Homeಮುಖಪುಟಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ...

ಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016 ರಲ್ಲಿ ನೇಮಕ ಮಾಡಿದ್ದ ಸುಮಾರು 25,000 ( 25,753) ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ ಅಮಾನ್ಯಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು (ಏಪ್ರಿಲ್ 3) ಎತ್ತಿಹಿಡಿದಿದೆ.

“ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ವಂಚನೆಯಿಂದ ಕೂಡಿದ್ದು, ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ” ಎಂಬ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

ಶಾಲೆಗಳಲ್ಲಿನ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ.

“ಇಡೀ ನೇಮಕಾತಿ ಪ್ರಕ್ರಿಯೆ ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ. ನೇಮಕಾತಿಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದೆ. ಅದನ್ನು ಮುಚ್ಚಿ ಹಾಕಲು ಇಡೀ ಆಯ್ಕೆ ಪ್ರಕ್ರಿಯೆಯನ್ನು ಹಾಳುಗೆಡವಲಾಗಿದೆ. ಆಯ್ಕೆ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ನಗ್ನಗೊಳಿಸಿದೆ” ಎಂದು ತೀರ್ಪು ಪ್ರಕಟಿಸುತ್ತಾ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ.

“ತಪ್ಪಿತಸ್ಥ ಅಭ್ಯರ್ಥಿಗಳ ನೇಮಕಾತಿ ರದ್ದುಮಾಡಿ, ಅವರನ್ನು ಪಡೆದಿರುವ ಸಂಬಳವನ್ನು ವಾಪಸ್ ಪಡೆದುಕೊಳ್ಳಬೇಕು ಎಂಬ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಸೂಕ್ತ ಕಾರಣ ಕಾಣುತ್ತಿಲ್ಲ. ನೇಮಕಾತಿ ವಂಚನೆಯಿಂದ ಕೂಡಿರುವುದರಿಂದ ಅದನ್ನು ಸಮರ್ಥಿಸುವ ಅಗತ್ಯತೆ ಇಲ್ಲ” ಎಂದಿದ್ದಾರೆ.

“ಸಂವಿಧಾನದ 14 ಮತ್ತು 16 ನೇ ವಿಧಿಯನ್ನು ಉಲ್ಲಂಘಿಸಿದ ಮತ್ತು ಅಕ್ರಮಗಳ ಕಾರಣ ನಿರ್ದಿಷ್ಟವಾಗಿ ಕಳಂಕಿತ ಅಭ್ಯರ್ಥಿಗಳ ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ಅನೂರ್ಜಿತವೆಂದು ಘೋಷಿಸಲಾಗಿದೆ. ಹೀಗಾಗಿ, ಈ ಅಭ್ಯರ್ಥಿಗಳ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಅದಾಗ್ಯೂ, ಈಗಾಗಲೇ ನೇಮಕಗೊಂಡ ಅಭ್ಯರ್ಥಿಗಳಿಗೆ ಇದುವರೆಗೆ ಪಾವತಿಸಿದ ಸಂಬಳವನ್ನು ವಾಪಸ್ ಪಡೆಯುವ ಅಗತ್ಯವಿಲ್ಲ. ಆದರೆ, ಅಭ್ಯರ್ಥಿಗಳ ವಜಾ ಬಳಿಕ, ಆ ಹುದ್ದೆಯನ್ನು ಖಾಲಿ ಹುದ್ದೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

ಹೊಸ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿ ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ಮತ್ತು ಹೊಸ ಪ್ರಕ್ರಿಯೆಯಲ್ಲಿ ಕಳಂಕರಹಿತ ಅಭ್ಯರ್ಥಿಗಳಿಗೆ ಸಡಿಲಿಕೆ ನೀಡಬಹುದು ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ನಿರ್ದೇಶಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿರುವ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 4 ರಂದು ನಡೆಸಲು ನ್ಯಾಯಪೀಠ ನಿರ್ಧರಿಸಿದೆ.

ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂಬ ಷರತ್ತಿನೊಂದಿಗೆ ಹೈಕೋರ್ಟ್ ಆದೇಶಿಸಿದ ಸಿಬಿಐ ತನಿಖೆಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಅನುಮತಿ ನೀಡಿತ್ತು.

ಏಪ್ರಿಲ್ 22, 2024ರಂದು, ಕಲ್ಕತ್ತಾ ಹೈಕೋರ್ಟ್ ಎಸ್‌ಎಸ್‌ಸಿಯಿಂದ 25,753 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿ, ಅವರು ಪಡೆದಿರುವ ಸಂಬಳವನ್ನು ಬಡ್ಡಿಯೊಂದಿಗೆ ಹಿಂದಿರುಗಿಸುವಂತೆ ಆದೇಶಿಸಿತ್ತು. 15 ದಿನಗಳಲ್ಲಿ ಹುದ್ದೆಗಳಿಗೆ ಹೊಸ ನೇಮಕಾತಿಗೆ ಆದೇಶಿಸಿತ್ತು.

ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ನೇತೃತ್ವದ ಪೀಠವು, 2016 ರಲ್ಲಿ ಗ್ರೂಪ್ ಸಿ, ಗ್ರೂಪ್ ಡಿ, 9 ಮತ್ತು 10 ನೇ ತರಗತಿಗಳ ಒಎಂಆರ್‌ ಶೀಟ್‌ಗಳಲ್ಲಿ ವಂಚನೆ ಮಾಡಲಾಗಿದೆ ಎಂದು ಹೇಳಿತ್ತು. ಎಲ್ಲಾ ನೇಮಕಾತಿಗಳು ಕಾನೂನುಬಾಹಿರ ಎಂದು ಎಂದಿತ್ತು. ನೇಮಕಾತಿ ಮಾಡಿಕೊಂಡವರ ಹೆಸರುಗಳನ್ನೂ ಕಾನೂನುಬಾಹಿರವಾಗಿ ಬೋರ್ಡ್‌ನಲ್ಲಿ ಸೇರಿಸಲಾಗಿದೆ ಎಂದು ಹೇಳಿತ್ತು.

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...