Homeಮುಖಪುಟರಾಜಕೀಯ ಪಕ್ಷಗಳು 'ಪಾಶ್ ಕಾಯ್ದೆ'ಯಡಿ ಬರುವುದಿಲ್ಲ: ಕೇರಳ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ‘ಪಾಶ್ ಕಾಯ್ದೆ’ಯಡಿ ಬರುವುದಿಲ್ಲ: ಕೇರಳ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪಾಶ್ ಕಾಯ್ದೆ ಪ್ರಕಾರ ರಾಜಕೀಯ ಪಕ್ಷಗಳು ‘ಆಂತರಿಕ ದೂರು ಸಮಿತಿ’ ರಚಿಸುವುದು ಕಡ್ಡಾಯವಲ್ಲ ಎಂಬ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ (ಸೆ.15) ನಿರಾಕರಿಸಿದೆ. ‘ರಾಜಕೀಯ ಪಕ್ಷಗಳಿಗೆ ಸೇರುವುದು ಕೆಲಸಕ್ಕೆ (ಉದ್ಯೋಗಕ್ಕೆ) ಸೇರಿದಂತೆ ಅಲ್ಲ’ ಎಂದು ಇದೇ ವೇಳೆ ಮೌಖಿವಾಗಿ ಹೇಳಿದೆ.

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ, 2013 ಅಥವಾ ಪಾಶ್ ಕಾಯ್ದೆ ಪ್ರಕಾರ, ಉದ್ಯೋಗದಾತ ಸಂಸ್ಥೆಗಳು ಲೈಂಗಿಕ ಕಿರುಕುಳ ದೂರುಗಳನ್ನು ಪರಿಹರಿಸಲು ‘ಆಂತರಿಕ ದೂರು ಸಮಿತಿ’ಯನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ.

ರಾಜಕೀಯ ಪಕ್ಷಗಳು ಪಾಶ್ ಕಾಯ್ದೆ ಪ್ರಕಾರ ಆಂತರಿಕ ದೂರು ಸಮಿತಿ ಸ್ಥಾಪಿಸಲು ಕಾನೂನುಬದ್ಧವಾಗಿ ಹೊಣೆಗಾರರಲ್ಲ. ಏಕೆಂದರೆ, ಅದರ ಸದಸ್ಯರಲ್ಲಿ ಉದ್ಯೋಗದಾತ-ಉದ್ಯೋಗಿ ಎಂಬ ಸಂಬಂಧವಿಲ್ಲ ಎಂಬ ಕೇರಳ ಹೈಕೋರ್ಟ್ ತೀರ್ಪು ಪ್ರಶ್ನಿಸಿದ್ದ ಅರ್ಜಿಯನ್ನು ಸಿಜೆಐ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎ.ಎಸ್. ಚಂದೂರ್ಕರ್ ಅವರಿದ್ದ ಪೀಠದ ಮುಂದೆ ಪ್ರಸ್ತಾಪಿಸಲಾಗಿತ್ತು.

ಅರ್ಜಿದಾರರ ಪರವಾಗಿ ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಹಿರಿಯ ವಕೀಲೆ ಶೋಭಾ ಗುಪ್ತಾ ಅವರು, “ಲೈಂಗಿಕ ಕಿರುಕುಳದ ವಿರುದ್ಧ ದೂರು ದಾಖಲಿಸಬಹುದಾದ ‘ನೊಂದ ಮಹಿಳೆ’ ಎಂಬ ವಿಶಾಲ ವ್ಯಾಖ್ಯಾನವನ್ನು ಹೈಕೋರ್ಟ್ ಕಡೆಗಣಿಸಿದೆ” ಎಂದು ವಾದಿಸಿದ್ದರು.

‘ಪಾಶ್ ಕಾಯ್ದೆಯ ಸೆಕ್ಷನ್ 2 (ಎ)(ಐ) ‘ನೊಂದ ಮಹಿಳೆ’ ಎಂದರೆ ಕೆಲಸದ ಸ್ಥಳಕ್ಕೆ ಸಂಬಂಧಿಸಿದಂತೆ ಯಾವುದೇ ವಯಸ್ಸಿನ ಮಹಿಳೆ, ಉದ್ಯೋಗಿಯಾಗಿರಲಿ ಅಥವಾ ಇಲ್ಲದಿರಲಿ ಪ್ರತಿವಾದಿಯಿಂದ ಯಾವುದೇ ಲೈಂಗಿಕ ಕಿರುಕುಳದ ಕೃತ್ಯಕ್ಕೆ ಒಳಗಾಗಿದ್ದಾನೆಂದು ಆರೋಪಿಸಿದವರು’ ಎಂದು ವ್ಯಾಖ್ಯಾನಿಸುತ್ತದೆ.

ಪಾಶ್ ಕಾಯ್ದೆಯ ಪ್ರಕಾರ, ದೂರು ದಾಖಲಿಸಲು ಮಹಿಳೆಯೊಬ್ಬರು ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವುದು ಅನಿವಾರ್ಯವಲ್ಲ ಎಂದು ಗುಪ್ತಾ ವಾದಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ರಾಜಕೀಯ ಪಕ್ಷಗಳು ಯಾರನ್ನೂ ನೇಮಿಸಿಕೊಳ್ಳುವುದಿಲ್ಲ. ಹೀಗಿರುವಾಗ ನೀವು ರಾಜಕೀಯ ಪಕ್ಷಗಳನ್ನು ಕೆಲಸದ ಸ್ಥಳದಲ್ಲಿ ಹೇಗೆ ಇರಿಸುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಪಕ್ಷಗಳು ಇನ್ನೂ ಸಂಘಟಿತ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಗುಪ್ತಾ ಒತ್ತಿ ಹೇಳಿದ್ದು, “ಅವರಿಗೆ ಒಂದು ಸಂಘಟನೆ ಇದೆ” ಎಂದಿದ್ದಾರೆ.

ಪಾಶ್ ಕಾಯ್ದೆಯ ಸೆಕ್ಷನ್ 4 ಆಂತರಿಕ ದೂರು ಸಮಿತಿಯ ಸಂವಿಧಾನವನ್ನು ವಿವರಿಸುತ್ತದೆ. ಸೆಕ್ಷನ್ 4 (1) ಹೀಗೆ ಹೇಳುತ್ತದೆ: ಕೆಲಸದ ಸ್ಥಳದ ಪ್ರತಿಯೊಬ್ಬ ಉದ್ಯೋಗದಾತರು ಲಿಖಿತ ಆದೇಶದ ಮೂಲಕ ‘ಆಂತರಿಕ ದೂರು ಸಮಿತಿ’ ಎಂದು ಕರೆಯಲ್ಪಡುವ ಸಮಿತಿಯನ್ನು ರಚಿಸಬೇಕು.

ಕೆಲಸದ ಸ್ಥಳದ ಕಚೇರಿಗಳು ಅಥವಾ ಆಡಳಿತ ಘಟಕಗಳು ವಿವಿಧ ಸ್ಥಳಗಳಲ್ಲಿ ಅಥವಾ ವಿಭಾಗೀಯ ಅಥವಾ ಉಪ-ವಿಭಾಗೀಯ ಮಟ್ಟದಲ್ಲಿ ನೆಲೆಗೊಂಡಿದ್ದರೂ, ಎಲ್ಲಾ ಆಡಳಿತ ಘಟಕಗಳು ಅಥವಾ ಕಚೇರಿಗಳಲ್ಲಿ ಆಂತರಿಕ ಸಮಿತಿಯನ್ನು ರಚಿಸಬೇಕು ಎಂದು ಹೇಳುತ್ತದೆ.

ವಕೀಲರ ವಾದ ಆಲಿಸಿದ ಸಿಜೆಐ ಅರ್ಜಿಯನ್ನು ಮುಂದುವರಿಸಲು ನಿರಾಸಕ್ತಿ ತೋರಿಸಿದ್ದು, “ಒಬ್ಬರು ರಾಜಕೀಯ ಪಕ್ಷ ಪ್ರವೇಶಿಸಿದರೆ ಅದು ಕೆಲಸ ಆಗುವುದಿಲ್ಲ. ಅದಕ್ಕೆ ಸಂಬಳ ಇಲ್ಲ” ಎಂದು ಮೌಖಿಕವಾಗಿ ಹೇಳಿದ್ದಾರೆ.

ವಕೀಲೆ ಯೋಗಮಾಯ ಅವರು ಸಲ್ಲಿಸಿದ್ದ ವಿಶೇಷ ರಜಾ ಅವಧಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದಕ್ಕೂ ಮೊದಲು, ಅದೇ ಅರ್ಜಿದಾರರು ರಾಜಕೀಯ ಪಕ್ಷಗಳನ್ನು ಪಾಶ್ ಕಾಯ್ದೆಯಡಿ ತರುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸಲ್ಲಿಸಿದ್ದರು. ಕೇರಳ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸುವ ಸ್ವಾತಂತ್ರ್ಯದೊಂದಿಗೆ ಆ ಪಿಐಎಲ್‌ ಹಿಂಪಡೆದಿದ್ದರು.

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...