Homeಮುಖಪುಟಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ...

ಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016 ರಲ್ಲಿ ನೇಮಕ ಮಾಡಿದ್ದ ಸುಮಾರು 25,000 ( 25,753) ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ ಅಮಾನ್ಯಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು (ಏಪ್ರಿಲ್ 3) ಎತ್ತಿಹಿಡಿದಿದೆ.

“ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ವಂಚನೆಯಿಂದ ಕೂಡಿದ್ದು, ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ” ಎಂಬ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

ಶಾಲೆಗಳಲ್ಲಿನ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ.

“ಇಡೀ ನೇಮಕಾತಿ ಪ್ರಕ್ರಿಯೆ ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ. ನೇಮಕಾತಿಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದೆ. ಅದನ್ನು ಮುಚ್ಚಿ ಹಾಕಲು ಇಡೀ ಆಯ್ಕೆ ಪ್ರಕ್ರಿಯೆಯನ್ನು ಹಾಳುಗೆಡವಲಾಗಿದೆ. ಆಯ್ಕೆ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ನಗ್ನಗೊಳಿಸಿದೆ” ಎಂದು ತೀರ್ಪು ಪ್ರಕಟಿಸುತ್ತಾ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ.

“ತಪ್ಪಿತಸ್ಥ ಅಭ್ಯರ್ಥಿಗಳ ನೇಮಕಾತಿ ರದ್ದುಮಾಡಿ, ಅವರನ್ನು ಪಡೆದಿರುವ ಸಂಬಳವನ್ನು ವಾಪಸ್ ಪಡೆದುಕೊಳ್ಳಬೇಕು ಎಂಬ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಸೂಕ್ತ ಕಾರಣ ಕಾಣುತ್ತಿಲ್ಲ. ನೇಮಕಾತಿ ವಂಚನೆಯಿಂದ ಕೂಡಿರುವುದರಿಂದ ಅದನ್ನು ಸಮರ್ಥಿಸುವ ಅಗತ್ಯತೆ ಇಲ್ಲ” ಎಂದಿದ್ದಾರೆ.

“ಸಂವಿಧಾನದ 14 ಮತ್ತು 16 ನೇ ವಿಧಿಯನ್ನು ಉಲ್ಲಂಘಿಸಿದ ಮತ್ತು ಅಕ್ರಮಗಳ ಕಾರಣ ನಿರ್ದಿಷ್ಟವಾಗಿ ಕಳಂಕಿತ ಅಭ್ಯರ್ಥಿಗಳ ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ಅನೂರ್ಜಿತವೆಂದು ಘೋಷಿಸಲಾಗಿದೆ. ಹೀಗಾಗಿ, ಈ ಅಭ್ಯರ್ಥಿಗಳ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಅದಾಗ್ಯೂ, ಈಗಾಗಲೇ ನೇಮಕಗೊಂಡ ಅಭ್ಯರ್ಥಿಗಳಿಗೆ ಇದುವರೆಗೆ ಪಾವತಿಸಿದ ಸಂಬಳವನ್ನು ವಾಪಸ್ ಪಡೆಯುವ ಅಗತ್ಯವಿಲ್ಲ. ಆದರೆ, ಅಭ್ಯರ್ಥಿಗಳ ವಜಾ ಬಳಿಕ, ಆ ಹುದ್ದೆಯನ್ನು ಖಾಲಿ ಹುದ್ದೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

ಹೊಸ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿ ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ಮತ್ತು ಹೊಸ ಪ್ರಕ್ರಿಯೆಯಲ್ಲಿ ಕಳಂಕರಹಿತ ಅಭ್ಯರ್ಥಿಗಳಿಗೆ ಸಡಿಲಿಕೆ ನೀಡಬಹುದು ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ನಿರ್ದೇಶಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿರುವ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 4 ರಂದು ನಡೆಸಲು ನ್ಯಾಯಪೀಠ ನಿರ್ಧರಿಸಿದೆ.

ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂಬ ಷರತ್ತಿನೊಂದಿಗೆ ಹೈಕೋರ್ಟ್ ಆದೇಶಿಸಿದ ಸಿಬಿಐ ತನಿಖೆಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಅನುಮತಿ ನೀಡಿತ್ತು.

ಏಪ್ರಿಲ್ 22, 2024ರಂದು, ಕಲ್ಕತ್ತಾ ಹೈಕೋರ್ಟ್ ಎಸ್‌ಎಸ್‌ಸಿಯಿಂದ 25,753 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿ, ಅವರು ಪಡೆದಿರುವ ಸಂಬಳವನ್ನು ಬಡ್ಡಿಯೊಂದಿಗೆ ಹಿಂದಿರುಗಿಸುವಂತೆ ಆದೇಶಿಸಿತ್ತು. 15 ದಿನಗಳಲ್ಲಿ ಹುದ್ದೆಗಳಿಗೆ ಹೊಸ ನೇಮಕಾತಿಗೆ ಆದೇಶಿಸಿತ್ತು.

ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ನೇತೃತ್ವದ ಪೀಠವು, 2016 ರಲ್ಲಿ ಗ್ರೂಪ್ ಸಿ, ಗ್ರೂಪ್ ಡಿ, 9 ಮತ್ತು 10 ನೇ ತರಗತಿಗಳ ಒಎಂಆರ್‌ ಶೀಟ್‌ಗಳಲ್ಲಿ ವಂಚನೆ ಮಾಡಲಾಗಿದೆ ಎಂದು ಹೇಳಿತ್ತು. ಎಲ್ಲಾ ನೇಮಕಾತಿಗಳು ಕಾನೂನುಬಾಹಿರ ಎಂದು ಎಂದಿತ್ತು. ನೇಮಕಾತಿ ಮಾಡಿಕೊಂಡವರ ಹೆಸರುಗಳನ್ನೂ ಕಾನೂನುಬಾಹಿರವಾಗಿ ಬೋರ್ಡ್‌ನಲ್ಲಿ ಸೇರಿಸಲಾಗಿದೆ ಎಂದು ಹೇಳಿತ್ತು.

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...