Homeಮುಖಪುಟರಾಜಕೀಯ ಪಕ್ಷಗಳು 'ಪಾಶ್ ಕಾಯ್ದೆ'ಯಡಿ ಬರುವುದಿಲ್ಲ: ಕೇರಳ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ‘ಪಾಶ್ ಕಾಯ್ದೆ’ಯಡಿ ಬರುವುದಿಲ್ಲ: ಕೇರಳ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪಾಶ್ ಕಾಯ್ದೆ ಪ್ರಕಾರ ರಾಜಕೀಯ ಪಕ್ಷಗಳು ‘ಆಂತರಿಕ ದೂರು ಸಮಿತಿ’ ರಚಿಸುವುದು ಕಡ್ಡಾಯವಲ್ಲ ಎಂಬ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ (ಸೆ.15) ನಿರಾಕರಿಸಿದೆ. ‘ರಾಜಕೀಯ ಪಕ್ಷಗಳಿಗೆ ಸೇರುವುದು ಕೆಲಸಕ್ಕೆ (ಉದ್ಯೋಗಕ್ಕೆ) ಸೇರಿದಂತೆ ಅಲ್ಲ’ ಎಂದು ಇದೇ ವೇಳೆ ಮೌಖಿವಾಗಿ ಹೇಳಿದೆ.

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ, 2013 ಅಥವಾ ಪಾಶ್ ಕಾಯ್ದೆ ಪ್ರಕಾರ, ಉದ್ಯೋಗದಾತ ಸಂಸ್ಥೆಗಳು ಲೈಂಗಿಕ ಕಿರುಕುಳ ದೂರುಗಳನ್ನು ಪರಿಹರಿಸಲು ‘ಆಂತರಿಕ ದೂರು ಸಮಿತಿ’ಯನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ.

ರಾಜಕೀಯ ಪಕ್ಷಗಳು ಪಾಶ್ ಕಾಯ್ದೆ ಪ್ರಕಾರ ಆಂತರಿಕ ದೂರು ಸಮಿತಿ ಸ್ಥಾಪಿಸಲು ಕಾನೂನುಬದ್ಧವಾಗಿ ಹೊಣೆಗಾರರಲ್ಲ. ಏಕೆಂದರೆ, ಅದರ ಸದಸ್ಯರಲ್ಲಿ ಉದ್ಯೋಗದಾತ-ಉದ್ಯೋಗಿ ಎಂಬ ಸಂಬಂಧವಿಲ್ಲ ಎಂಬ ಕೇರಳ ಹೈಕೋರ್ಟ್ ತೀರ್ಪು ಪ್ರಶ್ನಿಸಿದ್ದ ಅರ್ಜಿಯನ್ನು ಸಿಜೆಐ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎ.ಎಸ್. ಚಂದೂರ್ಕರ್ ಅವರಿದ್ದ ಪೀಠದ ಮುಂದೆ ಪ್ರಸ್ತಾಪಿಸಲಾಗಿತ್ತು.

ಅರ್ಜಿದಾರರ ಪರವಾಗಿ ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಹಿರಿಯ ವಕೀಲೆ ಶೋಭಾ ಗುಪ್ತಾ ಅವರು, “ಲೈಂಗಿಕ ಕಿರುಕುಳದ ವಿರುದ್ಧ ದೂರು ದಾಖಲಿಸಬಹುದಾದ ‘ನೊಂದ ಮಹಿಳೆ’ ಎಂಬ ವಿಶಾಲ ವ್ಯಾಖ್ಯಾನವನ್ನು ಹೈಕೋರ್ಟ್ ಕಡೆಗಣಿಸಿದೆ” ಎಂದು ವಾದಿಸಿದ್ದರು.

‘ಪಾಶ್ ಕಾಯ್ದೆಯ ಸೆಕ್ಷನ್ 2 (ಎ)(ಐ) ‘ನೊಂದ ಮಹಿಳೆ’ ಎಂದರೆ ಕೆಲಸದ ಸ್ಥಳಕ್ಕೆ ಸಂಬಂಧಿಸಿದಂತೆ ಯಾವುದೇ ವಯಸ್ಸಿನ ಮಹಿಳೆ, ಉದ್ಯೋಗಿಯಾಗಿರಲಿ ಅಥವಾ ಇಲ್ಲದಿರಲಿ ಪ್ರತಿವಾದಿಯಿಂದ ಯಾವುದೇ ಲೈಂಗಿಕ ಕಿರುಕುಳದ ಕೃತ್ಯಕ್ಕೆ ಒಳಗಾಗಿದ್ದಾನೆಂದು ಆರೋಪಿಸಿದವರು’ ಎಂದು ವ್ಯಾಖ್ಯಾನಿಸುತ್ತದೆ.

ಪಾಶ್ ಕಾಯ್ದೆಯ ಪ್ರಕಾರ, ದೂರು ದಾಖಲಿಸಲು ಮಹಿಳೆಯೊಬ್ಬರು ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವುದು ಅನಿವಾರ್ಯವಲ್ಲ ಎಂದು ಗುಪ್ತಾ ವಾದಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ರಾಜಕೀಯ ಪಕ್ಷಗಳು ಯಾರನ್ನೂ ನೇಮಿಸಿಕೊಳ್ಳುವುದಿಲ್ಲ. ಹೀಗಿರುವಾಗ ನೀವು ರಾಜಕೀಯ ಪಕ್ಷಗಳನ್ನು ಕೆಲಸದ ಸ್ಥಳದಲ್ಲಿ ಹೇಗೆ ಇರಿಸುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಪಕ್ಷಗಳು ಇನ್ನೂ ಸಂಘಟಿತ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಗುಪ್ತಾ ಒತ್ತಿ ಹೇಳಿದ್ದು, “ಅವರಿಗೆ ಒಂದು ಸಂಘಟನೆ ಇದೆ” ಎಂದಿದ್ದಾರೆ.

ಪಾಶ್ ಕಾಯ್ದೆಯ ಸೆಕ್ಷನ್ 4 ಆಂತರಿಕ ದೂರು ಸಮಿತಿಯ ಸಂವಿಧಾನವನ್ನು ವಿವರಿಸುತ್ತದೆ. ಸೆಕ್ಷನ್ 4 (1) ಹೀಗೆ ಹೇಳುತ್ತದೆ: ಕೆಲಸದ ಸ್ಥಳದ ಪ್ರತಿಯೊಬ್ಬ ಉದ್ಯೋಗದಾತರು ಲಿಖಿತ ಆದೇಶದ ಮೂಲಕ ‘ಆಂತರಿಕ ದೂರು ಸಮಿತಿ’ ಎಂದು ಕರೆಯಲ್ಪಡುವ ಸಮಿತಿಯನ್ನು ರಚಿಸಬೇಕು.

ಕೆಲಸದ ಸ್ಥಳದ ಕಚೇರಿಗಳು ಅಥವಾ ಆಡಳಿತ ಘಟಕಗಳು ವಿವಿಧ ಸ್ಥಳಗಳಲ್ಲಿ ಅಥವಾ ವಿಭಾಗೀಯ ಅಥವಾ ಉಪ-ವಿಭಾಗೀಯ ಮಟ್ಟದಲ್ಲಿ ನೆಲೆಗೊಂಡಿದ್ದರೂ, ಎಲ್ಲಾ ಆಡಳಿತ ಘಟಕಗಳು ಅಥವಾ ಕಚೇರಿಗಳಲ್ಲಿ ಆಂತರಿಕ ಸಮಿತಿಯನ್ನು ರಚಿಸಬೇಕು ಎಂದು ಹೇಳುತ್ತದೆ.

ವಕೀಲರ ವಾದ ಆಲಿಸಿದ ಸಿಜೆಐ ಅರ್ಜಿಯನ್ನು ಮುಂದುವರಿಸಲು ನಿರಾಸಕ್ತಿ ತೋರಿಸಿದ್ದು, “ಒಬ್ಬರು ರಾಜಕೀಯ ಪಕ್ಷ ಪ್ರವೇಶಿಸಿದರೆ ಅದು ಕೆಲಸ ಆಗುವುದಿಲ್ಲ. ಅದಕ್ಕೆ ಸಂಬಳ ಇಲ್ಲ” ಎಂದು ಮೌಖಿಕವಾಗಿ ಹೇಳಿದ್ದಾರೆ.

ವಕೀಲೆ ಯೋಗಮಾಯ ಅವರು ಸಲ್ಲಿಸಿದ್ದ ವಿಶೇಷ ರಜಾ ಅವಧಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದಕ್ಕೂ ಮೊದಲು, ಅದೇ ಅರ್ಜಿದಾರರು ರಾಜಕೀಯ ಪಕ್ಷಗಳನ್ನು ಪಾಶ್ ಕಾಯ್ದೆಯಡಿ ತರುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸಲ್ಲಿಸಿದ್ದರು. ಕೇರಳ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸುವ ಸ್ವಾತಂತ್ರ್ಯದೊಂದಿಗೆ ಆ ಪಿಐಎಲ್‌ ಹಿಂಪಡೆದಿದ್ದರು.

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...