Homeಮುಖಪುಟಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

- Advertisement -
- Advertisement -

 

 

| ದೇವು ಪತ್ತಾರ್ |

ಬಾಬರಿ ಮಸೀದಿ ಧ್ವಂಸ ಹಾಗೂ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪು ’ನ್ಯಾಯ’ ನೀಡುವುದಕ್ಕಿಂತ ಹೆಚ್ಚಿನದನ್ನು ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಹೈದರಾಬಾದ್ ಕರ್ನಾಟಕದಲ್ಲಿ ‘ಶಹಾಪುರ ನ್ಯಾಯ’ ಎಂಬ ಮಾತೊಂದು ಚಾಲ್ತಿಯಲ್ಲಿದೆ. ‘ಶಹಾಪುರ ನ್ಯಾಯ’ ಮಾಡುವ ವ್ಯಕ್ತಿಯನ್ನು ನಿಂದಾತ್ಮಕ ರೀತಿಯಲ್ಲಿ ಗುರುತಿಸಲಾಗುತ್ತದೆ. ಹಾಗಂತ ಅದು ಅನ್ಯಾಯವೇನಲ್ಲ.

ಏನಿದು ಶಹಾಪುರ ನ್ಯಾಯ?

ಧಾನ್ಯ ಅಳೆಯಲು ಸೇರು ಅಥವಾ ಬಳ್ಳ ಬಳಸಲಾಗುತ್ತದೆ. ಸೇರಿನ ಬಾಯನ್ನು ಮೇಲ್ಮುಖವಾಗಿ ಇಟ್ಟು ಅಳೆದರೆ ಅದು ನ್ಯಾಯ. ಸೇರನ್ನು ಬೋರಲಾಗಿ ಹಾಕಿ ಅಳೆದರೆ ಅನ್ಯಾಯ. ಶಹಾಪುರ ನ್ಯಾಯ ಅದೆರಡನ್ನೂ ಮಾಡುವುದಿಲ್ಲ. ಬದಲಿಗೆ ಸೇರನ್ನು ಅಡ್ಡಲಾಗಿ ಮಲಗಿಸಿ ಅದರ ಮೇಲೆ ಧಾನ್ಯ ಸುರಿಯುತ್ತ ಹೋಗುತ್ತದೆ. ಸೇರಿನ ಎರಡೂ ಬದಿಯಲ್ಲಿ ಬೀಳುವ ಧಾನ್ಯವನ್ನು ಎರಡೂ ಪಕ್ಷಗಳಿಗೆ ಹಂಚಲಾಗುತ್ತದೆ. ಮೇಲ್ನೋಟಕ್ಕೆ ಹಾಗೂ ತಾರ್ಕಿಕವಾಗಿ ಸರಿ ಎನ್ನಿಸುವ ಈ ವಿಧಾನವನ್ನು ’ನ್ಯಾಯ’ ಎಂದು ಯಾರೂ ಪರಿಗಣಿಸಲು ಸಾಧ್ಯವಿಲ್ಲ.

ಮತ್ತೊಂದು ಉದಾಹರಣೆ
ಇಬ್ಬರು ನೆರೆಹೊರೆಯವರ ನಡುವೆ ತಮ್ಮ ಮನೆಯ ನಡುವಿನ ಮರವೊಂದಕ್ಕೆ ಸಂಬಂಧಿಸಿದಂತೆ ಜಗಳ-ಭಿನ್ನಾಭಿಪ್ರಾಯ ಉಂಟಾಯಿತು. ಒಬ್ಬರು ಮರ ಇರುವ ನೆಲ (ಜಾಗ) ನನಗೆ ಸೇರಿದ್ದು ಎಂದು ವಾದಿಸಿದ. ಆದರೆ, ಮತ್ತೊಬ್ಬ ಮರ ಹಚ್ಚಿ, ನೀರೆರೆದು ಬೆಳೆಸಿದ್ದರಿಂದ ಅದು ನನ್ನದು ಹಾಗೂ ಅಷ್ಟೇ ಅಲ್ಲ ಮರ ಇರುವ ಪ್ರದೇಶ ನನಗೇ ಸೇರಿದ್ದು ಎಂದುಕೊಂಡು ಅದನ್ನು ಬೆಳೆಸಿದೆ. ಬೇರೆಯವರ ಜಾಗದಲ್ಲಿರುವ ಮರವನ್ನ ನಾನೇಕೆ ನೀರು ಹಾಕಿ ಬೆಳೆಸಲಿ? ಎಂಬ ಆಕ್ಷೇಪ ವ್ಯಕ್ತಪಡಿಸಿದ. ’ಶಹಾಪುರ ನ್ಯಾಯ ಮಾಡಿದ ಹಿರಿಯ, ಮರವನ್ನು ಎರಡನೆಯವನಿಗೂ ಜಾಗವನ್ನೂ ಮೊದಲನೆಯವನಿಗೂ ಹಂಚಿ ತೀರ್ಪು ನೀಡಿದ. ಊರವರೆಲ್ಲ ಇಬ್ಬರೂ ಕಳೆದುಕೊಂಡದ್ದಕ್ಕಿಂತ ಪಡೆದದ್ದೇ ಹೆಚ್ಚು ಎಂದು ಭಾವಿಸಿ ಸಂಭ್ರಮಿಸಿದರು.

ಯಾವುದೇ ರೀತಿಯ ತಗಾದೆ, ಜಗಳ, ಭಿನ್ನಾಭಿಪ್ರಾಯ ಉಂಟಾದರೆ ಮಧ್ಯಸ್ಥಿಕೆ ವಹಿಸಿ ಮಾತನಾಡುವವರನ್ನು ‘ನೀ ಇಲ್ಲಿ ಶಾಪುರ ನ್ಯಾಯ ಮಾಡಾಕ ಬರಬ್ಯಾಡ’ ಎಂದು ಪ್ರತಿಕ್ರಿಯಿಸುತ್ತಾರೆ. ‘ನ್ಯಾಯ’ ಪ್ರಕ್ರಿಯೆಯ ಅಣಕದಂತಿರುವ ಈ ನ್ಯಾಯವನ್ನು ಅನ್ಯಾಯ ಎಂದು ತಿರಸ್ಕರಿಸಲಾಗುವುದಿಲ್ಲ. ಹಾಗೆಯೇ ನ್ಯಾಯ ಎಂದು ಒಪ್ಪಿಕೊಳ್ಳುವುದು ಕೂಡ ಕಷ್ಟ.

ಈ ರೀತಿಯ ನ್ಯಾಯ ನೀಡುವ ಪ್ರಕ್ರಿಯೆಯನ್ನು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಮುಂಬೈ ಕರ್ನಾಟಕದಲ್ಲಿ ‘ಹಾವೇರಿ ನ್ಯಾಯ’ ಎಂದು ಗುರುತಿಸಲಾಗುತ್ತದೆ. ಹಾವೇರಿ ನ್ಯಾಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಗಮನಿಸಬೇಕು. ಕೆಲವು ಕಡೆ ಇದನ್ನು ’ಕಾಜಿ ನ್ಯಾಯ’ ಎಂದೂ ಕರೆಯಲಾಗುತ್ತದೆ. ಪತ್ನಿಯ ತಕರಾರು ಇಲ್ಲದ ಕಾರಣ ನೀಡಿ ಪತಿಗೆ ನಾಲ್ಕಕ್ಕಿಂತ ಹೆಚ್ಚು ಮದುವೆಗೆ ಅವಕಾಶ ನೀಡುವ ಪದ್ಧತಿಯಿದು. ಕೆಲವೆಡೆ ಖಾಪ್ ಪಂಚಾಯ್ತಿ ಎಂದೂ ಕರೆಯಲಾಗುತ್ತದೆ. ’ಜಿಸ್ ಲಾಠಿ ಉಸ್ ಕಾ ಭೈಂಸ್’ ಎಂಬ ಮಾತು ಕೂಡ ಇಂತಹ ನ್ಯಾಯಿಕ ಪ್ರಕ್ರಿಯೆಯ ಕಾರಣದಿಂದಾಗಿ ಹುಟ್ಟಿಕೊಂಡದ್ದು.

ನ್ಯಾಯಾಂಗದ ಬಗ್ಗೆ ಇರುವ ಎರಡು ಪ್ರಮುಖ ಸಂಗತಿಗಳನ್ನು ಇಲ್ಲಿ ಉಲ್ಲೇಖಿಸಬಹುದು. ನ್ಯಾಯ ನೀಡುವುದು ಮಾತ್ರವಲ್ಲ. ನೀಡಿದ್ದು ನ್ಯಾಯ ಎಂದು ಖಚಿತಪಡಿಸುವ ಹಾಗಿರಬೇಕು. ಮತ್ತೊಂದು ನೂರು ಅಪರಾಧಿಗಳು ತಪ್ಪಿಸಿಕೊಂಡರು ಪರವಾಯಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು. ಈ ಎರಡೂ ಮಾತುಗಳು ನ್ಯಾಯಾಂಗದ ಘನತೆ ಮತ್ತು ಅದಕ್ಕಿರುವ ಮಹತ್ವವನ್ನು ವಿವರಿಸುತ್ತವೆ.

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...