವು, 2016 ರಲ್ಲಿ ಗ್ರೂಪ್ ಸಿ, ಗ್ರೂಪ್ ಡಿ, 9 ಮತ್ತು 10 ನೇ ತರಗತಿಗಳ ಒಎಂಆರ್‌ ಶೀಟ್‌ಗಳಲ್ಲಿ ವಂಚನೆ ಮಾಡಲಾಗಿದೆ ಎಂದು ಹೇಳಿತ್ತು. ಎಲ್ಲಾ ನೇಮಕಾತಿಗಳು ಕಾನೂನುಬಾಹಿರ ಎಂದು ಎಂದಿತ್ತು. ನೇಮಕಾತಿ ಮಾಡಿಕೊಂಡವರ ಹೆಸರುಗಳನ್ನೂ ಕಾನೂನುಬಾಹಿರವಾಗಿ ಬೋರ್ಡ್‌ನಲ್ಲಿ ಸೇರಿಸಲಾಗಿದೆ ಎಂದು ಹೇಳಿತ್ತು.

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...