Homeಮುಖಪುಟರಾಜಕೀಯ ಪಕ್ಷಗಳು 'ಪಾಶ್ ಕಾಯ್ದೆ'ಯಡಿ ಬರುವುದಿಲ್ಲ: ಕೇರಳ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ‘ಪಾಶ್ ಕಾಯ್ದೆ’ಯಡಿ ಬರುವುದಿಲ್ಲ: ಕೇರಳ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪಾಶ್ ಕಾಯ್ದೆ ಪ್ರಕಾರ ರಾಜಕೀಯ ಪಕ್ಷಗಳು ‘ಆಂತರಿಕ ದೂರು ಸಮಿತಿ’ ರಚಿಸುವುದು ಕಡ್ಡಾಯವಲ್ಲ ಎಂಬ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ (ಸೆ.15) ನಿರಾಕರಿಸಿದೆ. ‘ರಾಜಕೀಯ ಪಕ್ಷಗಳಿಗೆ ಸೇರುವುದು ಕೆಲಸಕ್ಕೆ (ಉದ್ಯೋಗಕ್ಕೆ) ಸೇರಿದಂತೆ ಅಲ್ಲ’ ಎಂದು ಇದೇ ವೇಳೆ ಮೌಖಿವಾಗಿ ಹೇಳಿದೆ.

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ, 2013 ಅಥವಾ ಪಾಶ್ ಕಾಯ್ದೆ ಪ್ರಕಾರ, ಉದ್ಯೋಗದಾತ ಸಂಸ್ಥೆಗಳು ಲೈಂಗಿಕ ಕಿರುಕುಳ ದೂರುಗಳನ್ನು ಪರಿಹರಿಸಲು ‘ಆಂತರಿಕ ದೂರು ಸಮಿತಿ’ಯನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ.

ರಾಜಕೀಯ ಪಕ್ಷಗಳು ಪಾಶ್ ಕಾಯ್ದೆ ಪ್ರಕಾರ ಆಂತರಿಕ ದೂರು ಸಮಿತಿ ಸ್ಥಾಪಿಸಲು ಕಾನೂನುಬದ್ಧವಾಗಿ ಹೊಣೆಗಾರರಲ್ಲ. ಏಕೆಂದರೆ, ಅದರ ಸದಸ್ಯರಲ್ಲಿ ಉದ್ಯೋಗದಾತ-ಉದ್ಯೋಗಿ ಎಂಬ ಸಂಬಂಧವಿಲ್ಲ ಎಂಬ ಕೇರಳ ಹೈಕೋರ್ಟ್ ತೀರ್ಪು ಪ್ರಶ್ನಿಸಿದ್ದ ಅರ್ಜಿಯನ್ನು ಸಿಜೆಐ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎ.ಎಸ್. ಚಂದೂರ್ಕರ್ ಅವರಿದ್ದ ಪೀಠದ ಮುಂದೆ ಪ್ರಸ್ತಾಪಿಸಲಾಗಿತ್ತು.

ಅರ್ಜಿದಾರರ ಪರವಾಗಿ ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಹಿರಿಯ ವಕೀಲೆ ಶೋಭಾ ಗುಪ್ತಾ ಅವರು, “ಲೈಂಗಿಕ ಕಿರುಕುಳದ ವಿರುದ್ಧ ದೂರು ದಾಖಲಿಸಬಹುದಾದ ‘ನೊಂದ ಮಹಿಳೆ’ ಎಂಬ ವಿಶಾಲ ವ್ಯಾಖ್ಯಾನವನ್ನು ಹೈಕೋರ್ಟ್ ಕಡೆಗಣಿಸಿದೆ” ಎಂದು ವಾದಿಸಿದ್ದರು.

‘ಪಾಶ್ ಕಾಯ್ದೆಯ ಸೆಕ್ಷನ್ 2 (ಎ)(ಐ) ‘ನೊಂದ ಮಹಿಳೆ’ ಎಂದರೆ ಕೆಲಸದ ಸ್ಥಳಕ್ಕೆ ಸಂಬಂಧಿಸಿದಂತೆ ಯಾವುದೇ ವಯಸ್ಸಿನ ಮಹಿಳೆ, ಉದ್ಯೋಗಿಯಾಗಿರಲಿ ಅಥವಾ ಇಲ್ಲದಿರಲಿ ಪ್ರತಿವಾದಿಯಿಂದ ಯಾವುದೇ ಲೈಂಗಿಕ ಕಿರುಕುಳದ ಕೃತ್ಯಕ್ಕೆ ಒಳಗಾಗಿದ್ದಾನೆಂದು ಆರೋಪಿಸಿದವರು’ ಎಂದು ವ್ಯಾಖ್ಯಾನಿಸುತ್ತದೆ.

ಪಾಶ್ ಕಾಯ್ದೆಯ ಪ್ರಕಾರ, ದೂರು ದಾಖಲಿಸಲು ಮಹಿಳೆಯೊಬ್ಬರು ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವುದು ಅನಿವಾರ್ಯವಲ್ಲ ಎಂದು ಗುಪ್ತಾ ವಾದಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ರಾಜಕೀಯ ಪಕ್ಷಗಳು ಯಾರನ್ನೂ ನೇಮಿಸಿಕೊಳ್ಳುವುದಿಲ್ಲ. ಹೀಗಿರುವಾಗ ನೀವು ರಾಜಕೀಯ ಪಕ್ಷಗಳನ್ನು ಕೆಲಸದ ಸ್ಥಳದಲ್ಲಿ ಹೇಗೆ ಇರಿಸುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಪಕ್ಷಗಳು ಇನ್ನೂ ಸಂಘಟಿತ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಗುಪ್ತಾ ಒತ್ತಿ ಹೇಳಿದ್ದು, “ಅವರಿಗೆ ಒಂದು ಸಂಘಟನೆ ಇದೆ” ಎಂದಿದ್ದಾರೆ.

ಪಾಶ್ ಕಾಯ್ದೆಯ ಸೆಕ್ಷನ್ 4 ಆಂತರಿಕ ದೂರು ಸಮಿತಿಯ ಸಂವಿಧಾನವನ್ನು ವಿವರಿಸುತ್ತದೆ. ಸೆಕ್ಷನ್ 4 (1) ಹೀಗೆ ಹೇಳುತ್ತದೆ: ಕೆಲಸದ ಸ್ಥಳದ ಪ್ರತಿಯೊಬ್ಬ ಉದ್ಯೋಗದಾತರು ಲಿಖಿತ ಆದೇಶದ ಮೂಲಕ ‘ಆಂತರಿಕ ದೂರು ಸಮಿತಿ’ ಎಂದು ಕರೆಯಲ್ಪಡುವ ಸಮಿತಿಯನ್ನು ರಚಿಸಬೇಕು.

ಕೆಲಸದ ಸ್ಥಳದ ಕಚೇರಿಗಳು ಅಥವಾ ಆಡಳಿತ ಘಟಕಗಳು ವಿವಿಧ ಸ್ಥಳಗಳಲ್ಲಿ ಅಥವಾ ವಿಭಾಗೀಯ ಅಥವಾ ಉಪ-ವಿಭಾಗೀಯ ಮಟ್ಟದಲ್ಲಿ ನೆಲೆಗೊಂಡಿದ್ದರೂ, ಎಲ್ಲಾ ಆಡಳಿತ ಘಟಕಗಳು ಅಥವಾ ಕಚೇರಿಗಳಲ್ಲಿ ಆಂತರಿಕ ಸಮಿತಿಯನ್ನು ರಚಿಸಬೇಕು ಎಂದು ಹೇಳುತ್ತದೆ.

ವಕೀಲರ ವಾದ ಆಲಿಸಿದ ಸಿಜೆಐ ಅರ್ಜಿಯನ್ನು ಮುಂದುವರಿಸಲು ನಿರಾಸಕ್ತಿ ತೋರಿಸಿದ್ದು, “ಒಬ್ಬರು ರಾಜಕೀಯ ಪಕ್ಷ ಪ್ರವೇಶಿಸಿದರೆ ಅದು ಕೆಲಸ ಆಗುವುದಿಲ್ಲ. ಅದಕ್ಕೆ ಸಂಬಳ ಇಲ್ಲ” ಎಂದು ಮೌಖಿಕವಾಗಿ ಹೇಳಿದ್ದಾರೆ.

ವಕೀಲೆ ಯೋಗಮಾಯ ಅವರು ಸಲ್ಲಿಸಿದ್ದ ವಿಶೇಷ ರಜಾ ಅವಧಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದಕ್ಕೂ ಮೊದಲು, ಅದೇ ಅರ್ಜಿದಾರರು ರಾಜಕೀಯ ಪಕ್ಷಗಳನ್ನು ಪಾಶ್ ಕಾಯ್ದೆಯಡಿ ತರುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸಲ್ಲಿಸಿದ್ದರು. ಕೇರಳ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸುವ ಸ್ವಾತಂತ್ರ್ಯದೊಂದಿಗೆ ಆ ಪಿಐಎಲ್‌ ಹಿಂಪಡೆದಿದ್ದರು.

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...