Homeಮುಖಪುಟಸುಪ್ರೀಂಕೋರ್ಟ್ ತೀರ್ಪು ಹಿನ್ನಲೆ | ಪರಿಹಾರಕ್ಕಾಗಿ ಕಾನೂನು ಕ್ರಮಕ್ಕೆ ಮುಂದಾದ ಬುಲ್ಡೋಜರ್ ದಾಳಿಯ ಸಂತ್ರಸ್ತರು

ಸುಪ್ರೀಂಕೋರ್ಟ್ ತೀರ್ಪು ಹಿನ್ನಲೆ | ಪರಿಹಾರಕ್ಕಾಗಿ ಕಾನೂನು ಕ್ರಮಕ್ಕೆ ಮುಂದಾದ ಬುಲ್ಡೋಜರ್ ದಾಳಿಯ ಸಂತ್ರಸ್ತರು

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಬುಲ್ಡೋಜರ್ ಅ’ನ್ಯಾಯ’ದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಒಂದು ದಿನದ ನಂತರ, ಉತ್ತರ ಪ್ರದೇಶದಾದ್ಯಂತ ಈ ಕ್ರಮಗಳಿಂದ ಸಂತ್ರಸ್ತರಾದವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ತಮಗೆ ಆಗಿರುವ ನಷ್ಟಕ್ಕೆ ಪರಿಹಾರವನ್ನು ಪಡೆಯಲು ಕಾನೂನು ಕ್ರಮವನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ. ತನ್ನ ಬುಲ್ಡೋಜರ್ ಕ್ರಮದ ಬಗ್ಗೆ ವಿವಿಧ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ, ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಶ್ಲಾಘಿಸಿದೆ. ಸುಪ್ರೀಂಕೋರ್ಟ್ ತೀರ್ಪು

ಅದಾಗ್ಯೂ, ಸರಿಯಾದ ಪ್ರಕ್ರಿಯೆಯ ನಂತರ ಮತ್ತು ಅತಿಕ್ರಮಿತ ಭೂಮಿಯಲ್ಲಿ ನಿರ್ಮಿಸಲಾದ ಆಸ್ತಿಗಳ ಮೇಲೆ ನೆಲಸಮವನ್ನು ನಡೆಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ಬುಲ್ಡೋಜರ್ ನ್ಯಾಯ”ವನ್ನು ಕಾನೂನುಬಾಹಿರ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಬುಧವಾರ ದೇಶದಾದ್ಯಂತ ಮಾರ್ಗಸೂಚಿಗಳನ್ನು ನೀಡಿತ್ತು. ಪೂರ್ವ ಶೋಕಾಸ್ ಸೂಚನೆ ಇಲ್ಲದೆ ಯಾವುದೇ ಆಸ್ತಿಯನ್ನು ಕೆಡವಬಾರದು ಮತ್ತು ಸಂತ್ರಸ್ತರಿಗೆ ಪ್ರತಿಕ್ರಿಯಿಸಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಕೋರ್ಟ್‌ ಹೇಳಿತ್ತು. ಸುಪ್ರೀಂಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಯಾಗ್‌ರಾಜ್‌ನಲ್ಲಿ ಪಂಪ್ ಸೆಟ್ ವ್ಯಾಪಾರ ನಡೆಸುತ್ತಿರುವ ಜಾವೇದ್ ಮೊಹಮ್ಮದ್ ಅವರ ಮನೆಯನ್ನು ಜೂನ್ 12, 2022 ರಂದು ಬುಲ್ಡೋಜರ್‌ನಿಂದ ಕೆಡವಲಾಯಿತು. ಪೊಲೀಸರು ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಅವರ ವಿರುದ್ಧ ಐದು ಪ್ರಕರಣಗಳು ದಾಖಲಾಗಿವೆ ಮತ್ತು ಅಟಾಲಾ ಪ್ರದೇಶದಲ್ಲಿ ನಡೆದ ಕಲ್ಲು ತೂರಾಟದ ಘಟನೆಯಲ್ಲಿ ಅವರು ಪ್ರಮುಖ ಆರೋಪಿಯಾಗಿದ್ದಾರೆ ಎಂದು ಹೇಳಿದ್ದರು.

“ನಿರಂಕುಶ ರೀತಿಯಲ್ಲಿ ಮನೆಗಳನ್ನು ಕೆಡವಬಾರದು … ನನ್ನ ಎರಡು ಅಂತಸ್ತಿನ ಮನೆಯನ್ನು ಕೆಡವಿದಾಗ, ನನ್ನ ಹೆಂಡತಿ ಮತ್ತು ಮಗಳನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು” ಎಂದು ಮೊಹಮ್ಮದ್ ಹೇಳಿದ್ದು, ಸುಪ್ರೀಂಕೋರ್ಟ್‌ನ ತೀರ್ಪನ್ನು ಅವರು ಶ್ಲಾಘಿಸಿದ್ದಾರೆ. ಸ್ಥಳೀಯ ಆಡಳಿತವು ರಾತ್ರೋರಾತ್ರಿ ಈ ಕ್ರಮ ಕೈಗೊಂಡಿದ್ದು, ಯಾವುದೇ ಸೂಚನೆಯಿಲ್ಲದೆ ತನ್ನ ಮನೆಯನ್ನು ನೆಲಸಮ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ನೋಟಿಸ್ ಕಳುಹಿಸಿದ್ದೇವೆ ಎಂದು ಹೇಳಿರುವ ಸರ್ಕಾರದ ಪ್ರತಿಪಾದನೆ ಸಂಪೂರ್ಣ ಸುಳ್ಳಾಗಿದ್ದು… ಅವರು ಯಾವುದೇ ನೋಟಿಸ್ ಕಳುಹಿಸಿಲ್ಲ” ಎಂದು ಅವರು ಹೇಳಿದ್ದಾರೆ. ಧ್ವಂಸಗೊಂಡ ನಂತರ ನನ್ನ ಕುಟುಂಬವು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದು, ನಮಗೆ ಯಾರೂ ಸಹಾಯ ಮಾಡಲು ಮುಂದೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ

ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಜಿತ್ ಸಿಂಗ್, ಪ್ರಾಧಿಕಾರವು ಅನುಮೋದನೆ ಪಡೆಯದ ಮನೆ ಅಥವಾ ಅಂಗಡಿಗಳ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳುತ್ತದೆ. ಕೆಡವುವ ಮುನ್ನವೇ ನೋಟಿಸ್ ಜಾರಿ ಮಾಡಿ ಆ ವ್ಯಕ್ತಿಗೆ ತನ್ನ ಪರ ವಾದ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆ ನಂತರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬರೇಲಿಯಲ್ಲಿ ಜುಲೈ 22 ರಂದು ಶಾಹಿ ಪ್ರದೇಶದ ಗೌಸ್‌ಗಂಜ್ ಗ್ರಾಮದಲ್ಲಿ 16 ಜನರ ಮನೆಗಳನ್ನು ನೆಲಸಮಗೊಳಿಸಲಾಗಿತ್ತು. ಇದರಲ್ಲಿ ತಝಿಯಾ ಮೆರವಣಿಗೆಯಲ್ಲಿ ಒಬ್ಬ ವ್ಯಕ್ತಿಯನ್ನು ಕೊಂದ ಘರ್ಷಣೆಯಲ್ಲಿ ಆರೋಪಿಗಳೆಂದು ಹೆಸರಿಸಲಾದ ಮನೆಗಳು ಸೇರಿದ್ದವು. ಸುಪ್ರೀಂ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಗೌಸ್‌ಗಂಜ್‌ನ ರಾಸಿದಾನ್, ನಫೀಸಾ ಮತ್ತು ಸೈರಾ ಖಾತೂನ್ ಅವರ ಮನೆಗಳನ್ನು ನೆಲಸಮಗೊಳಿಸಲಾಗಿದ್ದು, ಪರಿಹಾರಕ್ಕಾಗಿ ನ್ಯಾಯಾಲಯವನ್ನು ಸಂಪರ್ಕಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...