Homeಮುಖಪುಟಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ...

ಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016 ರಲ್ಲಿ ನೇಮಕ ಮಾಡಿದ್ದ ಸುಮಾರು 25,000 ( 25,753) ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ ಅಮಾನ್ಯಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು (ಏಪ್ರಿಲ್ 3) ಎತ್ತಿಹಿಡಿದಿದೆ.

“ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ವಂಚನೆಯಿಂದ ಕೂಡಿದ್ದು, ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ” ಎಂಬ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

ಶಾಲೆಗಳಲ್ಲಿನ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ.

“ಇಡೀ ನೇಮಕಾತಿ ಪ್ರಕ್ರಿಯೆ ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ. ನೇಮಕಾತಿಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದೆ. ಅದನ್ನು ಮುಚ್ಚಿ ಹಾಕಲು ಇಡೀ ಆಯ್ಕೆ ಪ್ರಕ್ರಿಯೆಯನ್ನು ಹಾಳುಗೆಡವಲಾಗಿದೆ. ಆಯ್ಕೆ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ನಗ್ನಗೊಳಿಸಿದೆ” ಎಂದು ತೀರ್ಪು ಪ್ರಕಟಿಸುತ್ತಾ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ.

“ತಪ್ಪಿತಸ್ಥ ಅಭ್ಯರ್ಥಿಗಳ ನೇಮಕಾತಿ ರದ್ದುಮಾಡಿ, ಅವರನ್ನು ಪಡೆದಿರುವ ಸಂಬಳವನ್ನು ವಾಪಸ್ ಪಡೆದುಕೊಳ್ಳಬೇಕು ಎಂಬ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಸೂಕ್ತ ಕಾರಣ ಕಾಣುತ್ತಿಲ್ಲ. ನೇಮಕಾತಿ ವಂಚನೆಯಿಂದ ಕೂಡಿರುವುದರಿಂದ ಅದನ್ನು ಸಮರ್ಥಿಸುವ ಅಗತ್ಯತೆ ಇಲ್ಲ” ಎಂದಿದ್ದಾರೆ.

“ಸಂವಿಧಾನದ 14 ಮತ್ತು 16 ನೇ ವಿಧಿಯನ್ನು ಉಲ್ಲಂಘಿಸಿದ ಮತ್ತು ಅಕ್ರಮಗಳ ಕಾರಣ ನಿರ್ದಿಷ್ಟವಾಗಿ ಕಳಂಕಿತ ಅಭ್ಯರ್ಥಿಗಳ ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ಅನೂರ್ಜಿತವೆಂದು ಘೋಷಿಸಲಾಗಿದೆ. ಹೀಗಾಗಿ, ಈ ಅಭ್ಯರ್ಥಿಗಳ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಅದಾಗ್ಯೂ, ಈಗಾಗಲೇ ನೇಮಕಗೊಂಡ ಅಭ್ಯರ್ಥಿಗಳಿಗೆ ಇದುವರೆಗೆ ಪಾವತಿಸಿದ ಸಂಬಳವನ್ನು ವಾಪಸ್ ಪಡೆಯುವ ಅಗತ್ಯವಿಲ್ಲ. ಆದರೆ, ಅಭ್ಯರ್ಥಿಗಳ ವಜಾ ಬಳಿಕ, ಆ ಹುದ್ದೆಯನ್ನು ಖಾಲಿ ಹುದ್ದೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

ಹೊಸ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿ ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ಮತ್ತು ಹೊಸ ಪ್ರಕ್ರಿಯೆಯಲ್ಲಿ ಕಳಂಕರಹಿತ ಅಭ್ಯರ್ಥಿಗಳಿಗೆ ಸಡಿಲಿಕೆ ನೀಡಬಹುದು ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ನಿರ್ದೇಶಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿರುವ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 4 ರಂದು ನಡೆಸಲು ನ್ಯಾಯಪೀಠ ನಿರ್ಧರಿಸಿದೆ.

ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂಬ ಷರತ್ತಿನೊಂದಿಗೆ ಹೈಕೋರ್ಟ್ ಆದೇಶಿಸಿದ ಸಿಬಿಐ ತನಿಖೆಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಅನುಮತಿ ನೀಡಿತ್ತು.

ಏಪ್ರಿಲ್ 22, 2024ರಂದು, ಕಲ್ಕತ್ತಾ ಹೈಕೋರ್ಟ್ ಎಸ್‌ಎಸ್‌ಸಿಯಿಂದ 25,753 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿ, ಅವರು ಪಡೆದಿರುವ ಸಂಬಳವನ್ನು ಬಡ್ಡಿಯೊಂದಿಗೆ ಹಿಂದಿರುಗಿಸುವಂತೆ ಆದೇಶಿಸಿತ್ತು. 15 ದಿನಗಳಲ್ಲಿ ಹುದ್ದೆಗಳಿಗೆ ಹೊಸ ನೇಮಕಾತಿಗೆ ಆದೇಶಿಸಿತ್ತು.

ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ನೇತೃತ್ವದ ಪೀಠವು, 2016 ರಲ್ಲಿ ಗ್ರೂಪ್ ಸಿ, ಗ್ರೂಪ್ ಡಿ, 9 ಮತ್ತು 10 ನೇ ತರಗತಿಗಳ ಒಎಂಆರ್‌ ಶೀಟ್‌ಗಳಲ್ಲಿ ವಂಚನೆ ಮಾಡಲಾಗಿದೆ ಎಂದು ಹೇಳಿತ್ತು. ಎಲ್ಲಾ ನೇಮಕಾತಿಗಳು ಕಾನೂನುಬಾಹಿರ ಎಂದು ಎಂದಿತ್ತು. ನೇಮಕಾತಿ ಮಾಡಿಕೊಂಡವರ ಹೆಸರುಗಳನ್ನೂ ಕಾನೂನುಬಾಹಿರವಾಗಿ ಬೋರ್ಡ್‌ನಲ್ಲಿ ಸೇರಿಸಲಾಗಿದೆ ಎಂದು ಹೇಳಿತ್ತು.

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...