Homeಮುಖಪುಟಸುಪ್ರೀಂಕೋರ್ಟ್ ತೀರ್ಪು ಹಿನ್ನಲೆ | ಪರಿಹಾರಕ್ಕಾಗಿ ಕಾನೂನು ಕ್ರಮಕ್ಕೆ ಮುಂದಾದ ಬುಲ್ಡೋಜರ್ ದಾಳಿಯ ಸಂತ್ರಸ್ತರು

ಸುಪ್ರೀಂಕೋರ್ಟ್ ತೀರ್ಪು ಹಿನ್ನಲೆ | ಪರಿಹಾರಕ್ಕಾಗಿ ಕಾನೂನು ಕ್ರಮಕ್ಕೆ ಮುಂದಾದ ಬುಲ್ಡೋಜರ್ ದಾಳಿಯ ಸಂತ್ರಸ್ತರು

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಬುಲ್ಡೋಜರ್ ಅ’ನ್ಯಾಯ’ದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಒಂದು ದಿನದ ನಂತರ, ಉತ್ತರ ಪ್ರದೇಶದಾದ್ಯಂತ ಈ ಕ್ರಮಗಳಿಂದ ಸಂತ್ರಸ್ತರಾದವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ತಮಗೆ ಆಗಿರುವ ನಷ್ಟಕ್ಕೆ ಪರಿಹಾರವನ್ನು ಪಡೆಯಲು ಕಾನೂನು ಕ್ರಮವನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ. ತನ್ನ ಬುಲ್ಡೋಜರ್ ಕ್ರಮದ ಬಗ್ಗೆ ವಿವಿಧ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ, ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಶ್ಲಾಘಿಸಿದೆ. ಸುಪ್ರೀಂಕೋರ್ಟ್ ತೀರ್ಪು

ಅದಾಗ್ಯೂ, ಸರಿಯಾದ ಪ್ರಕ್ರಿಯೆಯ ನಂತರ ಮತ್ತು ಅತಿಕ್ರಮಿತ ಭೂಮಿಯಲ್ಲಿ ನಿರ್ಮಿಸಲಾದ ಆಸ್ತಿಗಳ ಮೇಲೆ ನೆಲಸಮವನ್ನು ನಡೆಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ಬುಲ್ಡೋಜರ್ ನ್ಯಾಯ”ವನ್ನು ಕಾನೂನುಬಾಹಿರ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಬುಧವಾರ ದೇಶದಾದ್ಯಂತ ಮಾರ್ಗಸೂಚಿಗಳನ್ನು ನೀಡಿತ್ತು. ಪೂರ್ವ ಶೋಕಾಸ್ ಸೂಚನೆ ಇಲ್ಲದೆ ಯಾವುದೇ ಆಸ್ತಿಯನ್ನು ಕೆಡವಬಾರದು ಮತ್ತು ಸಂತ್ರಸ್ತರಿಗೆ ಪ್ರತಿಕ್ರಿಯಿಸಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಕೋರ್ಟ್‌ ಹೇಳಿತ್ತು. ಸುಪ್ರೀಂಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಯಾಗ್‌ರಾಜ್‌ನಲ್ಲಿ ಪಂಪ್ ಸೆಟ್ ವ್ಯಾಪಾರ ನಡೆಸುತ್ತಿರುವ ಜಾವೇದ್ ಮೊಹಮ್ಮದ್ ಅವರ ಮನೆಯನ್ನು ಜೂನ್ 12, 2022 ರಂದು ಬುಲ್ಡೋಜರ್‌ನಿಂದ ಕೆಡವಲಾಯಿತು. ಪೊಲೀಸರು ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಅವರ ವಿರುದ್ಧ ಐದು ಪ್ರಕರಣಗಳು ದಾಖಲಾಗಿವೆ ಮತ್ತು ಅಟಾಲಾ ಪ್ರದೇಶದಲ್ಲಿ ನಡೆದ ಕಲ್ಲು ತೂರಾಟದ ಘಟನೆಯಲ್ಲಿ ಅವರು ಪ್ರಮುಖ ಆರೋಪಿಯಾಗಿದ್ದಾರೆ ಎಂದು ಹೇಳಿದ್ದರು.

“ನಿರಂಕುಶ ರೀತಿಯಲ್ಲಿ ಮನೆಗಳನ್ನು ಕೆಡವಬಾರದು … ನನ್ನ ಎರಡು ಅಂತಸ್ತಿನ ಮನೆಯನ್ನು ಕೆಡವಿದಾಗ, ನನ್ನ ಹೆಂಡತಿ ಮತ್ತು ಮಗಳನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು” ಎಂದು ಮೊಹಮ್ಮದ್ ಹೇಳಿದ್ದು, ಸುಪ್ರೀಂಕೋರ್ಟ್‌ನ ತೀರ್ಪನ್ನು ಅವರು ಶ್ಲಾಘಿಸಿದ್ದಾರೆ. ಸ್ಥಳೀಯ ಆಡಳಿತವು ರಾತ್ರೋರಾತ್ರಿ ಈ ಕ್ರಮ ಕೈಗೊಂಡಿದ್ದು, ಯಾವುದೇ ಸೂಚನೆಯಿಲ್ಲದೆ ತನ್ನ ಮನೆಯನ್ನು ನೆಲಸಮ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ನೋಟಿಸ್ ಕಳುಹಿಸಿದ್ದೇವೆ ಎಂದು ಹೇಳಿರುವ ಸರ್ಕಾರದ ಪ್ರತಿಪಾದನೆ ಸಂಪೂರ್ಣ ಸುಳ್ಳಾಗಿದ್ದು… ಅವರು ಯಾವುದೇ ನೋಟಿಸ್ ಕಳುಹಿಸಿಲ್ಲ” ಎಂದು ಅವರು ಹೇಳಿದ್ದಾರೆ. ಧ್ವಂಸಗೊಂಡ ನಂತರ ನನ್ನ ಕುಟುಂಬವು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದು, ನಮಗೆ ಯಾರೂ ಸಹಾಯ ಮಾಡಲು ಮುಂದೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ

ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಜಿತ್ ಸಿಂಗ್, ಪ್ರಾಧಿಕಾರವು ಅನುಮೋದನೆ ಪಡೆಯದ ಮನೆ ಅಥವಾ ಅಂಗಡಿಗಳ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳುತ್ತದೆ. ಕೆಡವುವ ಮುನ್ನವೇ ನೋಟಿಸ್ ಜಾರಿ ಮಾಡಿ ಆ ವ್ಯಕ್ತಿಗೆ ತನ್ನ ಪರ ವಾದ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆ ನಂತರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬರೇಲಿಯಲ್ಲಿ ಜುಲೈ 22 ರಂದು ಶಾಹಿ ಪ್ರದೇಶದ ಗೌಸ್‌ಗಂಜ್ ಗ್ರಾಮದಲ್ಲಿ 16 ಜನರ ಮನೆಗಳನ್ನು ನೆಲಸಮಗೊಳಿಸಲಾಗಿತ್ತು. ಇದರಲ್ಲಿ ತಝಿಯಾ ಮೆರವಣಿಗೆಯಲ್ಲಿ ಒಬ್ಬ ವ್ಯಕ್ತಿಯನ್ನು ಕೊಂದ ಘರ್ಷಣೆಯಲ್ಲಿ ಆರೋಪಿಗಳೆಂದು ಹೆಸರಿಸಲಾದ ಮನೆಗಳು ಸೇರಿದ್ದವು. ಸುಪ್ರೀಂ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಗೌಸ್‌ಗಂಜ್‌ನ ರಾಸಿದಾನ್, ನಫೀಸಾ ಮತ್ತು ಸೈರಾ ಖಾತೂನ್ ಅವರ ಮನೆಗಳನ್ನು ನೆಲಸಮಗೊಳಿಸಲಾಗಿದ್ದು, ಪರಿಹಾರಕ್ಕಾಗಿ ನ್ಯಾಯಾಲಯವನ್ನು ಸಂಪರ್ಕಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...